Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌‌ಚೆಕ್‌: ಇದು ಭಯೋತ್ಪಾದಕರನ್ನು ಬಂಧಿಸುವ ದೃಶ್ಯವಲ್ಲ!

ಫ್ಯಾಕ್ಟ್‌‌ಚೆಕ್‌: ಇದು ಭಯೋತ್ಪಾದಕರನ್ನು ಬಂಧಿಸುವ ದೃಶ್ಯವಲ್ಲ!

- Advertisement -
- Advertisement -

‘ಜಮ್ಮು ಕಾಶ್ಮೀರದ ಶ್ರೀನಗರದಲ್ಲಿ ಭಯೋತ್ಪಾದಕರನ್ನು ಸೆರೆಹಿಡಿಯುತ್ತಿರುವ ಪೊಲೀಸ್ ಸಿಬ್ಬಂದಿಯ ಲೈವ್ ದೃಶ್ಯಾವಳಿ’ ಎಂದು ಪ್ರತಿಪಾದಿಸಿ ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋವೊಂದು ಹರಿದಾಡುತ್ತಿದೆ. ಕೆಲವು ಕಡೆಯಲ್ಲಿ ಇದೇ ವಿಡಿಯೋವನ್ನು, ‘ಉತ್ತರ ಪ್ರದೇಶ ಪೊಲೀಸರು ಗಾಜಿಯಾಬಾದ್‌ನಲ್ಲಿ ಕಳ್ಳನನ್ನು ಹಿಡಿಯುವ ದೃಶ್ಯಗಳು’ ಎಂದು ಹೇಳಿ ಶೇರ್‌ ಮಾಡಲಾಗುತ್ತಿದೆ.

ಇತ್ತೀಚೆಗೆ ಜಮ್ಮು ಕಾಶ್ಮೀರದಲ್ಲಿ ಭಾರತೀಯ ಸೇನೆಯು ಹಿಜ್ಬುಲ್ ಮುಜಾಹಿದ್ದೀನ್ ಭಯೋತ್ಪಾದಕನನ್ನು ಬಂಧಿಸಿತ್ತು. ಈ ವರದಿಗಳ ನಡುವೆ, ಈ ವೈರಲ್‌ ವಿಡಿಯೊ ಮತ್ತು ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗುತ್ತಿದೆ.

ಫ್ಯಾಕ್ಟ್‌ಚೆಕ್‌

ವಾಸ್ತವದಲ್ಲಿ ಪೋಸ್ಟ್‌ನಲ್ಲಿ ಹಂಚಿಕೊಂಡಿರುವ ವೀಡಿಯೋ, ಬ್ರೆಜಿಲ್ ಪೊಲೀಸ್ ಸಿಬ್ಬಂದಿ 17 ವರ್ಷದ ಯುವ ಬೈಕ್ ಸವಾರನನ್ನು ಸಂಚಾರ ನಿಯಮಗಳನ್ನು ಉಲ್ಲಂಘಿಸಿದ್ದಕ್ಕಾಗಿ ಬಂಧಿಸಿರುವ ವಿಡಿಯೊವಾಗಿದೆ. ಈ ಘಟನೆ 2021 ಆಗಸ್ಟ್ 01 ರಂದು ಬ್ರೆಜಿಲ್‌ನ ಪೆರೋಲಾ ನಗರದಲ್ಲಿ ನಡೆದಿದೆ.

ಇದನ್ನೂ ಓದಿ: ಫ್ಯಾಕ್ಟ್‌‌ಚೆಕ್‌ | ನೆದರ್‌ಲ್ಯಾಂಡ್ಸ್‌‌ನ ಡಚ್‌‌‌‌‌ ವಿದ್ಯಾರ್ಥಿಗಳಿಗೆ 5 ನೇ ತರಗತಿಯಿಂದ ಭಗವದ್ಗೀತೆ ಕಡ್ಡಾಯ! – ನಿಜವೆ?

ವೀಡಿಯೊದಲ್ಲಿನ ಸ್ಕ್ರೀನ್‌ಶಾಟ್‌ಗಳನ್ನು ರಿವರ್ಸ್ ಇಮೇಜ್ ಸರ್ಚ್‌ನಲ್ಲಿ ಹುಡುಕಾಡಿದಾಗ, ಇದೇ ರೀತಿಯ ದೃಶ್ಯಾವಳಿಗಳು ‘ಪರಾನಾ ನೋ ಅರ್’ ಸುದ್ದಿ ಚಾನೆಲ್, 03 ಆಗಸ್ಟ್ 2021 ರಂದು ಪ್ರಕಟಿಸಿದ ವೀಡಿಯೊದಲ್ಲಿ ಕಂಡುಬಂದಿವೆ. ‘ಪರಾನಾ ನೋ ಆರ್’ ಒಂದು ಸುದ್ದಿ ಕಾರ್ಯಕ್ರಮವಾಗಿದ್ದು, ಬ್ರೆಜಿಲ್‌ ಮೂಲದ ‘ರಿಮೈಸ್‌’ ಸುದ್ದಿ ಮಾಧ್ಯಮದಲ್ಲಿ ನಿಯಮಿತವಾಗಿ ಪ್ರಸಾರವಾಗುತ್ತದೆ.

ಬ್ರೆಜಿಲ್‌ನ ಪೆರೋಲಾದಲ್ಲಿ ಬ್ರೆಜಿಲ್ ಪೊಲೀಸರು ಯುವ ಬೈಕ್ ಸವಾರನನ್ನು ಹಿಡಿಯುವ ದೃಶ್ಯಾವಳಿಗಳು ಎಂದು ಈ ವೀಡಿಯೊ ವರದಿ ಹೇಳಿದೆ. ಈ ಘಟನೆ 01 ಆಗಸ್ಟ್ 2021 ರಂದು ನಡೆದಿದೆ ಎಂದು ವರದಿಯಾಗಿದೆ.

ಈ ಘಟನೆಯ ಸಂಪೂರ್ಣ ವಿವರಗಳನ್ನು ‘ರಿಕ್ಮೈಸ್’ ಸುದ್ದಿ ವೆಬ್‌ಸೈಟ್ 2021 ರ ಆಗಸ್ಟ್ 02 ರಂದು ಒಂದು ಲೇಖನವನ್ನು ಪ್ರಕಟಿಸಿತ್ತು. ಈ ಲೇಖನದಲ್ಲಿ 17 ವರ್ಷದ ಯುವ ಬೈಕ್‌‌ ಸವಾರನನ್ನು ಪೆರೋಲಾ ಮಿಲಿಟರಿ ಪೋಲಿಸ್‌ನಿಂದ ತಪ್ಪಿಸಿಕೊಂಡಿದ್ದಕ್ಕಾಗಿ ಬಂಧಿಸಲಾಯಿತು ಎಂದು ವರದಿ ಮಾಡಿದೆ. ಲೇಖನದ ಪ್ರಕಾರ, ಪೆರೋಲಾ ಮಿಲಿಟರಿ ಪೋಲಿಸ್ ಗಸ್ತು ನಡೆಸುತ್ತಿದ್ದಾಗ ಯುವ ಬೈಕ್‌‌ ಸವಾರನು ಅನುಮಾನಾಸ್ಪದ ರೀತಿಯಲ್ಲಿ ಪೊಲೀಸ್ ಕಾರನ್ನು ಹಿಂದಿಕ್ಕಿ ಮತ್ತು ತಪ್ಪಿಸಿಕೊಳ್ಳಲು ಪ್ರಯತ್ನಿಸಿದನು.

ಇದನ್ನೂ ಓದಿ: ಫ್ಯಾಕ್ಟ್‌‌ಚೆಕ್: ಆರೆಸ್ಸೆಸ್ಸಿನ ಸ್ವಯಂ ಸೇವಕಿ ಪಾಕಿಸ್ತಾನದ ಕುಸ್ತಿಪಟುವಿಗೆ ಹೊಡೆದ್ದಾರೆಂದು ವೈರಲ್‌ ಆದ ಈ ವಿಡಿಯೊ ಸುಳ್ಳು

ಪೆರೋಲಾ ಪೊಲೀಸ್ ಸಿಬ್ಬಂದಿ ಪರ್ಲ್ ಅವೆನ್ಯೂ ಬೈಂಗ್ಟನ್‌ನಲ್ಲಿ ಈ ಬೈಕ್ ಸವಾರನನ್ನು ಬೆನ್ನಟ್ಟಿ ಹಿಡಿದಿದ್ದಾರೆ. ಯುವಕನು ಬೈಕ್‌ನಿಂದ  ಬಿದ್ದ ನಂತರ ಮತ್ತೆ ಎದ್ದು ಓಡಲು ಪ್ರಯತ್ನಿಸಿದಾಗ ಪೋಲಿಸ್ ಅಧಿಕಾರಿಯು ಹಾರಿ ಬಂದು ಕಾಲಲ್ಲಿ ಒದ್ದು ಮತ್ತೆ ಕೆಡವುತ್ತಾರೆ.

ಪರವಾನಗಿ ಇಲ್ಲದೆ ಚಾಲನೆ, ನಿಲ್ಲಿಸುವಂತೆ ಕೇಳಿಕೊಂಡ ಆದೇಶಗಳನ್ನು ಪಾಲಿಸದಿರುವುದು, ಅಪಾಯಕಾರಿ ಚಾಲನೆ, ತಪ್ಪಾದ ದಾರಿಯಲ್ಲಿ ಓಡಿಸಿದ ಆರೋಪಗಳೊಂದಿಗೆ ಯುವಕನನ್ನು ಬಂಧಿಸಲಾಗಿದೆ. ಈ ಘಟನೆಯ ವಿವರಗಳನ್ನು ಹಲವಾರು ಸುದ್ದಿ ವೆಬ್‌ಸೈಟ್‌ಗಳು ವರದಿ ಮಾಡಿವೆ. ಅವುಗಳನ್ನು ಇಲ್ಲಿ, ಇಲ್ಲಿ ಮತ್ತು ಇಲ್ಲಿ ಓದಬಹುದು.

ಈ ಎಲ್ಲ ಸಾಕ್ಷ್ಯಾಧಾರಗಳಿಂದ, ಪೋಸ್ಟ್‌ನಲ್ಲಿ ಹಂಚಿಕೊಂಡಿರುವ ವೀಡಿಯೊ ಭಾರತದ  ಶ್ರೀನಗರದ ವಿಡಿಯೊ ಅಲ್ಲ, ಬ್ರೆಜಿಲ್‌ನದ್ದು ಎಂದು ತೀರ್ಮಾನಿಸಬಹುದು. ಒಟ್ಟಾರೆಯಾಗಿ ಹೇಳುವುದಾದರೆ, ಶ್ರೀನಗರದಲ್ಲಿ ಭಯೋತ್ಪಾದಕರನ್ನು ಬಂಧಿಸುವ ದೃಶ್ಯಗಳು ಎಂದು ಬ್ರೆಜಿಲ್‌ನಲ್ಲಿ ನಡೆದ ಘಟನೆಯ ವೀಡಿಯೊವನ್ನು ಹಂಚಿಕೊಳ್ಳಲಾಗಿದೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್ | ‘ಪಿಎಂ ಕನ್ಯಾ ಯೋಜನೆ’ ಅಡಿಯಲ್ಲಿ ಹೆಣ್ಣುಮಕ್ಕಳಿಗೆ ಪ್ರತಿ ತಿಂಗಳು ₹2000 ಸಿಗುವುದು ನಿಜವೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಸಿಕ್‌| ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರು

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ನಿಫಾದ್ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ಖಂಡಿಸಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿದ ಪ್ರತಿಭಟನಾಕಾರರ ಗುಂಪೊಂದು ನಗರ ಪಂಚಾಯತ್ ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು...

ವಿವಾಹಿತೆ ಮೇಲೆ ಅತ್ಯಾಚಾರ ಆರೋಪ : ಬಿಜೆಪಿ ಮಾಜಿ ಶಾಸಕನ ವಿರುದ್ಧ ಎಫ್‌ಐಆರ್

ಗನ್‌ ಪಾಯಿಂಟ್‌ ಇಟ್ಟು ಬೆದರಿಸಿ 22 ವರ್ಷದ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಹಾರಾಷ್ಟ್ರದ ಬಿಜೆಪಿ ಮಾಜಿ ಶಾಸಕ ಮತ್ತು ವಜಾಗೊಂಡಿರುವ ಪೊಲೀಸ್ ಸಿಬ್ಬಂದಿಯೊಬ್ಬರ ವಿರುದ್ಧ ಗುರುವಾರ (ಸೆ.17)...

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...