Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌‌ಚೆಕ್‌: ಇದು ಭಯೋತ್ಪಾದಕರನ್ನು ಬಂಧಿಸುವ ದೃಶ್ಯವಲ್ಲ!

ಫ್ಯಾಕ್ಟ್‌‌ಚೆಕ್‌: ಇದು ಭಯೋತ್ಪಾದಕರನ್ನು ಬಂಧಿಸುವ ದೃಶ್ಯವಲ್ಲ!

- Advertisement -
- Advertisement -

‘ಜಮ್ಮು ಕಾಶ್ಮೀರದ ಶ್ರೀನಗರದಲ್ಲಿ ಭಯೋತ್ಪಾದಕರನ್ನು ಸೆರೆಹಿಡಿಯುತ್ತಿರುವ ಪೊಲೀಸ್ ಸಿಬ್ಬಂದಿಯ ಲೈವ್ ದೃಶ್ಯಾವಳಿ’ ಎಂದು ಪ್ರತಿಪಾದಿಸಿ ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋವೊಂದು ಹರಿದಾಡುತ್ತಿದೆ. ಕೆಲವು ಕಡೆಯಲ್ಲಿ ಇದೇ ವಿಡಿಯೋವನ್ನು, ‘ಉತ್ತರ ಪ್ರದೇಶ ಪೊಲೀಸರು ಗಾಜಿಯಾಬಾದ್‌ನಲ್ಲಿ ಕಳ್ಳನನ್ನು ಹಿಡಿಯುವ ದೃಶ್ಯಗಳು’ ಎಂದು ಹೇಳಿ ಶೇರ್‌ ಮಾಡಲಾಗುತ್ತಿದೆ.

ಇತ್ತೀಚೆಗೆ ಜಮ್ಮು ಕಾಶ್ಮೀರದಲ್ಲಿ ಭಾರತೀಯ ಸೇನೆಯು ಹಿಜ್ಬುಲ್ ಮುಜಾಹಿದ್ದೀನ್ ಭಯೋತ್ಪಾದಕನನ್ನು ಬಂಧಿಸಿತ್ತು. ಈ ವರದಿಗಳ ನಡುವೆ, ಈ ವೈರಲ್‌ ವಿಡಿಯೊ ಮತ್ತು ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗುತ್ತಿದೆ.

ಫ್ಯಾಕ್ಟ್‌ಚೆಕ್‌

ವಾಸ್ತವದಲ್ಲಿ ಪೋಸ್ಟ್‌ನಲ್ಲಿ ಹಂಚಿಕೊಂಡಿರುವ ವೀಡಿಯೋ, ಬ್ರೆಜಿಲ್ ಪೊಲೀಸ್ ಸಿಬ್ಬಂದಿ 17 ವರ್ಷದ ಯುವ ಬೈಕ್ ಸವಾರನನ್ನು ಸಂಚಾರ ನಿಯಮಗಳನ್ನು ಉಲ್ಲಂಘಿಸಿದ್ದಕ್ಕಾಗಿ ಬಂಧಿಸಿರುವ ವಿಡಿಯೊವಾಗಿದೆ. ಈ ಘಟನೆ 2021 ಆಗಸ್ಟ್ 01 ರಂದು ಬ್ರೆಜಿಲ್‌ನ ಪೆರೋಲಾ ನಗರದಲ್ಲಿ ನಡೆದಿದೆ.

ಇದನ್ನೂ ಓದಿ: ಫ್ಯಾಕ್ಟ್‌‌ಚೆಕ್‌ | ನೆದರ್‌ಲ್ಯಾಂಡ್ಸ್‌‌ನ ಡಚ್‌‌‌‌‌ ವಿದ್ಯಾರ್ಥಿಗಳಿಗೆ 5 ನೇ ತರಗತಿಯಿಂದ ಭಗವದ್ಗೀತೆ ಕಡ್ಡಾಯ! – ನಿಜವೆ?

ವೀಡಿಯೊದಲ್ಲಿನ ಸ್ಕ್ರೀನ್‌ಶಾಟ್‌ಗಳನ್ನು ರಿವರ್ಸ್ ಇಮೇಜ್ ಸರ್ಚ್‌ನಲ್ಲಿ ಹುಡುಕಾಡಿದಾಗ, ಇದೇ ರೀತಿಯ ದೃಶ್ಯಾವಳಿಗಳು ‘ಪರಾನಾ ನೋ ಅರ್’ ಸುದ್ದಿ ಚಾನೆಲ್, 03 ಆಗಸ್ಟ್ 2021 ರಂದು ಪ್ರಕಟಿಸಿದ ವೀಡಿಯೊದಲ್ಲಿ ಕಂಡುಬಂದಿವೆ. ‘ಪರಾನಾ ನೋ ಆರ್’ ಒಂದು ಸುದ್ದಿ ಕಾರ್ಯಕ್ರಮವಾಗಿದ್ದು, ಬ್ರೆಜಿಲ್‌ ಮೂಲದ ‘ರಿಮೈಸ್‌’ ಸುದ್ದಿ ಮಾಧ್ಯಮದಲ್ಲಿ ನಿಯಮಿತವಾಗಿ ಪ್ರಸಾರವಾಗುತ್ತದೆ.

ಬ್ರೆಜಿಲ್‌ನ ಪೆರೋಲಾದಲ್ಲಿ ಬ್ರೆಜಿಲ್ ಪೊಲೀಸರು ಯುವ ಬೈಕ್ ಸವಾರನನ್ನು ಹಿಡಿಯುವ ದೃಶ್ಯಾವಳಿಗಳು ಎಂದು ಈ ವೀಡಿಯೊ ವರದಿ ಹೇಳಿದೆ. ಈ ಘಟನೆ 01 ಆಗಸ್ಟ್ 2021 ರಂದು ನಡೆದಿದೆ ಎಂದು ವರದಿಯಾಗಿದೆ.

ಈ ಘಟನೆಯ ಸಂಪೂರ್ಣ ವಿವರಗಳನ್ನು ‘ರಿಕ್ಮೈಸ್’ ಸುದ್ದಿ ವೆಬ್‌ಸೈಟ್ 2021 ರ ಆಗಸ್ಟ್ 02 ರಂದು ಒಂದು ಲೇಖನವನ್ನು ಪ್ರಕಟಿಸಿತ್ತು. ಈ ಲೇಖನದಲ್ಲಿ 17 ವರ್ಷದ ಯುವ ಬೈಕ್‌‌ ಸವಾರನನ್ನು ಪೆರೋಲಾ ಮಿಲಿಟರಿ ಪೋಲಿಸ್‌ನಿಂದ ತಪ್ಪಿಸಿಕೊಂಡಿದ್ದಕ್ಕಾಗಿ ಬಂಧಿಸಲಾಯಿತು ಎಂದು ವರದಿ ಮಾಡಿದೆ. ಲೇಖನದ ಪ್ರಕಾರ, ಪೆರೋಲಾ ಮಿಲಿಟರಿ ಪೋಲಿಸ್ ಗಸ್ತು ನಡೆಸುತ್ತಿದ್ದಾಗ ಯುವ ಬೈಕ್‌‌ ಸವಾರನು ಅನುಮಾನಾಸ್ಪದ ರೀತಿಯಲ್ಲಿ ಪೊಲೀಸ್ ಕಾರನ್ನು ಹಿಂದಿಕ್ಕಿ ಮತ್ತು ತಪ್ಪಿಸಿಕೊಳ್ಳಲು ಪ್ರಯತ್ನಿಸಿದನು.

ಇದನ್ನೂ ಓದಿ: ಫ್ಯಾಕ್ಟ್‌‌ಚೆಕ್: ಆರೆಸ್ಸೆಸ್ಸಿನ ಸ್ವಯಂ ಸೇವಕಿ ಪಾಕಿಸ್ತಾನದ ಕುಸ್ತಿಪಟುವಿಗೆ ಹೊಡೆದ್ದಾರೆಂದು ವೈರಲ್‌ ಆದ ಈ ವಿಡಿಯೊ ಸುಳ್ಳು

ಪೆರೋಲಾ ಪೊಲೀಸ್ ಸಿಬ್ಬಂದಿ ಪರ್ಲ್ ಅವೆನ್ಯೂ ಬೈಂಗ್ಟನ್‌ನಲ್ಲಿ ಈ ಬೈಕ್ ಸವಾರನನ್ನು ಬೆನ್ನಟ್ಟಿ ಹಿಡಿದಿದ್ದಾರೆ. ಯುವಕನು ಬೈಕ್‌ನಿಂದ  ಬಿದ್ದ ನಂತರ ಮತ್ತೆ ಎದ್ದು ಓಡಲು ಪ್ರಯತ್ನಿಸಿದಾಗ ಪೋಲಿಸ್ ಅಧಿಕಾರಿಯು ಹಾರಿ ಬಂದು ಕಾಲಲ್ಲಿ ಒದ್ದು ಮತ್ತೆ ಕೆಡವುತ್ತಾರೆ.

ಪರವಾನಗಿ ಇಲ್ಲದೆ ಚಾಲನೆ, ನಿಲ್ಲಿಸುವಂತೆ ಕೇಳಿಕೊಂಡ ಆದೇಶಗಳನ್ನು ಪಾಲಿಸದಿರುವುದು, ಅಪಾಯಕಾರಿ ಚಾಲನೆ, ತಪ್ಪಾದ ದಾರಿಯಲ್ಲಿ ಓಡಿಸಿದ ಆರೋಪಗಳೊಂದಿಗೆ ಯುವಕನನ್ನು ಬಂಧಿಸಲಾಗಿದೆ. ಈ ಘಟನೆಯ ವಿವರಗಳನ್ನು ಹಲವಾರು ಸುದ್ದಿ ವೆಬ್‌ಸೈಟ್‌ಗಳು ವರದಿ ಮಾಡಿವೆ. ಅವುಗಳನ್ನು ಇಲ್ಲಿ, ಇಲ್ಲಿ ಮತ್ತು ಇಲ್ಲಿ ಓದಬಹುದು.

ಈ ಎಲ್ಲ ಸಾಕ್ಷ್ಯಾಧಾರಗಳಿಂದ, ಪೋಸ್ಟ್‌ನಲ್ಲಿ ಹಂಚಿಕೊಂಡಿರುವ ವೀಡಿಯೊ ಭಾರತದ  ಶ್ರೀನಗರದ ವಿಡಿಯೊ ಅಲ್ಲ, ಬ್ರೆಜಿಲ್‌ನದ್ದು ಎಂದು ತೀರ್ಮಾನಿಸಬಹುದು. ಒಟ್ಟಾರೆಯಾಗಿ ಹೇಳುವುದಾದರೆ, ಶ್ರೀನಗರದಲ್ಲಿ ಭಯೋತ್ಪಾದಕರನ್ನು ಬಂಧಿಸುವ ದೃಶ್ಯಗಳು ಎಂದು ಬ್ರೆಜಿಲ್‌ನಲ್ಲಿ ನಡೆದ ಘಟನೆಯ ವೀಡಿಯೊವನ್ನು ಹಂಚಿಕೊಳ್ಳಲಾಗಿದೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್ | ‘ಪಿಎಂ ಕನ್ಯಾ ಯೋಜನೆ’ ಅಡಿಯಲ್ಲಿ ಹೆಣ್ಣುಮಕ್ಕಳಿಗೆ ಪ್ರತಿ ತಿಂಗಳು ₹2000 ಸಿಗುವುದು ನಿಜವೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...