Homeಕರ್ನಾಟಕಫ್ಯಾಕ್ಟ್‌ಚೆಕ್: BJP ಮತ್ತು ಅದರ ನಾಯಕರನ್ನು ಟೀಕಿಸುತ್ತಿರುವ ಈ ವ್ಯಕ್ತಿ ಶಿವಮೊಗ್ಗದಲ್ಲಿ ಹತ್ಯೆಗೀಡಾದ ಬಜರಂಗದಳದ ಕಾರ್ಯಕರ್ತ...

ಫ್ಯಾಕ್ಟ್‌ಚೆಕ್: BJP ಮತ್ತು ಅದರ ನಾಯಕರನ್ನು ಟೀಕಿಸುತ್ತಿರುವ ಈ ವ್ಯಕ್ತಿ ಶಿವಮೊಗ್ಗದಲ್ಲಿ ಹತ್ಯೆಗೀಡಾದ ಬಜರಂಗದಳದ ಕಾರ್ಯಕರ್ತ ‘ಹರ್ಷ’ ಅಲ್ಲ

- Advertisement -
- Advertisement -

ಇತ್ತೀಚೆಗೆ ಶಿವಮೊಗ್ಗದಲ್ಲಿ ಹತ್ಯೆಯಾದ ಬಿಜೆಪಿ ಬೆಂಬಲಿತ ಸಂಘಟನೆಯಾದ ಬಜರಂಗದಳದ ಕಾರ್ಯಕರ್ತ ಹರ್ಷ, ಬಿಜೆಪಿ ಮತ್ತು ಅದರ ನಾಯಕರ ವಿರುದ್ದ ಮಾತನಾಡುತ್ತಿದ್ದಾರೆ ಎಂದು ಪ್ರತಿಪಾದಿಸಿ ಸಾಮಾಜಿಕ ಜಾಲತಾಣದಲ್ಲಿ ವಿಡಿಯೊವೊಂದು ಹರಿಡಾಡುತ್ತಿದೆ. ಅವರು ಬಿಜೆಪಿ ವಿರುದ್ಧ ಹೀಗೆ ಮಾತನಾಡಿರುವುದರಿಂದಲೇ ಅವರ ಹತ್ಯೆ ಮಾಡಲಾಗಿದೆ ಎಂದು ಕೂಡಾ ಈ ಪೋಸ್ಟ್‌ನಲ್ಲಿ ಪ್ರತಿಪಾದಿಸಲಾಗಿದೆ.

“ಗೆಳೆಯರೇ ತಪ್ಪದೆ ಹರ್ಷನ ಮಾತು ಕೇಳಿ. ಇದರಲ್ಲಿ ಬಿಜೆಪಿ, ಕೇಂದ್ರ ಸರಕಾರ, ಬಸವರಾಜ್ ಪಾಟೀಲ್ ಯತ್ನಾಳ್, ಸಂಘಪರಿವಾರ, ಎಬಿವಿಪಿ, ಭಜರಂಗದಳದ ಇತಿಹಾಸದ ಬಗ್ಗೆ ಹೇಳಿಕೆ ನೀಡಿದ್ದಾನೆ. ಅಂದಿನ ಹರ್ಷನ ಮಾತಿಗೂ, ಇಂದಿನ ಹರ್ಷನ ಸಾವಿಗೆ ಯಾರು ಕಾರಣ? ನೀವೆ ವಿಚಾರ ಮಾಡಿ ಸ್ವಾಮಿ” ಎಂದು ವೈರಲ್ ಪೋಸ್ಟ್‌ ಹೇಳುತ್ತದೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ಮೋದಿಯಿಂದಾಗಿ ಕೊರೊನಾ ಸಮಯದಲ್ಲಿ ಪ್ರತಿ ಮನೆಗೆ ಲಕ್ಷ್ಮಿ ದೇವಿ ಬಂದಿದ್ದರು ಎಂಬ ಅಮಿತ್ ಹೇಳಿಕೆ ನಿಜವೆ?

ಉಡುಪಿ ಜಿಲ್ಲಾ ಕಾಂಗ್ರೆಸ್‌ನ ಸಾಮಾಜಿಕ ಜಾಲತಾಣದ ಅಧ್ಯಕ್ಷ ರೋಶನ್ ಶೆಟ್ಟಿ ಕೂಡಾ ಇದೇ ನಿರೂಪಣೆಯೊಂದಿಗೆ ಈ ವಿಡಿಯೊವನ್ನು ತನ್ನ ಫೇಸ್‌ಬುಕ್‌ ಖಾತೆಯಿಂದ ಹಂಚಿಕೊಂಡಿದ್ದಾರೆ.

ಇಷ್ಟೇ ಅಲ್ಲದೆ ಟ್ವಿಟರ್‌ ಮತ್ತು ಫೇಸ್‌ಬುಕ್‌ನಲ್ಲೂ ಈ ವಿಡಿಯೊವನ್ನು ಹಲವಾರು ಜನರು ಶೇರ್‌ ಮಾಡಿಕೊಂಡಿದ್ದಾರೆ. ಅವುಗಳನ್ನು ಇಲ್ಲಿ, ಇಲ್ಲಿ, ಇಲ್ಲಿ, ಇಲ್ಲಿ, ಇಲ್ಲಿ ಮತ್ತು ಇಲ್ಲಿ ನೋಡಬಹುದಾಗಿದೆ. ನಾನುಗೌರಿ.ಕಾಂ ಈ ವಿಡಿಯೊ ಬಗ್ಗೆ ಪರಿಶೀಲಿಸುವಂತೆ ಹಲವಾರು ಮನವಿಗಳು ಬಂದಿವೆ.

ಫ್ಯಾಕ್ಟ್‌ಚೆಕ್‌

ನಾನುಗೌರಿ.ಕಾಂ ಈ ವಿಡಿಯೊ ಬಗ್ಗೆ ಪರೀಶಿಲಿಸಿದಾದ ವಿಡಿಯೊದಲ್ಲಿ ಮಾತನಾಡುತ್ತಿರುವ ವ್ಯಕ್ತಿಯು ಶಿವಮೊಗ್ಗದಲ್ಲಿ ಇತ್ತೀಚೆಗೆ ಹತ್ಯೆಯಾದ ಹರ್ಷ ಅಲ್ಲ ಎಂದು ಖಚಿತವಾಗಿದೆ. ವೈರಲ್‌ ವಿಡಿಯೊದಲ್ಲಿ ಇರುವ ಯುವಕ ಸರ್ಫರಾಝ್ ಗಂಗಾವತಿ ಆಗಿದ್ದು, ಇವರು SDPI ಅಂಗ ಸಂಸ್ಥೆಯಾದ CFI ಎಂಬ ವಿದ್ಯಾರ್ಥಿ ಸಂಘಟನೆಯ ಕರ್ನಾಟಕ ರಾಜ್ಯ ಕಾರ್ಯದರ್ಶಿಯಾಗಿದ್ದಾರೆ. ಇವರು ಫೆಬ್ರವರಿ 8 ರಂದು ಬೆಂಗಳೂರಿನ ಪ್ರೆಸ್‌ಕ್ಲಬ್‌‌ನಲ್ಲಿ ನಡೆಸಿದ ಪತ್ರಿಕಾಗೋಷ್ಠಿಯ ವಿಡಿಯೊ ಇದಾಗಿದೆ.

ವಿಡಿಯೊದಲ್ಲಿ ಟಿವಿ9ಕನ್ನಡ ಡಿಜಿಟಲ್‌ ಲೊಗೊ ಇದ್ದು, ವೈರಲ್‌ ಆಗಿರುವ ವಿಡಿಯೊದ ಪೂರ್ತಿ ಆವೃತ್ತಿ ಈಗ ಟಿವಿ9 ಕನ್ನಡ ಯೂಟ್ಯೂಬ್‌ ಚಾನೆಲ್‌ನಲ್ಲಿ ಲಭ್ಯವಿಲ್ಲ(ಅಥವಾ ನಮಗೆ ಸಿಕ್ಕಿಲ್ಲ). ಆದರೆ ಫೆಬ್ರವರಿ 8 ರಂದು ನಡೆದ ಪತ್ರಿಕಾಗೋಷ್ಠಿಯ 01:45 ನಿಮಿಷದ ವಿಡಿಯೊ ಯೂಟ್ಯೂಬ್‌‌ ಚಾನೆಲ್‌ನಲ್ಲಿ ಇನ್ನೂ ಇದೆ. ಟಿವಿ9 ಕನ್ನಡ ಈ ವಿಡಿಯೊವನ್ನು, “Hijab Row: ಬೆಂಗಳೂರಲ್ಲಿ ಕ್ಯಾಂಪಸ್‌ ಫ್ರಂಟ್‌ ಆಫ್‌ ಇಂಡಿಯಾ ಸುದ್ದಿಗೋಷ್ಠಿ |CFI |Tv9 Kannada” ಎಂಬ ಶೀರ್ಷಿಕೆಯೊಂದಿಗೆ ತನ್ನ ಯೂಟ್ಯೂಬ್‌ ಚಾನೆಲ್‌ನಲ್ಲಿ ಅ‌ಪ್‌ಲೋಡ್‌ ಮಾಡಿದೆ.

ಇಷ್ಟೇ ಅಲ್ಲದೆ, ಈ ಪತ್ರಿಕಾಗೋಷ್ಠಿಯ ಸಾರಾಂಶವನ್ನು ಸರ್ಫರಾಝ್‌ ಅವರು ತನ್ನ ಫೇಸ್‌ಬುಕ್‌ ಪೇಜ್‌ನಲ್ಲಿ ಹಂಚಿಕೊಂಡಿದ್ದಾರೆ.

ಒಟ್ಟಿನಲ್ಲಿ ಹೇಳಬಹುದಾದರೆ, ಶಿವಮೊಗ್ಗದಲ್ಲಿ ಹತ್ಯೆಯಾದ ಬಿಜೆಪಿ ಬೆಂಬಲಿತ ಸಂಘಟನೆಯಾದ ಬಜರಂದಳದ ಕಾರ್ಯಕರ್ತ ಹರ್ಷ ಅವರಿಗೂ, ವೈರಲ್ ಆಗಿರುವ ಈ ವಿಡಿಯೊಗೂ ಯಾವುದೆ ಸಂಬಂಧವಿಲ್ಲ. ವಿಡಿಯೊದಲ್ಲಿ ಇರುವುದು SDPIಯ ಅಂಗ ಸಂಸ್ಥೆಯಾದ CFI ವಿದ್ಯಾರ್ಥಿ ಸಂಘಟನೆಯ ರಾಜ್ಯ ಕಾರ್ಯದರ್ಶಿ ಸರ್ಫರಾಜ್ ಗಂಗಾವತಿಯಾಗಿದ್ದಾರೆ.

ಇದನ್ನೂ ಓದಿ: BJP ಸದಸ್ಯರನ್ನೆ ‘ಬಿಜೆಪಿ ಬೆಂಬಲಿಸುವ ಸಾಮಾನ್ಯ ಮುಸ್ಲಿಮರು’ ಎಂದು ಚಿತ್ರಿಸಿದ ‘ಟಿವಿ9 ಭಾರತವರ್ಷ’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....

ಮುಡಾ ಪ್ರಕರಣ: ಸಿದ್ದರಾಮಯ್ಯಗೆ ಬಿಗ್ ರಿಲೀಫ್, ಲೋಕಾಯುಕ್ತ ಬಿ ರಿಪೋರ್ಟ್ ಪುರಸ್ಕರಿಸಿದ ಕೋರ್ಟ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧ ಪುರಾವೆಗಳಿಲ್ಲ ಎಂದು ಹೇಳಿ ‘ಕ್ಲೀನ್ ಚೀಟ್’ ನೀಡಿ ‘ಬಿ’ ರಿಪೋರ್ಟ್ ಅನ್ನು ಸಲ್ಲಿಸಿತ್ತು....

ಪಿಟಿಸಿಎಲ್‌ ಕಾಯ್ದೆ ತಿದ್ದುಪಡಿ- ಕೋರ್ಟ್‌ಗಳಲ್ಲಿ ದಲಿತರಿಗೆ ಆಗುತ್ತಿರುವ ಅನ್ಯಾಯ ಖಂಡಿಸಿ ರಾಜ್ಯದಾದ್ಯಂತ ಪ್ರತಿಭಟನೆ

ಪಿಟಿಸಿಎಲ್‌ ಕಾಯ್ದೆ, 1978ರ 2023ರ ತಿದ್ದುಪಡಿ ಕಾಯ್ದೆಯ ವಿರೋಧಿಸಿ ಹಾಗೂ ಕಂದಾಯ ಇಲಾಖೆಯ ಎಸಿ, ಡಿಸಿ ನ್ಯಾಯಾಲಯಗಳು ಹಾಗೂ ಹೈಕೋರ್ಟ್, ಸುಪ್ರೀಂ ಕೋರ್ಟ್‌ಗಳಲ್ಲಿ ಆಗುತ್ತಿರುವ ಅನ್ಯಾಯವನ್ನು ಖಂಡಿಸಿ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ...

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್‌ಗೆ ಜಾಮೀನು

ಪತ್ತನಂತಿಟ್ಟ: ಈ ತಿಂಗಳ ಆರಂಭದಲ್ಲಿ ಬಂಧಿಸಲ್ಪಟ್ಟ ಮೂರನೇ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್ ಅವರಿಗೆ ಕೇರಳ ನ್ಯಾಯಾಲಯ ಬುಧವಾರ ಜಾಮೀನು ನೀಡಿದೆ. ಶಾಸಕರು ಸಲ್ಲಿಸಿದ್ದ ಮೇಲ್ಮನವಿಯನ್ನು ಪರಿಗಣಿಸಿದ್ದ ಪತ್ತನಂತಿಟ್ಟ...