Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌‌ಚೆಕ್‌‌: ’ಇಸ್ಲಾಂ ಜಿಂದಾಬಾದ್’ ಎಂದು ಕೂಗಿದ ಈ ರ್‍ಯಾಲಿ ಕೊಲ್ಕತ್ತಾದ್ದಲ್ಲ, ಬಾಂಗ್ಲಾದೇಶದ್ದು

ಫ್ಯಾಕ್ಟ್‌‌ಚೆಕ್‌‌: ’ಇಸ್ಲಾಂ ಜಿಂದಾಬಾದ್’ ಎಂದು ಕೂಗಿದ ಈ ರ್‍ಯಾಲಿ ಕೊಲ್ಕತ್ತಾದ್ದಲ್ಲ, ಬಾಂಗ್ಲಾದೇಶದ್ದು

ಸರಣಿ ನಕಲಿ ಸುದ್ದಿಯ ಅಪರಾಧಿಯಾಗಿರುವ ಕೆನಡಾದ ಪತ್ರಕರ್ತ ತಾರೆಕ್ ಫತಾಹ್ ತಮ್ಮ ಟ್ವಿಟ್ಟರ್‌ ಖಾತೆಯಲ್ಲಿ ಇದನ್ನು ಪ್ರಕಟಿಸಿದ್ದರು.

- Advertisement -
- Advertisement -

ತಲೆಗೆ ಸ್ಕಲ್ ಟೋಪಿ ಮತ್ತು ‘ಸ್ಟಾಪ್ ಕಿಲ್ಲಿಂಗ್ ರೋಹಿಂಗ್ಯಾ ಮುಸ್ಲಿಂ’ ಎಂಬ ಫಲಕಗಳನ್ನು ಹಿಡಿದು ಪ್ರತಿಭಟನಾ ರ್‍ಯಾಲಿ ನಡೆಸುತ್ತಿರುವ ಜನರ ವಿಡಿಯೋವನ್ನು ಸರಣಿ ನಕಲಿ ಸುದ್ದಿಯ ಅಪರಾಧಿಯಾಗಿರುವ ಕೆನಡಾದ ಪತ್ರಕರ್ತ ತಾರೆಕ್ ಫತಾಹ್ ತಮ್ಮ ಟ್ವಿಟ್ಟರ್‌ ಖಾತೆಯಲ್ಲಿ ’ಕೋಲ್ಕತ್ತಾದಲ್ಲಿ ‘ಇಸ್ಲಾಂ ಜಿಂದಾಬಾದ್’ಗೆ ಘೋಷಣೆ ಕೂಗಿದ್ದಾರೆ ಎಂದು ಬರೆದಿದ್ದಾರೆ.

ತಾರೆಖ್ ಫತಾಹ್ ತಮ್ಮ ಟ್ವೀಟ್‌ನಲ್ಲಿ “ಇದು ಕರಾಚಿ, ಕಾಶ್ಮೀರ ಅಥವಾ ಕೇರಳ ಅಲ್ಲ. “ಇಸ್ಲಾಂ ಜಿಂದಾಬಾದ್” ನ ಈ ಘೋಷಣೆ ಕೋಲ್ಕತ್ತಾದಲ್ಲಿ, ಮಮತಾ ಬಾನರ್ಜಿ ಆಳ್ವಿಕೆಯ ವೆಸ್ಟ್ ಬೆಂಗಾಲ್‌ನ ರಾಜಧಾನಿಯಲ್ಲಿ” ಎಂದು ಬರೆದಿದ್ದಾರೆ.

ಇದರ ಆರ್ಕೈವ್ ಇಲ್ಲಿದೆ.

ಈ ಪೋಸ್ಟ್ ಅನ್ನು ಹಲವಾರು ಸಾಮಾಜಿಕ ಜಾಲತಾಣದ ಬಳಕೆದಾರರು ಹಂಚಿಕೊಂಡಿದ್ದಾರೆ.

ಇದರ ಆಕೈವ್ ಇಲ್ಲಿದೆ.
ಇದರ ಆರ್ಕೈವ್ ಇಲ್ಲಿದೆ

ಫ್ಯಾಕ್ಟ್‌‌ಚೆಕ್‌

ಈ ವೀಡಿಯೊವು ಸೆಪ್ಟೆಂಬರ್ 2017 ರದ್ದಾಗಿದ್ದು ಬಾಂಗ್ಲಾದೇಶದ್ದಾಗಿದೆ. ಅಲ್ಲಿನ ಇಸ್ಲಾಮಿಕ್ ಸಂಘಟನೆಯು ಮ್ಯಾನ್ಮಾರ್ ರಾಯಭಾರ ಕಚೇರಿಯತ್ತ ಪ್ರತಿಭಟನಾ ಮೆರವಣಿಗೆ ನಡೆಸಿದ ವಿಡಿಯೋವಾಗಿದೆ.

ಇದನ್ನೂ ಓದಿ: ಮಹಾರಾಷ್ಟ್ರದಲ್ಲಿ ಬಕ್ರೀದ್‌ಗೆ ತಂದ ಆಡುಗಳನ್ನು ಲೂಟಿ ಮಾಡಿದ್ದು ನಿಜವೆ?

ವೀಡಿಯೊದ ಪ್ರಮುಖ ಫ್ರೇಮ್‌ಗಳ ರಿವರ್ಸ್ ಇಮೇಜ್ ಮೂಲಕ ಹುಡುಕಾಡಿದಾಗ, ‘ಸ್ಪೈಸಿ ಇನ್ಫೋಟ್ಯೂಬ್’ ಎಂಬ ಯೂಟ್ಯೂಬ್ ಚಾನೆಲ್ 13 ಸೆಪ್ಟೆಂಬರ್ 2017 ರಂದು ವೀಡಿಯೊವನ್ನು ಅಪ್‌ಲೋಡ್ ಮಾಡಿದ್ದು, “ಇಸ್ಲಾಮಿ ಆಂದೋಲನ್ ಬಾಂಗ್ಲಾದೇಶವು ಮ್ಯಾನ್ಮಾರ್ ರಾಯಭಾರ ಕಚೇರಿಯನ್ನು ಸುತ್ತುವರೆದಿದೆ” ಎಂದು ಬರೆದಿದೆ.

ಇದರ ನಂತರ ಕೆಲವು ಕೀವರ್ಡ್ ಮೂಲಕ ಇನ್ನಷ್ಟು ಹುಡುಕಾಡಿದಾಗ 13 ಸೆಪ್ಟೆಂಬರ್ 2017 ರ ದಿನಾಂಕದ “ರೋಹಿಂಗ್ಯಾಗಳ ಮೇಲಿನ ಕಿರುಕುಳವನ್ನು ವಿರೋಧಿಸಿ ಇಸ್ಲಾಮಿಕ್ ಚಳವಳಿಯ ರ್‍ಯಾಲಿ” ಎಂಬ ಸುದ್ದಿಯನ್ನು ಆನ್‌ಲೈನ್ ಸುದ್ದಿ ಸಂಸ್ಥೆಯಾದ ಬಾಂಗ್ಲೇನ್ಯೂಸ್ 24 ರ ವರದಿ ಮಾಡಿತ್ತು.

ರೋಹಿಂಗ್ಯಾ ಮುಸ್ಲಿಮರ ಚಿತ್ರಹಿಂಸೆ ಮತ್ತು ಹತ್ಯೆಯನ್ನು ಪ್ರತಿಭಟಿಸಲು ಇಸ್ಲಾಮಿಕ್ ರಾಜಕೀಯ ಸಂಘಟನೆಯಾದ ಇಸ್ಲಾಮಿ ಆಂದೋಲನ್ ಬಾಂಗ್ಲಾದೇಶ (ಐಎಬಿ) ಮ್ಯಾನ್ಮಾರ್ ರಾಯಭಾರ ಕಚೇರಿಗೆ ರ್‍ಯಾಲಿಯನ್ನು ನಡೆಸಿತು ಎಂದು ಅದು ಹೇಳಿದೆ.

ಅಷ್ಟೇ ಅಲ್ಲದೆ ಐಎಬಿಯ ವಿದ್ಯಾರ್ಥಿ ಘಟಕವಾದ ಐಎಸ್ಸಿಎಯ ಯೂಟ್ಯೂಬ್ ಚಾನೆಲ್‌ನಲ್ಲಿ ಈ ಮೆರವಣಿಗೆಯ ವೀಡಿಯೊವನ್ನು ಕಾಣಬಹುದಾಗಿದೆ.

ಐಎಬಿ ತಮ್ಮ ಫೇಸ್‌ಬುಕ್ ಪುಟದಲ್ಲಿ ರ್‍ಯಾಲಿಯನ್ನು ಘೋಷಿಸಿ, “ಸೆಪ್ಟೆಂಬರ್ 13 ರಂದು ಢಾಕಾದಲ್ಲಿರುವ ಮ್ಯಾನ್ಮಾರ್ ರಾಯಭಾರ ಕಚೇರಿಯನ್ನು ಸುತ್ತುವರಿಯುವಂತೆ” ಜನರಿಗೆ ಕರೆ ನೀಡಿತ್ತು.

ಇದಲ್ಲದೆ, ವೀಡಿಯೊದ ದೃಶ್ಯದಲ್ಲಿರುವ ಇತರ ಸುಳಿವುಗಳು ಇದು ಬಾಂಗ್ಲಾದೇಶದ್ದೇ ಹೊರತು ಭಾರತದ್ದಲ್ಲ ಎಂಬುದನ್ನು ಸಾಬೀತುಪಡಿಸುತ್ತದೆ. ವಿಡಿಯೋದಲ್ಲಿ ಹಸಿರು ಹಿನ್ನೆಲೆಯ ಮಧ್ಯದಲ್ಲಿ ಕೆಂಪು ಚುಕ್ಕೆ ಹೊಂದಿರುವ ಬಾಂಗ್ಲಾದೇಶದ ಧ್ವಜವನ್ನು ವೀಡಿಯೊದ ಸ್ಟಿಲ್ ಶಾಟ್‌ನಲ್ಲಿ ಕಾಣಬಹುದು.

ಅಷ್ಟೇ ಅಲ್ಲದೆ ಪೊಲೀಸ್ ಅಧಿಕಾರಿಗಳು ಬಾಂಗ್ಲಾದೇಶದ ಪೊಲೀಸ್ ಸಮವಸ್ತ್ರಕ್ಕೆ ಹೋಲುವ ಸಮವಸ್ತ್ರವನ್ನು ಧರಿಸಿರುವುದನ್ನು ಸಹ ಕಾಣಬಹುದು.

ಈ ಮೂಲಕ ಸ್ಪಷ್ಟವಾಗಿ, ಬಾಂಗ್ಲಾದೇಶದ ಪ್ರತಿಭಟನೆಯನ್ನು ಪಶ್ಚಿಮ ಬಂಗಾಳದ ಕೋಲ್ಕತ್ತಾದಲ್ಲಿ ನಡೆದ ರ್‍ಯಾಲಿಯಾಗಿ ತಪ್ಪಾಗಿ ಹಂಚಿಕೊಳ್ಳಲಾಗಿದೆ.


ಓದಿ: ಕೊರೊನಾ ನೆಪದಲ್ಲಿ ಈ ವೈದ್ಯ ಕಿಡ್ನಿ ಕದಿಯುತ್ತಿದ್ದರೆ? ಏನಿದು ಪ್ರಕರಣ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...

ಪಶ್ಚಿಮ ಬಂಗಾಳ: ಟಿಎಂಸಿ ಖಾತೆ ಫ್ರೀಜ್ ಮಾಡಿದ್ದ ಪೊಲೀಸರಿಗೆ ಕಲ್ಕತ್ತಾ ಹೈಕೋರ್ಟ್ ತರಾಟೆ!

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಹಲವು ಬ್ಯಾಂಕ್ ಖಾತೆಗಳನ್ನು ಜಾರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿಕೊಂಡ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದ ಪಕ್ಷದ ಮೂರು ಬ್ಯಾಂಕ್...

ಬಂಗಾಳದ ಬಿಸಿಯೂಟ ಇಸ್ಕಾನ್‌ಗೆ ಹಸ್ತಾಂತರವಿಲ್ಲ: ಸರ್ಕಾರದ ಸ್ಪಷ್ಟನೆ, ಕಲ್ಕತ್ತಾ ಹೈಕೋರ್ಟ್‌ನಿಂದ ಅಫಿಡವಿಟ್‌ಗೆ ನಿರ್ದೇಶನ 

ಕೋಲ್ಕತ್ತಾ: ರಾಜ್ಯದ ಶಾಲೆಗಳಲ್ಲಿ ಜಾರಿಯಲ್ಲಿರುವ ಪಿಎಂ-ಪೋಷಣ್ (ಮಧ್ಯಾಹ್ನದ ಬಿಸಿಯೂಟ) ಯೋಜನೆಯ ನಿರ್ವಹಣೆಯನ್ನು ಇಸ್ಕಾನ್ ಸಂಸ್ಥೆಗೆ ಹಸ್ತಾಂತರಿಸುವ ಯಾವುದೇ ಅನುಮೋದಿತ ಪ್ರಸ್ತಾಪ ಸರ್ಕಾರಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಅಫಿಡವಿಟ್...