Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್: ಇಸ್ಕಾನ್‌‌ನ ಈ ಚಿತ್ರ ಉಕ್ರೇನಿದ್ದಲ್ಲ; ದಾರಿ ತಪ್ಪಿಸಿದ ಬಿಟಿವಿ ವರದಿ!

ಫ್ಯಾಕ್ಟ್‌ಚೆಕ್: ಇಸ್ಕಾನ್‌‌ನ ಈ ಚಿತ್ರ ಉಕ್ರೇನಿದ್ದಲ್ಲ; ದಾರಿ ತಪ್ಪಿಸಿದ ಬಿಟಿವಿ ವರದಿ!

- Advertisement -
- Advertisement -

ಯುದ್ಧ ಪೀಡಿತ ಉಕ್ರೇನ್‌ನಲ್ಲಿ ‘ಇಸ್ಕಾನ್‌’ ವತಿಯಿಂದ ಜನರಿಗೆ ಆಹಾರ ಒದಗಿಸಲಾಗುತ್ತಿದೆ ಎಂದು ಪ್ರತಿಪಾದಿಸಿ ಚಿತ್ರವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ. ಈ ಚಿತ್ರದೊಂದಿಗೆ ವೈರಲ್ ಆಗಿರುವ ಬರಹವು ಕೋಮುದ್ವೇಷ ಬಿತ್ತುತ್ತಿದ್ದು, ಹಿಂದೂ ಮತವನ್ನು ಬಿಟ್ಟು ಉಳಿದ ಧರ್ಮಗಳು ಸಹಾಯ ಮಾಡುವ ನೆಪದಲ್ಲಿ ಆಮಿಷ ಒಡ್ಡುತ್ತದೆ ಎಂಬ ಅರ್ಥದಲ್ಲಿ ಈ ಬರಹವನ್ನು ಬರೆಯಲಾಗಿದೆ.

ವೈರಲ್‌ ಚಿತ್ರದ ಜೊತೆಗೆ, “ಉಕ್ರೇನ್‌ನಲ್ಲಿ ಸುಮಾರು 54 ಇಸ್ಕಾನ್ ದೇವಾಲಯಗಳಿಂದ ಹಸಿದವರಿಗೆ ಅನ್ನ ನೀಡಲಾಗುತ್ತಿದ್ದು, ಅಲ್ಲಿ ಅನ್ನ ನೀಡುವ ಮೊದಲು ಅನ್ಯ ಧರ್ಮಿಯರಿಗೆ ನೀವು ನಮ್ಮ ಮತಕ್ಕೆ ಬನ್ನಿ ಎಂದು ಯಾರೂ ಒತ್ತಾಯ ಮಾಡುತ್ತಿಲ್ಲ. ಇದುವೆ ನನ್ನ ಹೆಮ್ಮೆಯ ಸನಾತನ ಮತ” ಎಂಬ ಇತರ ಧರ್ಮಗಳನ್ನು ಕೀಳಾಗಿ ಬಿಂಬಿಸುವ ಬರಹಗಳನ್ನೂ ವೈರಲ್‌ ಮಾಡಲಾಗುತ್ತಿದೆ.

ಡಮರುಗ ಎಂಬ ಬಿಜೆಪಿ ಬೆಂಬಲಿಗ ಪೇಜ್‌ ಒಂದು ಈ ರೀತಿಯ ಪೋಸ್ಟ್‌ ಅನ್ನು ರಚಿಸಿ ಹಂಚಿಕೊಂಡಿದೆ. ಇದೇ ಪ್ರತಿಪಾದನೆಯಿಂದಿಗೆ ಸಾಮಾಜಿಕ ಮಾಧ್ಯಮಗಳು ಹಲವಾರು ಬಳಕೆದಾರರು ಚಿತ್ರವನ್ನು ಹಂಚಿಕೊಂಡಿದ್ದಾರೆ. ಇದನ್ನು ನೀವು ಇಲ್ಲಿ, ಇಲ್ಲಿ, ಇಲ್ಲಿ ಮತ್ತು ಇಲ್ಲಿ ನೋಡಬಹುದು.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ‘ಮಸೀದಿ ಕಟ್ಟಿಸು’ ಎಂದು ಅಖಿಲೇಶ್‌ಗೆ ವೃದ್ಧ ಛೀಮಾರಿ ಹಾಕಿಲ್ಲ; ಅವರು ಹೇಳಿದ್ದು EVM ಬದಲಾಯಿಸು ಎಂದು

ಕನ್ನಡದ ಸುದ್ದಿ ಮಾಧ್ಯಮ ಬಿಟಿವಿ ಕೂಡಾ ಇದೇ ಚಿತ್ರವನ್ನು ಬಳಸಿ ಸುದ್ದಿಯೊಂದನ್ನು ವರದಿಯೊಂದನ್ನು ಮಾಡಿದೆ. ಈ ಸುದ್ದಿಯಲ್ಲಿ ಬಿಟಿವಿ, “ಉಕ್ರೇನ್‍ನಲ್ಲಿ ಇಸ್ಕಾನ್ 54 ಕ್ಕೂ ಅಧಿಕ ದೇವಾಲಯಗಳನ್ನು ಹೊಂದಿದ್ದು, ರಷ್ಯಾ ದಾಳಿಯಿಂದ ಉಕ್ರೇನ್ ತತ್ತರಿಸುತ್ತಿರುವ ಉಕ್ರೇನ್​ ಜನರಿಗೆ ಇಸ್ಕಾನ್ ಸೇವೆ ಸಲ್ಲಿಸುತ್ತಿದೆ. ಬಿಕ್ಕಟ್ಟಿನ ಪರಿಸ್ಥಿತಿಯಲ್ಲಿರುವ ಉಕ್ರೇನ್​ ಜನರಿಗೆ ಆಹಾರ ಪೂರೈಕೆ ಮಾಡುವ ಮೂಲಕ ಜನರ ಮೆಚ್ಚುಗೆಗೆ ಪಾತ್ರವಾಗುತ್ತಿದೆ. ಸದ್ಯ ಇದರ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಬಾರಿ ವೈರಲ್ ಆಗುತ್ತಿದ್ದು, ನೆಟ್ಟಿಗರು ಮೆಚ್ಚುಗೆಯ ಮಹಾಪೂರವೇ ಹರಿಸುತ್ತಿದ್ದಾರೆ” ಎಂದು ಎರಡು ಚಿತ್ರಗಳನ್ನು ಬಳಸಿಕೊಂಡಿದೆ.

ಆರ್ಕೈವ್ ಲಿಂಕ್‌ ಇಲ್ಲಿ ಕ್ಲಿಕ್‌ ಮಾಡಿ

ಫ್ಯಾಕ್ಟ್‌ಚೆಕ್:

ವೈರಲ್ ಫೋಟೊವನ್ನು ನಾನುಗೌರಿ.ಕಾಂ ರಿವರ್ಸ್ ಇಮೇಜ್ ಸರ್ಚ್‌ ಮೂಲಕ ಹುಡುಕಾಡಿದಾಗ ಇಸ್ಕಾನ್ ಸಂಸ್ಥೆಯು ಉಕ್ರೇನ್‌ನಲ್ಲಿ ಆಹಾರ ನೀಡುತ್ತಿದೆ ಎಂದು ವೈರಲ್ ಆದ ಈ ಚಿತ್ರಗಳನ್ನು ಹೋಲುವ ಹಲವು ಫೋಟೊಗಳು ನಮಗೆ ಲಭ್ಯವಾಗಿವೆ.

ಇದರ ಜಾಡನ್ನು ಹಿಡಿದು ನಾನುಗೌರಿ.ಕಾಂ ಮತ್ತಷ್ಟು ಹುಡುಕಾಟ ನಡೆಸಿದಾಗ ಅದು ಇಸ್ಕಾನ್ ಸಂಸ್ಥೆ ತನ್ನ ವೆಬ್ ಸೈಟ್‌ಗಾಗಿ ರೂಪಿಸಿರುವ ಹಳೆಯ ಫೋಟೋ ಎಂದು ಖಚಿತವಾಗಿದೆ.

 

ಸೋಶಿಲ್‌ ಮೀಡಿಯಾದಲ್ಲಿ ವೈರಲ್ ಮಾಡಲಾಗುತ್ತಿರುವ ಫೋಟೊವನ್ನು ಇಸ್ಕಾನ್ ಸಂಸ್ಥೆಯು ತನ್ನ ವೆಬ್‌ಸೈಟ್‌ನಲ್ಲಿ ಈ ಫೋಟೊವನ್ನು ಬಳಸಿ ಡೊನೇಟ್ ಮಾಡಿ ಎಂದು ಹಣದ ಮೊತ್ತವನ್ನು ನಮೂದಿಸಿದೆ. ಅದನ್ನು ಇಲ್ಲಿ ನೋಡಬಹುದು.

ಇಸ್ಕಾನ್ ಸಂಸ್ಥೆಯು 2015ರಲ್ಲಿ ಅಪ್‌ಲೋಡ್ ಮಾಡಿದ ಫೋಟೋವನ್ನು ಬಲಪಂಥೀಯ ಪ್ರತಿಪಾದಕ ಡಮರುಗ ಎಂಬ ಫೇಸ್‌ಬುಕ್ ಪೇಜ್‌ನಲ್ಲಿ ವೈರಲ್ ಪೋಸ್ಟ್‌ನೊಂದಿಗೆ ಹಂಚಿಕೊಳ್ಳಲಾಗಿದೆ.

ಕೂಡಾ ಕೊಲ್ಕತ್ತಾದ ಇಸ್ಕಾನ್‌ ಉಪಾಧ್ಯಕ್ಷ ರಾಧಾರಮಣ್‌ ದಾಸ್ ಎಂಬವರು, “ಇಸ್ಕಾನ್‌ನಲ್ಲಿ 54 ದೇವಾಲಯಗಳು ಇವೆ. ಎಲ್ಲಾ ದೇವಾಲಯಗಳು ಸೇವೆಗೆ ಸನ್ನದ್ಧವಾಗಿದೆ” ಎಂದು ಬರೆದಿದ್ದರು.

ಅವರ ಈ ಮಾತನ್ನು ತಪ್ಪಾಗಿ ತಿಳಿದಿರುವ ಬಿಟಿವಿ, “ಉಕ್ರೇನ್‍ನಲ್ಲಿ ಇಸ್ಕಾನ್ 54 ಕ್ಕೂ ಅಧಿಕ ದೇವಾಲಯಗಳನ್ನು ಹೊಂದಿದ್ದು,  ರಷ್ಯಾ ದಾಳಿಯಿಂದ ಉಕ್ರೇನ್ ತತ್ತರಿಸುತ್ತಿರುವ ಉಕ್ರೇನ್​ ಜನರಿಗೆ  ಇಸ್ಕಾನ್ ಸೇವೆ ಸಲ್ಲಿಸುತ್ತಿದೆ. ಬಿಕ್ಕಟ್ಟಿನ ಪರಿಸ್ಥಿತಿಯಲ್ಲಿರುವ ಉಕ್ರೇನ್​ ಜನರಿಗೆ ಆಹಾರ ಪೂರೈಕೆ ಮಾಡುವ ಮೂಲಕ ಜನರ ಮೆಚ್ಚುಗೆಗೆ ಪಾತ್ರವಾಗುತ್ತಿದೆ” ಎಂದು ಎಲ್ಲಾ ದೇವಾಲಯಗಳು ಸೇವೆ ಮಾಡುತ್ತಿವೆ ಎಂಬ ಅರ್ಥದಲ್ಲಿ ಬರೆದಿದೆ. ಜೊತೆಗೆ ಹಳೆಯ ಚಿತ್ರವನ್ನು ಕೂಡಾ ಇದು ಪೋಸ್ಟ್‌ ಮಾಡಿದೆ.

ಇದನ್ನೂ ಓದಿ: BJP ಸದಸ್ಯರನ್ನೆ ‘ಬಿಜೆಪಿ ಬೆಂಬಲಿಸುವ ಸಾಮಾನ್ಯ ಮುಸ್ಲಿಮರು’ ಎಂದು ಚಿತ್ರಿಸಿದ ‘ಟಿವಿ9 ಭಾರತವರ್ಷ’

ಇಸ್ಕಾನ್ ಸೇವೆ ಸಲ್ಲಿಸುತ್ತಿವುದು ನಿಜವೇ?

ಈ ಸುದ್ದಿ ಬರೆಯುವ 22 ಗಂಟೆಗಳ ಮುಂಚೆ ಇಸ್ಕಾನ್ ನ್ಯೂಸ್‌, “ಘರ್ಷಣೆಯಿಂದ ನಿರಾಶ್ರಿತರಾದವರಿಗೆ ಭಕ್ತರು ಅನ್ನದಾನ ಮಾಡಲು ಆರಂಭಿಸಿದ್ದೇವೆ. ಉಕ್ರೇನಿಯನ್-ರಷ್ಯನ್ ಸಂಘರ್ಷದಿಂದ ಸ್ಥಳಾಂತರಗೊಂಡವರಿಗೆ ಸಹಾಯ ಮಾಡುವಲ್ಲಿ ‘ಇಸ್ಕಾನ್ ಹಂಗೇರಿ’ ಸಕ್ರಿಯವಾಗಿ ಭಾಗವಹಿಸುತ್ತಿದೆ. ಇಸ್ಕಾನ್ ಹಂಗೇರಿ ಪ್ರಸ್ತುತ ವಾರದ ದಿನಗಳಲ್ಲಿ 600 ಪ್ಲೇಟ್ ಪ್ರಸಾದವನ್ನು ಮತ್ತು ವಾರಾಂತ್ಯದಲ್ಲಿ 1200 ಪ್ಲೇಟ್‌ಗಳನ್ನು ವಿತರಿಸುವ ಸಾಮರ್ಥ್ಯವನ್ನು ಹೊಂದಿದೆ” ಎಂದು ಬರೆದಿದೆ.

ಈ ಮಧ್ಯೆ, ತಪ್ಪಾದ ಚಿತ್ರಗಳು ಮತ್ತು ಉಕ್ರೇನ್‌ನಲ್ಲಿರುವ ಇಸ್ಕಾನ್‌ ಎಲ್ಲಾ ದೇವಸ್ಥಾನಗಳಲ್ಲಿ ಆಶ್ರಯ ನೀಡಲಾಗುತ್ತಿದೆ ಎಂಬ ಸುದ್ದಿ ಹರಿದಾಡುತ್ತಿದ್ದಂತೆ, ಸ್ವತಃ ಇಸ್ಕಾನ್‌‌‌ ನ್ಯೂಸ್‌ ಈ ಬಗ್ಗೆ ಸ್ಪಷ್ಟೀಕರಣ ನೀಡಿದೆ.

ಇಸ್ಕಾನ್‌ ನ್ಯೂಸ್‌ ಹೇಳುವಂತೆ, “ಉಕ್ರೇನ್‌ನಲ್ಲಿರುವ ಐವತ್ತಕ್ಕೂ ಹೆಚ್ಚು ಇಸ್ಕಾನ್ ದೇವಾಲಯಗಳು ಮತ್ತು ಕೇಂದ್ರಗಳು ಸಾರ್ವಜನಿಕರಿಗೆ ಆಹಾರ ಪರಿಹಾರ ಮತ್ತು ಆಶ್ರಯವನ್ನು ಒದಗಿಸುತ್ತಿವೆ ಎಂದು ಸಾಮಾಜಿಕ ಮಾಧ್ಯಮ ಮತ್ತು ಇತರ ಮಾಧ್ಯಮಗಳಲ್ಲಿ ತಪ್ಪು ಮಾಹಿತಿ ಹರಡುತ್ತಿದೆ. ಈ ಮಾಹಿತಿ ಸುಳ್ಳು” ಎಂದು ಸ್ಪಷ್ಟೀಕರಣ ನೀಡಿದೆ.

ಲಿಂ‌ಕ್‌ಗೆ ಇಲ್ಲಿ ಕ್ಲಿಕ್ ಮಾಡಿ 

ಇಸ್ಕಾನ್‌ ನ್ಯೂಸ್‌‌ ಖಚಿತವಾಗಿ ಹೇಳುವಂತೆ, “ಈ ಸಮಯದಲ್ಲಿ ಉಕ್ರೇನ್‌ನಲ್ಲಿರುವ ನಮ್ಮ ದೇವಾಲಯಗಳಲ್ಲಿ ಆಶ್ರಯ ಅಥವಾ ಆಹಾರ ವಿತರಣೆಯನ್ನು ಒದಗಿಸಲು ISKCON ಗೆ ಸಾಧ್ಯವಾಗುತ್ತಿಲ್ಲ. ಉಕ್ರೇನ್ ಮತ್ತು ಇಡೀ ಪ್ರದೇಶದ ಎಲ್ಲಾ ಜನರಿಗೆ ಶಾಂತಿಗಾಗಿ ನಾವು ಪ್ರಾರ್ಥಿಸುತ್ತೇವೆ” ಎಂದು ಬರೆದಿದೆ.

ಒಟ್ಟಾರೆಯಾಗಿ ಹೇಳುವುದಾದರೆ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್‌ ಆಗುತ್ತಿರುವ ಚಿತ್ರವೂ ತಪ್ಪಾದ ನಿರೂಪಣೆಯೊಂದಿಗೆ ಹರಿದಾಡುತ್ತಿದೆ. ಈ ಪೋಸ್ಟ್‌ ಇತರ ಧರ್ಮವರನ್ನು ಕೀಳಾಗಿ ಕಾಣಲು ಮಾಡಿರುವ ದ್ವೇಷಪೂರಿತ ಚಿತ್ರವಾಗಿದೆ. ಇಸ್ಕಾನ್ ಸಂಸ್ಥೆಯು 2015ರಲ್ಲಿ ಈ ಚಿತ್ರವನ್ನು ಹಂಚಿಕೊಂಡಿದೆ. ಜೊತೆಗೆ ಬಿಟಿವಿ ವರದಿಯಲ್ಲಿ ತಪ್ಪುಗಳಿದ್ದು, ಅದು ಹಳೆಯ ಚಿತ್ರವನ್ನು ಬಳಸಿದೆ. ಅದರ ವರದಿ ಹೇಳುವಂತೆ ಉಕ್ರೇನ್‌ನಲ್ಲಿರುವ ಎಲ್ಲಾ 54 ದೇವಾಲಯಗಳಲ್ಲಿ ನಿರಾಶ್ರಿತರಿಗೆ ಆಹಾರ ಮತ್ತು ಆಶ್ರಯವನ್ನು ನೀಡಲಾಗುತ್ತಿಲ್ಲ.

ಹಂಗೇರಿಯ ಇಸ್ಕಾನ್‌‌ನ ಕೇವಲ ಒಂದು ದೇವಸ್ಥಾನದ ವತಿಯಿಂದ ಮಾತ್ರ ಆಹಾರ ವಿತರಣೆಯನ್ನು ಹಂಗೇರಿಯ ಏರ್‌ಪೋರ್ಟ್‌ನಲ್ಲಿ ಮಾಡಲಾಗುತ್ತಿದೆ ಎಂದು ಸ್ವತಃ ಇಸ್ಕಾನ್‌ ಹೇಳಿಕೊಂಡಿದೆ.


ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ಇಸ್ಲಾಂ ವಿರುದ್ಧ ದ್ವೇಷ ಹರಡುವ ಈ ಲೇಖನ ತೋಂಟದಾರ್ಯ ಮಠದ ನಿಜಗುಣಾನಂದ ಸ್ವಾಮಿ ಬರೆದಿಲ್ಲ


ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. BTV ಈಗಾಗಲೇ ಹಲವು ಸಲ ಮರ್ಯಾದೆ ಕಳೆದುಕೊಂಡಿದೆ. ಇತ್ತೀಚೆಗಂತೂ ಈ ದಿವ್ಯ ವಸಂತ ಟ್ರೋಲ್ನಿಂದ TRP ಕಳೆದುಕೊಂಡು ಸುಸ್ತಾಗಿದೆ. ಇಷ್ಟಾದರೂ ಬುದ್ಧಿ ಬಂದಿಲ್ಲ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....