Homeಕರ್ನಾಟಕಫ್ಯಾಕ್ಟ್‌ಚೆಕ್: BJP ಮತ್ತು ಅದರ ನಾಯಕರನ್ನು ಟೀಕಿಸುತ್ತಿರುವ ಈ ವ್ಯಕ್ತಿ ಶಿವಮೊಗ್ಗದಲ್ಲಿ ಹತ್ಯೆಗೀಡಾದ ಬಜರಂಗದಳದ ಕಾರ್ಯಕರ್ತ...

ಫ್ಯಾಕ್ಟ್‌ಚೆಕ್: BJP ಮತ್ತು ಅದರ ನಾಯಕರನ್ನು ಟೀಕಿಸುತ್ತಿರುವ ಈ ವ್ಯಕ್ತಿ ಶಿವಮೊಗ್ಗದಲ್ಲಿ ಹತ್ಯೆಗೀಡಾದ ಬಜರಂಗದಳದ ಕಾರ್ಯಕರ್ತ ‘ಹರ್ಷ’ ಅಲ್ಲ

- Advertisement -
- Advertisement -

ಇತ್ತೀಚೆಗೆ ಶಿವಮೊಗ್ಗದಲ್ಲಿ ಹತ್ಯೆಯಾದ ಬಿಜೆಪಿ ಬೆಂಬಲಿತ ಸಂಘಟನೆಯಾದ ಬಜರಂಗದಳದ ಕಾರ್ಯಕರ್ತ ಹರ್ಷ, ಬಿಜೆಪಿ ಮತ್ತು ಅದರ ನಾಯಕರ ವಿರುದ್ದ ಮಾತನಾಡುತ್ತಿದ್ದಾರೆ ಎಂದು ಪ್ರತಿಪಾದಿಸಿ ಸಾಮಾಜಿಕ ಜಾಲತಾಣದಲ್ಲಿ ವಿಡಿಯೊವೊಂದು ಹರಿಡಾಡುತ್ತಿದೆ. ಅವರು ಬಿಜೆಪಿ ವಿರುದ್ಧ ಹೀಗೆ ಮಾತನಾಡಿರುವುದರಿಂದಲೇ ಅವರ ಹತ್ಯೆ ಮಾಡಲಾಗಿದೆ ಎಂದು ಕೂಡಾ ಈ ಪೋಸ್ಟ್‌ನಲ್ಲಿ ಪ್ರತಿಪಾದಿಸಲಾಗಿದೆ.

“ಗೆಳೆಯರೇ ತಪ್ಪದೆ ಹರ್ಷನ ಮಾತು ಕೇಳಿ. ಇದರಲ್ಲಿ ಬಿಜೆಪಿ, ಕೇಂದ್ರ ಸರಕಾರ, ಬಸವರಾಜ್ ಪಾಟೀಲ್ ಯತ್ನಾಳ್, ಸಂಘಪರಿವಾರ, ಎಬಿವಿಪಿ, ಭಜರಂಗದಳದ ಇತಿಹಾಸದ ಬಗ್ಗೆ ಹೇಳಿಕೆ ನೀಡಿದ್ದಾನೆ. ಅಂದಿನ ಹರ್ಷನ ಮಾತಿಗೂ, ಇಂದಿನ ಹರ್ಷನ ಸಾವಿಗೆ ಯಾರು ಕಾರಣ? ನೀವೆ ವಿಚಾರ ಮಾಡಿ ಸ್ವಾಮಿ” ಎಂದು ವೈರಲ್ ಪೋಸ್ಟ್‌ ಹೇಳುತ್ತದೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ಮೋದಿಯಿಂದಾಗಿ ಕೊರೊನಾ ಸಮಯದಲ್ಲಿ ಪ್ರತಿ ಮನೆಗೆ ಲಕ್ಷ್ಮಿ ದೇವಿ ಬಂದಿದ್ದರು ಎಂಬ ಅಮಿತ್ ಹೇಳಿಕೆ ನಿಜವೆ?

ಉಡುಪಿ ಜಿಲ್ಲಾ ಕಾಂಗ್ರೆಸ್‌ನ ಸಾಮಾಜಿಕ ಜಾಲತಾಣದ ಅಧ್ಯಕ್ಷ ರೋಶನ್ ಶೆಟ್ಟಿ ಕೂಡಾ ಇದೇ ನಿರೂಪಣೆಯೊಂದಿಗೆ ಈ ವಿಡಿಯೊವನ್ನು ತನ್ನ ಫೇಸ್‌ಬುಕ್‌ ಖಾತೆಯಿಂದ ಹಂಚಿಕೊಂಡಿದ್ದಾರೆ.

ಇಷ್ಟೇ ಅಲ್ಲದೆ ಟ್ವಿಟರ್‌ ಮತ್ತು ಫೇಸ್‌ಬುಕ್‌ನಲ್ಲೂ ಈ ವಿಡಿಯೊವನ್ನು ಹಲವಾರು ಜನರು ಶೇರ್‌ ಮಾಡಿಕೊಂಡಿದ್ದಾರೆ. ಅವುಗಳನ್ನು ಇಲ್ಲಿ, ಇಲ್ಲಿ, ಇಲ್ಲಿ, ಇಲ್ಲಿ, ಇಲ್ಲಿ ಮತ್ತು ಇಲ್ಲಿ ನೋಡಬಹುದಾಗಿದೆ. ನಾನುಗೌರಿ.ಕಾಂ ಈ ವಿಡಿಯೊ ಬಗ್ಗೆ ಪರಿಶೀಲಿಸುವಂತೆ ಹಲವಾರು ಮನವಿಗಳು ಬಂದಿವೆ.

ಫ್ಯಾಕ್ಟ್‌ಚೆಕ್‌

ನಾನುಗೌರಿ.ಕಾಂ ಈ ವಿಡಿಯೊ ಬಗ್ಗೆ ಪರೀಶಿಲಿಸಿದಾದ ವಿಡಿಯೊದಲ್ಲಿ ಮಾತನಾಡುತ್ತಿರುವ ವ್ಯಕ್ತಿಯು ಶಿವಮೊಗ್ಗದಲ್ಲಿ ಇತ್ತೀಚೆಗೆ ಹತ್ಯೆಯಾದ ಹರ್ಷ ಅಲ್ಲ ಎಂದು ಖಚಿತವಾಗಿದೆ. ವೈರಲ್‌ ವಿಡಿಯೊದಲ್ಲಿ ಇರುವ ಯುವಕ ಸರ್ಫರಾಝ್ ಗಂಗಾವತಿ ಆಗಿದ್ದು, ಇವರು SDPI ಅಂಗ ಸಂಸ್ಥೆಯಾದ CFI ಎಂಬ ವಿದ್ಯಾರ್ಥಿ ಸಂಘಟನೆಯ ಕರ್ನಾಟಕ ರಾಜ್ಯ ಕಾರ್ಯದರ್ಶಿಯಾಗಿದ್ದಾರೆ. ಇವರು ಫೆಬ್ರವರಿ 8 ರಂದು ಬೆಂಗಳೂರಿನ ಪ್ರೆಸ್‌ಕ್ಲಬ್‌‌ನಲ್ಲಿ ನಡೆಸಿದ ಪತ್ರಿಕಾಗೋಷ್ಠಿಯ ವಿಡಿಯೊ ಇದಾಗಿದೆ.

ವಿಡಿಯೊದಲ್ಲಿ ಟಿವಿ9ಕನ್ನಡ ಡಿಜಿಟಲ್‌ ಲೊಗೊ ಇದ್ದು, ವೈರಲ್‌ ಆಗಿರುವ ವಿಡಿಯೊದ ಪೂರ್ತಿ ಆವೃತ್ತಿ ಈಗ ಟಿವಿ9 ಕನ್ನಡ ಯೂಟ್ಯೂಬ್‌ ಚಾನೆಲ್‌ನಲ್ಲಿ ಲಭ್ಯವಿಲ್ಲ(ಅಥವಾ ನಮಗೆ ಸಿಕ್ಕಿಲ್ಲ). ಆದರೆ ಫೆಬ್ರವರಿ 8 ರಂದು ನಡೆದ ಪತ್ರಿಕಾಗೋಷ್ಠಿಯ 01:45 ನಿಮಿಷದ ವಿಡಿಯೊ ಯೂಟ್ಯೂಬ್‌‌ ಚಾನೆಲ್‌ನಲ್ಲಿ ಇನ್ನೂ ಇದೆ. ಟಿವಿ9 ಕನ್ನಡ ಈ ವಿಡಿಯೊವನ್ನು, “Hijab Row: ಬೆಂಗಳೂರಲ್ಲಿ ಕ್ಯಾಂಪಸ್‌ ಫ್ರಂಟ್‌ ಆಫ್‌ ಇಂಡಿಯಾ ಸುದ್ದಿಗೋಷ್ಠಿ |CFI |Tv9 Kannada” ಎಂಬ ಶೀರ್ಷಿಕೆಯೊಂದಿಗೆ ತನ್ನ ಯೂಟ್ಯೂಬ್‌ ಚಾನೆಲ್‌ನಲ್ಲಿ ಅ‌ಪ್‌ಲೋಡ್‌ ಮಾಡಿದೆ.

ಇಷ್ಟೇ ಅಲ್ಲದೆ, ಈ ಪತ್ರಿಕಾಗೋಷ್ಠಿಯ ಸಾರಾಂಶವನ್ನು ಸರ್ಫರಾಝ್‌ ಅವರು ತನ್ನ ಫೇಸ್‌ಬುಕ್‌ ಪೇಜ್‌ನಲ್ಲಿ ಹಂಚಿಕೊಂಡಿದ್ದಾರೆ.

ಒಟ್ಟಿನಲ್ಲಿ ಹೇಳಬಹುದಾದರೆ, ಶಿವಮೊಗ್ಗದಲ್ಲಿ ಹತ್ಯೆಯಾದ ಬಿಜೆಪಿ ಬೆಂಬಲಿತ ಸಂಘಟನೆಯಾದ ಬಜರಂದಳದ ಕಾರ್ಯಕರ್ತ ಹರ್ಷ ಅವರಿಗೂ, ವೈರಲ್ ಆಗಿರುವ ಈ ವಿಡಿಯೊಗೂ ಯಾವುದೆ ಸಂಬಂಧವಿಲ್ಲ. ವಿಡಿಯೊದಲ್ಲಿ ಇರುವುದು SDPIಯ ಅಂಗ ಸಂಸ್ಥೆಯಾದ CFI ವಿದ್ಯಾರ್ಥಿ ಸಂಘಟನೆಯ ರಾಜ್ಯ ಕಾರ್ಯದರ್ಶಿ ಸರ್ಫರಾಜ್ ಗಂಗಾವತಿಯಾಗಿದ್ದಾರೆ.

ಇದನ್ನೂ ಓದಿ: BJP ಸದಸ್ಯರನ್ನೆ ‘ಬಿಜೆಪಿ ಬೆಂಬಲಿಸುವ ಸಾಮಾನ್ಯ ಮುಸ್ಲಿಮರು’ ಎಂದು ಚಿತ್ರಿಸಿದ ‘ಟಿವಿ9 ಭಾರತವರ್ಷ’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಹಾರದ ನಳಂದ ಜಿಲ್ಲೆಯ ಶೀತ್ಲಾ ದೇವಸ್ಥಾನದಲ್ಲಿ ಕಾಲ್ತುಳಿತ: ಎಂಟು ಮಹಿಳೆಯರು ಸಾವು; ಹಲವು ಮಂದಿಗೆ ಗಾಯ 

ಬಿಹಾರದ ನಳಂದ ಜಿಲ್ಲೆಯ ಶೀತ್ಲಾ ದೇವಸ್ಥಾನದಲ್ಲಿ ಮಂಗಳವಾರ ಸಂಭವಿಸಿದ ಕಾಲ್ತುಳಿತದಲ್ಲಿ ಕನಿಷ್ಠ ಎಂಟು ಮಹಿಳೆಯರು ಸಾವನ್ನಪ್ಪಿದ್ದು, ಹಲವಾರು ಮಂದಿ ಗಾಯಗೊಂಡಿರುವುದಾಗಿ ವರದಿಯಾಗಿದೆ.  ಪೂಜೆಗಾಗಿ ದೇವಾಲಯದಲ್ಲಿ ಹೆಚ್ಚಿನ ಸಂಖ್ಯೆಯ ಭಕ್ತರು ಜಮಾಯಿಸಿದಾಗ ಈ ಘಟನೆ ಸಂಭವಿಸಿದ್ದು,...

ದಲಿತ ಕ್ರೈಸ್ತರ ಎಸ್‌ಸಿ ಸ್ಥಾನಮಾನ ರದ್ದು ಆದೇಶ; ಸುಪ್ರೀಂ ಕೋರ್ಟ್ ತೀರ್ಪು ಖಂಡಿಸಿದ ಮಂದಕೃಷ್ಣ ಮಾದಿಗ

ದಲಿತರು ಕ್ರೈಸ್ತರಾದರೆ ಅವರ ಎಸ್‌ಸಿ ಸ್ಥಾನಮಾನ ರದ್ದುಗೊಳ್ಳಲಿದೆ ಎಂಬ ಸುಪ್ರೀಂ ಕೋರ್ಟ್ ತೀರ್ಪನ್ನು ಬಲವಾಗಿ ಖಂಡಿಸುತ್ತೇವೆ ಎಂದು ಎಂಆರ್‌ಪಿಎಸ್ ಫೌಂಡೇಶನ್ ಅಧ್ಯಕ್ಷ ಮಂದಕೃಷ್ಣ ಮಾದಿಗ ಹೇಳಿದರು. "ದೇಶದಲ್ಲಿ ಜಾತಿ ವ್ಯವಸ್ಥೆಯನ್ನು ನಿರ್ಮೂಲನೆ ಮಾಡಬೇಕು,...

ಜಾರ್ಖಂಡ್: ರಾಮನವಮಿ ಘರ್ಷಣೆಗೆ ಸಂಬಂಧಿಸಿದ 19 ಜನರನ್ನು ಬಂಧಿಸಿ, ಕೈಕೋಳ ಹಾಕಿ ಸಾರ್ವಜನಿಕ ಮೆರವಣಿಗೆ ಮಾಡಿದ ಪೊಲೀಸರು

ಜಾರ್ಖಂಡ್‌ನ ಗರ್ವಾ ಜಿಲ್ಲೆಯಲ್ಲಿ ರಾಮನವಮಿ ಮೆರವಣಿಗೆಯ ಸಂದರ್ಭದಲ್ಲಿ ಎರಡು ಸಮುದಾಯಗಳ ನಡುವೆ ನಡೆದ ಘರ್ಷಣೆಯ ನಂತರ ಕನಿಷ್ಠ 19 ಜನರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.  ಭದ್ರತಾ ಪಡೆಗಳನ್ನು ಭಾರೀ ಪ್ರಮಾಣದಲ್ಲಿ ನಿಯೋಜಿಸಿದ ನಂತರ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ : ಹೊಸ ಮಸೂದೆ ಅಂಗೀಕರಿಸಿದ ಇಸ್ರೇಲ್ ಸಂಸತ್ತು

ಇಸ್ರೇಲ್ ಸಂಸತ್ತು ಸೋಮವಾರ (ಮಾರ್ಚ್ 30, 2026) ಹೊಸ ಮಸೂದೆಯೊಂದನ್ನು ಅಂಗೀಕರಿಸಿದೆ. ಇದರ ಪ್ರಕಾರ, ಮಿಲಿಟರಿ ನ್ಯಾಯಾಲಯದಲ್ಲಿ ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಲಾಗಿದೆ. ಪ್ರಧಾನಿ ಬೆಂಜಮಿನ್...

ಇರಾನ್ ಮೇಲೆ ದಾಳಿ : ಅಮೆರಿಕ ವಿಮಾನಗಳಿಗೆ ತನ್ನ ವಾಯುಪ್ರದೇಶ ಮುಚ್ಚಿದ ಸ್ಪೇನ್

ಇರಾನ್ ಮೇಲಿನ ದಾಳಿಗಳಲ್ಲಿ ಭಾಗಿಯಾಗಿರುವ ಅಮೆರಿಕದ ವಿಮಾನಗಳಿಗೆ ಸ್ಪೇನ್ ತನ್ನ ವಾಯುಪ್ರದೇಶವನ್ನು ನಿರ್ಬಂಧಿಸಿದೆ ಎಂದು ರಕ್ಷಣಾ ಸಚಿವೆ ಮಾರ್ಗರಿಟಾ ರೋಬಲ್ಸ್ (ಮಾ.30) ಸೋಮವಾರ ತಿಳಿಸಿದ್ದಾರೆ. ಜಂಟಿಯಾಗಿ ನಿರ್ವಹಿಸುವ ಸೇನಾ ನೆಲೆಗಳನ್ನು ಬಳಸಲು ಈ...

ಜನಗಣತಿ-2027 : ‘ಸ್ಥಿರ’ ಲಿವ್-ಇನ್ ಜೋಡಿಗೆ ವೈವಾಹಿಕ ಸ್ಥಾನಮಾನ

ತಮ್ಮ ಸಂಬಂಧ 'ಸ್ಥಿರ' ಎಂದು ಹೇಳಿಕೊಳ್ಳುವ ಲಿವ್-ಇನ್ ಜೋಡಿಗಳನ್ನು 2027ರ ಜನಗಣತಿಯಲ್ಲಿ ವಿವಾಹಿತ ದಂಪತಿಯೆಂದು ಪರಿಗಣಿಸಲಾಗುತ್ತದೆ ಎಂದು ವರದಿಯಾಗಿದೆ. ಜನಗಣತಿ ವೆಬ್‌ಸೈಟ್‌ನ FAQ (ಪದೇ ಪದೇ ಕೇಳಲಾಗುವ ಪ್ರಶ್ನೆಗಳು) ವಿಭಾಗದಲ್ಲಿ ಈ ಬಗ್ಗೆ ಸ್ಪಷ್ಟನೆ...

ಉನ್ನತ ಸಾಂಸ್ಥಿಕ ಹುದ್ದೆಗಳಲ್ಲಿ ‘ಬಹುಜನ’ ಪ್ರಾತಿನಿಧ್ಯದ ಕೊರತೆ: ವ್ಯವಸ್ಥಿತ ತಾರತಮ್ಯದ ರೂಪ ಎಂದ ರಾಹುಲ್ ಗಾಂಧಿ 

ಉನ್ನತ ಸಂಸ್ಥೆಗಳ ಹಿರಿಯ ನಾಯಕತ್ವದಲ್ಲಿ "ಬಹುಜನ" ಸಮುದಾಯಗಳಿಗೆ ಪ್ರಾತಿನಿಧ್ಯದ ಕೊರತೆಯಿದೆ ಎಂದು ರಾಹುಲ್ ಗಾಂಧಿ ಸೋಮವಾರ ಆರೋಪಿಸಿದ್ದಾರೆ. ಇದು ವ್ಯವಸ್ಥಿತ ತಾರತಮ್ಯದ ಒಂದು ರೂಪವಾಗಿದ್ದು ಅದನ್ನು ಪರಿಹರಿಸಬೇಕು ಎಂದು ಹೇಳಿದ್ದಾರೆ.  ಲೋಕಸಭೆಯ ವಿರೋಧ ಪಕ್ಷದ...

ಗಾಯಗಳ ತೀವ್ರತೆಯಿಂದಾಗಿ ನೌಕಾಪಡೆಯ ಮುಖ್ಯಸ್ಥ ತಂಗ್ಸಿರಿ ಸಾವನ್ನಪ್ಪಿದ್ದಾರೆ: ದೃಢಪಡಿಸಿದ ಇರಾನ್

ತಾನು ನಡೆಸಿದ ದಾಳಿಯಿಂದ ಇರಾನ್‌ ನೌಕಾಪಡೆಯ ರಿಯರ್ ಅಡ್ಮಿರಲ್ ಅಲಿರೆಜಾ ತಂಗ್ಸಿರಿ ಸಾವನ್ನಪ್ಪಿದ್ದಾರೆ ಎಂದು ಕಳೆದ ಗುರುವಾರ (ಮಾ.26) ಇಸ್ರೇಲ್ ಹೇಳಿಕೊಂಡಿತ್ತು. ಸುದ್ದಿ ಖಷಿತಪಡಿಸಿರುವ ಇರಾನ್, ದಾಳಿಯಿಂದ ಸಂಭವಿಸಿದ ತೀವ್ರ ಗಾಯಗಳಿಂದ ತಂಗ್ಸಿರಿ...

ಬಹುಭಾಷಾ ನಟ ಪ್ರಕಾಶ್ ರಾಜ್‌ ತಾಯಿ ಸ್ವರ್ಣಲತಾ ನಿಧನ

ಬಹುಭಾಷಾ ನಟ ಪ್ರಕಾಶ್ ರಾಜ್ ಅವರ ತಾಯಿ ಸ್ವರ್ಣಲತಾ ಅವರು ತಮ್ಮ 86 ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. ಅವರು ವಯೋಸಹಜ ಅನಾರೋಗ್ಯದಿಂದ ಸಾವನ್ನಪ್ಪಿದ್ದಾರೆ. ನಟ ಪ್ರಕಾಶ್‌ ರಾಜ್‌ ಅವರು ತಮ್ಮ ತಾಯಿಯೊಂದಿಗೆ ಇದ್ದ...

ಮುಂಬೈ: ಸ್ವ-ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ಆಕ್ರೋಶ: ದಾದರ್‌ನಲ್ಲಿ ಮೂಢನಂಬಿಕೆ ವಿರೋಧಿ ಅಭಿಯಾನ

ಮುಂಬೈ: ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ಅವರ ಚಟುವಟಿಕೆಗಳ ಸುತ್ತ ವ್ಯಾಪಕ ಆಕ್ರೋಶ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ, ವಿವೇಕ್ ಜಾಗರ್ ಉಪಕ್ರಮದಡಿಯಲ್ಲಿ ಮಹಾರಾಷ್ಟ್ರ ಅಂಧಾಶ್ರದ್ಧ ನಿರ್ಮೂಲನ ಸಮಿತಿ (MANS) ಮಹಾರಾಷ್ಟ್ರ ಘಟಕವು ಭಾನುವಾರ...