Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್‌: ಲಂಗರ್‌‌ನ ಈ ಚಿತ್ರ ಯುದ್ದ ಪೀಡಿತ ಉಕ್ರೇನ್‌ ದೇಶದ್ದಲ್ಲ

ಫ್ಯಾಕ್ಟ್‌ಚೆಕ್‌: ಲಂಗರ್‌‌ನ ಈ ಚಿತ್ರ ಯುದ್ದ ಪೀಡಿತ ಉಕ್ರೇನ್‌ ದೇಶದ್ದಲ್ಲ

- Advertisement -
- Advertisement -

ಉಕ್ರೇನ್  ಮತ್ತು ರಷ್ಯಾ  ನಡುವೆ ನಡೆಯುತ್ತಿರುವ ಯುದ್ದದಿಂದ ಅಲ್ಲಿಯ ನಾಗರೀಕರಿಗೆ ಭಾರೀ ಸಂಕಷ್ಟ ಎದುರಾಗಿದ್ದು, ಈ ಕಷ್ಟದ ಸಮಯದಲ್ಲಿ “ಸಿಖ್ಖರು ಉಕ್ರೇನ್‌ನಲ್ಲಿ ಲಂಗರ್‌ನಲ್ಲಿ ಆಹಾರ ನೀಡುತ್ತಿದ್ದಾರೆ” ಎಂದು ಪ್ರತಿಪಾದಿಸಿ ಚಿತ್ರವೊಂದನ್ನು ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ.

ರಷ್ಯಾ ದಾಳಿಯಿಂದಾಗಿ  ಉಕ್ರೇನ್‌ನಲ್ಲಿ ಜನರು  ಮನೆ ಕಳೆದುಕೊಂಡು ಪರಿತಪ್ಪಿಸುತ್ತಿರುವ ಸಂದರ್ಭದಲ್ಲಿ ಸಿಖ್ಖರು ಅಲ್ಲಿಯ ಜನರಿಗೆ ಆಹಾರ ಒದಗಿಸುವ ಮೂಲಕ ಉಕ್ರೇನ್ ನಾಗರೀಕರ ನೆರವಿಗೆ ನಿಂತಿದೆ ಎಂದು ಹೇಳಿಕೊಳ್ಳುವ ಪೋಸ್ಟ್‌ ವೈರಲ್ ಆಗುತ್ತಿದೆ.

ಫೋಟೋವನ್ನು ಗೂಗಲ್ ರಿವರ್ಸ್ ಇಮೇಜ್ ಸರ್ಚ್ ಮೂಲಕ ಹುಡಕಾಡಿದಾಗ, ಈ ಫೋಟೋವನ್ನು ಡಿಸೆಂಬರ್ 2017 ರಲ್ಲಿ  ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಡಿರುವುದು  ಕಂಡುಬಂದಿದೆ. ಅಲ್ಲದೆ, ‘ವೀ ದಿ ಸಿಖ್ಸ್’ ತಮ್ಮ ಫೇಸ್‌ಬುಕ್ ಮತ್ತು ಟ್ವಿಟರ್ ಪ್ರೊಫೈಲ್‌ಗಳಲ್ಲಿ 06 ಆಗಸ್ಟ್ 2018 ರಂದು ಅದೇ ಚಿತ್ರವನ್ನು ಅಪ್‌ಲೋಡ್ ಮಾಡಿದೆ. “ಕೆನಡಾದ ಮೊದಲ ಉಚಿತ ಆಹಾರ ಟ್ರಕ್ – ಗುರುನಾನಕ್ ದೇವ್ ಜಿಯವರ  LANGAR – ಗುಡ್ ಬೈ ಹಂಗರ್” ಎಂದು ಬರೆದುಕೊಂಡಿದೆ.

ಇದಕ್ಕೂ ಮೊದಲು ಅಂದರೆ 2016ರಲ್ಲಿ Indian desi food ಎಂಬ ಫೇಸ್‌ಬುಕ್ ಪೇಜ್ ನಲ್ಲಿಯೂ ಇದೇ ಫೋಟೋ ಶೇರ್ ಆಗಿರುವುದನ್ನು ಇಲ್ಲಿ ಗಮನಿಸಬಹುದು.

ಈ ಫೋಟೋದಲ್ಲಿ ಕಾಣುವ ಸಿಖ್‌ ಮೊಬೈಲ್ ಕ್ಯಾಂಟೀನ್ ಹಲವು ವರ್ಷಗಳಿಂದ ಸಾಮಾಜಿಕ ಮಾಧ್ಯಮಗಳಲ್ಲಿ ಕಾಣಿಸಿಕೊಳ್ಳುತ್ತಿದೆ. ಆ ದೃಶ್ಯಗಳಲ್ಲಿ ಕೆಲವನ್ನು  ಇಲ್ಲಿ, ಇಲ್ಲಿ ಮತ್ತು ಇಲ್ಲಿ ನೋಡಬಹುದು. ಅಲ್ಲದೆ, ಟ್ರಕ್‌ನಲ್ಲಿ ‘ಸಿಖ್ ಸೇವಾ ಸೊಸೈಟಿ ಟೊರೊಂಟೊ’ ಫೋನ್ ಸಂಖ್ಯೆಯನ್ನು ಕಾಣಬಹುದು.

ಇದೆಲ್ಲದರ ನಡುವೆ ಉಕ್ರೇನ್‌ನಿಂದ ನಿರ್ಗಮಿಸುತ್ತಿರುವ ವಿದ್ಯಾರ್ಥಿಗಳಿಗೆ ರೈಲಿನಲ್ಲಿ ಸಿಖ್ಖರು ಲಂಗರ್ ನೀಡುತ್ತಿರುವ ಬಗ್ಗೆ ಇತ್ತೀಚೆಗೆ ವರದಿಯಾಗಿವೆ. ಆ ಸುದ್ದಿ ಲೇಖನಗಳನ್ನು ಇಲ್ಲಿ ಮತ್ತು ಇಲ್ಲಿ ಓದಬಹುದು.

ಒಟ್ಟಾರೆಯಾಗಿ ಹೇಳುವುದಾದರೆ, ವೈರಲ್‌ ಆಗಿ ಹರಿದಾಡುತ್ತಿರುವ ಲಂಗರ್ ಫೋಟೋ ಹಳೆಯದಾಗಿದ್ದು, ಇದು ಹಿಂದೆ ಕೆನಡಾದಲ್ಲಿ ನಡೆದ ಆಹಾರ ವಿತರಣೆಯ ಚಿತ್ರವಾಗಿದೆ. ಇದಕ್ಕೂ ಉಕ್ರೇನ್‌‌ಗೂ ಯಾವುದೇ ಸಂಬಂಧವಿಲ್ಲ. ಹಾಗಾಗಿ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿರುವವಂತೆ, ಚಿತ್ರದ ಪೋಸ್ಟ್‌ನಲ್ಲಿ ಹೇಳಿರುವ ಪ್ರತಿಪಾದನೆ ತಪ್ಪಾಗಿದೆ.


ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ಪ್ಯಾಲೆಸ್ತೀನ್‌‌ನ ದಿಟ್ಟ ಬಾಲಕಿಯನ್ನು ಉಕ್ರೇನ್‌‌‌ನವರು ಎಂದು ವರದಿ ಮಾಡಿದ ಪಬ್ಲಿಕ್ ಟಿವಿ, ಸುವರ್ಣ ಟವಿ ಮತ್ತು ವಿಜಯವಾಣಿ.ನೆಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...

ನೀಟ್ ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ ಆರೋಪ; RAF ಮದ್ದುಗುಂಡುಗಳ ದಾಖಲೆ ಕೇಳಿದ ಸುಪ್ರೀಂ ಕೋರ್ಟ್

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಜಂತರ್ ಮಂತರ್‌ನಲ್ಲಿ ನಿಯೋಜಿಸಲಾಗಿದ್ದ ಕ್ಷಿಪ್ರ ಕಾರ್ಯ ಪಡೆ (RAF) ಯ ಮದ್ದುಗುಂಡುಗಳ ದಾಖಲೆಯನ್ನು ಸಂರಕ್ಷಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ (ಜುಲೈ...

ಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

ಜಾರ್ಖಂಡ್‌ನ ಖುಂತಿ ಜಿಲ್ಲೆಯ ದಟ್ಟ ಅರಣ್ಯ ಭಾಗದಲ್ಲಿ ವಾಸಿಸುವ ಮುಂಡಾ ಬುಡಕಟ್ಟು ಸಮುದಾಯದ ಒಂದು ವರ್ಗವು ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಆಧುನಿಕ...