Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌‌ಚೆಕ್‌‌: ’ಇಸ್ಲಾಂ ಜಿಂದಾಬಾದ್’ ಎಂದು ಕೂಗಿದ ಈ ರ್‍ಯಾಲಿ ಕೊಲ್ಕತ್ತಾದ್ದಲ್ಲ, ಬಾಂಗ್ಲಾದೇಶದ್ದು

ಫ್ಯಾಕ್ಟ್‌‌ಚೆಕ್‌‌: ’ಇಸ್ಲಾಂ ಜಿಂದಾಬಾದ್’ ಎಂದು ಕೂಗಿದ ಈ ರ್‍ಯಾಲಿ ಕೊಲ್ಕತ್ತಾದ್ದಲ್ಲ, ಬಾಂಗ್ಲಾದೇಶದ್ದು

ಸರಣಿ ನಕಲಿ ಸುದ್ದಿಯ ಅಪರಾಧಿಯಾಗಿರುವ ಕೆನಡಾದ ಪತ್ರಕರ್ತ ತಾರೆಕ್ ಫತಾಹ್ ತಮ್ಮ ಟ್ವಿಟ್ಟರ್‌ ಖಾತೆಯಲ್ಲಿ ಇದನ್ನು ಪ್ರಕಟಿಸಿದ್ದರು.

- Advertisement -
- Advertisement -

ತಲೆಗೆ ಸ್ಕಲ್ ಟೋಪಿ ಮತ್ತು ‘ಸ್ಟಾಪ್ ಕಿಲ್ಲಿಂಗ್ ರೋಹಿಂಗ್ಯಾ ಮುಸ್ಲಿಂ’ ಎಂಬ ಫಲಕಗಳನ್ನು ಹಿಡಿದು ಪ್ರತಿಭಟನಾ ರ್‍ಯಾಲಿ ನಡೆಸುತ್ತಿರುವ ಜನರ ವಿಡಿಯೋವನ್ನು ಸರಣಿ ನಕಲಿ ಸುದ್ದಿಯ ಅಪರಾಧಿಯಾಗಿರುವ ಕೆನಡಾದ ಪತ್ರಕರ್ತ ತಾರೆಕ್ ಫತಾಹ್ ತಮ್ಮ ಟ್ವಿಟ್ಟರ್‌ ಖಾತೆಯಲ್ಲಿ ’ಕೋಲ್ಕತ್ತಾದಲ್ಲಿ ‘ಇಸ್ಲಾಂ ಜಿಂದಾಬಾದ್’ಗೆ ಘೋಷಣೆ ಕೂಗಿದ್ದಾರೆ ಎಂದು ಬರೆದಿದ್ದಾರೆ.

ತಾರೆಖ್ ಫತಾಹ್ ತಮ್ಮ ಟ್ವೀಟ್‌ನಲ್ಲಿ “ಇದು ಕರಾಚಿ, ಕಾಶ್ಮೀರ ಅಥವಾ ಕೇರಳ ಅಲ್ಲ. “ಇಸ್ಲಾಂ ಜಿಂದಾಬಾದ್” ನ ಈ ಘೋಷಣೆ ಕೋಲ್ಕತ್ತಾದಲ್ಲಿ, ಮಮತಾ ಬಾನರ್ಜಿ ಆಳ್ವಿಕೆಯ ವೆಸ್ಟ್ ಬೆಂಗಾಲ್‌ನ ರಾಜಧಾನಿಯಲ್ಲಿ” ಎಂದು ಬರೆದಿದ್ದಾರೆ.

ಇದರ ಆರ್ಕೈವ್ ಇಲ್ಲಿದೆ.

ಈ ಪೋಸ್ಟ್ ಅನ್ನು ಹಲವಾರು ಸಾಮಾಜಿಕ ಜಾಲತಾಣದ ಬಳಕೆದಾರರು ಹಂಚಿಕೊಂಡಿದ್ದಾರೆ.

ಇದರ ಆಕೈವ್ ಇಲ್ಲಿದೆ.
ಇದರ ಆರ್ಕೈವ್ ಇಲ್ಲಿದೆ

ಫ್ಯಾಕ್ಟ್‌‌ಚೆಕ್‌

ಈ ವೀಡಿಯೊವು ಸೆಪ್ಟೆಂಬರ್ 2017 ರದ್ದಾಗಿದ್ದು ಬಾಂಗ್ಲಾದೇಶದ್ದಾಗಿದೆ. ಅಲ್ಲಿನ ಇಸ್ಲಾಮಿಕ್ ಸಂಘಟನೆಯು ಮ್ಯಾನ್ಮಾರ್ ರಾಯಭಾರ ಕಚೇರಿಯತ್ತ ಪ್ರತಿಭಟನಾ ಮೆರವಣಿಗೆ ನಡೆಸಿದ ವಿಡಿಯೋವಾಗಿದೆ.

ಇದನ್ನೂ ಓದಿ: ಮಹಾರಾಷ್ಟ್ರದಲ್ಲಿ ಬಕ್ರೀದ್‌ಗೆ ತಂದ ಆಡುಗಳನ್ನು ಲೂಟಿ ಮಾಡಿದ್ದು ನಿಜವೆ?

ವೀಡಿಯೊದ ಪ್ರಮುಖ ಫ್ರೇಮ್‌ಗಳ ರಿವರ್ಸ್ ಇಮೇಜ್ ಮೂಲಕ ಹುಡುಕಾಡಿದಾಗ, ‘ಸ್ಪೈಸಿ ಇನ್ಫೋಟ್ಯೂಬ್’ ಎಂಬ ಯೂಟ್ಯೂಬ್ ಚಾನೆಲ್ 13 ಸೆಪ್ಟೆಂಬರ್ 2017 ರಂದು ವೀಡಿಯೊವನ್ನು ಅಪ್‌ಲೋಡ್ ಮಾಡಿದ್ದು, “ಇಸ್ಲಾಮಿ ಆಂದೋಲನ್ ಬಾಂಗ್ಲಾದೇಶವು ಮ್ಯಾನ್ಮಾರ್ ರಾಯಭಾರ ಕಚೇರಿಯನ್ನು ಸುತ್ತುವರೆದಿದೆ” ಎಂದು ಬರೆದಿದೆ.

ಇದರ ನಂತರ ಕೆಲವು ಕೀವರ್ಡ್ ಮೂಲಕ ಇನ್ನಷ್ಟು ಹುಡುಕಾಡಿದಾಗ 13 ಸೆಪ್ಟೆಂಬರ್ 2017 ರ ದಿನಾಂಕದ “ರೋಹಿಂಗ್ಯಾಗಳ ಮೇಲಿನ ಕಿರುಕುಳವನ್ನು ವಿರೋಧಿಸಿ ಇಸ್ಲಾಮಿಕ್ ಚಳವಳಿಯ ರ್‍ಯಾಲಿ” ಎಂಬ ಸುದ್ದಿಯನ್ನು ಆನ್‌ಲೈನ್ ಸುದ್ದಿ ಸಂಸ್ಥೆಯಾದ ಬಾಂಗ್ಲೇನ್ಯೂಸ್ 24 ರ ವರದಿ ಮಾಡಿತ್ತು.

ರೋಹಿಂಗ್ಯಾ ಮುಸ್ಲಿಮರ ಚಿತ್ರಹಿಂಸೆ ಮತ್ತು ಹತ್ಯೆಯನ್ನು ಪ್ರತಿಭಟಿಸಲು ಇಸ್ಲಾಮಿಕ್ ರಾಜಕೀಯ ಸಂಘಟನೆಯಾದ ಇಸ್ಲಾಮಿ ಆಂದೋಲನ್ ಬಾಂಗ್ಲಾದೇಶ (ಐಎಬಿ) ಮ್ಯಾನ್ಮಾರ್ ರಾಯಭಾರ ಕಚೇರಿಗೆ ರ್‍ಯಾಲಿಯನ್ನು ನಡೆಸಿತು ಎಂದು ಅದು ಹೇಳಿದೆ.

ಅಷ್ಟೇ ಅಲ್ಲದೆ ಐಎಬಿಯ ವಿದ್ಯಾರ್ಥಿ ಘಟಕವಾದ ಐಎಸ್ಸಿಎಯ ಯೂಟ್ಯೂಬ್ ಚಾನೆಲ್‌ನಲ್ಲಿ ಈ ಮೆರವಣಿಗೆಯ ವೀಡಿಯೊವನ್ನು ಕಾಣಬಹುದಾಗಿದೆ.

ಐಎಬಿ ತಮ್ಮ ಫೇಸ್‌ಬುಕ್ ಪುಟದಲ್ಲಿ ರ್‍ಯಾಲಿಯನ್ನು ಘೋಷಿಸಿ, “ಸೆಪ್ಟೆಂಬರ್ 13 ರಂದು ಢಾಕಾದಲ್ಲಿರುವ ಮ್ಯಾನ್ಮಾರ್ ರಾಯಭಾರ ಕಚೇರಿಯನ್ನು ಸುತ್ತುವರಿಯುವಂತೆ” ಜನರಿಗೆ ಕರೆ ನೀಡಿತ್ತು.

ಇದಲ್ಲದೆ, ವೀಡಿಯೊದ ದೃಶ್ಯದಲ್ಲಿರುವ ಇತರ ಸುಳಿವುಗಳು ಇದು ಬಾಂಗ್ಲಾದೇಶದ್ದೇ ಹೊರತು ಭಾರತದ್ದಲ್ಲ ಎಂಬುದನ್ನು ಸಾಬೀತುಪಡಿಸುತ್ತದೆ. ವಿಡಿಯೋದಲ್ಲಿ ಹಸಿರು ಹಿನ್ನೆಲೆಯ ಮಧ್ಯದಲ್ಲಿ ಕೆಂಪು ಚುಕ್ಕೆ ಹೊಂದಿರುವ ಬಾಂಗ್ಲಾದೇಶದ ಧ್ವಜವನ್ನು ವೀಡಿಯೊದ ಸ್ಟಿಲ್ ಶಾಟ್‌ನಲ್ಲಿ ಕಾಣಬಹುದು.

ಅಷ್ಟೇ ಅಲ್ಲದೆ ಪೊಲೀಸ್ ಅಧಿಕಾರಿಗಳು ಬಾಂಗ್ಲಾದೇಶದ ಪೊಲೀಸ್ ಸಮವಸ್ತ್ರಕ್ಕೆ ಹೋಲುವ ಸಮವಸ್ತ್ರವನ್ನು ಧರಿಸಿರುವುದನ್ನು ಸಹ ಕಾಣಬಹುದು.

ಈ ಮೂಲಕ ಸ್ಪಷ್ಟವಾಗಿ, ಬಾಂಗ್ಲಾದೇಶದ ಪ್ರತಿಭಟನೆಯನ್ನು ಪಶ್ಚಿಮ ಬಂಗಾಳದ ಕೋಲ್ಕತ್ತಾದಲ್ಲಿ ನಡೆದ ರ್‍ಯಾಲಿಯಾಗಿ ತಪ್ಪಾಗಿ ಹಂಚಿಕೊಳ್ಳಲಾಗಿದೆ.


ಓದಿ: ಕೊರೊನಾ ನೆಪದಲ್ಲಿ ಈ ವೈದ್ಯ ಕಿಡ್ನಿ ಕದಿಯುತ್ತಿದ್ದರೆ? ಏನಿದು ಪ್ರಕರಣ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...