Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌‌ಚೆಕ್‌: ಇದು ಭಯೋತ್ಪಾದಕರನ್ನು ಬಂಧಿಸುವ ದೃಶ್ಯವಲ್ಲ!

ಫ್ಯಾಕ್ಟ್‌‌ಚೆಕ್‌: ಇದು ಭಯೋತ್ಪಾದಕರನ್ನು ಬಂಧಿಸುವ ದೃಶ್ಯವಲ್ಲ!

- Advertisement -
- Advertisement -

‘ಜಮ್ಮು ಕಾಶ್ಮೀರದ ಶ್ರೀನಗರದಲ್ಲಿ ಭಯೋತ್ಪಾದಕರನ್ನು ಸೆರೆಹಿಡಿಯುತ್ತಿರುವ ಪೊಲೀಸ್ ಸಿಬ್ಬಂದಿಯ ಲೈವ್ ದೃಶ್ಯಾವಳಿ’ ಎಂದು ಪ್ರತಿಪಾದಿಸಿ ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋವೊಂದು ಹರಿದಾಡುತ್ತಿದೆ. ಕೆಲವು ಕಡೆಯಲ್ಲಿ ಇದೇ ವಿಡಿಯೋವನ್ನು, ‘ಉತ್ತರ ಪ್ರದೇಶ ಪೊಲೀಸರು ಗಾಜಿಯಾಬಾದ್‌ನಲ್ಲಿ ಕಳ್ಳನನ್ನು ಹಿಡಿಯುವ ದೃಶ್ಯಗಳು’ ಎಂದು ಹೇಳಿ ಶೇರ್‌ ಮಾಡಲಾಗುತ್ತಿದೆ.

ಇತ್ತೀಚೆಗೆ ಜಮ್ಮು ಕಾಶ್ಮೀರದಲ್ಲಿ ಭಾರತೀಯ ಸೇನೆಯು ಹಿಜ್ಬುಲ್ ಮುಜಾಹಿದ್ದೀನ್ ಭಯೋತ್ಪಾದಕನನ್ನು ಬಂಧಿಸಿತ್ತು. ಈ ವರದಿಗಳ ನಡುವೆ, ಈ ವೈರಲ್‌ ವಿಡಿಯೊ ಮತ್ತು ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗುತ್ತಿದೆ.

ಫ್ಯಾಕ್ಟ್‌ಚೆಕ್‌

ವಾಸ್ತವದಲ್ಲಿ ಪೋಸ್ಟ್‌ನಲ್ಲಿ ಹಂಚಿಕೊಂಡಿರುವ ವೀಡಿಯೋ, ಬ್ರೆಜಿಲ್ ಪೊಲೀಸ್ ಸಿಬ್ಬಂದಿ 17 ವರ್ಷದ ಯುವ ಬೈಕ್ ಸವಾರನನ್ನು ಸಂಚಾರ ನಿಯಮಗಳನ್ನು ಉಲ್ಲಂಘಿಸಿದ್ದಕ್ಕಾಗಿ ಬಂಧಿಸಿರುವ ವಿಡಿಯೊವಾಗಿದೆ. ಈ ಘಟನೆ 2021 ಆಗಸ್ಟ್ 01 ರಂದು ಬ್ರೆಜಿಲ್‌ನ ಪೆರೋಲಾ ನಗರದಲ್ಲಿ ನಡೆದಿದೆ.

ಇದನ್ನೂ ಓದಿ: ಫ್ಯಾಕ್ಟ್‌‌ಚೆಕ್‌ | ನೆದರ್‌ಲ್ಯಾಂಡ್ಸ್‌‌ನ ಡಚ್‌‌‌‌‌ ವಿದ್ಯಾರ್ಥಿಗಳಿಗೆ 5 ನೇ ತರಗತಿಯಿಂದ ಭಗವದ್ಗೀತೆ ಕಡ್ಡಾಯ! – ನಿಜವೆ?

ವೀಡಿಯೊದಲ್ಲಿನ ಸ್ಕ್ರೀನ್‌ಶಾಟ್‌ಗಳನ್ನು ರಿವರ್ಸ್ ಇಮೇಜ್ ಸರ್ಚ್‌ನಲ್ಲಿ ಹುಡುಕಾಡಿದಾಗ, ಇದೇ ರೀತಿಯ ದೃಶ್ಯಾವಳಿಗಳು ‘ಪರಾನಾ ನೋ ಅರ್’ ಸುದ್ದಿ ಚಾನೆಲ್, 03 ಆಗಸ್ಟ್ 2021 ರಂದು ಪ್ರಕಟಿಸಿದ ವೀಡಿಯೊದಲ್ಲಿ ಕಂಡುಬಂದಿವೆ. ‘ಪರಾನಾ ನೋ ಆರ್’ ಒಂದು ಸುದ್ದಿ ಕಾರ್ಯಕ್ರಮವಾಗಿದ್ದು, ಬ್ರೆಜಿಲ್‌ ಮೂಲದ ‘ರಿಮೈಸ್‌’ ಸುದ್ದಿ ಮಾಧ್ಯಮದಲ್ಲಿ ನಿಯಮಿತವಾಗಿ ಪ್ರಸಾರವಾಗುತ್ತದೆ.

ಬ್ರೆಜಿಲ್‌ನ ಪೆರೋಲಾದಲ್ಲಿ ಬ್ರೆಜಿಲ್ ಪೊಲೀಸರು ಯುವ ಬೈಕ್ ಸವಾರನನ್ನು ಹಿಡಿಯುವ ದೃಶ್ಯಾವಳಿಗಳು ಎಂದು ಈ ವೀಡಿಯೊ ವರದಿ ಹೇಳಿದೆ. ಈ ಘಟನೆ 01 ಆಗಸ್ಟ್ 2021 ರಂದು ನಡೆದಿದೆ ಎಂದು ವರದಿಯಾಗಿದೆ.

ಈ ಘಟನೆಯ ಸಂಪೂರ್ಣ ವಿವರಗಳನ್ನು ‘ರಿಕ್ಮೈಸ್’ ಸುದ್ದಿ ವೆಬ್‌ಸೈಟ್ 2021 ರ ಆಗಸ್ಟ್ 02 ರಂದು ಒಂದು ಲೇಖನವನ್ನು ಪ್ರಕಟಿಸಿತ್ತು. ಈ ಲೇಖನದಲ್ಲಿ 17 ವರ್ಷದ ಯುವ ಬೈಕ್‌‌ ಸವಾರನನ್ನು ಪೆರೋಲಾ ಮಿಲಿಟರಿ ಪೋಲಿಸ್‌ನಿಂದ ತಪ್ಪಿಸಿಕೊಂಡಿದ್ದಕ್ಕಾಗಿ ಬಂಧಿಸಲಾಯಿತು ಎಂದು ವರದಿ ಮಾಡಿದೆ. ಲೇಖನದ ಪ್ರಕಾರ, ಪೆರೋಲಾ ಮಿಲಿಟರಿ ಪೋಲಿಸ್ ಗಸ್ತು ನಡೆಸುತ್ತಿದ್ದಾಗ ಯುವ ಬೈಕ್‌‌ ಸವಾರನು ಅನುಮಾನಾಸ್ಪದ ರೀತಿಯಲ್ಲಿ ಪೊಲೀಸ್ ಕಾರನ್ನು ಹಿಂದಿಕ್ಕಿ ಮತ್ತು ತಪ್ಪಿಸಿಕೊಳ್ಳಲು ಪ್ರಯತ್ನಿಸಿದನು.

ಇದನ್ನೂ ಓದಿ: ಫ್ಯಾಕ್ಟ್‌‌ಚೆಕ್: ಆರೆಸ್ಸೆಸ್ಸಿನ ಸ್ವಯಂ ಸೇವಕಿ ಪಾಕಿಸ್ತಾನದ ಕುಸ್ತಿಪಟುವಿಗೆ ಹೊಡೆದ್ದಾರೆಂದು ವೈರಲ್‌ ಆದ ಈ ವಿಡಿಯೊ ಸುಳ್ಳು

ಪೆರೋಲಾ ಪೊಲೀಸ್ ಸಿಬ್ಬಂದಿ ಪರ್ಲ್ ಅವೆನ್ಯೂ ಬೈಂಗ್ಟನ್‌ನಲ್ಲಿ ಈ ಬೈಕ್ ಸವಾರನನ್ನು ಬೆನ್ನಟ್ಟಿ ಹಿಡಿದಿದ್ದಾರೆ. ಯುವಕನು ಬೈಕ್‌ನಿಂದ  ಬಿದ್ದ ನಂತರ ಮತ್ತೆ ಎದ್ದು ಓಡಲು ಪ್ರಯತ್ನಿಸಿದಾಗ ಪೋಲಿಸ್ ಅಧಿಕಾರಿಯು ಹಾರಿ ಬಂದು ಕಾಲಲ್ಲಿ ಒದ್ದು ಮತ್ತೆ ಕೆಡವುತ್ತಾರೆ.

ಪರವಾನಗಿ ಇಲ್ಲದೆ ಚಾಲನೆ, ನಿಲ್ಲಿಸುವಂತೆ ಕೇಳಿಕೊಂಡ ಆದೇಶಗಳನ್ನು ಪಾಲಿಸದಿರುವುದು, ಅಪಾಯಕಾರಿ ಚಾಲನೆ, ತಪ್ಪಾದ ದಾರಿಯಲ್ಲಿ ಓಡಿಸಿದ ಆರೋಪಗಳೊಂದಿಗೆ ಯುವಕನನ್ನು ಬಂಧಿಸಲಾಗಿದೆ. ಈ ಘಟನೆಯ ವಿವರಗಳನ್ನು ಹಲವಾರು ಸುದ್ದಿ ವೆಬ್‌ಸೈಟ್‌ಗಳು ವರದಿ ಮಾಡಿವೆ. ಅವುಗಳನ್ನು ಇಲ್ಲಿ, ಇಲ್ಲಿ ಮತ್ತು ಇಲ್ಲಿ ಓದಬಹುದು.

ಈ ಎಲ್ಲ ಸಾಕ್ಷ್ಯಾಧಾರಗಳಿಂದ, ಪೋಸ್ಟ್‌ನಲ್ಲಿ ಹಂಚಿಕೊಂಡಿರುವ ವೀಡಿಯೊ ಭಾರತದ  ಶ್ರೀನಗರದ ವಿಡಿಯೊ ಅಲ್ಲ, ಬ್ರೆಜಿಲ್‌ನದ್ದು ಎಂದು ತೀರ್ಮಾನಿಸಬಹುದು. ಒಟ್ಟಾರೆಯಾಗಿ ಹೇಳುವುದಾದರೆ, ಶ್ರೀನಗರದಲ್ಲಿ ಭಯೋತ್ಪಾದಕರನ್ನು ಬಂಧಿಸುವ ದೃಶ್ಯಗಳು ಎಂದು ಬ್ರೆಜಿಲ್‌ನಲ್ಲಿ ನಡೆದ ಘಟನೆಯ ವೀಡಿಯೊವನ್ನು ಹಂಚಿಕೊಳ್ಳಲಾಗಿದೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್ | ‘ಪಿಎಂ ಕನ್ಯಾ ಯೋಜನೆ’ ಅಡಿಯಲ್ಲಿ ಹೆಣ್ಣುಮಕ್ಕಳಿಗೆ ಪ್ರತಿ ತಿಂಗಳು ₹2000 ಸಿಗುವುದು ನಿಜವೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಕ್ಕಳಿಗೆ ಆರ್‌ಎಸ್‌ಎಸ್‌ ತರಬೇತಿ ನೀಡುವುದನ್ನು ಟೀಕಿಸಿ ವಿಡಿಯೋ ಹಂಚಿಕೆ : ಯುವಕನನ್ನು ವಶಕ್ಕೆ ಪಡೆದ ಪೊಲೀಸರು!

ರಾಜಸ್ಥಾನದ ಜುಂಜುನು ಜಿಲ್ಲೆಯ ನವೀನ್ ಚೌಧರಿ ಎಂಬ 25 ವರ್ಷದ ಯುವಕ, ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್‌) ಕುರಿತು ಸಾಮಾಜಿಕ ಜಾಲತಾಣ ಇನ್‌ಸ್ಟಾಗ್ರಾಮ್‌ನಲ್ಲಿ ವಿಡಿಯೋವೊಂದನ್ನು ಹಂಚಿಕೊಂಡಿದ್ದರು. 'ಜುಂಜುನು ಎಕ್ಸ್‌ಪ್ರೆಸ್' ಎಂಬ ಇನ್‌ಸ್ಟಾಗ್ರಾಮ್ ಪೇಜ್‌ನಲ್ಲಿ...

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...