Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್‌: ಲಂಗರ್‌‌ನ ಈ ಚಿತ್ರ ಯುದ್ದ ಪೀಡಿತ ಉಕ್ರೇನ್‌ ದೇಶದ್ದಲ್ಲ

ಫ್ಯಾಕ್ಟ್‌ಚೆಕ್‌: ಲಂಗರ್‌‌ನ ಈ ಚಿತ್ರ ಯುದ್ದ ಪೀಡಿತ ಉಕ್ರೇನ್‌ ದೇಶದ್ದಲ್ಲ

- Advertisement -
- Advertisement -

ಉಕ್ರೇನ್  ಮತ್ತು ರಷ್ಯಾ  ನಡುವೆ ನಡೆಯುತ್ತಿರುವ ಯುದ್ದದಿಂದ ಅಲ್ಲಿಯ ನಾಗರೀಕರಿಗೆ ಭಾರೀ ಸಂಕಷ್ಟ ಎದುರಾಗಿದ್ದು, ಈ ಕಷ್ಟದ ಸಮಯದಲ್ಲಿ “ಸಿಖ್ಖರು ಉಕ್ರೇನ್‌ನಲ್ಲಿ ಲಂಗರ್‌ನಲ್ಲಿ ಆಹಾರ ನೀಡುತ್ತಿದ್ದಾರೆ” ಎಂದು ಪ್ರತಿಪಾದಿಸಿ ಚಿತ್ರವೊಂದನ್ನು ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ.

ರಷ್ಯಾ ದಾಳಿಯಿಂದಾಗಿ  ಉಕ್ರೇನ್‌ನಲ್ಲಿ ಜನರು  ಮನೆ ಕಳೆದುಕೊಂಡು ಪರಿತಪ್ಪಿಸುತ್ತಿರುವ ಸಂದರ್ಭದಲ್ಲಿ ಸಿಖ್ಖರು ಅಲ್ಲಿಯ ಜನರಿಗೆ ಆಹಾರ ಒದಗಿಸುವ ಮೂಲಕ ಉಕ್ರೇನ್ ನಾಗರೀಕರ ನೆರವಿಗೆ ನಿಂತಿದೆ ಎಂದು ಹೇಳಿಕೊಳ್ಳುವ ಪೋಸ್ಟ್‌ ವೈರಲ್ ಆಗುತ್ತಿದೆ.

ಫೋಟೋವನ್ನು ಗೂಗಲ್ ರಿವರ್ಸ್ ಇಮೇಜ್ ಸರ್ಚ್ ಮೂಲಕ ಹುಡಕಾಡಿದಾಗ, ಈ ಫೋಟೋವನ್ನು ಡಿಸೆಂಬರ್ 2017 ರಲ್ಲಿ  ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಡಿರುವುದು  ಕಂಡುಬಂದಿದೆ. ಅಲ್ಲದೆ, ‘ವೀ ದಿ ಸಿಖ್ಸ್’ ತಮ್ಮ ಫೇಸ್‌ಬುಕ್ ಮತ್ತು ಟ್ವಿಟರ್ ಪ್ರೊಫೈಲ್‌ಗಳಲ್ಲಿ 06 ಆಗಸ್ಟ್ 2018 ರಂದು ಅದೇ ಚಿತ್ರವನ್ನು ಅಪ್‌ಲೋಡ್ ಮಾಡಿದೆ. “ಕೆನಡಾದ ಮೊದಲ ಉಚಿತ ಆಹಾರ ಟ್ರಕ್ – ಗುರುನಾನಕ್ ದೇವ್ ಜಿಯವರ  LANGAR – ಗುಡ್ ಬೈ ಹಂಗರ್” ಎಂದು ಬರೆದುಕೊಂಡಿದೆ.

ಇದಕ್ಕೂ ಮೊದಲು ಅಂದರೆ 2016ರಲ್ಲಿ Indian desi food ಎಂಬ ಫೇಸ್‌ಬುಕ್ ಪೇಜ್ ನಲ್ಲಿಯೂ ಇದೇ ಫೋಟೋ ಶೇರ್ ಆಗಿರುವುದನ್ನು ಇಲ್ಲಿ ಗಮನಿಸಬಹುದು.

ಈ ಫೋಟೋದಲ್ಲಿ ಕಾಣುವ ಸಿಖ್‌ ಮೊಬೈಲ್ ಕ್ಯಾಂಟೀನ್ ಹಲವು ವರ್ಷಗಳಿಂದ ಸಾಮಾಜಿಕ ಮಾಧ್ಯಮಗಳಲ್ಲಿ ಕಾಣಿಸಿಕೊಳ್ಳುತ್ತಿದೆ. ಆ ದೃಶ್ಯಗಳಲ್ಲಿ ಕೆಲವನ್ನು  ಇಲ್ಲಿ, ಇಲ್ಲಿ ಮತ್ತು ಇಲ್ಲಿ ನೋಡಬಹುದು. ಅಲ್ಲದೆ, ಟ್ರಕ್‌ನಲ್ಲಿ ‘ಸಿಖ್ ಸೇವಾ ಸೊಸೈಟಿ ಟೊರೊಂಟೊ’ ಫೋನ್ ಸಂಖ್ಯೆಯನ್ನು ಕಾಣಬಹುದು.

ಇದೆಲ್ಲದರ ನಡುವೆ ಉಕ್ರೇನ್‌ನಿಂದ ನಿರ್ಗಮಿಸುತ್ತಿರುವ ವಿದ್ಯಾರ್ಥಿಗಳಿಗೆ ರೈಲಿನಲ್ಲಿ ಸಿಖ್ಖರು ಲಂಗರ್ ನೀಡುತ್ತಿರುವ ಬಗ್ಗೆ ಇತ್ತೀಚೆಗೆ ವರದಿಯಾಗಿವೆ. ಆ ಸುದ್ದಿ ಲೇಖನಗಳನ್ನು ಇಲ್ಲಿ ಮತ್ತು ಇಲ್ಲಿ ಓದಬಹುದು.

ಒಟ್ಟಾರೆಯಾಗಿ ಹೇಳುವುದಾದರೆ, ವೈರಲ್‌ ಆಗಿ ಹರಿದಾಡುತ್ತಿರುವ ಲಂಗರ್ ಫೋಟೋ ಹಳೆಯದಾಗಿದ್ದು, ಇದು ಹಿಂದೆ ಕೆನಡಾದಲ್ಲಿ ನಡೆದ ಆಹಾರ ವಿತರಣೆಯ ಚಿತ್ರವಾಗಿದೆ. ಇದಕ್ಕೂ ಉಕ್ರೇನ್‌‌ಗೂ ಯಾವುದೇ ಸಂಬಂಧವಿಲ್ಲ. ಹಾಗಾಗಿ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿರುವವಂತೆ, ಚಿತ್ರದ ಪೋಸ್ಟ್‌ನಲ್ಲಿ ಹೇಳಿರುವ ಪ್ರತಿಪಾದನೆ ತಪ್ಪಾಗಿದೆ.


ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ಪ್ಯಾಲೆಸ್ತೀನ್‌‌ನ ದಿಟ್ಟ ಬಾಲಕಿಯನ್ನು ಉಕ್ರೇನ್‌‌‌ನವರು ಎಂದು ವರದಿ ಮಾಡಿದ ಪಬ್ಲಿಕ್ ಟಿವಿ, ಸುವರ್ಣ ಟವಿ ಮತ್ತು ವಿಜಯವಾಣಿ.ನೆಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೇರಿಕಾದಲ್ಲಿ ಅದಾನಿ ಮತ್ತು ಆಪ್ತರ ಮೇಲಿನ ಕ್ರಿಮಿನಲ್ ಕೇಸ್ ರದ್ದು: ‘ರಾಜಿ ಮಾಡಿಕೊಂಡ ಪ್ರಧಾನಿ ಭಾರತದ ಹಿತಾಸಕ್ತಿ ಮಾರಾಟ ಮಾಡಿದ್ದಾರೆ’ ಎಂದ ರಾಹುಲ್ ಗಾಂಧಿ 

ನವದೆಹಲಿ: ಅದಾನಿ ಗ್ರೂಪ್ ಅಧ್ಯಕ್ಷ ಗೌತಮ್ ಅದಾನಿ ಹಾಗೂ ಅವರ ಸೋದರಳಿಯ ಸಾಗರ್ ಅದಾನಿ ವಿರುದ್ಧದ ಪ್ರಮುಖ ಕ್ರಿಮಿನಲ್ ಆರೋಪಗಳನ್ನು ಅಮೆರಿಕದ ಫೆಡರಲ್ ನ್ಯಾಯಾಧೀಶರು ಶಾಶ್ವತವಾಗಿ ವಜಾಗೊಳಿಸಿದ ಬೆನ್ನಲ್ಲೇ, ವಿಪಕ್ಷ ನಾಯಕ ರಾಹುಲ್...

ಕರ್ನಾಟಕ SIR | ‘ಲಾಜಿಕಲ್ ಡಿಸ್ಕ್ರಿಪೆನ್ಸಿ’ ಬಗ್ಗೆ ತುಟಿ ಬಿಚ್ಚದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಭರದಿಂದ ಸಾಗುತ್ತಿದೆ. ಆಗಸ್ಟ್ 7ರಂದು ಚುನಾವಣಾ ಆಯೋಗ ಹೊರಡಿಸಿದ ಪ್ರಕಟಣೆಯ ಪ್ರಕಾರ, ಗಣತಿ ನಮೂನೆ ಅಥವಾ ಎನ್ಯುಮರೇಶನ್ ಫಾರಂ ಸಲ್ಲಿಕೆ ದಿನಾಂಕ ಆಗಸ್ಟ್...

‘ಆಹಾರ ಸುರಕ್ಷತೆ – ಔಷಧ ಆಡಳಿತ ಇಲಾಖೆ’ಯಿಂದ ಹೋಟೆಲ್‌ಗಳಿಗೆ ಕಟ್ಟುನಿಟ್ಟಿನ ನಿಯಮ ಜಾರಿ; ಹೊಸ ಮಾರ್ಗಸೂಚಿ ಪ್ರಕಟ

ರಾಜ್ಯದ ಹೋಟೆಲ್‌ಗಳು, ಡಾಬಾಗಳು ಹಾಗೂ ಆಹಾರ ಸೇವಾ ಸಂಸ್ಥೆಗಳು ಪಾಲಿಸಬೇಕಾದ 'ಆಹಾರ ಸುರಕ್ಷತಾ ಮತ್ತು ನೈರ್ಮಲ್ಯ ನಿಯಮಗಳ'ನ್ನು 'ಆಹಾರ ಸುರಕ್ಷತೆ ಇಲಾಖೆ ಮತ್ತು ಔಷಧ ಆಡಳಿತ ಇಲಾಖೆ' ಆಯುಕ್ತರು ಪ್ರಕಟಿಸಿದ್ದಾರೆ. ಕಳೆದ ಮೂರ್ನಾಲ್ಕು...

ಕರ್ನಾಟಕದಲ್ಲಿ ಗುಟ್ಕಾ, ಪಾನ್ ಮಸಾಲಾ ಉತ್ಪಾದನೆ ಮತ್ತು ಮಾರಾಟ 1 ವರ್ಷ ನಿಷೇಧ: ರಾಜ್ಯ ಸರ್ಕಾರದ ಮಹತ್ವದ ಆದೇಶ

ಬೆಂಗಳೂರು: ಸಾರ್ವಜನಿಕ ಆರೋಗ್ಯ ಮತ್ತು ಸಮಾಜದ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಕರ್ನಾಟಕ ಸರ್ಕಾರವು ರಾಜ್ಯಾದ್ಯಂತ ತಂಬಾಕು ಹಾಗೂ ನಿಕೋಟಿನ್ ಅಂಶ ಹೊಂದಿರುವ ಗುಟ್ಕಾ, ಪಾನ್ ಮಸಾಲಾ ಸೇರಿದಂತೆ ಇತರ ಅಪಾಯಕಾರಿ ಉತ್ಪನ್ನಗಳ ಮೇಲೆ ಸಂಪೂರ್ಣ...

ಲೋಕಸಭೆ ಬಲ 543 ರಲ್ಲೇ ಶಾಶ್ವತವಾಗಿ ಮುಂದುವರಿಸಲು ಕೇಂದ್ರಕ್ಕೆ ಆಗ್ರಹ: ತಮಿಳುನಾಡು ವಿಧಾನಸಭೆಯಲ್ಲಿ ಸಿಎಂ ಸಿ. ಜೋಸೆಫ್ ವಿಜಯ್ ನಿರ್ಣಯ ಮಂಡನೆ

ಚೆನ್ನೈ: ಕೇಂದ್ರ ಸರ್ಕಾರವು ಲೋಕಸಭೆಯ ಒಟ್ಟು ಸ್ಥಾನಗಳ ಬಲವನ್ನು ಪ್ರಸ್ತುತ ಇರುವ 543 ರಲ್ಲೇ ಶಾಶ್ವತವಾಗಿ ಕಾಯ್ದುಕೊಳ್ಳಬೇಕು ಮತ್ತು ರಾಜ್ಯಗಳ ನಡುವಿನ ಪ್ರಾತಿನಿಧ್ಯದ ಅನುಪಾತವನ್ನು ಬದಲಾಯಿಸಬಾರದು ಎಂದು ಒತ್ತಾಯಿಸಿ ತಮಿಳುನಾಡು ಮುಖ್ಯಮಂತ್ರಿ ಸಿ....

ಯುಪಿಯಲ್ಲಿ ಅಮಾನವೀಯ ಘಟನೆ: ಮೊಬೈಲ್ ಕದ್ದ ಆರೋಪ ಹೊರಿಸಿ ಒಬಿಸಿ ಯುವಕನ ತಲೆ ಬೋಳಿಸಿ ಮೆರವಣಿಗೆ; ಮೇಲ್ಜಾತಿಯ ತಂದೆ-ಮಗನ ಬಂಧನ

ಉನ್ನಾವೋ: ಉತ್ತರ ಪ್ರದೇಶದಲ್ಲಿ ಇದುವರೆಗೆ ದಲಿತ ಸಮುದಾಯಗಳ ಮೇಲೆ ವ್ಯಾಪಕವಾಗಿ ನಡೆಯುತ್ತಿದ್ದ ಜಾತಿ ಆಧಾರಿತ ದೌರ್ಜನ್ಯ ಮತ್ತು ಸಾರ್ವಜನಿಕ ಅವಮಾನದಂತಹ ಅಮಾನವೀಯ ಕೃತ್ಯಗಳು, ಈಗ ಇತರ ಹಿಂದುಳಿದ ವರ್ಗಗಳ (ಒಬಿಸಿ) ಜನರ ಮೇಲೆಯೂ...

SIR 3ನೇ ಹಂತ: 12 ರಾಜ್ಯಗಳು-ಕೇಂದ್ರಾಡಳಿತ ಪ್ರದೇಶಗಳ 1.58 ಕೋಟಿ ಮತದಾರರ ಹೆಸರು ಕರಡು ಪಟ್ಟಿಯಿಂದ ಡಿಲೀಟ್

ಚುನಾವಣಾ ಆಯೋಗದ ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಮೂರನೇ ಹಂತದಲ್ಲಿ ಅಸ್ತಿತ್ವದಲ್ಲಿರುವ ಮತದಾರರ ಪಟ್ಟಿಯಿಂದ ಸುಮಾರು 1.58 ಕೋಟಿ ಹೆಸರುಗಳನ್ನು ಅಳಿಸಲಾಗಿದೆ. ಪ್ರಸ್ತುತ ನಡೆಯುತ್ತಿರುವ 3ನೇ ಹಂತದ ವ್ಯಾಪ್ತಿಗೆ ಒಳಪಡುವ 16 ರಾಜ್ಯಗಳಲ್ಲಿ...

ಪ. ಬಂಗಾಳ ಎಸ್‌ಐಆರ್ | ಮೇಲ್ಮನವಿ ನ್ಯಾಯಮಂಡಳಿಗಳಿಗೆ ಕಾಲಮಿತಿ ನಿಗದಿಪಡಿಸಲು ಸಾಧ್ಯವಿಲ್ಲ ಎಂದ ಸುಪ್ರೀಂ ಕೋರ್ಟ್

ಪಶ್ಚಿಮ ಬಂಗಾಳದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಮೇಲ್ಮನವಿಗಳ ವಿಚಾರಣೆ ನಡೆಸುತ್ತಿರುವ ಮೇಲ್ಮನವಿ ನ್ಯಾಯಾಧಿಕರಣಗಳ ನಿರ್ಧಾರಗಳಿಗೆ ಯಾವುದೇ ನಿರ್ದಿಷ್ಟ ಸಮಯದ ಮಿತಿಯನ್ನು ನಿಗದಿಪಡಿಸಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್...

‘ಎಸ್‌ಐಆರ್‌’ನಿಂದ ಹೆಸರು ಡಿಲೀಟ್‌ ಆದವರಿಗೆ ‘ಹೊಸ ಮತದಾರರ ನೋಂದಣಿ’ ಯಾಕೆ?

ಅಂತಿಮ ಮತದಾರರ ಪಟ್ಟಿಯಲ್ಲಿ ಹೆಸರು ಕಾಣೆಯಾಗಿದ್ದರೆ ನಮೂನೆ ಸಂಖ್ಯೆ 6 ಅನ್ನು (Form No. 6) ಸಲ್ಲಿಸಿ ಎಂದು ಜುಲೈ 22 ರಂದು ಮಂಗಳೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಕರ್ನಾಟಕ ರಾಜ್ಯ ಮುಖ್ಯ ಚುನಾವಣಾ...

ನೀಟ್ ವಿರುದ್ಧ ನಿರ್ಣಯ ಅಂಗೀಕರಿಸಿದ ತಮಿಳುನಾಡು ವಿಧಾನಸಭೆ : ಸಭಾತ್ಯಾಗ ಮಾಡಿದ ಬಿಜೆಪಿಯ ಏಕೈಕ ಶಾಸಕ

ತಮಿಳುನಾಡು ವಿಧಾನಸಭೆಯು ಮಂಗಳವಾರ (ಆ.11) ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕಾಗಿ ನಡೆಸಲಾಗುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯನ್ನು (ನೀಟ್) ರದ್ದುಗೊಳಿಸುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸುವ ನಿರ್ಣಯವನ್ನು ಸರ್ವಾನುಮತದಿಂದ ಅಂಗೀಕರಿಸಿದೆ. ಪರೀಕ್ಷೆಗಳನ್ನು ನಡೆಸುವಲ್ಲಿ ಪದೇ ಪದೇ...