Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌‌ಚೆಕ್‌‌: ’ಇಸ್ಲಾಂ ಜಿಂದಾಬಾದ್’ ಎಂದು ಕೂಗಿದ ಈ ರ್‍ಯಾಲಿ ಕೊಲ್ಕತ್ತಾದ್ದಲ್ಲ, ಬಾಂಗ್ಲಾದೇಶದ್ದು

ಫ್ಯಾಕ್ಟ್‌‌ಚೆಕ್‌‌: ’ಇಸ್ಲಾಂ ಜಿಂದಾಬಾದ್’ ಎಂದು ಕೂಗಿದ ಈ ರ್‍ಯಾಲಿ ಕೊಲ್ಕತ್ತಾದ್ದಲ್ಲ, ಬಾಂಗ್ಲಾದೇಶದ್ದು

ಸರಣಿ ನಕಲಿ ಸುದ್ದಿಯ ಅಪರಾಧಿಯಾಗಿರುವ ಕೆನಡಾದ ಪತ್ರಕರ್ತ ತಾರೆಕ್ ಫತಾಹ್ ತಮ್ಮ ಟ್ವಿಟ್ಟರ್‌ ಖಾತೆಯಲ್ಲಿ ಇದನ್ನು ಪ್ರಕಟಿಸಿದ್ದರು.

- Advertisement -
- Advertisement -

ತಲೆಗೆ ಸ್ಕಲ್ ಟೋಪಿ ಮತ್ತು ‘ಸ್ಟಾಪ್ ಕಿಲ್ಲಿಂಗ್ ರೋಹಿಂಗ್ಯಾ ಮುಸ್ಲಿಂ’ ಎಂಬ ಫಲಕಗಳನ್ನು ಹಿಡಿದು ಪ್ರತಿಭಟನಾ ರ್‍ಯಾಲಿ ನಡೆಸುತ್ತಿರುವ ಜನರ ವಿಡಿಯೋವನ್ನು ಸರಣಿ ನಕಲಿ ಸುದ್ದಿಯ ಅಪರಾಧಿಯಾಗಿರುವ ಕೆನಡಾದ ಪತ್ರಕರ್ತ ತಾರೆಕ್ ಫತಾಹ್ ತಮ್ಮ ಟ್ವಿಟ್ಟರ್‌ ಖಾತೆಯಲ್ಲಿ ’ಕೋಲ್ಕತ್ತಾದಲ್ಲಿ ‘ಇಸ್ಲಾಂ ಜಿಂದಾಬಾದ್’ಗೆ ಘೋಷಣೆ ಕೂಗಿದ್ದಾರೆ ಎಂದು ಬರೆದಿದ್ದಾರೆ.

ತಾರೆಖ್ ಫತಾಹ್ ತಮ್ಮ ಟ್ವೀಟ್‌ನಲ್ಲಿ “ಇದು ಕರಾಚಿ, ಕಾಶ್ಮೀರ ಅಥವಾ ಕೇರಳ ಅಲ್ಲ. “ಇಸ್ಲಾಂ ಜಿಂದಾಬಾದ್” ನ ಈ ಘೋಷಣೆ ಕೋಲ್ಕತ್ತಾದಲ್ಲಿ, ಮಮತಾ ಬಾನರ್ಜಿ ಆಳ್ವಿಕೆಯ ವೆಸ್ಟ್ ಬೆಂಗಾಲ್‌ನ ರಾಜಧಾನಿಯಲ್ಲಿ” ಎಂದು ಬರೆದಿದ್ದಾರೆ.

ಇದರ ಆರ್ಕೈವ್ ಇಲ್ಲಿದೆ.

ಈ ಪೋಸ್ಟ್ ಅನ್ನು ಹಲವಾರು ಸಾಮಾಜಿಕ ಜಾಲತಾಣದ ಬಳಕೆದಾರರು ಹಂಚಿಕೊಂಡಿದ್ದಾರೆ.

ಇದರ ಆಕೈವ್ ಇಲ್ಲಿದೆ.
ಇದರ ಆರ್ಕೈವ್ ಇಲ್ಲಿದೆ

ಫ್ಯಾಕ್ಟ್‌‌ಚೆಕ್‌

ಈ ವೀಡಿಯೊವು ಸೆಪ್ಟೆಂಬರ್ 2017 ರದ್ದಾಗಿದ್ದು ಬಾಂಗ್ಲಾದೇಶದ್ದಾಗಿದೆ. ಅಲ್ಲಿನ ಇಸ್ಲಾಮಿಕ್ ಸಂಘಟನೆಯು ಮ್ಯಾನ್ಮಾರ್ ರಾಯಭಾರ ಕಚೇರಿಯತ್ತ ಪ್ರತಿಭಟನಾ ಮೆರವಣಿಗೆ ನಡೆಸಿದ ವಿಡಿಯೋವಾಗಿದೆ.

ಇದನ್ನೂ ಓದಿ: ಮಹಾರಾಷ್ಟ್ರದಲ್ಲಿ ಬಕ್ರೀದ್‌ಗೆ ತಂದ ಆಡುಗಳನ್ನು ಲೂಟಿ ಮಾಡಿದ್ದು ನಿಜವೆ?

ವೀಡಿಯೊದ ಪ್ರಮುಖ ಫ್ರೇಮ್‌ಗಳ ರಿವರ್ಸ್ ಇಮೇಜ್ ಮೂಲಕ ಹುಡುಕಾಡಿದಾಗ, ‘ಸ್ಪೈಸಿ ಇನ್ಫೋಟ್ಯೂಬ್’ ಎಂಬ ಯೂಟ್ಯೂಬ್ ಚಾನೆಲ್ 13 ಸೆಪ್ಟೆಂಬರ್ 2017 ರಂದು ವೀಡಿಯೊವನ್ನು ಅಪ್‌ಲೋಡ್ ಮಾಡಿದ್ದು, “ಇಸ್ಲಾಮಿ ಆಂದೋಲನ್ ಬಾಂಗ್ಲಾದೇಶವು ಮ್ಯಾನ್ಮಾರ್ ರಾಯಭಾರ ಕಚೇರಿಯನ್ನು ಸುತ್ತುವರೆದಿದೆ” ಎಂದು ಬರೆದಿದೆ.

ಇದರ ನಂತರ ಕೆಲವು ಕೀವರ್ಡ್ ಮೂಲಕ ಇನ್ನಷ್ಟು ಹುಡುಕಾಡಿದಾಗ 13 ಸೆಪ್ಟೆಂಬರ್ 2017 ರ ದಿನಾಂಕದ “ರೋಹಿಂಗ್ಯಾಗಳ ಮೇಲಿನ ಕಿರುಕುಳವನ್ನು ವಿರೋಧಿಸಿ ಇಸ್ಲಾಮಿಕ್ ಚಳವಳಿಯ ರ್‍ಯಾಲಿ” ಎಂಬ ಸುದ್ದಿಯನ್ನು ಆನ್‌ಲೈನ್ ಸುದ್ದಿ ಸಂಸ್ಥೆಯಾದ ಬಾಂಗ್ಲೇನ್ಯೂಸ್ 24 ರ ವರದಿ ಮಾಡಿತ್ತು.

ರೋಹಿಂಗ್ಯಾ ಮುಸ್ಲಿಮರ ಚಿತ್ರಹಿಂಸೆ ಮತ್ತು ಹತ್ಯೆಯನ್ನು ಪ್ರತಿಭಟಿಸಲು ಇಸ್ಲಾಮಿಕ್ ರಾಜಕೀಯ ಸಂಘಟನೆಯಾದ ಇಸ್ಲಾಮಿ ಆಂದೋಲನ್ ಬಾಂಗ್ಲಾದೇಶ (ಐಎಬಿ) ಮ್ಯಾನ್ಮಾರ್ ರಾಯಭಾರ ಕಚೇರಿಗೆ ರ್‍ಯಾಲಿಯನ್ನು ನಡೆಸಿತು ಎಂದು ಅದು ಹೇಳಿದೆ.

ಅಷ್ಟೇ ಅಲ್ಲದೆ ಐಎಬಿಯ ವಿದ್ಯಾರ್ಥಿ ಘಟಕವಾದ ಐಎಸ್ಸಿಎಯ ಯೂಟ್ಯೂಬ್ ಚಾನೆಲ್‌ನಲ್ಲಿ ಈ ಮೆರವಣಿಗೆಯ ವೀಡಿಯೊವನ್ನು ಕಾಣಬಹುದಾಗಿದೆ.

ಐಎಬಿ ತಮ್ಮ ಫೇಸ್‌ಬುಕ್ ಪುಟದಲ್ಲಿ ರ್‍ಯಾಲಿಯನ್ನು ಘೋಷಿಸಿ, “ಸೆಪ್ಟೆಂಬರ್ 13 ರಂದು ಢಾಕಾದಲ್ಲಿರುವ ಮ್ಯಾನ್ಮಾರ್ ರಾಯಭಾರ ಕಚೇರಿಯನ್ನು ಸುತ್ತುವರಿಯುವಂತೆ” ಜನರಿಗೆ ಕರೆ ನೀಡಿತ್ತು.

ಇದಲ್ಲದೆ, ವೀಡಿಯೊದ ದೃಶ್ಯದಲ್ಲಿರುವ ಇತರ ಸುಳಿವುಗಳು ಇದು ಬಾಂಗ್ಲಾದೇಶದ್ದೇ ಹೊರತು ಭಾರತದ್ದಲ್ಲ ಎಂಬುದನ್ನು ಸಾಬೀತುಪಡಿಸುತ್ತದೆ. ವಿಡಿಯೋದಲ್ಲಿ ಹಸಿರು ಹಿನ್ನೆಲೆಯ ಮಧ್ಯದಲ್ಲಿ ಕೆಂಪು ಚುಕ್ಕೆ ಹೊಂದಿರುವ ಬಾಂಗ್ಲಾದೇಶದ ಧ್ವಜವನ್ನು ವೀಡಿಯೊದ ಸ್ಟಿಲ್ ಶಾಟ್‌ನಲ್ಲಿ ಕಾಣಬಹುದು.

ಅಷ್ಟೇ ಅಲ್ಲದೆ ಪೊಲೀಸ್ ಅಧಿಕಾರಿಗಳು ಬಾಂಗ್ಲಾದೇಶದ ಪೊಲೀಸ್ ಸಮವಸ್ತ್ರಕ್ಕೆ ಹೋಲುವ ಸಮವಸ್ತ್ರವನ್ನು ಧರಿಸಿರುವುದನ್ನು ಸಹ ಕಾಣಬಹುದು.

ಈ ಮೂಲಕ ಸ್ಪಷ್ಟವಾಗಿ, ಬಾಂಗ್ಲಾದೇಶದ ಪ್ರತಿಭಟನೆಯನ್ನು ಪಶ್ಚಿಮ ಬಂಗಾಳದ ಕೋಲ್ಕತ್ತಾದಲ್ಲಿ ನಡೆದ ರ್‍ಯಾಲಿಯಾಗಿ ತಪ್ಪಾಗಿ ಹಂಚಿಕೊಳ್ಳಲಾಗಿದೆ.


ಓದಿ: ಕೊರೊನಾ ನೆಪದಲ್ಲಿ ಈ ವೈದ್ಯ ಕಿಡ್ನಿ ಕದಿಯುತ್ತಿದ್ದರೆ? ಏನಿದು ಪ್ರಕರಣ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...