Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್: ಇಸ್ಕಾನ್‌‌ನ ಈ ಚಿತ್ರ ಉಕ್ರೇನಿದ್ದಲ್ಲ; ದಾರಿ ತಪ್ಪಿಸಿದ ಬಿಟಿವಿ ವರದಿ!

ಫ್ಯಾಕ್ಟ್‌ಚೆಕ್: ಇಸ್ಕಾನ್‌‌ನ ಈ ಚಿತ್ರ ಉಕ್ರೇನಿದ್ದಲ್ಲ; ದಾರಿ ತಪ್ಪಿಸಿದ ಬಿಟಿವಿ ವರದಿ!

- Advertisement -
- Advertisement -

ಯುದ್ಧ ಪೀಡಿತ ಉಕ್ರೇನ್‌ನಲ್ಲಿ ‘ಇಸ್ಕಾನ್‌’ ವತಿಯಿಂದ ಜನರಿಗೆ ಆಹಾರ ಒದಗಿಸಲಾಗುತ್ತಿದೆ ಎಂದು ಪ್ರತಿಪಾದಿಸಿ ಚಿತ್ರವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ. ಈ ಚಿತ್ರದೊಂದಿಗೆ ವೈರಲ್ ಆಗಿರುವ ಬರಹವು ಕೋಮುದ್ವೇಷ ಬಿತ್ತುತ್ತಿದ್ದು, ಹಿಂದೂ ಮತವನ್ನು ಬಿಟ್ಟು ಉಳಿದ ಧರ್ಮಗಳು ಸಹಾಯ ಮಾಡುವ ನೆಪದಲ್ಲಿ ಆಮಿಷ ಒಡ್ಡುತ್ತದೆ ಎಂಬ ಅರ್ಥದಲ್ಲಿ ಈ ಬರಹವನ್ನು ಬರೆಯಲಾಗಿದೆ.

ವೈರಲ್‌ ಚಿತ್ರದ ಜೊತೆಗೆ, “ಉಕ್ರೇನ್‌ನಲ್ಲಿ ಸುಮಾರು 54 ಇಸ್ಕಾನ್ ದೇವಾಲಯಗಳಿಂದ ಹಸಿದವರಿಗೆ ಅನ್ನ ನೀಡಲಾಗುತ್ತಿದ್ದು, ಅಲ್ಲಿ ಅನ್ನ ನೀಡುವ ಮೊದಲು ಅನ್ಯ ಧರ್ಮಿಯರಿಗೆ ನೀವು ನಮ್ಮ ಮತಕ್ಕೆ ಬನ್ನಿ ಎಂದು ಯಾರೂ ಒತ್ತಾಯ ಮಾಡುತ್ತಿಲ್ಲ. ಇದುವೆ ನನ್ನ ಹೆಮ್ಮೆಯ ಸನಾತನ ಮತ” ಎಂಬ ಇತರ ಧರ್ಮಗಳನ್ನು ಕೀಳಾಗಿ ಬಿಂಬಿಸುವ ಬರಹಗಳನ್ನೂ ವೈರಲ್‌ ಮಾಡಲಾಗುತ್ತಿದೆ.

ಡಮರುಗ ಎಂಬ ಬಿಜೆಪಿ ಬೆಂಬಲಿಗ ಪೇಜ್‌ ಒಂದು ಈ ರೀತಿಯ ಪೋಸ್ಟ್‌ ಅನ್ನು ರಚಿಸಿ ಹಂಚಿಕೊಂಡಿದೆ. ಇದೇ ಪ್ರತಿಪಾದನೆಯಿಂದಿಗೆ ಸಾಮಾಜಿಕ ಮಾಧ್ಯಮಗಳು ಹಲವಾರು ಬಳಕೆದಾರರು ಚಿತ್ರವನ್ನು ಹಂಚಿಕೊಂಡಿದ್ದಾರೆ. ಇದನ್ನು ನೀವು ಇಲ್ಲಿ, ಇಲ್ಲಿ, ಇಲ್ಲಿ ಮತ್ತು ಇಲ್ಲಿ ನೋಡಬಹುದು.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ‘ಮಸೀದಿ ಕಟ್ಟಿಸು’ ಎಂದು ಅಖಿಲೇಶ್‌ಗೆ ವೃದ್ಧ ಛೀಮಾರಿ ಹಾಕಿಲ್ಲ; ಅವರು ಹೇಳಿದ್ದು EVM ಬದಲಾಯಿಸು ಎಂದು

ಕನ್ನಡದ ಸುದ್ದಿ ಮಾಧ್ಯಮ ಬಿಟಿವಿ ಕೂಡಾ ಇದೇ ಚಿತ್ರವನ್ನು ಬಳಸಿ ಸುದ್ದಿಯೊಂದನ್ನು ವರದಿಯೊಂದನ್ನು ಮಾಡಿದೆ. ಈ ಸುದ್ದಿಯಲ್ಲಿ ಬಿಟಿವಿ, “ಉಕ್ರೇನ್‍ನಲ್ಲಿ ಇಸ್ಕಾನ್ 54 ಕ್ಕೂ ಅಧಿಕ ದೇವಾಲಯಗಳನ್ನು ಹೊಂದಿದ್ದು, ರಷ್ಯಾ ದಾಳಿಯಿಂದ ಉಕ್ರೇನ್ ತತ್ತರಿಸುತ್ತಿರುವ ಉಕ್ರೇನ್​ ಜನರಿಗೆ ಇಸ್ಕಾನ್ ಸೇವೆ ಸಲ್ಲಿಸುತ್ತಿದೆ. ಬಿಕ್ಕಟ್ಟಿನ ಪರಿಸ್ಥಿತಿಯಲ್ಲಿರುವ ಉಕ್ರೇನ್​ ಜನರಿಗೆ ಆಹಾರ ಪೂರೈಕೆ ಮಾಡುವ ಮೂಲಕ ಜನರ ಮೆಚ್ಚುಗೆಗೆ ಪಾತ್ರವಾಗುತ್ತಿದೆ. ಸದ್ಯ ಇದರ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಬಾರಿ ವೈರಲ್ ಆಗುತ್ತಿದ್ದು, ನೆಟ್ಟಿಗರು ಮೆಚ್ಚುಗೆಯ ಮಹಾಪೂರವೇ ಹರಿಸುತ್ತಿದ್ದಾರೆ” ಎಂದು ಎರಡು ಚಿತ್ರಗಳನ್ನು ಬಳಸಿಕೊಂಡಿದೆ.

ಆರ್ಕೈವ್ ಲಿಂಕ್‌ ಇಲ್ಲಿ ಕ್ಲಿಕ್‌ ಮಾಡಿ

ಫ್ಯಾಕ್ಟ್‌ಚೆಕ್:

ವೈರಲ್ ಫೋಟೊವನ್ನು ನಾನುಗೌರಿ.ಕಾಂ ರಿವರ್ಸ್ ಇಮೇಜ್ ಸರ್ಚ್‌ ಮೂಲಕ ಹುಡುಕಾಡಿದಾಗ ಇಸ್ಕಾನ್ ಸಂಸ್ಥೆಯು ಉಕ್ರೇನ್‌ನಲ್ಲಿ ಆಹಾರ ನೀಡುತ್ತಿದೆ ಎಂದು ವೈರಲ್ ಆದ ಈ ಚಿತ್ರಗಳನ್ನು ಹೋಲುವ ಹಲವು ಫೋಟೊಗಳು ನಮಗೆ ಲಭ್ಯವಾಗಿವೆ.

ಇದರ ಜಾಡನ್ನು ಹಿಡಿದು ನಾನುಗೌರಿ.ಕಾಂ ಮತ್ತಷ್ಟು ಹುಡುಕಾಟ ನಡೆಸಿದಾಗ ಅದು ಇಸ್ಕಾನ್ ಸಂಸ್ಥೆ ತನ್ನ ವೆಬ್ ಸೈಟ್‌ಗಾಗಿ ರೂಪಿಸಿರುವ ಹಳೆಯ ಫೋಟೋ ಎಂದು ಖಚಿತವಾಗಿದೆ.

 

ಸೋಶಿಲ್‌ ಮೀಡಿಯಾದಲ್ಲಿ ವೈರಲ್ ಮಾಡಲಾಗುತ್ತಿರುವ ಫೋಟೊವನ್ನು ಇಸ್ಕಾನ್ ಸಂಸ್ಥೆಯು ತನ್ನ ವೆಬ್‌ಸೈಟ್‌ನಲ್ಲಿ ಈ ಫೋಟೊವನ್ನು ಬಳಸಿ ಡೊನೇಟ್ ಮಾಡಿ ಎಂದು ಹಣದ ಮೊತ್ತವನ್ನು ನಮೂದಿಸಿದೆ. ಅದನ್ನು ಇಲ್ಲಿ ನೋಡಬಹುದು.

ಇಸ್ಕಾನ್ ಸಂಸ್ಥೆಯು 2015ರಲ್ಲಿ ಅಪ್‌ಲೋಡ್ ಮಾಡಿದ ಫೋಟೋವನ್ನು ಬಲಪಂಥೀಯ ಪ್ರತಿಪಾದಕ ಡಮರುಗ ಎಂಬ ಫೇಸ್‌ಬುಕ್ ಪೇಜ್‌ನಲ್ಲಿ ವೈರಲ್ ಪೋಸ್ಟ್‌ನೊಂದಿಗೆ ಹಂಚಿಕೊಳ್ಳಲಾಗಿದೆ.

ಕೂಡಾ ಕೊಲ್ಕತ್ತಾದ ಇಸ್ಕಾನ್‌ ಉಪಾಧ್ಯಕ್ಷ ರಾಧಾರಮಣ್‌ ದಾಸ್ ಎಂಬವರು, “ಇಸ್ಕಾನ್‌ನಲ್ಲಿ 54 ದೇವಾಲಯಗಳು ಇವೆ. ಎಲ್ಲಾ ದೇವಾಲಯಗಳು ಸೇವೆಗೆ ಸನ್ನದ್ಧವಾಗಿದೆ” ಎಂದು ಬರೆದಿದ್ದರು.

ಅವರ ಈ ಮಾತನ್ನು ತಪ್ಪಾಗಿ ತಿಳಿದಿರುವ ಬಿಟಿವಿ, “ಉಕ್ರೇನ್‍ನಲ್ಲಿ ಇಸ್ಕಾನ್ 54 ಕ್ಕೂ ಅಧಿಕ ದೇವಾಲಯಗಳನ್ನು ಹೊಂದಿದ್ದು,  ರಷ್ಯಾ ದಾಳಿಯಿಂದ ಉಕ್ರೇನ್ ತತ್ತರಿಸುತ್ತಿರುವ ಉಕ್ರೇನ್​ ಜನರಿಗೆ  ಇಸ್ಕಾನ್ ಸೇವೆ ಸಲ್ಲಿಸುತ್ತಿದೆ. ಬಿಕ್ಕಟ್ಟಿನ ಪರಿಸ್ಥಿತಿಯಲ್ಲಿರುವ ಉಕ್ರೇನ್​ ಜನರಿಗೆ ಆಹಾರ ಪೂರೈಕೆ ಮಾಡುವ ಮೂಲಕ ಜನರ ಮೆಚ್ಚುಗೆಗೆ ಪಾತ್ರವಾಗುತ್ತಿದೆ” ಎಂದು ಎಲ್ಲಾ ದೇವಾಲಯಗಳು ಸೇವೆ ಮಾಡುತ್ತಿವೆ ಎಂಬ ಅರ್ಥದಲ್ಲಿ ಬರೆದಿದೆ. ಜೊತೆಗೆ ಹಳೆಯ ಚಿತ್ರವನ್ನು ಕೂಡಾ ಇದು ಪೋಸ್ಟ್‌ ಮಾಡಿದೆ.

ಇದನ್ನೂ ಓದಿ: BJP ಸದಸ್ಯರನ್ನೆ ‘ಬಿಜೆಪಿ ಬೆಂಬಲಿಸುವ ಸಾಮಾನ್ಯ ಮುಸ್ಲಿಮರು’ ಎಂದು ಚಿತ್ರಿಸಿದ ‘ಟಿವಿ9 ಭಾರತವರ್ಷ’

ಇಸ್ಕಾನ್ ಸೇವೆ ಸಲ್ಲಿಸುತ್ತಿವುದು ನಿಜವೇ?

ಈ ಸುದ್ದಿ ಬರೆಯುವ 22 ಗಂಟೆಗಳ ಮುಂಚೆ ಇಸ್ಕಾನ್ ನ್ಯೂಸ್‌, “ಘರ್ಷಣೆಯಿಂದ ನಿರಾಶ್ರಿತರಾದವರಿಗೆ ಭಕ್ತರು ಅನ್ನದಾನ ಮಾಡಲು ಆರಂಭಿಸಿದ್ದೇವೆ. ಉಕ್ರೇನಿಯನ್-ರಷ್ಯನ್ ಸಂಘರ್ಷದಿಂದ ಸ್ಥಳಾಂತರಗೊಂಡವರಿಗೆ ಸಹಾಯ ಮಾಡುವಲ್ಲಿ ‘ಇಸ್ಕಾನ್ ಹಂಗೇರಿ’ ಸಕ್ರಿಯವಾಗಿ ಭಾಗವಹಿಸುತ್ತಿದೆ. ಇಸ್ಕಾನ್ ಹಂಗೇರಿ ಪ್ರಸ್ತುತ ವಾರದ ದಿನಗಳಲ್ಲಿ 600 ಪ್ಲೇಟ್ ಪ್ರಸಾದವನ್ನು ಮತ್ತು ವಾರಾಂತ್ಯದಲ್ಲಿ 1200 ಪ್ಲೇಟ್‌ಗಳನ್ನು ವಿತರಿಸುವ ಸಾಮರ್ಥ್ಯವನ್ನು ಹೊಂದಿದೆ” ಎಂದು ಬರೆದಿದೆ.

ಈ ಮಧ್ಯೆ, ತಪ್ಪಾದ ಚಿತ್ರಗಳು ಮತ್ತು ಉಕ್ರೇನ್‌ನಲ್ಲಿರುವ ಇಸ್ಕಾನ್‌ ಎಲ್ಲಾ ದೇವಸ್ಥಾನಗಳಲ್ಲಿ ಆಶ್ರಯ ನೀಡಲಾಗುತ್ತಿದೆ ಎಂಬ ಸುದ್ದಿ ಹರಿದಾಡುತ್ತಿದ್ದಂತೆ, ಸ್ವತಃ ಇಸ್ಕಾನ್‌‌‌ ನ್ಯೂಸ್‌ ಈ ಬಗ್ಗೆ ಸ್ಪಷ್ಟೀಕರಣ ನೀಡಿದೆ.

ಇಸ್ಕಾನ್‌ ನ್ಯೂಸ್‌ ಹೇಳುವಂತೆ, “ಉಕ್ರೇನ್‌ನಲ್ಲಿರುವ ಐವತ್ತಕ್ಕೂ ಹೆಚ್ಚು ಇಸ್ಕಾನ್ ದೇವಾಲಯಗಳು ಮತ್ತು ಕೇಂದ್ರಗಳು ಸಾರ್ವಜನಿಕರಿಗೆ ಆಹಾರ ಪರಿಹಾರ ಮತ್ತು ಆಶ್ರಯವನ್ನು ಒದಗಿಸುತ್ತಿವೆ ಎಂದು ಸಾಮಾಜಿಕ ಮಾಧ್ಯಮ ಮತ್ತು ಇತರ ಮಾಧ್ಯಮಗಳಲ್ಲಿ ತಪ್ಪು ಮಾಹಿತಿ ಹರಡುತ್ತಿದೆ. ಈ ಮಾಹಿತಿ ಸುಳ್ಳು” ಎಂದು ಸ್ಪಷ್ಟೀಕರಣ ನೀಡಿದೆ.

ಲಿಂ‌ಕ್‌ಗೆ ಇಲ್ಲಿ ಕ್ಲಿಕ್ ಮಾಡಿ 

ಇಸ್ಕಾನ್‌ ನ್ಯೂಸ್‌‌ ಖಚಿತವಾಗಿ ಹೇಳುವಂತೆ, “ಈ ಸಮಯದಲ್ಲಿ ಉಕ್ರೇನ್‌ನಲ್ಲಿರುವ ನಮ್ಮ ದೇವಾಲಯಗಳಲ್ಲಿ ಆಶ್ರಯ ಅಥವಾ ಆಹಾರ ವಿತರಣೆಯನ್ನು ಒದಗಿಸಲು ISKCON ಗೆ ಸಾಧ್ಯವಾಗುತ್ತಿಲ್ಲ. ಉಕ್ರೇನ್ ಮತ್ತು ಇಡೀ ಪ್ರದೇಶದ ಎಲ್ಲಾ ಜನರಿಗೆ ಶಾಂತಿಗಾಗಿ ನಾವು ಪ್ರಾರ್ಥಿಸುತ್ತೇವೆ” ಎಂದು ಬರೆದಿದೆ.

ಒಟ್ಟಾರೆಯಾಗಿ ಹೇಳುವುದಾದರೆ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್‌ ಆಗುತ್ತಿರುವ ಚಿತ್ರವೂ ತಪ್ಪಾದ ನಿರೂಪಣೆಯೊಂದಿಗೆ ಹರಿದಾಡುತ್ತಿದೆ. ಈ ಪೋಸ್ಟ್‌ ಇತರ ಧರ್ಮವರನ್ನು ಕೀಳಾಗಿ ಕಾಣಲು ಮಾಡಿರುವ ದ್ವೇಷಪೂರಿತ ಚಿತ್ರವಾಗಿದೆ. ಇಸ್ಕಾನ್ ಸಂಸ್ಥೆಯು 2015ರಲ್ಲಿ ಈ ಚಿತ್ರವನ್ನು ಹಂಚಿಕೊಂಡಿದೆ. ಜೊತೆಗೆ ಬಿಟಿವಿ ವರದಿಯಲ್ಲಿ ತಪ್ಪುಗಳಿದ್ದು, ಅದು ಹಳೆಯ ಚಿತ್ರವನ್ನು ಬಳಸಿದೆ. ಅದರ ವರದಿ ಹೇಳುವಂತೆ ಉಕ್ರೇನ್‌ನಲ್ಲಿರುವ ಎಲ್ಲಾ 54 ದೇವಾಲಯಗಳಲ್ಲಿ ನಿರಾಶ್ರಿತರಿಗೆ ಆಹಾರ ಮತ್ತು ಆಶ್ರಯವನ್ನು ನೀಡಲಾಗುತ್ತಿಲ್ಲ.

ಹಂಗೇರಿಯ ಇಸ್ಕಾನ್‌‌ನ ಕೇವಲ ಒಂದು ದೇವಸ್ಥಾನದ ವತಿಯಿಂದ ಮಾತ್ರ ಆಹಾರ ವಿತರಣೆಯನ್ನು ಹಂಗೇರಿಯ ಏರ್‌ಪೋರ್ಟ್‌ನಲ್ಲಿ ಮಾಡಲಾಗುತ್ತಿದೆ ಎಂದು ಸ್ವತಃ ಇಸ್ಕಾನ್‌ ಹೇಳಿಕೊಂಡಿದೆ.


ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ಇಸ್ಲಾಂ ವಿರುದ್ಧ ದ್ವೇಷ ಹರಡುವ ಈ ಲೇಖನ ತೋಂಟದಾರ್ಯ ಮಠದ ನಿಜಗುಣಾನಂದ ಸ್ವಾಮಿ ಬರೆದಿಲ್ಲ


ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. BTV ಈಗಾಗಲೇ ಹಲವು ಸಲ ಮರ್ಯಾದೆ ಕಳೆದುಕೊಂಡಿದೆ. ಇತ್ತೀಚೆಗಂತೂ ಈ ದಿವ್ಯ ವಸಂತ ಟ್ರೋಲ್ನಿಂದ TRP ಕಳೆದುಕೊಂಡು ಸುಸ್ತಾಗಿದೆ. ಇಷ್ಟಾದರೂ ಬುದ್ಧಿ ಬಂದಿಲ್ಲ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...