Homeಕರ್ನಾಟಕಫ್ಯಾಕ್ಟ್‌ಚೆಕ್: ಜಿಮ್‌ನಲ್ಲಿ ಕುಸಿದು ಬೀಳುತ್ತಿರುವ ಈ ವಿಡಿಯೊ 'ಪುನೀತ್‌ ರಾಜ್‌ಕುಮಾರ್‌' ಅವರದಲ್ಲ

ಫ್ಯಾಕ್ಟ್‌ಚೆಕ್: ಜಿಮ್‌ನಲ್ಲಿ ಕುಸಿದು ಬೀಳುತ್ತಿರುವ ಈ ವಿಡಿಯೊ ‘ಪುನೀತ್‌ ರಾಜ್‌ಕುಮಾರ್‌’ ಅವರದಲ್ಲ

- Advertisement -
- Advertisement -

ಖ್ಯಾತ ನಟ ಪುನೀತ್‌ ರಾಜ್‌ಕುಮಾರ್‌(45) ಅವರು ಶುಕ್ರವಾರ ನಿಧನರಾಗಿದ್ದಾರೆ. ಬೆಳಿಗ್ಗೆ ಜಿಮ್‌ನಲ್ಲಿ ಕಸರತ್ತು ನಡೆಸುತ್ತಿದ್ದ ವೇಳೆ ಅವರಿಗೆ ಹೃದಯಾಘಾತವಾಗಿತ್ತು. ನಂತರ ಆಸ್ಪತ್ರೆಗೆ ಕೊಂಡೊಯ್ಯುವಾಗ ಕೂಡಾ ಅವರಿಗೆ ಮತ್ತೊಮ್ಮೆ ಹೃದಯಾಘಾತ ಸಂಭವಿಸಿದೆ. ಅವರನ್ನು ಬೆಳಿಗ್ಗೆ 11 ಗಂಟೆಗೆ ಬೆಂಗಳೂರಿನ ವಿಕ್ರಂ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಾಕಾರಿಯಾದೇ ಮೃತಪಟ್ಟಿದ್ದಾರೆ.

ಪ್ರತಿಭಾವಂತ ನಟನ ನಿಧನಕ್ಕೆ ದೇಶದಾದ್ಯಂತ ಸಂತಾಪ ವ್ಯಕ್ತವಾಗಿದೆ. ಆದರೆ, ಈ ನಡುವೆ ಪುನೀತ್‌ ರಾಜ್‌ಕುಮಾರ್‌ ಅವರು ಜಿಮ್‌ನಲ್ಲಿ ಕುಸಿದು ಬೀಳುತ್ತಿರುವ ದೃಶ್ಯ ಎಂದು ಪ್ರತಿಪಾದಿಸಿ ವಿಡಿಯೊವೊಂದು ವೈರಲ್‌ ಆಗುತ್ತಿದೆ. ವೈರಲ್‌ ವಿಡಿಯೊದಲ್ಲಿ, ವ್ಯಕ್ತಿಯೊಬ್ಬರು ಸುಸ್ತಾಗಿ ಬಂದು ಮೆಟ್ಟಿಲ ಮೇಲೆ ಕೂರುತ್ತಾರೆ. ನೋಡು ನೋಡುತ್ತಿದ್ದಂತೆ ಅವರು ಕೂತಲ್ಲಿಂದಲೇ ಕುಸಿದು ಬೀಳುತ್ತಾರೆ.

ಇದನ್ನೂ ಓದಿ: ಕನ್ನಡದ ಪ್ರತಿಭಾವಂತ ನಟ ಪುನೀತ್ ರಾಜ್‌ಕುಮಾರ್‌ ಇನ್ನಿಲ್ಲ

ವಾಸ್ತವ ಏನು? ಈ ವಿಡಿಯೊ ನಿಜವೇ?

ವೈರಲ್‌ ವಿಡಿಯೊವನ್ನು ಸೂಕ್ಷ್ಮವಾಗಿ ಗಮನಿಸಿದರೆ ಅದರಲ್ಲಿ ಇರುವ ವ್ಯಕ್ತಿಯು ನಟ ಪುನೀತ್‌ ರಾಜ್‌ಕುಮಾರ್‌ ಅವರನ್ನು ಹೋಲುವುದಿಲ್ಲ. ಈ ವ್ಯಕ್ತಿಗೂ ಪುನೀತ್‌ ರಾಜ್‌ಕುಮಾರ್‌ ಅವರಿಗೂ ಯಾವುದೇ ಹೋಲಿಕೆ ಇಲ್ಲ.

ಅಲ್ಲದೆ ವೈರಲ್ ವಿಡಿಯೊ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿರುವ ವಿಡಿಯೊವಾಗಿದೆ. ಸಾಮಾನ್ಯವಾಗಿ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿರುವ ವಿಡಿಯೊದಲ್ಲಿ ಅದು ಸೆರೆಯಾಗಿರುವ ದಿನಾಂಕ ಕೂಡಾ ದಾಖಲಾಗಿರುತ್ತದೆ. ಅದರಂತೆ ಪ್ರಸ್ತುತ ವೈರಲ್ ವಿಡಿಯೊದಲ್ಲಿ ಆಗಸ್ಟ್‌‌ 28(25/08) ಎಂದು ಬರೆದಿರುವುದು ಕಾಣುತ್ತದೆ.

ಇದನ್ನೂ ಓದಿ: ಪುನೀತ್ ರಾಜ್‌ಕುಮಾರ್‌ ನಿಧನ: ಗಣ್ಯರ ಕಂಬನಿ, ಚಿತ್ರನಟ-ನಟಿಯರ ನುಡಿನಮನ

ವಿಡಿಯೊ ಸ್ಕ್ರೀನ್‌ ಶಾರ್ಟ್‌ ಇಟ್ಟುಕೊಂಡು ನಾವು ರಿವರ್ಸ್ ಸರ್ಚ್ ಮೂಲಕ ಇಂಟರ್‌ನೆಟ್‌ನಲ್ಲಿ ಹುಡುಕಾಡಿದ್ದು, ಈ ವಿಡಿಯೊ ಸೆಪ್ಟೆಂಬರ್‌ 2 ರಂದು ಫೇಸ್‌ಬುಕ್ ಮತ್ತು ಟ್ವಿಟರ್‌‌‌ನಲ್ಲಿ ಹಂಚಿಕೊಳ್ಳಲಾಗಿದೆ.

ಅಂದರೆ, ಪ್ರಸ್ತುತ ವೈರಲ್ ವಿಡಿಯೊ ಸುಮಾರು ಎರಡು ತಿಂಗಳ ಹಿಂದಿನ ವಿಡಿಯೊವಾಗಿದೆ. ಜೊತೆಗೆ ಸೆಪ್ಟೆಂಬರ್‌ ಎರಡರಂದು ‘ಸೋಷಿಯಲ್ ದಿಶಾ ಚಾನೆಲ್’ ಎಂಬ ಪೇಜ್‌ ಈ ವಿಡಿಯೋದ ಸುದೀರ್ಘ ದೃಶ್ಯವನ್ನೂ ಅಪ್ಲೋಡ್ ಮಾಡಿದೆ. ಅದರಲ್ಲಿ ಇದು 2021 ಆಗಸ್ಟ್‌‌ 28 ಸ್ಪಷ್ಟವಾಗಿ ಕಾಣುತ್ತದೆ. ಅಲ್ಲದೆ ಈ ಘಟನೆ ನಡೆದಿರುವುದು ಸಂಜೆ 07: 37 (19:37) ಕ್ಕೆ ಎಂದು ಸ್ಪಷ್ಟವಾಗಿ ವಿಡಿಯೊ ಮೂಲಕ ಕಾಣಬಹುದು.

ಇದನ್ನೂ ಓದಿ: ಪುನೀತ್ ರಾಜ್‌ಕುಮಾರ್‌ ನಿಧನ: ಗಣ್ಯರ ಕಂಬನಿ, ಚಿತ್ರನಟ-ನಟಿಯರ ನುಡಿನಮನ

ಅಷ್ಟೇ ಅಲ್ಲದೆ ಈ ವಿಡಿಯೊ ಬಗ್ಗೆ ಟಿವಿ9 ಭರತ್‌‌ವರ್ಷ ಸೆಪ್ಟೆಂಬರ್‌ 1 ರಂದು ವರದಿ ಕೂಡಾ ಮಾಡಿದೆ. ವರದಿ ಹೇಳುವಂತೆ, “ಘಟನೆಯು ಸೂರತ್‌ನ ಗೋಲ್ಡ್ ಜಿಮ್‌ನ ವೀಡಿಯೊವಾಗಿದ್ದು, 33ರ ಹರೆಯದ ವ್ಯಕ್ತಿಗೆ ಅತಿಯಾದ ವರ್ಕೌಟ್‌ನಿಂದ ಹೃದಯಾಘಾತವಾಗಿತ್ತು ಎನ್ನಲಾಗಿದೆ. ಇಡೀ ಘಟನೆ ಜಿಮ್‌ನಲ್ಲಿ ಅಳವಡಿಸಲಾಗಿದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ” ಎಂದು ಹೇಳಿದೆ.

 

ಈ ಎಲ್ಲಾ ಆಧಾರದ ಮೂಲಕ ಪ್ರಸ್ತುತ ಜಾಲತಾಣಗಳಲ್ಲಿ ವೈರಲ್ ಆಗಿರುವ ಈ ವಿಡಿಯೊ ನಟ ಪುನೀತ್‌ ರಾಜ್‌ಕುಮಾರ್‌ ಅವರದ್ದಲ್ಲ ಎಂದು ಸ್ಪಷ್ಟವಾಗಿ ಹೇಳಬಹುದಾಗಿದೆ.

ಇದನ್ನೂ ಓದಿ: ಚಿತ್ರರಂಗದ ’ಯುವರತ್ನ’ ಪುನೀತ್ ರಾಜ್‌ಕುಮಾರ್‌ ಅವರ ಅಪರೂಪದ ಚಿತ್ರಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...