Homeಕರ್ನಾಟಕಫ್ಯಾಕ್ಟ್‌ಚೆಕ್: ಜಿಮ್‌ನಲ್ಲಿ ಕುಸಿದು ಬೀಳುತ್ತಿರುವ ಈ ವಿಡಿಯೊ 'ಪುನೀತ್‌ ರಾಜ್‌ಕುಮಾರ್‌' ಅವರದಲ್ಲ

ಫ್ಯಾಕ್ಟ್‌ಚೆಕ್: ಜಿಮ್‌ನಲ್ಲಿ ಕುಸಿದು ಬೀಳುತ್ತಿರುವ ಈ ವಿಡಿಯೊ ‘ಪುನೀತ್‌ ರಾಜ್‌ಕುಮಾರ್‌’ ಅವರದಲ್ಲ

- Advertisement -
- Advertisement -

ಖ್ಯಾತ ನಟ ಪುನೀತ್‌ ರಾಜ್‌ಕುಮಾರ್‌(45) ಅವರು ಶುಕ್ರವಾರ ನಿಧನರಾಗಿದ್ದಾರೆ. ಬೆಳಿಗ್ಗೆ ಜಿಮ್‌ನಲ್ಲಿ ಕಸರತ್ತು ನಡೆಸುತ್ತಿದ್ದ ವೇಳೆ ಅವರಿಗೆ ಹೃದಯಾಘಾತವಾಗಿತ್ತು. ನಂತರ ಆಸ್ಪತ್ರೆಗೆ ಕೊಂಡೊಯ್ಯುವಾಗ ಕೂಡಾ ಅವರಿಗೆ ಮತ್ತೊಮ್ಮೆ ಹೃದಯಾಘಾತ ಸಂಭವಿಸಿದೆ. ಅವರನ್ನು ಬೆಳಿಗ್ಗೆ 11 ಗಂಟೆಗೆ ಬೆಂಗಳೂರಿನ ವಿಕ್ರಂ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಾಕಾರಿಯಾದೇ ಮೃತಪಟ್ಟಿದ್ದಾರೆ.

ಪ್ರತಿಭಾವಂತ ನಟನ ನಿಧನಕ್ಕೆ ದೇಶದಾದ್ಯಂತ ಸಂತಾಪ ವ್ಯಕ್ತವಾಗಿದೆ. ಆದರೆ, ಈ ನಡುವೆ ಪುನೀತ್‌ ರಾಜ್‌ಕುಮಾರ್‌ ಅವರು ಜಿಮ್‌ನಲ್ಲಿ ಕುಸಿದು ಬೀಳುತ್ತಿರುವ ದೃಶ್ಯ ಎಂದು ಪ್ರತಿಪಾದಿಸಿ ವಿಡಿಯೊವೊಂದು ವೈರಲ್‌ ಆಗುತ್ತಿದೆ. ವೈರಲ್‌ ವಿಡಿಯೊದಲ್ಲಿ, ವ್ಯಕ್ತಿಯೊಬ್ಬರು ಸುಸ್ತಾಗಿ ಬಂದು ಮೆಟ್ಟಿಲ ಮೇಲೆ ಕೂರುತ್ತಾರೆ. ನೋಡು ನೋಡುತ್ತಿದ್ದಂತೆ ಅವರು ಕೂತಲ್ಲಿಂದಲೇ ಕುಸಿದು ಬೀಳುತ್ತಾರೆ.

ಇದನ್ನೂ ಓದಿ: ಕನ್ನಡದ ಪ್ರತಿಭಾವಂತ ನಟ ಪುನೀತ್ ರಾಜ್‌ಕುಮಾರ್‌ ಇನ್ನಿಲ್ಲ

ವಾಸ್ತವ ಏನು? ಈ ವಿಡಿಯೊ ನಿಜವೇ?

ವೈರಲ್‌ ವಿಡಿಯೊವನ್ನು ಸೂಕ್ಷ್ಮವಾಗಿ ಗಮನಿಸಿದರೆ ಅದರಲ್ಲಿ ಇರುವ ವ್ಯಕ್ತಿಯು ನಟ ಪುನೀತ್‌ ರಾಜ್‌ಕುಮಾರ್‌ ಅವರನ್ನು ಹೋಲುವುದಿಲ್ಲ. ಈ ವ್ಯಕ್ತಿಗೂ ಪುನೀತ್‌ ರಾಜ್‌ಕುಮಾರ್‌ ಅವರಿಗೂ ಯಾವುದೇ ಹೋಲಿಕೆ ಇಲ್ಲ.

ಅಲ್ಲದೆ ವೈರಲ್ ವಿಡಿಯೊ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿರುವ ವಿಡಿಯೊವಾಗಿದೆ. ಸಾಮಾನ್ಯವಾಗಿ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿರುವ ವಿಡಿಯೊದಲ್ಲಿ ಅದು ಸೆರೆಯಾಗಿರುವ ದಿನಾಂಕ ಕೂಡಾ ದಾಖಲಾಗಿರುತ್ತದೆ. ಅದರಂತೆ ಪ್ರಸ್ತುತ ವೈರಲ್ ವಿಡಿಯೊದಲ್ಲಿ ಆಗಸ್ಟ್‌‌ 28(25/08) ಎಂದು ಬರೆದಿರುವುದು ಕಾಣುತ್ತದೆ.

ಇದನ್ನೂ ಓದಿ: ಪುನೀತ್ ರಾಜ್‌ಕುಮಾರ್‌ ನಿಧನ: ಗಣ್ಯರ ಕಂಬನಿ, ಚಿತ್ರನಟ-ನಟಿಯರ ನುಡಿನಮನ

ವಿಡಿಯೊ ಸ್ಕ್ರೀನ್‌ ಶಾರ್ಟ್‌ ಇಟ್ಟುಕೊಂಡು ನಾವು ರಿವರ್ಸ್ ಸರ್ಚ್ ಮೂಲಕ ಇಂಟರ್‌ನೆಟ್‌ನಲ್ಲಿ ಹುಡುಕಾಡಿದ್ದು, ಈ ವಿಡಿಯೊ ಸೆಪ್ಟೆಂಬರ್‌ 2 ರಂದು ಫೇಸ್‌ಬುಕ್ ಮತ್ತು ಟ್ವಿಟರ್‌‌‌ನಲ್ಲಿ ಹಂಚಿಕೊಳ್ಳಲಾಗಿದೆ.

ಅಂದರೆ, ಪ್ರಸ್ತುತ ವೈರಲ್ ವಿಡಿಯೊ ಸುಮಾರು ಎರಡು ತಿಂಗಳ ಹಿಂದಿನ ವಿಡಿಯೊವಾಗಿದೆ. ಜೊತೆಗೆ ಸೆಪ್ಟೆಂಬರ್‌ ಎರಡರಂದು ‘ಸೋಷಿಯಲ್ ದಿಶಾ ಚಾನೆಲ್’ ಎಂಬ ಪೇಜ್‌ ಈ ವಿಡಿಯೋದ ಸುದೀರ್ಘ ದೃಶ್ಯವನ್ನೂ ಅಪ್ಲೋಡ್ ಮಾಡಿದೆ. ಅದರಲ್ಲಿ ಇದು 2021 ಆಗಸ್ಟ್‌‌ 28 ಸ್ಪಷ್ಟವಾಗಿ ಕಾಣುತ್ತದೆ. ಅಲ್ಲದೆ ಈ ಘಟನೆ ನಡೆದಿರುವುದು ಸಂಜೆ 07: 37 (19:37) ಕ್ಕೆ ಎಂದು ಸ್ಪಷ್ಟವಾಗಿ ವಿಡಿಯೊ ಮೂಲಕ ಕಾಣಬಹುದು.

ಇದನ್ನೂ ಓದಿ: ಪುನೀತ್ ರಾಜ್‌ಕುಮಾರ್‌ ನಿಧನ: ಗಣ್ಯರ ಕಂಬನಿ, ಚಿತ್ರನಟ-ನಟಿಯರ ನುಡಿನಮನ

ಅಷ್ಟೇ ಅಲ್ಲದೆ ಈ ವಿಡಿಯೊ ಬಗ್ಗೆ ಟಿವಿ9 ಭರತ್‌‌ವರ್ಷ ಸೆಪ್ಟೆಂಬರ್‌ 1 ರಂದು ವರದಿ ಕೂಡಾ ಮಾಡಿದೆ. ವರದಿ ಹೇಳುವಂತೆ, “ಘಟನೆಯು ಸೂರತ್‌ನ ಗೋಲ್ಡ್ ಜಿಮ್‌ನ ವೀಡಿಯೊವಾಗಿದ್ದು, 33ರ ಹರೆಯದ ವ್ಯಕ್ತಿಗೆ ಅತಿಯಾದ ವರ್ಕೌಟ್‌ನಿಂದ ಹೃದಯಾಘಾತವಾಗಿತ್ತು ಎನ್ನಲಾಗಿದೆ. ಇಡೀ ಘಟನೆ ಜಿಮ್‌ನಲ್ಲಿ ಅಳವಡಿಸಲಾಗಿದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ” ಎಂದು ಹೇಳಿದೆ.

 

ಈ ಎಲ್ಲಾ ಆಧಾರದ ಮೂಲಕ ಪ್ರಸ್ತುತ ಜಾಲತಾಣಗಳಲ್ಲಿ ವೈರಲ್ ಆಗಿರುವ ಈ ವಿಡಿಯೊ ನಟ ಪುನೀತ್‌ ರಾಜ್‌ಕುಮಾರ್‌ ಅವರದ್ದಲ್ಲ ಎಂದು ಸ್ಪಷ್ಟವಾಗಿ ಹೇಳಬಹುದಾಗಿದೆ.

ಇದನ್ನೂ ಓದಿ: ಚಿತ್ರರಂಗದ ’ಯುವರತ್ನ’ ಪುನೀತ್ ರಾಜ್‌ಕುಮಾರ್‌ ಅವರ ಅಪರೂಪದ ಚಿತ್ರಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...