Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್: ಇಸ್ಕಾನ್‌‌ನ ಈ ಚಿತ್ರ ಉಕ್ರೇನಿದ್ದಲ್ಲ; ದಾರಿ ತಪ್ಪಿಸಿದ ಬಿಟಿವಿ ವರದಿ!

ಫ್ಯಾಕ್ಟ್‌ಚೆಕ್: ಇಸ್ಕಾನ್‌‌ನ ಈ ಚಿತ್ರ ಉಕ್ರೇನಿದ್ದಲ್ಲ; ದಾರಿ ತಪ್ಪಿಸಿದ ಬಿಟಿವಿ ವರದಿ!

- Advertisement -
- Advertisement -

ಯುದ್ಧ ಪೀಡಿತ ಉಕ್ರೇನ್‌ನಲ್ಲಿ ‘ಇಸ್ಕಾನ್‌’ ವತಿಯಿಂದ ಜನರಿಗೆ ಆಹಾರ ಒದಗಿಸಲಾಗುತ್ತಿದೆ ಎಂದು ಪ್ರತಿಪಾದಿಸಿ ಚಿತ್ರವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ. ಈ ಚಿತ್ರದೊಂದಿಗೆ ವೈರಲ್ ಆಗಿರುವ ಬರಹವು ಕೋಮುದ್ವೇಷ ಬಿತ್ತುತ್ತಿದ್ದು, ಹಿಂದೂ ಮತವನ್ನು ಬಿಟ್ಟು ಉಳಿದ ಧರ್ಮಗಳು ಸಹಾಯ ಮಾಡುವ ನೆಪದಲ್ಲಿ ಆಮಿಷ ಒಡ್ಡುತ್ತದೆ ಎಂಬ ಅರ್ಥದಲ್ಲಿ ಈ ಬರಹವನ್ನು ಬರೆಯಲಾಗಿದೆ.

ವೈರಲ್‌ ಚಿತ್ರದ ಜೊತೆಗೆ, “ಉಕ್ರೇನ್‌ನಲ್ಲಿ ಸುಮಾರು 54 ಇಸ್ಕಾನ್ ದೇವಾಲಯಗಳಿಂದ ಹಸಿದವರಿಗೆ ಅನ್ನ ನೀಡಲಾಗುತ್ತಿದ್ದು, ಅಲ್ಲಿ ಅನ್ನ ನೀಡುವ ಮೊದಲು ಅನ್ಯ ಧರ್ಮಿಯರಿಗೆ ನೀವು ನಮ್ಮ ಮತಕ್ಕೆ ಬನ್ನಿ ಎಂದು ಯಾರೂ ಒತ್ತಾಯ ಮಾಡುತ್ತಿಲ್ಲ. ಇದುವೆ ನನ್ನ ಹೆಮ್ಮೆಯ ಸನಾತನ ಮತ” ಎಂಬ ಇತರ ಧರ್ಮಗಳನ್ನು ಕೀಳಾಗಿ ಬಿಂಬಿಸುವ ಬರಹಗಳನ್ನೂ ವೈರಲ್‌ ಮಾಡಲಾಗುತ್ತಿದೆ.

ಡಮರುಗ ಎಂಬ ಬಿಜೆಪಿ ಬೆಂಬಲಿಗ ಪೇಜ್‌ ಒಂದು ಈ ರೀತಿಯ ಪೋಸ್ಟ್‌ ಅನ್ನು ರಚಿಸಿ ಹಂಚಿಕೊಂಡಿದೆ. ಇದೇ ಪ್ರತಿಪಾದನೆಯಿಂದಿಗೆ ಸಾಮಾಜಿಕ ಮಾಧ್ಯಮಗಳು ಹಲವಾರು ಬಳಕೆದಾರರು ಚಿತ್ರವನ್ನು ಹಂಚಿಕೊಂಡಿದ್ದಾರೆ. ಇದನ್ನು ನೀವು ಇಲ್ಲಿ, ಇಲ್ಲಿ, ಇಲ್ಲಿ ಮತ್ತು ಇಲ್ಲಿ ನೋಡಬಹುದು.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ‘ಮಸೀದಿ ಕಟ್ಟಿಸು’ ಎಂದು ಅಖಿಲೇಶ್‌ಗೆ ವೃದ್ಧ ಛೀಮಾರಿ ಹಾಕಿಲ್ಲ; ಅವರು ಹೇಳಿದ್ದು EVM ಬದಲಾಯಿಸು ಎಂದು

ಕನ್ನಡದ ಸುದ್ದಿ ಮಾಧ್ಯಮ ಬಿಟಿವಿ ಕೂಡಾ ಇದೇ ಚಿತ್ರವನ್ನು ಬಳಸಿ ಸುದ್ದಿಯೊಂದನ್ನು ವರದಿಯೊಂದನ್ನು ಮಾಡಿದೆ. ಈ ಸುದ್ದಿಯಲ್ಲಿ ಬಿಟಿವಿ, “ಉಕ್ರೇನ್‍ನಲ್ಲಿ ಇಸ್ಕಾನ್ 54 ಕ್ಕೂ ಅಧಿಕ ದೇವಾಲಯಗಳನ್ನು ಹೊಂದಿದ್ದು, ರಷ್ಯಾ ದಾಳಿಯಿಂದ ಉಕ್ರೇನ್ ತತ್ತರಿಸುತ್ತಿರುವ ಉಕ್ರೇನ್​ ಜನರಿಗೆ ಇಸ್ಕಾನ್ ಸೇವೆ ಸಲ್ಲಿಸುತ್ತಿದೆ. ಬಿಕ್ಕಟ್ಟಿನ ಪರಿಸ್ಥಿತಿಯಲ್ಲಿರುವ ಉಕ್ರೇನ್​ ಜನರಿಗೆ ಆಹಾರ ಪೂರೈಕೆ ಮಾಡುವ ಮೂಲಕ ಜನರ ಮೆಚ್ಚುಗೆಗೆ ಪಾತ್ರವಾಗುತ್ತಿದೆ. ಸದ್ಯ ಇದರ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಬಾರಿ ವೈರಲ್ ಆಗುತ್ತಿದ್ದು, ನೆಟ್ಟಿಗರು ಮೆಚ್ಚುಗೆಯ ಮಹಾಪೂರವೇ ಹರಿಸುತ್ತಿದ್ದಾರೆ” ಎಂದು ಎರಡು ಚಿತ್ರಗಳನ್ನು ಬಳಸಿಕೊಂಡಿದೆ.

ಆರ್ಕೈವ್ ಲಿಂಕ್‌ ಇಲ್ಲಿ ಕ್ಲಿಕ್‌ ಮಾಡಿ

ಫ್ಯಾಕ್ಟ್‌ಚೆಕ್:

ವೈರಲ್ ಫೋಟೊವನ್ನು ನಾನುಗೌರಿ.ಕಾಂ ರಿವರ್ಸ್ ಇಮೇಜ್ ಸರ್ಚ್‌ ಮೂಲಕ ಹುಡುಕಾಡಿದಾಗ ಇಸ್ಕಾನ್ ಸಂಸ್ಥೆಯು ಉಕ್ರೇನ್‌ನಲ್ಲಿ ಆಹಾರ ನೀಡುತ್ತಿದೆ ಎಂದು ವೈರಲ್ ಆದ ಈ ಚಿತ್ರಗಳನ್ನು ಹೋಲುವ ಹಲವು ಫೋಟೊಗಳು ನಮಗೆ ಲಭ್ಯವಾಗಿವೆ.

ಇದರ ಜಾಡನ್ನು ಹಿಡಿದು ನಾನುಗೌರಿ.ಕಾಂ ಮತ್ತಷ್ಟು ಹುಡುಕಾಟ ನಡೆಸಿದಾಗ ಅದು ಇಸ್ಕಾನ್ ಸಂಸ್ಥೆ ತನ್ನ ವೆಬ್ ಸೈಟ್‌ಗಾಗಿ ರೂಪಿಸಿರುವ ಹಳೆಯ ಫೋಟೋ ಎಂದು ಖಚಿತವಾಗಿದೆ.

 

ಸೋಶಿಲ್‌ ಮೀಡಿಯಾದಲ್ಲಿ ವೈರಲ್ ಮಾಡಲಾಗುತ್ತಿರುವ ಫೋಟೊವನ್ನು ಇಸ್ಕಾನ್ ಸಂಸ್ಥೆಯು ತನ್ನ ವೆಬ್‌ಸೈಟ್‌ನಲ್ಲಿ ಈ ಫೋಟೊವನ್ನು ಬಳಸಿ ಡೊನೇಟ್ ಮಾಡಿ ಎಂದು ಹಣದ ಮೊತ್ತವನ್ನು ನಮೂದಿಸಿದೆ. ಅದನ್ನು ಇಲ್ಲಿ ನೋಡಬಹುದು.

ಇಸ್ಕಾನ್ ಸಂಸ್ಥೆಯು 2015ರಲ್ಲಿ ಅಪ್‌ಲೋಡ್ ಮಾಡಿದ ಫೋಟೋವನ್ನು ಬಲಪಂಥೀಯ ಪ್ರತಿಪಾದಕ ಡಮರುಗ ಎಂಬ ಫೇಸ್‌ಬುಕ್ ಪೇಜ್‌ನಲ್ಲಿ ವೈರಲ್ ಪೋಸ್ಟ್‌ನೊಂದಿಗೆ ಹಂಚಿಕೊಳ್ಳಲಾಗಿದೆ.

ಕೂಡಾ ಕೊಲ್ಕತ್ತಾದ ಇಸ್ಕಾನ್‌ ಉಪಾಧ್ಯಕ್ಷ ರಾಧಾರಮಣ್‌ ದಾಸ್ ಎಂಬವರು, “ಇಸ್ಕಾನ್‌ನಲ್ಲಿ 54 ದೇವಾಲಯಗಳು ಇವೆ. ಎಲ್ಲಾ ದೇವಾಲಯಗಳು ಸೇವೆಗೆ ಸನ್ನದ್ಧವಾಗಿದೆ” ಎಂದು ಬರೆದಿದ್ದರು.

ಅವರ ಈ ಮಾತನ್ನು ತಪ್ಪಾಗಿ ತಿಳಿದಿರುವ ಬಿಟಿವಿ, “ಉಕ್ರೇನ್‍ನಲ್ಲಿ ಇಸ್ಕಾನ್ 54 ಕ್ಕೂ ಅಧಿಕ ದೇವಾಲಯಗಳನ್ನು ಹೊಂದಿದ್ದು,  ರಷ್ಯಾ ದಾಳಿಯಿಂದ ಉಕ್ರೇನ್ ತತ್ತರಿಸುತ್ತಿರುವ ಉಕ್ರೇನ್​ ಜನರಿಗೆ  ಇಸ್ಕಾನ್ ಸೇವೆ ಸಲ್ಲಿಸುತ್ತಿದೆ. ಬಿಕ್ಕಟ್ಟಿನ ಪರಿಸ್ಥಿತಿಯಲ್ಲಿರುವ ಉಕ್ರೇನ್​ ಜನರಿಗೆ ಆಹಾರ ಪೂರೈಕೆ ಮಾಡುವ ಮೂಲಕ ಜನರ ಮೆಚ್ಚುಗೆಗೆ ಪಾತ್ರವಾಗುತ್ತಿದೆ” ಎಂದು ಎಲ್ಲಾ ದೇವಾಲಯಗಳು ಸೇವೆ ಮಾಡುತ್ತಿವೆ ಎಂಬ ಅರ್ಥದಲ್ಲಿ ಬರೆದಿದೆ. ಜೊತೆಗೆ ಹಳೆಯ ಚಿತ್ರವನ್ನು ಕೂಡಾ ಇದು ಪೋಸ್ಟ್‌ ಮಾಡಿದೆ.

ಇದನ್ನೂ ಓದಿ: BJP ಸದಸ್ಯರನ್ನೆ ‘ಬಿಜೆಪಿ ಬೆಂಬಲಿಸುವ ಸಾಮಾನ್ಯ ಮುಸ್ಲಿಮರು’ ಎಂದು ಚಿತ್ರಿಸಿದ ‘ಟಿವಿ9 ಭಾರತವರ್ಷ’

ಇಸ್ಕಾನ್ ಸೇವೆ ಸಲ್ಲಿಸುತ್ತಿವುದು ನಿಜವೇ?

ಈ ಸುದ್ದಿ ಬರೆಯುವ 22 ಗಂಟೆಗಳ ಮುಂಚೆ ಇಸ್ಕಾನ್ ನ್ಯೂಸ್‌, “ಘರ್ಷಣೆಯಿಂದ ನಿರಾಶ್ರಿತರಾದವರಿಗೆ ಭಕ್ತರು ಅನ್ನದಾನ ಮಾಡಲು ಆರಂಭಿಸಿದ್ದೇವೆ. ಉಕ್ರೇನಿಯನ್-ರಷ್ಯನ್ ಸಂಘರ್ಷದಿಂದ ಸ್ಥಳಾಂತರಗೊಂಡವರಿಗೆ ಸಹಾಯ ಮಾಡುವಲ್ಲಿ ‘ಇಸ್ಕಾನ್ ಹಂಗೇರಿ’ ಸಕ್ರಿಯವಾಗಿ ಭಾಗವಹಿಸುತ್ತಿದೆ. ಇಸ್ಕಾನ್ ಹಂಗೇರಿ ಪ್ರಸ್ತುತ ವಾರದ ದಿನಗಳಲ್ಲಿ 600 ಪ್ಲೇಟ್ ಪ್ರಸಾದವನ್ನು ಮತ್ತು ವಾರಾಂತ್ಯದಲ್ಲಿ 1200 ಪ್ಲೇಟ್‌ಗಳನ್ನು ವಿತರಿಸುವ ಸಾಮರ್ಥ್ಯವನ್ನು ಹೊಂದಿದೆ” ಎಂದು ಬರೆದಿದೆ.

ಈ ಮಧ್ಯೆ, ತಪ್ಪಾದ ಚಿತ್ರಗಳು ಮತ್ತು ಉಕ್ರೇನ್‌ನಲ್ಲಿರುವ ಇಸ್ಕಾನ್‌ ಎಲ್ಲಾ ದೇವಸ್ಥಾನಗಳಲ್ಲಿ ಆಶ್ರಯ ನೀಡಲಾಗುತ್ತಿದೆ ಎಂಬ ಸುದ್ದಿ ಹರಿದಾಡುತ್ತಿದ್ದಂತೆ, ಸ್ವತಃ ಇಸ್ಕಾನ್‌‌‌ ನ್ಯೂಸ್‌ ಈ ಬಗ್ಗೆ ಸ್ಪಷ್ಟೀಕರಣ ನೀಡಿದೆ.

ಇಸ್ಕಾನ್‌ ನ್ಯೂಸ್‌ ಹೇಳುವಂತೆ, “ಉಕ್ರೇನ್‌ನಲ್ಲಿರುವ ಐವತ್ತಕ್ಕೂ ಹೆಚ್ಚು ಇಸ್ಕಾನ್ ದೇವಾಲಯಗಳು ಮತ್ತು ಕೇಂದ್ರಗಳು ಸಾರ್ವಜನಿಕರಿಗೆ ಆಹಾರ ಪರಿಹಾರ ಮತ್ತು ಆಶ್ರಯವನ್ನು ಒದಗಿಸುತ್ತಿವೆ ಎಂದು ಸಾಮಾಜಿಕ ಮಾಧ್ಯಮ ಮತ್ತು ಇತರ ಮಾಧ್ಯಮಗಳಲ್ಲಿ ತಪ್ಪು ಮಾಹಿತಿ ಹರಡುತ್ತಿದೆ. ಈ ಮಾಹಿತಿ ಸುಳ್ಳು” ಎಂದು ಸ್ಪಷ್ಟೀಕರಣ ನೀಡಿದೆ.

ಲಿಂ‌ಕ್‌ಗೆ ಇಲ್ಲಿ ಕ್ಲಿಕ್ ಮಾಡಿ 

ಇಸ್ಕಾನ್‌ ನ್ಯೂಸ್‌‌ ಖಚಿತವಾಗಿ ಹೇಳುವಂತೆ, “ಈ ಸಮಯದಲ್ಲಿ ಉಕ್ರೇನ್‌ನಲ್ಲಿರುವ ನಮ್ಮ ದೇವಾಲಯಗಳಲ್ಲಿ ಆಶ್ರಯ ಅಥವಾ ಆಹಾರ ವಿತರಣೆಯನ್ನು ಒದಗಿಸಲು ISKCON ಗೆ ಸಾಧ್ಯವಾಗುತ್ತಿಲ್ಲ. ಉಕ್ರೇನ್ ಮತ್ತು ಇಡೀ ಪ್ರದೇಶದ ಎಲ್ಲಾ ಜನರಿಗೆ ಶಾಂತಿಗಾಗಿ ನಾವು ಪ್ರಾರ್ಥಿಸುತ್ತೇವೆ” ಎಂದು ಬರೆದಿದೆ.

ಒಟ್ಟಾರೆಯಾಗಿ ಹೇಳುವುದಾದರೆ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್‌ ಆಗುತ್ತಿರುವ ಚಿತ್ರವೂ ತಪ್ಪಾದ ನಿರೂಪಣೆಯೊಂದಿಗೆ ಹರಿದಾಡುತ್ತಿದೆ. ಈ ಪೋಸ್ಟ್‌ ಇತರ ಧರ್ಮವರನ್ನು ಕೀಳಾಗಿ ಕಾಣಲು ಮಾಡಿರುವ ದ್ವೇಷಪೂರಿತ ಚಿತ್ರವಾಗಿದೆ. ಇಸ್ಕಾನ್ ಸಂಸ್ಥೆಯು 2015ರಲ್ಲಿ ಈ ಚಿತ್ರವನ್ನು ಹಂಚಿಕೊಂಡಿದೆ. ಜೊತೆಗೆ ಬಿಟಿವಿ ವರದಿಯಲ್ಲಿ ತಪ್ಪುಗಳಿದ್ದು, ಅದು ಹಳೆಯ ಚಿತ್ರವನ್ನು ಬಳಸಿದೆ. ಅದರ ವರದಿ ಹೇಳುವಂತೆ ಉಕ್ರೇನ್‌ನಲ್ಲಿರುವ ಎಲ್ಲಾ 54 ದೇವಾಲಯಗಳಲ್ಲಿ ನಿರಾಶ್ರಿತರಿಗೆ ಆಹಾರ ಮತ್ತು ಆಶ್ರಯವನ್ನು ನೀಡಲಾಗುತ್ತಿಲ್ಲ.

ಹಂಗೇರಿಯ ಇಸ್ಕಾನ್‌‌ನ ಕೇವಲ ಒಂದು ದೇವಸ್ಥಾನದ ವತಿಯಿಂದ ಮಾತ್ರ ಆಹಾರ ವಿತರಣೆಯನ್ನು ಹಂಗೇರಿಯ ಏರ್‌ಪೋರ್ಟ್‌ನಲ್ಲಿ ಮಾಡಲಾಗುತ್ತಿದೆ ಎಂದು ಸ್ವತಃ ಇಸ್ಕಾನ್‌ ಹೇಳಿಕೊಂಡಿದೆ.


ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ಇಸ್ಲಾಂ ವಿರುದ್ಧ ದ್ವೇಷ ಹರಡುವ ಈ ಲೇಖನ ತೋಂಟದಾರ್ಯ ಮಠದ ನಿಜಗುಣಾನಂದ ಸ್ವಾಮಿ ಬರೆದಿಲ್ಲ


ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. BTV ಈಗಾಗಲೇ ಹಲವು ಸಲ ಮರ್ಯಾದೆ ಕಳೆದುಕೊಂಡಿದೆ. ಇತ್ತೀಚೆಗಂತೂ ಈ ದಿವ್ಯ ವಸಂತ ಟ್ರೋಲ್ನಿಂದ TRP ಕಳೆದುಕೊಂಡು ಸುಸ್ತಾಗಿದೆ. ಇಷ್ಟಾದರೂ ಬುದ್ಧಿ ಬಂದಿಲ್ಲ

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...