Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್: ಇಸ್ಕಾನ್‌‌ನ ಈ ಚಿತ್ರ ಉಕ್ರೇನಿದ್ದಲ್ಲ; ದಾರಿ ತಪ್ಪಿಸಿದ ಬಿಟಿವಿ ವರದಿ!

ಫ್ಯಾಕ್ಟ್‌ಚೆಕ್: ಇಸ್ಕಾನ್‌‌ನ ಈ ಚಿತ್ರ ಉಕ್ರೇನಿದ್ದಲ್ಲ; ದಾರಿ ತಪ್ಪಿಸಿದ ಬಿಟಿವಿ ವರದಿ!

- Advertisement -
- Advertisement -

ಯುದ್ಧ ಪೀಡಿತ ಉಕ್ರೇನ್‌ನಲ್ಲಿ ‘ಇಸ್ಕಾನ್‌’ ವತಿಯಿಂದ ಜನರಿಗೆ ಆಹಾರ ಒದಗಿಸಲಾಗುತ್ತಿದೆ ಎಂದು ಪ್ರತಿಪಾದಿಸಿ ಚಿತ್ರವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ. ಈ ಚಿತ್ರದೊಂದಿಗೆ ವೈರಲ್ ಆಗಿರುವ ಬರಹವು ಕೋಮುದ್ವೇಷ ಬಿತ್ತುತ್ತಿದ್ದು, ಹಿಂದೂ ಮತವನ್ನು ಬಿಟ್ಟು ಉಳಿದ ಧರ್ಮಗಳು ಸಹಾಯ ಮಾಡುವ ನೆಪದಲ್ಲಿ ಆಮಿಷ ಒಡ್ಡುತ್ತದೆ ಎಂಬ ಅರ್ಥದಲ್ಲಿ ಈ ಬರಹವನ್ನು ಬರೆಯಲಾಗಿದೆ.

ವೈರಲ್‌ ಚಿತ್ರದ ಜೊತೆಗೆ, “ಉಕ್ರೇನ್‌ನಲ್ಲಿ ಸುಮಾರು 54 ಇಸ್ಕಾನ್ ದೇವಾಲಯಗಳಿಂದ ಹಸಿದವರಿಗೆ ಅನ್ನ ನೀಡಲಾಗುತ್ತಿದ್ದು, ಅಲ್ಲಿ ಅನ್ನ ನೀಡುವ ಮೊದಲು ಅನ್ಯ ಧರ್ಮಿಯರಿಗೆ ನೀವು ನಮ್ಮ ಮತಕ್ಕೆ ಬನ್ನಿ ಎಂದು ಯಾರೂ ಒತ್ತಾಯ ಮಾಡುತ್ತಿಲ್ಲ. ಇದುವೆ ನನ್ನ ಹೆಮ್ಮೆಯ ಸನಾತನ ಮತ” ಎಂಬ ಇತರ ಧರ್ಮಗಳನ್ನು ಕೀಳಾಗಿ ಬಿಂಬಿಸುವ ಬರಹಗಳನ್ನೂ ವೈರಲ್‌ ಮಾಡಲಾಗುತ್ತಿದೆ.

ಡಮರುಗ ಎಂಬ ಬಿಜೆಪಿ ಬೆಂಬಲಿಗ ಪೇಜ್‌ ಒಂದು ಈ ರೀತಿಯ ಪೋಸ್ಟ್‌ ಅನ್ನು ರಚಿಸಿ ಹಂಚಿಕೊಂಡಿದೆ. ಇದೇ ಪ್ರತಿಪಾದನೆಯಿಂದಿಗೆ ಸಾಮಾಜಿಕ ಮಾಧ್ಯಮಗಳು ಹಲವಾರು ಬಳಕೆದಾರರು ಚಿತ್ರವನ್ನು ಹಂಚಿಕೊಂಡಿದ್ದಾರೆ. ಇದನ್ನು ನೀವು ಇಲ್ಲಿ, ಇಲ್ಲಿ, ಇಲ್ಲಿ ಮತ್ತು ಇಲ್ಲಿ ನೋಡಬಹುದು.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ‘ಮಸೀದಿ ಕಟ್ಟಿಸು’ ಎಂದು ಅಖಿಲೇಶ್‌ಗೆ ವೃದ್ಧ ಛೀಮಾರಿ ಹಾಕಿಲ್ಲ; ಅವರು ಹೇಳಿದ್ದು EVM ಬದಲಾಯಿಸು ಎಂದು

ಕನ್ನಡದ ಸುದ್ದಿ ಮಾಧ್ಯಮ ಬಿಟಿವಿ ಕೂಡಾ ಇದೇ ಚಿತ್ರವನ್ನು ಬಳಸಿ ಸುದ್ದಿಯೊಂದನ್ನು ವರದಿಯೊಂದನ್ನು ಮಾಡಿದೆ. ಈ ಸುದ್ದಿಯಲ್ಲಿ ಬಿಟಿವಿ, “ಉಕ್ರೇನ್‍ನಲ್ಲಿ ಇಸ್ಕಾನ್ 54 ಕ್ಕೂ ಅಧಿಕ ದೇವಾಲಯಗಳನ್ನು ಹೊಂದಿದ್ದು, ರಷ್ಯಾ ದಾಳಿಯಿಂದ ಉಕ್ರೇನ್ ತತ್ತರಿಸುತ್ತಿರುವ ಉಕ್ರೇನ್​ ಜನರಿಗೆ ಇಸ್ಕಾನ್ ಸೇವೆ ಸಲ್ಲಿಸುತ್ತಿದೆ. ಬಿಕ್ಕಟ್ಟಿನ ಪರಿಸ್ಥಿತಿಯಲ್ಲಿರುವ ಉಕ್ರೇನ್​ ಜನರಿಗೆ ಆಹಾರ ಪೂರೈಕೆ ಮಾಡುವ ಮೂಲಕ ಜನರ ಮೆಚ್ಚುಗೆಗೆ ಪಾತ್ರವಾಗುತ್ತಿದೆ. ಸದ್ಯ ಇದರ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಬಾರಿ ವೈರಲ್ ಆಗುತ್ತಿದ್ದು, ನೆಟ್ಟಿಗರು ಮೆಚ್ಚುಗೆಯ ಮಹಾಪೂರವೇ ಹರಿಸುತ್ತಿದ್ದಾರೆ” ಎಂದು ಎರಡು ಚಿತ್ರಗಳನ್ನು ಬಳಸಿಕೊಂಡಿದೆ.

ಆರ್ಕೈವ್ ಲಿಂಕ್‌ ಇಲ್ಲಿ ಕ್ಲಿಕ್‌ ಮಾಡಿ

ಫ್ಯಾಕ್ಟ್‌ಚೆಕ್:

ವೈರಲ್ ಫೋಟೊವನ್ನು ನಾನುಗೌರಿ.ಕಾಂ ರಿವರ್ಸ್ ಇಮೇಜ್ ಸರ್ಚ್‌ ಮೂಲಕ ಹುಡುಕಾಡಿದಾಗ ಇಸ್ಕಾನ್ ಸಂಸ್ಥೆಯು ಉಕ್ರೇನ್‌ನಲ್ಲಿ ಆಹಾರ ನೀಡುತ್ತಿದೆ ಎಂದು ವೈರಲ್ ಆದ ಈ ಚಿತ್ರಗಳನ್ನು ಹೋಲುವ ಹಲವು ಫೋಟೊಗಳು ನಮಗೆ ಲಭ್ಯವಾಗಿವೆ.

ಇದರ ಜಾಡನ್ನು ಹಿಡಿದು ನಾನುಗೌರಿ.ಕಾಂ ಮತ್ತಷ್ಟು ಹುಡುಕಾಟ ನಡೆಸಿದಾಗ ಅದು ಇಸ್ಕಾನ್ ಸಂಸ್ಥೆ ತನ್ನ ವೆಬ್ ಸೈಟ್‌ಗಾಗಿ ರೂಪಿಸಿರುವ ಹಳೆಯ ಫೋಟೋ ಎಂದು ಖಚಿತವಾಗಿದೆ.

 

ಸೋಶಿಲ್‌ ಮೀಡಿಯಾದಲ್ಲಿ ವೈರಲ್ ಮಾಡಲಾಗುತ್ತಿರುವ ಫೋಟೊವನ್ನು ಇಸ್ಕಾನ್ ಸಂಸ್ಥೆಯು ತನ್ನ ವೆಬ್‌ಸೈಟ್‌ನಲ್ಲಿ ಈ ಫೋಟೊವನ್ನು ಬಳಸಿ ಡೊನೇಟ್ ಮಾಡಿ ಎಂದು ಹಣದ ಮೊತ್ತವನ್ನು ನಮೂದಿಸಿದೆ. ಅದನ್ನು ಇಲ್ಲಿ ನೋಡಬಹುದು.

ಇಸ್ಕಾನ್ ಸಂಸ್ಥೆಯು 2015ರಲ್ಲಿ ಅಪ್‌ಲೋಡ್ ಮಾಡಿದ ಫೋಟೋವನ್ನು ಬಲಪಂಥೀಯ ಪ್ರತಿಪಾದಕ ಡಮರುಗ ಎಂಬ ಫೇಸ್‌ಬುಕ್ ಪೇಜ್‌ನಲ್ಲಿ ವೈರಲ್ ಪೋಸ್ಟ್‌ನೊಂದಿಗೆ ಹಂಚಿಕೊಳ್ಳಲಾಗಿದೆ.

ಕೂಡಾ ಕೊಲ್ಕತ್ತಾದ ಇಸ್ಕಾನ್‌ ಉಪಾಧ್ಯಕ್ಷ ರಾಧಾರಮಣ್‌ ದಾಸ್ ಎಂಬವರು, “ಇಸ್ಕಾನ್‌ನಲ್ಲಿ 54 ದೇವಾಲಯಗಳು ಇವೆ. ಎಲ್ಲಾ ದೇವಾಲಯಗಳು ಸೇವೆಗೆ ಸನ್ನದ್ಧವಾಗಿದೆ” ಎಂದು ಬರೆದಿದ್ದರು.

ಅವರ ಈ ಮಾತನ್ನು ತಪ್ಪಾಗಿ ತಿಳಿದಿರುವ ಬಿಟಿವಿ, “ಉಕ್ರೇನ್‍ನಲ್ಲಿ ಇಸ್ಕಾನ್ 54 ಕ್ಕೂ ಅಧಿಕ ದೇವಾಲಯಗಳನ್ನು ಹೊಂದಿದ್ದು,  ರಷ್ಯಾ ದಾಳಿಯಿಂದ ಉಕ್ರೇನ್ ತತ್ತರಿಸುತ್ತಿರುವ ಉಕ್ರೇನ್​ ಜನರಿಗೆ  ಇಸ್ಕಾನ್ ಸೇವೆ ಸಲ್ಲಿಸುತ್ತಿದೆ. ಬಿಕ್ಕಟ್ಟಿನ ಪರಿಸ್ಥಿತಿಯಲ್ಲಿರುವ ಉಕ್ರೇನ್​ ಜನರಿಗೆ ಆಹಾರ ಪೂರೈಕೆ ಮಾಡುವ ಮೂಲಕ ಜನರ ಮೆಚ್ಚುಗೆಗೆ ಪಾತ್ರವಾಗುತ್ತಿದೆ” ಎಂದು ಎಲ್ಲಾ ದೇವಾಲಯಗಳು ಸೇವೆ ಮಾಡುತ್ತಿವೆ ಎಂಬ ಅರ್ಥದಲ್ಲಿ ಬರೆದಿದೆ. ಜೊತೆಗೆ ಹಳೆಯ ಚಿತ್ರವನ್ನು ಕೂಡಾ ಇದು ಪೋಸ್ಟ್‌ ಮಾಡಿದೆ.

ಇದನ್ನೂ ಓದಿ: BJP ಸದಸ್ಯರನ್ನೆ ‘ಬಿಜೆಪಿ ಬೆಂಬಲಿಸುವ ಸಾಮಾನ್ಯ ಮುಸ್ಲಿಮರು’ ಎಂದು ಚಿತ್ರಿಸಿದ ‘ಟಿವಿ9 ಭಾರತವರ್ಷ’

ಇಸ್ಕಾನ್ ಸೇವೆ ಸಲ್ಲಿಸುತ್ತಿವುದು ನಿಜವೇ?

ಈ ಸುದ್ದಿ ಬರೆಯುವ 22 ಗಂಟೆಗಳ ಮುಂಚೆ ಇಸ್ಕಾನ್ ನ್ಯೂಸ್‌, “ಘರ್ಷಣೆಯಿಂದ ನಿರಾಶ್ರಿತರಾದವರಿಗೆ ಭಕ್ತರು ಅನ್ನದಾನ ಮಾಡಲು ಆರಂಭಿಸಿದ್ದೇವೆ. ಉಕ್ರೇನಿಯನ್-ರಷ್ಯನ್ ಸಂಘರ್ಷದಿಂದ ಸ್ಥಳಾಂತರಗೊಂಡವರಿಗೆ ಸಹಾಯ ಮಾಡುವಲ್ಲಿ ‘ಇಸ್ಕಾನ್ ಹಂಗೇರಿ’ ಸಕ್ರಿಯವಾಗಿ ಭಾಗವಹಿಸುತ್ತಿದೆ. ಇಸ್ಕಾನ್ ಹಂಗೇರಿ ಪ್ರಸ್ತುತ ವಾರದ ದಿನಗಳಲ್ಲಿ 600 ಪ್ಲೇಟ್ ಪ್ರಸಾದವನ್ನು ಮತ್ತು ವಾರಾಂತ್ಯದಲ್ಲಿ 1200 ಪ್ಲೇಟ್‌ಗಳನ್ನು ವಿತರಿಸುವ ಸಾಮರ್ಥ್ಯವನ್ನು ಹೊಂದಿದೆ” ಎಂದು ಬರೆದಿದೆ.

ಈ ಮಧ್ಯೆ, ತಪ್ಪಾದ ಚಿತ್ರಗಳು ಮತ್ತು ಉಕ್ರೇನ್‌ನಲ್ಲಿರುವ ಇಸ್ಕಾನ್‌ ಎಲ್ಲಾ ದೇವಸ್ಥಾನಗಳಲ್ಲಿ ಆಶ್ರಯ ನೀಡಲಾಗುತ್ತಿದೆ ಎಂಬ ಸುದ್ದಿ ಹರಿದಾಡುತ್ತಿದ್ದಂತೆ, ಸ್ವತಃ ಇಸ್ಕಾನ್‌‌‌ ನ್ಯೂಸ್‌ ಈ ಬಗ್ಗೆ ಸ್ಪಷ್ಟೀಕರಣ ನೀಡಿದೆ.

ಇಸ್ಕಾನ್‌ ನ್ಯೂಸ್‌ ಹೇಳುವಂತೆ, “ಉಕ್ರೇನ್‌ನಲ್ಲಿರುವ ಐವತ್ತಕ್ಕೂ ಹೆಚ್ಚು ಇಸ್ಕಾನ್ ದೇವಾಲಯಗಳು ಮತ್ತು ಕೇಂದ್ರಗಳು ಸಾರ್ವಜನಿಕರಿಗೆ ಆಹಾರ ಪರಿಹಾರ ಮತ್ತು ಆಶ್ರಯವನ್ನು ಒದಗಿಸುತ್ತಿವೆ ಎಂದು ಸಾಮಾಜಿಕ ಮಾಧ್ಯಮ ಮತ್ತು ಇತರ ಮಾಧ್ಯಮಗಳಲ್ಲಿ ತಪ್ಪು ಮಾಹಿತಿ ಹರಡುತ್ತಿದೆ. ಈ ಮಾಹಿತಿ ಸುಳ್ಳು” ಎಂದು ಸ್ಪಷ್ಟೀಕರಣ ನೀಡಿದೆ.

ಲಿಂ‌ಕ್‌ಗೆ ಇಲ್ಲಿ ಕ್ಲಿಕ್ ಮಾಡಿ 

ಇಸ್ಕಾನ್‌ ನ್ಯೂಸ್‌‌ ಖಚಿತವಾಗಿ ಹೇಳುವಂತೆ, “ಈ ಸಮಯದಲ್ಲಿ ಉಕ್ರೇನ್‌ನಲ್ಲಿರುವ ನಮ್ಮ ದೇವಾಲಯಗಳಲ್ಲಿ ಆಶ್ರಯ ಅಥವಾ ಆಹಾರ ವಿತರಣೆಯನ್ನು ಒದಗಿಸಲು ISKCON ಗೆ ಸಾಧ್ಯವಾಗುತ್ತಿಲ್ಲ. ಉಕ್ರೇನ್ ಮತ್ತು ಇಡೀ ಪ್ರದೇಶದ ಎಲ್ಲಾ ಜನರಿಗೆ ಶಾಂತಿಗಾಗಿ ನಾವು ಪ್ರಾರ್ಥಿಸುತ್ತೇವೆ” ಎಂದು ಬರೆದಿದೆ.

ಒಟ್ಟಾರೆಯಾಗಿ ಹೇಳುವುದಾದರೆ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್‌ ಆಗುತ್ತಿರುವ ಚಿತ್ರವೂ ತಪ್ಪಾದ ನಿರೂಪಣೆಯೊಂದಿಗೆ ಹರಿದಾಡುತ್ತಿದೆ. ಈ ಪೋಸ್ಟ್‌ ಇತರ ಧರ್ಮವರನ್ನು ಕೀಳಾಗಿ ಕಾಣಲು ಮಾಡಿರುವ ದ್ವೇಷಪೂರಿತ ಚಿತ್ರವಾಗಿದೆ. ಇಸ್ಕಾನ್ ಸಂಸ್ಥೆಯು 2015ರಲ್ಲಿ ಈ ಚಿತ್ರವನ್ನು ಹಂಚಿಕೊಂಡಿದೆ. ಜೊತೆಗೆ ಬಿಟಿವಿ ವರದಿಯಲ್ಲಿ ತಪ್ಪುಗಳಿದ್ದು, ಅದು ಹಳೆಯ ಚಿತ್ರವನ್ನು ಬಳಸಿದೆ. ಅದರ ವರದಿ ಹೇಳುವಂತೆ ಉಕ್ರೇನ್‌ನಲ್ಲಿರುವ ಎಲ್ಲಾ 54 ದೇವಾಲಯಗಳಲ್ಲಿ ನಿರಾಶ್ರಿತರಿಗೆ ಆಹಾರ ಮತ್ತು ಆಶ್ರಯವನ್ನು ನೀಡಲಾಗುತ್ತಿಲ್ಲ.

ಹಂಗೇರಿಯ ಇಸ್ಕಾನ್‌‌ನ ಕೇವಲ ಒಂದು ದೇವಸ್ಥಾನದ ವತಿಯಿಂದ ಮಾತ್ರ ಆಹಾರ ವಿತರಣೆಯನ್ನು ಹಂಗೇರಿಯ ಏರ್‌ಪೋರ್ಟ್‌ನಲ್ಲಿ ಮಾಡಲಾಗುತ್ತಿದೆ ಎಂದು ಸ್ವತಃ ಇಸ್ಕಾನ್‌ ಹೇಳಿಕೊಂಡಿದೆ.


ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ಇಸ್ಲಾಂ ವಿರುದ್ಧ ದ್ವೇಷ ಹರಡುವ ಈ ಲೇಖನ ತೋಂಟದಾರ್ಯ ಮಠದ ನಿಜಗುಣಾನಂದ ಸ್ವಾಮಿ ಬರೆದಿಲ್ಲ


ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. BTV ಈಗಾಗಲೇ ಹಲವು ಸಲ ಮರ್ಯಾದೆ ಕಳೆದುಕೊಂಡಿದೆ. ಇತ್ತೀಚೆಗಂತೂ ಈ ದಿವ್ಯ ವಸಂತ ಟ್ರೋಲ್ನಿಂದ TRP ಕಳೆದುಕೊಂಡು ಸುಸ್ತಾಗಿದೆ. ಇಷ್ಟಾದರೂ ಬುದ್ಧಿ ಬಂದಿಲ್ಲ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...