Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್: ಇಸ್ಕಾನ್‌‌ನ ಈ ಚಿತ್ರ ಉಕ್ರೇನಿದ್ದಲ್ಲ; ದಾರಿ ತಪ್ಪಿಸಿದ ಬಿಟಿವಿ ವರದಿ!

ಫ್ಯಾಕ್ಟ್‌ಚೆಕ್: ಇಸ್ಕಾನ್‌‌ನ ಈ ಚಿತ್ರ ಉಕ್ರೇನಿದ್ದಲ್ಲ; ದಾರಿ ತಪ್ಪಿಸಿದ ಬಿಟಿವಿ ವರದಿ!

- Advertisement -
- Advertisement -

ಯುದ್ಧ ಪೀಡಿತ ಉಕ್ರೇನ್‌ನಲ್ಲಿ ‘ಇಸ್ಕಾನ್‌’ ವತಿಯಿಂದ ಜನರಿಗೆ ಆಹಾರ ಒದಗಿಸಲಾಗುತ್ತಿದೆ ಎಂದು ಪ್ರತಿಪಾದಿಸಿ ಚಿತ್ರವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ. ಈ ಚಿತ್ರದೊಂದಿಗೆ ವೈರಲ್ ಆಗಿರುವ ಬರಹವು ಕೋಮುದ್ವೇಷ ಬಿತ್ತುತ್ತಿದ್ದು, ಹಿಂದೂ ಮತವನ್ನು ಬಿಟ್ಟು ಉಳಿದ ಧರ್ಮಗಳು ಸಹಾಯ ಮಾಡುವ ನೆಪದಲ್ಲಿ ಆಮಿಷ ಒಡ್ಡುತ್ತದೆ ಎಂಬ ಅರ್ಥದಲ್ಲಿ ಈ ಬರಹವನ್ನು ಬರೆಯಲಾಗಿದೆ.

ವೈರಲ್‌ ಚಿತ್ರದ ಜೊತೆಗೆ, “ಉಕ್ರೇನ್‌ನಲ್ಲಿ ಸುಮಾರು 54 ಇಸ್ಕಾನ್ ದೇವಾಲಯಗಳಿಂದ ಹಸಿದವರಿಗೆ ಅನ್ನ ನೀಡಲಾಗುತ್ತಿದ್ದು, ಅಲ್ಲಿ ಅನ್ನ ನೀಡುವ ಮೊದಲು ಅನ್ಯ ಧರ್ಮಿಯರಿಗೆ ನೀವು ನಮ್ಮ ಮತಕ್ಕೆ ಬನ್ನಿ ಎಂದು ಯಾರೂ ಒತ್ತಾಯ ಮಾಡುತ್ತಿಲ್ಲ. ಇದುವೆ ನನ್ನ ಹೆಮ್ಮೆಯ ಸನಾತನ ಮತ” ಎಂಬ ಇತರ ಧರ್ಮಗಳನ್ನು ಕೀಳಾಗಿ ಬಿಂಬಿಸುವ ಬರಹಗಳನ್ನೂ ವೈರಲ್‌ ಮಾಡಲಾಗುತ್ತಿದೆ.

ಡಮರುಗ ಎಂಬ ಬಿಜೆಪಿ ಬೆಂಬಲಿಗ ಪೇಜ್‌ ಒಂದು ಈ ರೀತಿಯ ಪೋಸ್ಟ್‌ ಅನ್ನು ರಚಿಸಿ ಹಂಚಿಕೊಂಡಿದೆ. ಇದೇ ಪ್ರತಿಪಾದನೆಯಿಂದಿಗೆ ಸಾಮಾಜಿಕ ಮಾಧ್ಯಮಗಳು ಹಲವಾರು ಬಳಕೆದಾರರು ಚಿತ್ರವನ್ನು ಹಂಚಿಕೊಂಡಿದ್ದಾರೆ. ಇದನ್ನು ನೀವು ಇಲ್ಲಿ, ಇಲ್ಲಿ, ಇಲ್ಲಿ ಮತ್ತು ಇಲ್ಲಿ ನೋಡಬಹುದು.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ‘ಮಸೀದಿ ಕಟ್ಟಿಸು’ ಎಂದು ಅಖಿಲೇಶ್‌ಗೆ ವೃದ್ಧ ಛೀಮಾರಿ ಹಾಕಿಲ್ಲ; ಅವರು ಹೇಳಿದ್ದು EVM ಬದಲಾಯಿಸು ಎಂದು

ಕನ್ನಡದ ಸುದ್ದಿ ಮಾಧ್ಯಮ ಬಿಟಿವಿ ಕೂಡಾ ಇದೇ ಚಿತ್ರವನ್ನು ಬಳಸಿ ಸುದ್ದಿಯೊಂದನ್ನು ವರದಿಯೊಂದನ್ನು ಮಾಡಿದೆ. ಈ ಸುದ್ದಿಯಲ್ಲಿ ಬಿಟಿವಿ, “ಉಕ್ರೇನ್‍ನಲ್ಲಿ ಇಸ್ಕಾನ್ 54 ಕ್ಕೂ ಅಧಿಕ ದೇವಾಲಯಗಳನ್ನು ಹೊಂದಿದ್ದು, ರಷ್ಯಾ ದಾಳಿಯಿಂದ ಉಕ್ರೇನ್ ತತ್ತರಿಸುತ್ತಿರುವ ಉಕ್ರೇನ್​ ಜನರಿಗೆ ಇಸ್ಕಾನ್ ಸೇವೆ ಸಲ್ಲಿಸುತ್ತಿದೆ. ಬಿಕ್ಕಟ್ಟಿನ ಪರಿಸ್ಥಿತಿಯಲ್ಲಿರುವ ಉಕ್ರೇನ್​ ಜನರಿಗೆ ಆಹಾರ ಪೂರೈಕೆ ಮಾಡುವ ಮೂಲಕ ಜನರ ಮೆಚ್ಚುಗೆಗೆ ಪಾತ್ರವಾಗುತ್ತಿದೆ. ಸದ್ಯ ಇದರ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಬಾರಿ ವೈರಲ್ ಆಗುತ್ತಿದ್ದು, ನೆಟ್ಟಿಗರು ಮೆಚ್ಚುಗೆಯ ಮಹಾಪೂರವೇ ಹರಿಸುತ್ತಿದ್ದಾರೆ” ಎಂದು ಎರಡು ಚಿತ್ರಗಳನ್ನು ಬಳಸಿಕೊಂಡಿದೆ.

ಆರ್ಕೈವ್ ಲಿಂಕ್‌ ಇಲ್ಲಿ ಕ್ಲಿಕ್‌ ಮಾಡಿ

ಫ್ಯಾಕ್ಟ್‌ಚೆಕ್:

ವೈರಲ್ ಫೋಟೊವನ್ನು ನಾನುಗೌರಿ.ಕಾಂ ರಿವರ್ಸ್ ಇಮೇಜ್ ಸರ್ಚ್‌ ಮೂಲಕ ಹುಡುಕಾಡಿದಾಗ ಇಸ್ಕಾನ್ ಸಂಸ್ಥೆಯು ಉಕ್ರೇನ್‌ನಲ್ಲಿ ಆಹಾರ ನೀಡುತ್ತಿದೆ ಎಂದು ವೈರಲ್ ಆದ ಈ ಚಿತ್ರಗಳನ್ನು ಹೋಲುವ ಹಲವು ಫೋಟೊಗಳು ನಮಗೆ ಲಭ್ಯವಾಗಿವೆ.

ಇದರ ಜಾಡನ್ನು ಹಿಡಿದು ನಾನುಗೌರಿ.ಕಾಂ ಮತ್ತಷ್ಟು ಹುಡುಕಾಟ ನಡೆಸಿದಾಗ ಅದು ಇಸ್ಕಾನ್ ಸಂಸ್ಥೆ ತನ್ನ ವೆಬ್ ಸೈಟ್‌ಗಾಗಿ ರೂಪಿಸಿರುವ ಹಳೆಯ ಫೋಟೋ ಎಂದು ಖಚಿತವಾಗಿದೆ.

 

ಸೋಶಿಲ್‌ ಮೀಡಿಯಾದಲ್ಲಿ ವೈರಲ್ ಮಾಡಲಾಗುತ್ತಿರುವ ಫೋಟೊವನ್ನು ಇಸ್ಕಾನ್ ಸಂಸ್ಥೆಯು ತನ್ನ ವೆಬ್‌ಸೈಟ್‌ನಲ್ಲಿ ಈ ಫೋಟೊವನ್ನು ಬಳಸಿ ಡೊನೇಟ್ ಮಾಡಿ ಎಂದು ಹಣದ ಮೊತ್ತವನ್ನು ನಮೂದಿಸಿದೆ. ಅದನ್ನು ಇಲ್ಲಿ ನೋಡಬಹುದು.

ಇಸ್ಕಾನ್ ಸಂಸ್ಥೆಯು 2015ರಲ್ಲಿ ಅಪ್‌ಲೋಡ್ ಮಾಡಿದ ಫೋಟೋವನ್ನು ಬಲಪಂಥೀಯ ಪ್ರತಿಪಾದಕ ಡಮರುಗ ಎಂಬ ಫೇಸ್‌ಬುಕ್ ಪೇಜ್‌ನಲ್ಲಿ ವೈರಲ್ ಪೋಸ್ಟ್‌ನೊಂದಿಗೆ ಹಂಚಿಕೊಳ್ಳಲಾಗಿದೆ.

ಕೂಡಾ ಕೊಲ್ಕತ್ತಾದ ಇಸ್ಕಾನ್‌ ಉಪಾಧ್ಯಕ್ಷ ರಾಧಾರಮಣ್‌ ದಾಸ್ ಎಂಬವರು, “ಇಸ್ಕಾನ್‌ನಲ್ಲಿ 54 ದೇವಾಲಯಗಳು ಇವೆ. ಎಲ್ಲಾ ದೇವಾಲಯಗಳು ಸೇವೆಗೆ ಸನ್ನದ್ಧವಾಗಿದೆ” ಎಂದು ಬರೆದಿದ್ದರು.

ಅವರ ಈ ಮಾತನ್ನು ತಪ್ಪಾಗಿ ತಿಳಿದಿರುವ ಬಿಟಿವಿ, “ಉಕ್ರೇನ್‍ನಲ್ಲಿ ಇಸ್ಕಾನ್ 54 ಕ್ಕೂ ಅಧಿಕ ದೇವಾಲಯಗಳನ್ನು ಹೊಂದಿದ್ದು,  ರಷ್ಯಾ ದಾಳಿಯಿಂದ ಉಕ್ರೇನ್ ತತ್ತರಿಸುತ್ತಿರುವ ಉಕ್ರೇನ್​ ಜನರಿಗೆ  ಇಸ್ಕಾನ್ ಸೇವೆ ಸಲ್ಲಿಸುತ್ತಿದೆ. ಬಿಕ್ಕಟ್ಟಿನ ಪರಿಸ್ಥಿತಿಯಲ್ಲಿರುವ ಉಕ್ರೇನ್​ ಜನರಿಗೆ ಆಹಾರ ಪೂರೈಕೆ ಮಾಡುವ ಮೂಲಕ ಜನರ ಮೆಚ್ಚುಗೆಗೆ ಪಾತ್ರವಾಗುತ್ತಿದೆ” ಎಂದು ಎಲ್ಲಾ ದೇವಾಲಯಗಳು ಸೇವೆ ಮಾಡುತ್ತಿವೆ ಎಂಬ ಅರ್ಥದಲ್ಲಿ ಬರೆದಿದೆ. ಜೊತೆಗೆ ಹಳೆಯ ಚಿತ್ರವನ್ನು ಕೂಡಾ ಇದು ಪೋಸ್ಟ್‌ ಮಾಡಿದೆ.

ಇದನ್ನೂ ಓದಿ: BJP ಸದಸ್ಯರನ್ನೆ ‘ಬಿಜೆಪಿ ಬೆಂಬಲಿಸುವ ಸಾಮಾನ್ಯ ಮುಸ್ಲಿಮರು’ ಎಂದು ಚಿತ್ರಿಸಿದ ‘ಟಿವಿ9 ಭಾರತವರ್ಷ’

ಇಸ್ಕಾನ್ ಸೇವೆ ಸಲ್ಲಿಸುತ್ತಿವುದು ನಿಜವೇ?

ಈ ಸುದ್ದಿ ಬರೆಯುವ 22 ಗಂಟೆಗಳ ಮುಂಚೆ ಇಸ್ಕಾನ್ ನ್ಯೂಸ್‌, “ಘರ್ಷಣೆಯಿಂದ ನಿರಾಶ್ರಿತರಾದವರಿಗೆ ಭಕ್ತರು ಅನ್ನದಾನ ಮಾಡಲು ಆರಂಭಿಸಿದ್ದೇವೆ. ಉಕ್ರೇನಿಯನ್-ರಷ್ಯನ್ ಸಂಘರ್ಷದಿಂದ ಸ್ಥಳಾಂತರಗೊಂಡವರಿಗೆ ಸಹಾಯ ಮಾಡುವಲ್ಲಿ ‘ಇಸ್ಕಾನ್ ಹಂಗೇರಿ’ ಸಕ್ರಿಯವಾಗಿ ಭಾಗವಹಿಸುತ್ತಿದೆ. ಇಸ್ಕಾನ್ ಹಂಗೇರಿ ಪ್ರಸ್ತುತ ವಾರದ ದಿನಗಳಲ್ಲಿ 600 ಪ್ಲೇಟ್ ಪ್ರಸಾದವನ್ನು ಮತ್ತು ವಾರಾಂತ್ಯದಲ್ಲಿ 1200 ಪ್ಲೇಟ್‌ಗಳನ್ನು ವಿತರಿಸುವ ಸಾಮರ್ಥ್ಯವನ್ನು ಹೊಂದಿದೆ” ಎಂದು ಬರೆದಿದೆ.

ಈ ಮಧ್ಯೆ, ತಪ್ಪಾದ ಚಿತ್ರಗಳು ಮತ್ತು ಉಕ್ರೇನ್‌ನಲ್ಲಿರುವ ಇಸ್ಕಾನ್‌ ಎಲ್ಲಾ ದೇವಸ್ಥಾನಗಳಲ್ಲಿ ಆಶ್ರಯ ನೀಡಲಾಗುತ್ತಿದೆ ಎಂಬ ಸುದ್ದಿ ಹರಿದಾಡುತ್ತಿದ್ದಂತೆ, ಸ್ವತಃ ಇಸ್ಕಾನ್‌‌‌ ನ್ಯೂಸ್‌ ಈ ಬಗ್ಗೆ ಸ್ಪಷ್ಟೀಕರಣ ನೀಡಿದೆ.

ಇಸ್ಕಾನ್‌ ನ್ಯೂಸ್‌ ಹೇಳುವಂತೆ, “ಉಕ್ರೇನ್‌ನಲ್ಲಿರುವ ಐವತ್ತಕ್ಕೂ ಹೆಚ್ಚು ಇಸ್ಕಾನ್ ದೇವಾಲಯಗಳು ಮತ್ತು ಕೇಂದ್ರಗಳು ಸಾರ್ವಜನಿಕರಿಗೆ ಆಹಾರ ಪರಿಹಾರ ಮತ್ತು ಆಶ್ರಯವನ್ನು ಒದಗಿಸುತ್ತಿವೆ ಎಂದು ಸಾಮಾಜಿಕ ಮಾಧ್ಯಮ ಮತ್ತು ಇತರ ಮಾಧ್ಯಮಗಳಲ್ಲಿ ತಪ್ಪು ಮಾಹಿತಿ ಹರಡುತ್ತಿದೆ. ಈ ಮಾಹಿತಿ ಸುಳ್ಳು” ಎಂದು ಸ್ಪಷ್ಟೀಕರಣ ನೀಡಿದೆ.

ಲಿಂ‌ಕ್‌ಗೆ ಇಲ್ಲಿ ಕ್ಲಿಕ್ ಮಾಡಿ 

ಇಸ್ಕಾನ್‌ ನ್ಯೂಸ್‌‌ ಖಚಿತವಾಗಿ ಹೇಳುವಂತೆ, “ಈ ಸಮಯದಲ್ಲಿ ಉಕ್ರೇನ್‌ನಲ್ಲಿರುವ ನಮ್ಮ ದೇವಾಲಯಗಳಲ್ಲಿ ಆಶ್ರಯ ಅಥವಾ ಆಹಾರ ವಿತರಣೆಯನ್ನು ಒದಗಿಸಲು ISKCON ಗೆ ಸಾಧ್ಯವಾಗುತ್ತಿಲ್ಲ. ಉಕ್ರೇನ್ ಮತ್ತು ಇಡೀ ಪ್ರದೇಶದ ಎಲ್ಲಾ ಜನರಿಗೆ ಶಾಂತಿಗಾಗಿ ನಾವು ಪ್ರಾರ್ಥಿಸುತ್ತೇವೆ” ಎಂದು ಬರೆದಿದೆ.

ಒಟ್ಟಾರೆಯಾಗಿ ಹೇಳುವುದಾದರೆ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್‌ ಆಗುತ್ತಿರುವ ಚಿತ್ರವೂ ತಪ್ಪಾದ ನಿರೂಪಣೆಯೊಂದಿಗೆ ಹರಿದಾಡುತ್ತಿದೆ. ಈ ಪೋಸ್ಟ್‌ ಇತರ ಧರ್ಮವರನ್ನು ಕೀಳಾಗಿ ಕಾಣಲು ಮಾಡಿರುವ ದ್ವೇಷಪೂರಿತ ಚಿತ್ರವಾಗಿದೆ. ಇಸ್ಕಾನ್ ಸಂಸ್ಥೆಯು 2015ರಲ್ಲಿ ಈ ಚಿತ್ರವನ್ನು ಹಂಚಿಕೊಂಡಿದೆ. ಜೊತೆಗೆ ಬಿಟಿವಿ ವರದಿಯಲ್ಲಿ ತಪ್ಪುಗಳಿದ್ದು, ಅದು ಹಳೆಯ ಚಿತ್ರವನ್ನು ಬಳಸಿದೆ. ಅದರ ವರದಿ ಹೇಳುವಂತೆ ಉಕ್ರೇನ್‌ನಲ್ಲಿರುವ ಎಲ್ಲಾ 54 ದೇವಾಲಯಗಳಲ್ಲಿ ನಿರಾಶ್ರಿತರಿಗೆ ಆಹಾರ ಮತ್ತು ಆಶ್ರಯವನ್ನು ನೀಡಲಾಗುತ್ತಿಲ್ಲ.

ಹಂಗೇರಿಯ ಇಸ್ಕಾನ್‌‌ನ ಕೇವಲ ಒಂದು ದೇವಸ್ಥಾನದ ವತಿಯಿಂದ ಮಾತ್ರ ಆಹಾರ ವಿತರಣೆಯನ್ನು ಹಂಗೇರಿಯ ಏರ್‌ಪೋರ್ಟ್‌ನಲ್ಲಿ ಮಾಡಲಾಗುತ್ತಿದೆ ಎಂದು ಸ್ವತಃ ಇಸ್ಕಾನ್‌ ಹೇಳಿಕೊಂಡಿದೆ.


ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ಇಸ್ಲಾಂ ವಿರುದ್ಧ ದ್ವೇಷ ಹರಡುವ ಈ ಲೇಖನ ತೋಂಟದಾರ್ಯ ಮಠದ ನಿಜಗುಣಾನಂದ ಸ್ವಾಮಿ ಬರೆದಿಲ್ಲ


ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. BTV ಈಗಾಗಲೇ ಹಲವು ಸಲ ಮರ್ಯಾದೆ ಕಳೆದುಕೊಂಡಿದೆ. ಇತ್ತೀಚೆಗಂತೂ ಈ ದಿವ್ಯ ವಸಂತ ಟ್ರೋಲ್ನಿಂದ TRP ಕಳೆದುಕೊಂಡು ಸುಸ್ತಾಗಿದೆ. ಇಷ್ಟಾದರೂ ಬುದ್ಧಿ ಬಂದಿಲ್ಲ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...