Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌‌ಚೆಕ್‌‌: ’ಇಸ್ಲಾಂ ಜಿಂದಾಬಾದ್’ ಎಂದು ಕೂಗಿದ ಈ ರ್‍ಯಾಲಿ ಕೊಲ್ಕತ್ತಾದ್ದಲ್ಲ, ಬಾಂಗ್ಲಾದೇಶದ್ದು

ಫ್ಯಾಕ್ಟ್‌‌ಚೆಕ್‌‌: ’ಇಸ್ಲಾಂ ಜಿಂದಾಬಾದ್’ ಎಂದು ಕೂಗಿದ ಈ ರ್‍ಯಾಲಿ ಕೊಲ್ಕತ್ತಾದ್ದಲ್ಲ, ಬಾಂಗ್ಲಾದೇಶದ್ದು

ಸರಣಿ ನಕಲಿ ಸುದ್ದಿಯ ಅಪರಾಧಿಯಾಗಿರುವ ಕೆನಡಾದ ಪತ್ರಕರ್ತ ತಾರೆಕ್ ಫತಾಹ್ ತಮ್ಮ ಟ್ವಿಟ್ಟರ್‌ ಖಾತೆಯಲ್ಲಿ ಇದನ್ನು ಪ್ರಕಟಿಸಿದ್ದರು.

- Advertisement -
- Advertisement -

ತಲೆಗೆ ಸ್ಕಲ್ ಟೋಪಿ ಮತ್ತು ‘ಸ್ಟಾಪ್ ಕಿಲ್ಲಿಂಗ್ ರೋಹಿಂಗ್ಯಾ ಮುಸ್ಲಿಂ’ ಎಂಬ ಫಲಕಗಳನ್ನು ಹಿಡಿದು ಪ್ರತಿಭಟನಾ ರ್‍ಯಾಲಿ ನಡೆಸುತ್ತಿರುವ ಜನರ ವಿಡಿಯೋವನ್ನು ಸರಣಿ ನಕಲಿ ಸುದ್ದಿಯ ಅಪರಾಧಿಯಾಗಿರುವ ಕೆನಡಾದ ಪತ್ರಕರ್ತ ತಾರೆಕ್ ಫತಾಹ್ ತಮ್ಮ ಟ್ವಿಟ್ಟರ್‌ ಖಾತೆಯಲ್ಲಿ ’ಕೋಲ್ಕತ್ತಾದಲ್ಲಿ ‘ಇಸ್ಲಾಂ ಜಿಂದಾಬಾದ್’ಗೆ ಘೋಷಣೆ ಕೂಗಿದ್ದಾರೆ ಎಂದು ಬರೆದಿದ್ದಾರೆ.

ತಾರೆಖ್ ಫತಾಹ್ ತಮ್ಮ ಟ್ವೀಟ್‌ನಲ್ಲಿ “ಇದು ಕರಾಚಿ, ಕಾಶ್ಮೀರ ಅಥವಾ ಕೇರಳ ಅಲ್ಲ. “ಇಸ್ಲಾಂ ಜಿಂದಾಬಾದ್” ನ ಈ ಘೋಷಣೆ ಕೋಲ್ಕತ್ತಾದಲ್ಲಿ, ಮಮತಾ ಬಾನರ್ಜಿ ಆಳ್ವಿಕೆಯ ವೆಸ್ಟ್ ಬೆಂಗಾಲ್‌ನ ರಾಜಧಾನಿಯಲ್ಲಿ” ಎಂದು ಬರೆದಿದ್ದಾರೆ.

ಇದರ ಆರ್ಕೈವ್ ಇಲ್ಲಿದೆ.

ಈ ಪೋಸ್ಟ್ ಅನ್ನು ಹಲವಾರು ಸಾಮಾಜಿಕ ಜಾಲತಾಣದ ಬಳಕೆದಾರರು ಹಂಚಿಕೊಂಡಿದ್ದಾರೆ.

ಇದರ ಆಕೈವ್ ಇಲ್ಲಿದೆ.
ಇದರ ಆರ್ಕೈವ್ ಇಲ್ಲಿದೆ

ಫ್ಯಾಕ್ಟ್‌‌ಚೆಕ್‌

ಈ ವೀಡಿಯೊವು ಸೆಪ್ಟೆಂಬರ್ 2017 ರದ್ದಾಗಿದ್ದು ಬಾಂಗ್ಲಾದೇಶದ್ದಾಗಿದೆ. ಅಲ್ಲಿನ ಇಸ್ಲಾಮಿಕ್ ಸಂಘಟನೆಯು ಮ್ಯಾನ್ಮಾರ್ ರಾಯಭಾರ ಕಚೇರಿಯತ್ತ ಪ್ರತಿಭಟನಾ ಮೆರವಣಿಗೆ ನಡೆಸಿದ ವಿಡಿಯೋವಾಗಿದೆ.

ಇದನ್ನೂ ಓದಿ: ಮಹಾರಾಷ್ಟ್ರದಲ್ಲಿ ಬಕ್ರೀದ್‌ಗೆ ತಂದ ಆಡುಗಳನ್ನು ಲೂಟಿ ಮಾಡಿದ್ದು ನಿಜವೆ?

ವೀಡಿಯೊದ ಪ್ರಮುಖ ಫ್ರೇಮ್‌ಗಳ ರಿವರ್ಸ್ ಇಮೇಜ್ ಮೂಲಕ ಹುಡುಕಾಡಿದಾಗ, ‘ಸ್ಪೈಸಿ ಇನ್ಫೋಟ್ಯೂಬ್’ ಎಂಬ ಯೂಟ್ಯೂಬ್ ಚಾನೆಲ್ 13 ಸೆಪ್ಟೆಂಬರ್ 2017 ರಂದು ವೀಡಿಯೊವನ್ನು ಅಪ್‌ಲೋಡ್ ಮಾಡಿದ್ದು, “ಇಸ್ಲಾಮಿ ಆಂದೋಲನ್ ಬಾಂಗ್ಲಾದೇಶವು ಮ್ಯಾನ್ಮಾರ್ ರಾಯಭಾರ ಕಚೇರಿಯನ್ನು ಸುತ್ತುವರೆದಿದೆ” ಎಂದು ಬರೆದಿದೆ.

ಇದರ ನಂತರ ಕೆಲವು ಕೀವರ್ಡ್ ಮೂಲಕ ಇನ್ನಷ್ಟು ಹುಡುಕಾಡಿದಾಗ 13 ಸೆಪ್ಟೆಂಬರ್ 2017 ರ ದಿನಾಂಕದ “ರೋಹಿಂಗ್ಯಾಗಳ ಮೇಲಿನ ಕಿರುಕುಳವನ್ನು ವಿರೋಧಿಸಿ ಇಸ್ಲಾಮಿಕ್ ಚಳವಳಿಯ ರ್‍ಯಾಲಿ” ಎಂಬ ಸುದ್ದಿಯನ್ನು ಆನ್‌ಲೈನ್ ಸುದ್ದಿ ಸಂಸ್ಥೆಯಾದ ಬಾಂಗ್ಲೇನ್ಯೂಸ್ 24 ರ ವರದಿ ಮಾಡಿತ್ತು.

ರೋಹಿಂಗ್ಯಾ ಮುಸ್ಲಿಮರ ಚಿತ್ರಹಿಂಸೆ ಮತ್ತು ಹತ್ಯೆಯನ್ನು ಪ್ರತಿಭಟಿಸಲು ಇಸ್ಲಾಮಿಕ್ ರಾಜಕೀಯ ಸಂಘಟನೆಯಾದ ಇಸ್ಲಾಮಿ ಆಂದೋಲನ್ ಬಾಂಗ್ಲಾದೇಶ (ಐಎಬಿ) ಮ್ಯಾನ್ಮಾರ್ ರಾಯಭಾರ ಕಚೇರಿಗೆ ರ್‍ಯಾಲಿಯನ್ನು ನಡೆಸಿತು ಎಂದು ಅದು ಹೇಳಿದೆ.

ಅಷ್ಟೇ ಅಲ್ಲದೆ ಐಎಬಿಯ ವಿದ್ಯಾರ್ಥಿ ಘಟಕವಾದ ಐಎಸ್ಸಿಎಯ ಯೂಟ್ಯೂಬ್ ಚಾನೆಲ್‌ನಲ್ಲಿ ಈ ಮೆರವಣಿಗೆಯ ವೀಡಿಯೊವನ್ನು ಕಾಣಬಹುದಾಗಿದೆ.

ಐಎಬಿ ತಮ್ಮ ಫೇಸ್‌ಬುಕ್ ಪುಟದಲ್ಲಿ ರ್‍ಯಾಲಿಯನ್ನು ಘೋಷಿಸಿ, “ಸೆಪ್ಟೆಂಬರ್ 13 ರಂದು ಢಾಕಾದಲ್ಲಿರುವ ಮ್ಯಾನ್ಮಾರ್ ರಾಯಭಾರ ಕಚೇರಿಯನ್ನು ಸುತ್ತುವರಿಯುವಂತೆ” ಜನರಿಗೆ ಕರೆ ನೀಡಿತ್ತು.

ಇದಲ್ಲದೆ, ವೀಡಿಯೊದ ದೃಶ್ಯದಲ್ಲಿರುವ ಇತರ ಸುಳಿವುಗಳು ಇದು ಬಾಂಗ್ಲಾದೇಶದ್ದೇ ಹೊರತು ಭಾರತದ್ದಲ್ಲ ಎಂಬುದನ್ನು ಸಾಬೀತುಪಡಿಸುತ್ತದೆ. ವಿಡಿಯೋದಲ್ಲಿ ಹಸಿರು ಹಿನ್ನೆಲೆಯ ಮಧ್ಯದಲ್ಲಿ ಕೆಂಪು ಚುಕ್ಕೆ ಹೊಂದಿರುವ ಬಾಂಗ್ಲಾದೇಶದ ಧ್ವಜವನ್ನು ವೀಡಿಯೊದ ಸ್ಟಿಲ್ ಶಾಟ್‌ನಲ್ಲಿ ಕಾಣಬಹುದು.

ಅಷ್ಟೇ ಅಲ್ಲದೆ ಪೊಲೀಸ್ ಅಧಿಕಾರಿಗಳು ಬಾಂಗ್ಲಾದೇಶದ ಪೊಲೀಸ್ ಸಮವಸ್ತ್ರಕ್ಕೆ ಹೋಲುವ ಸಮವಸ್ತ್ರವನ್ನು ಧರಿಸಿರುವುದನ್ನು ಸಹ ಕಾಣಬಹುದು.

ಈ ಮೂಲಕ ಸ್ಪಷ್ಟವಾಗಿ, ಬಾಂಗ್ಲಾದೇಶದ ಪ್ರತಿಭಟನೆಯನ್ನು ಪಶ್ಚಿಮ ಬಂಗಾಳದ ಕೋಲ್ಕತ್ತಾದಲ್ಲಿ ನಡೆದ ರ್‍ಯಾಲಿಯಾಗಿ ತಪ್ಪಾಗಿ ಹಂಚಿಕೊಳ್ಳಲಾಗಿದೆ.


ಓದಿ: ಕೊರೊನಾ ನೆಪದಲ್ಲಿ ಈ ವೈದ್ಯ ಕಿಡ್ನಿ ಕದಿಯುತ್ತಿದ್ದರೆ? ಏನಿದು ಪ್ರಕರಣ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...