Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌‌ಚೆಕ್‌‌: ’ಇಸ್ಲಾಂ ಜಿಂದಾಬಾದ್’ ಎಂದು ಕೂಗಿದ ಈ ರ್‍ಯಾಲಿ ಕೊಲ್ಕತ್ತಾದ್ದಲ್ಲ, ಬಾಂಗ್ಲಾದೇಶದ್ದು

ಫ್ಯಾಕ್ಟ್‌‌ಚೆಕ್‌‌: ’ಇಸ್ಲಾಂ ಜಿಂದಾಬಾದ್’ ಎಂದು ಕೂಗಿದ ಈ ರ್‍ಯಾಲಿ ಕೊಲ್ಕತ್ತಾದ್ದಲ್ಲ, ಬಾಂಗ್ಲಾದೇಶದ್ದು

ಸರಣಿ ನಕಲಿ ಸುದ್ದಿಯ ಅಪರಾಧಿಯಾಗಿರುವ ಕೆನಡಾದ ಪತ್ರಕರ್ತ ತಾರೆಕ್ ಫತಾಹ್ ತಮ್ಮ ಟ್ವಿಟ್ಟರ್‌ ಖಾತೆಯಲ್ಲಿ ಇದನ್ನು ಪ್ರಕಟಿಸಿದ್ದರು.

- Advertisement -
- Advertisement -

ತಲೆಗೆ ಸ್ಕಲ್ ಟೋಪಿ ಮತ್ತು ‘ಸ್ಟಾಪ್ ಕಿಲ್ಲಿಂಗ್ ರೋಹಿಂಗ್ಯಾ ಮುಸ್ಲಿಂ’ ಎಂಬ ಫಲಕಗಳನ್ನು ಹಿಡಿದು ಪ್ರತಿಭಟನಾ ರ್‍ಯಾಲಿ ನಡೆಸುತ್ತಿರುವ ಜನರ ವಿಡಿಯೋವನ್ನು ಸರಣಿ ನಕಲಿ ಸುದ್ದಿಯ ಅಪರಾಧಿಯಾಗಿರುವ ಕೆನಡಾದ ಪತ್ರಕರ್ತ ತಾರೆಕ್ ಫತಾಹ್ ತಮ್ಮ ಟ್ವಿಟ್ಟರ್‌ ಖಾತೆಯಲ್ಲಿ ’ಕೋಲ್ಕತ್ತಾದಲ್ಲಿ ‘ಇಸ್ಲಾಂ ಜಿಂದಾಬಾದ್’ಗೆ ಘೋಷಣೆ ಕೂಗಿದ್ದಾರೆ ಎಂದು ಬರೆದಿದ್ದಾರೆ.

ತಾರೆಖ್ ಫತಾಹ್ ತಮ್ಮ ಟ್ವೀಟ್‌ನಲ್ಲಿ “ಇದು ಕರಾಚಿ, ಕಾಶ್ಮೀರ ಅಥವಾ ಕೇರಳ ಅಲ್ಲ. “ಇಸ್ಲಾಂ ಜಿಂದಾಬಾದ್” ನ ಈ ಘೋಷಣೆ ಕೋಲ್ಕತ್ತಾದಲ್ಲಿ, ಮಮತಾ ಬಾನರ್ಜಿ ಆಳ್ವಿಕೆಯ ವೆಸ್ಟ್ ಬೆಂಗಾಲ್‌ನ ರಾಜಧಾನಿಯಲ್ಲಿ” ಎಂದು ಬರೆದಿದ್ದಾರೆ.

ಇದರ ಆರ್ಕೈವ್ ಇಲ್ಲಿದೆ.

ಈ ಪೋಸ್ಟ್ ಅನ್ನು ಹಲವಾರು ಸಾಮಾಜಿಕ ಜಾಲತಾಣದ ಬಳಕೆದಾರರು ಹಂಚಿಕೊಂಡಿದ್ದಾರೆ.

ಇದರ ಆಕೈವ್ ಇಲ್ಲಿದೆ.
ಇದರ ಆರ್ಕೈವ್ ಇಲ್ಲಿದೆ

ಫ್ಯಾಕ್ಟ್‌‌ಚೆಕ್‌

ಈ ವೀಡಿಯೊವು ಸೆಪ್ಟೆಂಬರ್ 2017 ರದ್ದಾಗಿದ್ದು ಬಾಂಗ್ಲಾದೇಶದ್ದಾಗಿದೆ. ಅಲ್ಲಿನ ಇಸ್ಲಾಮಿಕ್ ಸಂಘಟನೆಯು ಮ್ಯಾನ್ಮಾರ್ ರಾಯಭಾರ ಕಚೇರಿಯತ್ತ ಪ್ರತಿಭಟನಾ ಮೆರವಣಿಗೆ ನಡೆಸಿದ ವಿಡಿಯೋವಾಗಿದೆ.

ಇದನ್ನೂ ಓದಿ: ಮಹಾರಾಷ್ಟ್ರದಲ್ಲಿ ಬಕ್ರೀದ್‌ಗೆ ತಂದ ಆಡುಗಳನ್ನು ಲೂಟಿ ಮಾಡಿದ್ದು ನಿಜವೆ?

ವೀಡಿಯೊದ ಪ್ರಮುಖ ಫ್ರೇಮ್‌ಗಳ ರಿವರ್ಸ್ ಇಮೇಜ್ ಮೂಲಕ ಹುಡುಕಾಡಿದಾಗ, ‘ಸ್ಪೈಸಿ ಇನ್ಫೋಟ್ಯೂಬ್’ ಎಂಬ ಯೂಟ್ಯೂಬ್ ಚಾನೆಲ್ 13 ಸೆಪ್ಟೆಂಬರ್ 2017 ರಂದು ವೀಡಿಯೊವನ್ನು ಅಪ್‌ಲೋಡ್ ಮಾಡಿದ್ದು, “ಇಸ್ಲಾಮಿ ಆಂದೋಲನ್ ಬಾಂಗ್ಲಾದೇಶವು ಮ್ಯಾನ್ಮಾರ್ ರಾಯಭಾರ ಕಚೇರಿಯನ್ನು ಸುತ್ತುವರೆದಿದೆ” ಎಂದು ಬರೆದಿದೆ.

ಇದರ ನಂತರ ಕೆಲವು ಕೀವರ್ಡ್ ಮೂಲಕ ಇನ್ನಷ್ಟು ಹುಡುಕಾಡಿದಾಗ 13 ಸೆಪ್ಟೆಂಬರ್ 2017 ರ ದಿನಾಂಕದ “ರೋಹಿಂಗ್ಯಾಗಳ ಮೇಲಿನ ಕಿರುಕುಳವನ್ನು ವಿರೋಧಿಸಿ ಇಸ್ಲಾಮಿಕ್ ಚಳವಳಿಯ ರ್‍ಯಾಲಿ” ಎಂಬ ಸುದ್ದಿಯನ್ನು ಆನ್‌ಲೈನ್ ಸುದ್ದಿ ಸಂಸ್ಥೆಯಾದ ಬಾಂಗ್ಲೇನ್ಯೂಸ್ 24 ರ ವರದಿ ಮಾಡಿತ್ತು.

ರೋಹಿಂಗ್ಯಾ ಮುಸ್ಲಿಮರ ಚಿತ್ರಹಿಂಸೆ ಮತ್ತು ಹತ್ಯೆಯನ್ನು ಪ್ರತಿಭಟಿಸಲು ಇಸ್ಲಾಮಿಕ್ ರಾಜಕೀಯ ಸಂಘಟನೆಯಾದ ಇಸ್ಲಾಮಿ ಆಂದೋಲನ್ ಬಾಂಗ್ಲಾದೇಶ (ಐಎಬಿ) ಮ್ಯಾನ್ಮಾರ್ ರಾಯಭಾರ ಕಚೇರಿಗೆ ರ್‍ಯಾಲಿಯನ್ನು ನಡೆಸಿತು ಎಂದು ಅದು ಹೇಳಿದೆ.

ಅಷ್ಟೇ ಅಲ್ಲದೆ ಐಎಬಿಯ ವಿದ್ಯಾರ್ಥಿ ಘಟಕವಾದ ಐಎಸ್ಸಿಎಯ ಯೂಟ್ಯೂಬ್ ಚಾನೆಲ್‌ನಲ್ಲಿ ಈ ಮೆರವಣಿಗೆಯ ವೀಡಿಯೊವನ್ನು ಕಾಣಬಹುದಾಗಿದೆ.

ಐಎಬಿ ತಮ್ಮ ಫೇಸ್‌ಬುಕ್ ಪುಟದಲ್ಲಿ ರ್‍ಯಾಲಿಯನ್ನು ಘೋಷಿಸಿ, “ಸೆಪ್ಟೆಂಬರ್ 13 ರಂದು ಢಾಕಾದಲ್ಲಿರುವ ಮ್ಯಾನ್ಮಾರ್ ರಾಯಭಾರ ಕಚೇರಿಯನ್ನು ಸುತ್ತುವರಿಯುವಂತೆ” ಜನರಿಗೆ ಕರೆ ನೀಡಿತ್ತು.

ಇದಲ್ಲದೆ, ವೀಡಿಯೊದ ದೃಶ್ಯದಲ್ಲಿರುವ ಇತರ ಸುಳಿವುಗಳು ಇದು ಬಾಂಗ್ಲಾದೇಶದ್ದೇ ಹೊರತು ಭಾರತದ್ದಲ್ಲ ಎಂಬುದನ್ನು ಸಾಬೀತುಪಡಿಸುತ್ತದೆ. ವಿಡಿಯೋದಲ್ಲಿ ಹಸಿರು ಹಿನ್ನೆಲೆಯ ಮಧ್ಯದಲ್ಲಿ ಕೆಂಪು ಚುಕ್ಕೆ ಹೊಂದಿರುವ ಬಾಂಗ್ಲಾದೇಶದ ಧ್ವಜವನ್ನು ವೀಡಿಯೊದ ಸ್ಟಿಲ್ ಶಾಟ್‌ನಲ್ಲಿ ಕಾಣಬಹುದು.

ಅಷ್ಟೇ ಅಲ್ಲದೆ ಪೊಲೀಸ್ ಅಧಿಕಾರಿಗಳು ಬಾಂಗ್ಲಾದೇಶದ ಪೊಲೀಸ್ ಸಮವಸ್ತ್ರಕ್ಕೆ ಹೋಲುವ ಸಮವಸ್ತ್ರವನ್ನು ಧರಿಸಿರುವುದನ್ನು ಸಹ ಕಾಣಬಹುದು.

ಈ ಮೂಲಕ ಸ್ಪಷ್ಟವಾಗಿ, ಬಾಂಗ್ಲಾದೇಶದ ಪ್ರತಿಭಟನೆಯನ್ನು ಪಶ್ಚಿಮ ಬಂಗಾಳದ ಕೋಲ್ಕತ್ತಾದಲ್ಲಿ ನಡೆದ ರ್‍ಯಾಲಿಯಾಗಿ ತಪ್ಪಾಗಿ ಹಂಚಿಕೊಳ್ಳಲಾಗಿದೆ.


ಓದಿ: ಕೊರೊನಾ ನೆಪದಲ್ಲಿ ಈ ವೈದ್ಯ ಕಿಡ್ನಿ ಕದಿಯುತ್ತಿದ್ದರೆ? ಏನಿದು ಪ್ರಕರಣ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...