Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್: ಇಸ್ಕಾನ್‌‌ನ ಈ ಚಿತ್ರ ಉಕ್ರೇನಿದ್ದಲ್ಲ; ದಾರಿ ತಪ್ಪಿಸಿದ ಬಿಟಿವಿ ವರದಿ!

ಫ್ಯಾಕ್ಟ್‌ಚೆಕ್: ಇಸ್ಕಾನ್‌‌ನ ಈ ಚಿತ್ರ ಉಕ್ರೇನಿದ್ದಲ್ಲ; ದಾರಿ ತಪ್ಪಿಸಿದ ಬಿಟಿವಿ ವರದಿ!

- Advertisement -
- Advertisement -

ಯುದ್ಧ ಪೀಡಿತ ಉಕ್ರೇನ್‌ನಲ್ಲಿ ‘ಇಸ್ಕಾನ್‌’ ವತಿಯಿಂದ ಜನರಿಗೆ ಆಹಾರ ಒದಗಿಸಲಾಗುತ್ತಿದೆ ಎಂದು ಪ್ರತಿಪಾದಿಸಿ ಚಿತ್ರವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ. ಈ ಚಿತ್ರದೊಂದಿಗೆ ವೈರಲ್ ಆಗಿರುವ ಬರಹವು ಕೋಮುದ್ವೇಷ ಬಿತ್ತುತ್ತಿದ್ದು, ಹಿಂದೂ ಮತವನ್ನು ಬಿಟ್ಟು ಉಳಿದ ಧರ್ಮಗಳು ಸಹಾಯ ಮಾಡುವ ನೆಪದಲ್ಲಿ ಆಮಿಷ ಒಡ್ಡುತ್ತದೆ ಎಂಬ ಅರ್ಥದಲ್ಲಿ ಈ ಬರಹವನ್ನು ಬರೆಯಲಾಗಿದೆ.

ವೈರಲ್‌ ಚಿತ್ರದ ಜೊತೆಗೆ, “ಉಕ್ರೇನ್‌ನಲ್ಲಿ ಸುಮಾರು 54 ಇಸ್ಕಾನ್ ದೇವಾಲಯಗಳಿಂದ ಹಸಿದವರಿಗೆ ಅನ್ನ ನೀಡಲಾಗುತ್ತಿದ್ದು, ಅಲ್ಲಿ ಅನ್ನ ನೀಡುವ ಮೊದಲು ಅನ್ಯ ಧರ್ಮಿಯರಿಗೆ ನೀವು ನಮ್ಮ ಮತಕ್ಕೆ ಬನ್ನಿ ಎಂದು ಯಾರೂ ಒತ್ತಾಯ ಮಾಡುತ್ತಿಲ್ಲ. ಇದುವೆ ನನ್ನ ಹೆಮ್ಮೆಯ ಸನಾತನ ಮತ” ಎಂಬ ಇತರ ಧರ್ಮಗಳನ್ನು ಕೀಳಾಗಿ ಬಿಂಬಿಸುವ ಬರಹಗಳನ್ನೂ ವೈರಲ್‌ ಮಾಡಲಾಗುತ್ತಿದೆ.

ಡಮರುಗ ಎಂಬ ಬಿಜೆಪಿ ಬೆಂಬಲಿಗ ಪೇಜ್‌ ಒಂದು ಈ ರೀತಿಯ ಪೋಸ್ಟ್‌ ಅನ್ನು ರಚಿಸಿ ಹಂಚಿಕೊಂಡಿದೆ. ಇದೇ ಪ್ರತಿಪಾದನೆಯಿಂದಿಗೆ ಸಾಮಾಜಿಕ ಮಾಧ್ಯಮಗಳು ಹಲವಾರು ಬಳಕೆದಾರರು ಚಿತ್ರವನ್ನು ಹಂಚಿಕೊಂಡಿದ್ದಾರೆ. ಇದನ್ನು ನೀವು ಇಲ್ಲಿ, ಇಲ್ಲಿ, ಇಲ್ಲಿ ಮತ್ತು ಇಲ್ಲಿ ನೋಡಬಹುದು.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ‘ಮಸೀದಿ ಕಟ್ಟಿಸು’ ಎಂದು ಅಖಿಲೇಶ್‌ಗೆ ವೃದ್ಧ ಛೀಮಾರಿ ಹಾಕಿಲ್ಲ; ಅವರು ಹೇಳಿದ್ದು EVM ಬದಲಾಯಿಸು ಎಂದು

ಕನ್ನಡದ ಸುದ್ದಿ ಮಾಧ್ಯಮ ಬಿಟಿವಿ ಕೂಡಾ ಇದೇ ಚಿತ್ರವನ್ನು ಬಳಸಿ ಸುದ್ದಿಯೊಂದನ್ನು ವರದಿಯೊಂದನ್ನು ಮಾಡಿದೆ. ಈ ಸುದ್ದಿಯಲ್ಲಿ ಬಿಟಿವಿ, “ಉಕ್ರೇನ್‍ನಲ್ಲಿ ಇಸ್ಕಾನ್ 54 ಕ್ಕೂ ಅಧಿಕ ದೇವಾಲಯಗಳನ್ನು ಹೊಂದಿದ್ದು, ರಷ್ಯಾ ದಾಳಿಯಿಂದ ಉಕ್ರೇನ್ ತತ್ತರಿಸುತ್ತಿರುವ ಉಕ್ರೇನ್​ ಜನರಿಗೆ ಇಸ್ಕಾನ್ ಸೇವೆ ಸಲ್ಲಿಸುತ್ತಿದೆ. ಬಿಕ್ಕಟ್ಟಿನ ಪರಿಸ್ಥಿತಿಯಲ್ಲಿರುವ ಉಕ್ರೇನ್​ ಜನರಿಗೆ ಆಹಾರ ಪೂರೈಕೆ ಮಾಡುವ ಮೂಲಕ ಜನರ ಮೆಚ್ಚುಗೆಗೆ ಪಾತ್ರವಾಗುತ್ತಿದೆ. ಸದ್ಯ ಇದರ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಬಾರಿ ವೈರಲ್ ಆಗುತ್ತಿದ್ದು, ನೆಟ್ಟಿಗರು ಮೆಚ್ಚುಗೆಯ ಮಹಾಪೂರವೇ ಹರಿಸುತ್ತಿದ್ದಾರೆ” ಎಂದು ಎರಡು ಚಿತ್ರಗಳನ್ನು ಬಳಸಿಕೊಂಡಿದೆ.

ಆರ್ಕೈವ್ ಲಿಂಕ್‌ ಇಲ್ಲಿ ಕ್ಲಿಕ್‌ ಮಾಡಿ

ಫ್ಯಾಕ್ಟ್‌ಚೆಕ್:

ವೈರಲ್ ಫೋಟೊವನ್ನು ನಾನುಗೌರಿ.ಕಾಂ ರಿವರ್ಸ್ ಇಮೇಜ್ ಸರ್ಚ್‌ ಮೂಲಕ ಹುಡುಕಾಡಿದಾಗ ಇಸ್ಕಾನ್ ಸಂಸ್ಥೆಯು ಉಕ್ರೇನ್‌ನಲ್ಲಿ ಆಹಾರ ನೀಡುತ್ತಿದೆ ಎಂದು ವೈರಲ್ ಆದ ಈ ಚಿತ್ರಗಳನ್ನು ಹೋಲುವ ಹಲವು ಫೋಟೊಗಳು ನಮಗೆ ಲಭ್ಯವಾಗಿವೆ.

ಇದರ ಜಾಡನ್ನು ಹಿಡಿದು ನಾನುಗೌರಿ.ಕಾಂ ಮತ್ತಷ್ಟು ಹುಡುಕಾಟ ನಡೆಸಿದಾಗ ಅದು ಇಸ್ಕಾನ್ ಸಂಸ್ಥೆ ತನ್ನ ವೆಬ್ ಸೈಟ್‌ಗಾಗಿ ರೂಪಿಸಿರುವ ಹಳೆಯ ಫೋಟೋ ಎಂದು ಖಚಿತವಾಗಿದೆ.

 

ಸೋಶಿಲ್‌ ಮೀಡಿಯಾದಲ್ಲಿ ವೈರಲ್ ಮಾಡಲಾಗುತ್ತಿರುವ ಫೋಟೊವನ್ನು ಇಸ್ಕಾನ್ ಸಂಸ್ಥೆಯು ತನ್ನ ವೆಬ್‌ಸೈಟ್‌ನಲ್ಲಿ ಈ ಫೋಟೊವನ್ನು ಬಳಸಿ ಡೊನೇಟ್ ಮಾಡಿ ಎಂದು ಹಣದ ಮೊತ್ತವನ್ನು ನಮೂದಿಸಿದೆ. ಅದನ್ನು ಇಲ್ಲಿ ನೋಡಬಹುದು.

ಇಸ್ಕಾನ್ ಸಂಸ್ಥೆಯು 2015ರಲ್ಲಿ ಅಪ್‌ಲೋಡ್ ಮಾಡಿದ ಫೋಟೋವನ್ನು ಬಲಪಂಥೀಯ ಪ್ರತಿಪಾದಕ ಡಮರುಗ ಎಂಬ ಫೇಸ್‌ಬುಕ್ ಪೇಜ್‌ನಲ್ಲಿ ವೈರಲ್ ಪೋಸ್ಟ್‌ನೊಂದಿಗೆ ಹಂಚಿಕೊಳ್ಳಲಾಗಿದೆ.

ಕೂಡಾ ಕೊಲ್ಕತ್ತಾದ ಇಸ್ಕಾನ್‌ ಉಪಾಧ್ಯಕ್ಷ ರಾಧಾರಮಣ್‌ ದಾಸ್ ಎಂಬವರು, “ಇಸ್ಕಾನ್‌ನಲ್ಲಿ 54 ದೇವಾಲಯಗಳು ಇವೆ. ಎಲ್ಲಾ ದೇವಾಲಯಗಳು ಸೇವೆಗೆ ಸನ್ನದ್ಧವಾಗಿದೆ” ಎಂದು ಬರೆದಿದ್ದರು.

ಅವರ ಈ ಮಾತನ್ನು ತಪ್ಪಾಗಿ ತಿಳಿದಿರುವ ಬಿಟಿವಿ, “ಉಕ್ರೇನ್‍ನಲ್ಲಿ ಇಸ್ಕಾನ್ 54 ಕ್ಕೂ ಅಧಿಕ ದೇವಾಲಯಗಳನ್ನು ಹೊಂದಿದ್ದು,  ರಷ್ಯಾ ದಾಳಿಯಿಂದ ಉಕ್ರೇನ್ ತತ್ತರಿಸುತ್ತಿರುವ ಉಕ್ರೇನ್​ ಜನರಿಗೆ  ಇಸ್ಕಾನ್ ಸೇವೆ ಸಲ್ಲಿಸುತ್ತಿದೆ. ಬಿಕ್ಕಟ್ಟಿನ ಪರಿಸ್ಥಿತಿಯಲ್ಲಿರುವ ಉಕ್ರೇನ್​ ಜನರಿಗೆ ಆಹಾರ ಪೂರೈಕೆ ಮಾಡುವ ಮೂಲಕ ಜನರ ಮೆಚ್ಚುಗೆಗೆ ಪಾತ್ರವಾಗುತ್ತಿದೆ” ಎಂದು ಎಲ್ಲಾ ದೇವಾಲಯಗಳು ಸೇವೆ ಮಾಡುತ್ತಿವೆ ಎಂಬ ಅರ್ಥದಲ್ಲಿ ಬರೆದಿದೆ. ಜೊತೆಗೆ ಹಳೆಯ ಚಿತ್ರವನ್ನು ಕೂಡಾ ಇದು ಪೋಸ್ಟ್‌ ಮಾಡಿದೆ.

ಇದನ್ನೂ ಓದಿ: BJP ಸದಸ್ಯರನ್ನೆ ‘ಬಿಜೆಪಿ ಬೆಂಬಲಿಸುವ ಸಾಮಾನ್ಯ ಮುಸ್ಲಿಮರು’ ಎಂದು ಚಿತ್ರಿಸಿದ ‘ಟಿವಿ9 ಭಾರತವರ್ಷ’

ಇಸ್ಕಾನ್ ಸೇವೆ ಸಲ್ಲಿಸುತ್ತಿವುದು ನಿಜವೇ?

ಈ ಸುದ್ದಿ ಬರೆಯುವ 22 ಗಂಟೆಗಳ ಮುಂಚೆ ಇಸ್ಕಾನ್ ನ್ಯೂಸ್‌, “ಘರ್ಷಣೆಯಿಂದ ನಿರಾಶ್ರಿತರಾದವರಿಗೆ ಭಕ್ತರು ಅನ್ನದಾನ ಮಾಡಲು ಆರಂಭಿಸಿದ್ದೇವೆ. ಉಕ್ರೇನಿಯನ್-ರಷ್ಯನ್ ಸಂಘರ್ಷದಿಂದ ಸ್ಥಳಾಂತರಗೊಂಡವರಿಗೆ ಸಹಾಯ ಮಾಡುವಲ್ಲಿ ‘ಇಸ್ಕಾನ್ ಹಂಗೇರಿ’ ಸಕ್ರಿಯವಾಗಿ ಭಾಗವಹಿಸುತ್ತಿದೆ. ಇಸ್ಕಾನ್ ಹಂಗೇರಿ ಪ್ರಸ್ತುತ ವಾರದ ದಿನಗಳಲ್ಲಿ 600 ಪ್ಲೇಟ್ ಪ್ರಸಾದವನ್ನು ಮತ್ತು ವಾರಾಂತ್ಯದಲ್ಲಿ 1200 ಪ್ಲೇಟ್‌ಗಳನ್ನು ವಿತರಿಸುವ ಸಾಮರ್ಥ್ಯವನ್ನು ಹೊಂದಿದೆ” ಎಂದು ಬರೆದಿದೆ.

ಈ ಮಧ್ಯೆ, ತಪ್ಪಾದ ಚಿತ್ರಗಳು ಮತ್ತು ಉಕ್ರೇನ್‌ನಲ್ಲಿರುವ ಇಸ್ಕಾನ್‌ ಎಲ್ಲಾ ದೇವಸ್ಥಾನಗಳಲ್ಲಿ ಆಶ್ರಯ ನೀಡಲಾಗುತ್ತಿದೆ ಎಂಬ ಸುದ್ದಿ ಹರಿದಾಡುತ್ತಿದ್ದಂತೆ, ಸ್ವತಃ ಇಸ್ಕಾನ್‌‌‌ ನ್ಯೂಸ್‌ ಈ ಬಗ್ಗೆ ಸ್ಪಷ್ಟೀಕರಣ ನೀಡಿದೆ.

ಇಸ್ಕಾನ್‌ ನ್ಯೂಸ್‌ ಹೇಳುವಂತೆ, “ಉಕ್ರೇನ್‌ನಲ್ಲಿರುವ ಐವತ್ತಕ್ಕೂ ಹೆಚ್ಚು ಇಸ್ಕಾನ್ ದೇವಾಲಯಗಳು ಮತ್ತು ಕೇಂದ್ರಗಳು ಸಾರ್ವಜನಿಕರಿಗೆ ಆಹಾರ ಪರಿಹಾರ ಮತ್ತು ಆಶ್ರಯವನ್ನು ಒದಗಿಸುತ್ತಿವೆ ಎಂದು ಸಾಮಾಜಿಕ ಮಾಧ್ಯಮ ಮತ್ತು ಇತರ ಮಾಧ್ಯಮಗಳಲ್ಲಿ ತಪ್ಪು ಮಾಹಿತಿ ಹರಡುತ್ತಿದೆ. ಈ ಮಾಹಿತಿ ಸುಳ್ಳು” ಎಂದು ಸ್ಪಷ್ಟೀಕರಣ ನೀಡಿದೆ.

ಲಿಂ‌ಕ್‌ಗೆ ಇಲ್ಲಿ ಕ್ಲಿಕ್ ಮಾಡಿ 

ಇಸ್ಕಾನ್‌ ನ್ಯೂಸ್‌‌ ಖಚಿತವಾಗಿ ಹೇಳುವಂತೆ, “ಈ ಸಮಯದಲ್ಲಿ ಉಕ್ರೇನ್‌ನಲ್ಲಿರುವ ನಮ್ಮ ದೇವಾಲಯಗಳಲ್ಲಿ ಆಶ್ರಯ ಅಥವಾ ಆಹಾರ ವಿತರಣೆಯನ್ನು ಒದಗಿಸಲು ISKCON ಗೆ ಸಾಧ್ಯವಾಗುತ್ತಿಲ್ಲ. ಉಕ್ರೇನ್ ಮತ್ತು ಇಡೀ ಪ್ರದೇಶದ ಎಲ್ಲಾ ಜನರಿಗೆ ಶಾಂತಿಗಾಗಿ ನಾವು ಪ್ರಾರ್ಥಿಸುತ್ತೇವೆ” ಎಂದು ಬರೆದಿದೆ.

ಒಟ್ಟಾರೆಯಾಗಿ ಹೇಳುವುದಾದರೆ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್‌ ಆಗುತ್ತಿರುವ ಚಿತ್ರವೂ ತಪ್ಪಾದ ನಿರೂಪಣೆಯೊಂದಿಗೆ ಹರಿದಾಡುತ್ತಿದೆ. ಈ ಪೋಸ್ಟ್‌ ಇತರ ಧರ್ಮವರನ್ನು ಕೀಳಾಗಿ ಕಾಣಲು ಮಾಡಿರುವ ದ್ವೇಷಪೂರಿತ ಚಿತ್ರವಾಗಿದೆ. ಇಸ್ಕಾನ್ ಸಂಸ್ಥೆಯು 2015ರಲ್ಲಿ ಈ ಚಿತ್ರವನ್ನು ಹಂಚಿಕೊಂಡಿದೆ. ಜೊತೆಗೆ ಬಿಟಿವಿ ವರದಿಯಲ್ಲಿ ತಪ್ಪುಗಳಿದ್ದು, ಅದು ಹಳೆಯ ಚಿತ್ರವನ್ನು ಬಳಸಿದೆ. ಅದರ ವರದಿ ಹೇಳುವಂತೆ ಉಕ್ರೇನ್‌ನಲ್ಲಿರುವ ಎಲ್ಲಾ 54 ದೇವಾಲಯಗಳಲ್ಲಿ ನಿರಾಶ್ರಿತರಿಗೆ ಆಹಾರ ಮತ್ತು ಆಶ್ರಯವನ್ನು ನೀಡಲಾಗುತ್ತಿಲ್ಲ.

ಹಂಗೇರಿಯ ಇಸ್ಕಾನ್‌‌ನ ಕೇವಲ ಒಂದು ದೇವಸ್ಥಾನದ ವತಿಯಿಂದ ಮಾತ್ರ ಆಹಾರ ವಿತರಣೆಯನ್ನು ಹಂಗೇರಿಯ ಏರ್‌ಪೋರ್ಟ್‌ನಲ್ಲಿ ಮಾಡಲಾಗುತ್ತಿದೆ ಎಂದು ಸ್ವತಃ ಇಸ್ಕಾನ್‌ ಹೇಳಿಕೊಂಡಿದೆ.


ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ಇಸ್ಲಾಂ ವಿರುದ್ಧ ದ್ವೇಷ ಹರಡುವ ಈ ಲೇಖನ ತೋಂಟದಾರ್ಯ ಮಠದ ನಿಜಗುಣಾನಂದ ಸ್ವಾಮಿ ಬರೆದಿಲ್ಲ


ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. BTV ಈಗಾಗಲೇ ಹಲವು ಸಲ ಮರ್ಯಾದೆ ಕಳೆದುಕೊಂಡಿದೆ. ಇತ್ತೀಚೆಗಂತೂ ಈ ದಿವ್ಯ ವಸಂತ ಟ್ರೋಲ್ನಿಂದ TRP ಕಳೆದುಕೊಂಡು ಸುಸ್ತಾಗಿದೆ. ಇಷ್ಟಾದರೂ ಬುದ್ಧಿ ಬಂದಿಲ್ಲ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....