Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌‌ಚೆಕ್‌‌: ’ಇಸ್ಲಾಂ ಜಿಂದಾಬಾದ್’ ಎಂದು ಕೂಗಿದ ಈ ರ್‍ಯಾಲಿ ಕೊಲ್ಕತ್ತಾದ್ದಲ್ಲ, ಬಾಂಗ್ಲಾದೇಶದ್ದು

ಫ್ಯಾಕ್ಟ್‌‌ಚೆಕ್‌‌: ’ಇಸ್ಲಾಂ ಜಿಂದಾಬಾದ್’ ಎಂದು ಕೂಗಿದ ಈ ರ್‍ಯಾಲಿ ಕೊಲ್ಕತ್ತಾದ್ದಲ್ಲ, ಬಾಂಗ್ಲಾದೇಶದ್ದು

ಸರಣಿ ನಕಲಿ ಸುದ್ದಿಯ ಅಪರಾಧಿಯಾಗಿರುವ ಕೆನಡಾದ ಪತ್ರಕರ್ತ ತಾರೆಕ್ ಫತಾಹ್ ತಮ್ಮ ಟ್ವಿಟ್ಟರ್‌ ಖಾತೆಯಲ್ಲಿ ಇದನ್ನು ಪ್ರಕಟಿಸಿದ್ದರು.

- Advertisement -
- Advertisement -

ತಲೆಗೆ ಸ್ಕಲ್ ಟೋಪಿ ಮತ್ತು ‘ಸ್ಟಾಪ್ ಕಿಲ್ಲಿಂಗ್ ರೋಹಿಂಗ್ಯಾ ಮುಸ್ಲಿಂ’ ಎಂಬ ಫಲಕಗಳನ್ನು ಹಿಡಿದು ಪ್ರತಿಭಟನಾ ರ್‍ಯಾಲಿ ನಡೆಸುತ್ತಿರುವ ಜನರ ವಿಡಿಯೋವನ್ನು ಸರಣಿ ನಕಲಿ ಸುದ್ದಿಯ ಅಪರಾಧಿಯಾಗಿರುವ ಕೆನಡಾದ ಪತ್ರಕರ್ತ ತಾರೆಕ್ ಫತಾಹ್ ತಮ್ಮ ಟ್ವಿಟ್ಟರ್‌ ಖಾತೆಯಲ್ಲಿ ’ಕೋಲ್ಕತ್ತಾದಲ್ಲಿ ‘ಇಸ್ಲಾಂ ಜಿಂದಾಬಾದ್’ಗೆ ಘೋಷಣೆ ಕೂಗಿದ್ದಾರೆ ಎಂದು ಬರೆದಿದ್ದಾರೆ.

ತಾರೆಖ್ ಫತಾಹ್ ತಮ್ಮ ಟ್ವೀಟ್‌ನಲ್ಲಿ “ಇದು ಕರಾಚಿ, ಕಾಶ್ಮೀರ ಅಥವಾ ಕೇರಳ ಅಲ್ಲ. “ಇಸ್ಲಾಂ ಜಿಂದಾಬಾದ್” ನ ಈ ಘೋಷಣೆ ಕೋಲ್ಕತ್ತಾದಲ್ಲಿ, ಮಮತಾ ಬಾನರ್ಜಿ ಆಳ್ವಿಕೆಯ ವೆಸ್ಟ್ ಬೆಂಗಾಲ್‌ನ ರಾಜಧಾನಿಯಲ್ಲಿ” ಎಂದು ಬರೆದಿದ್ದಾರೆ.

ಇದರ ಆರ್ಕೈವ್ ಇಲ್ಲಿದೆ.

ಈ ಪೋಸ್ಟ್ ಅನ್ನು ಹಲವಾರು ಸಾಮಾಜಿಕ ಜಾಲತಾಣದ ಬಳಕೆದಾರರು ಹಂಚಿಕೊಂಡಿದ್ದಾರೆ.

ಇದರ ಆಕೈವ್ ಇಲ್ಲಿದೆ.
ಇದರ ಆರ್ಕೈವ್ ಇಲ್ಲಿದೆ

ಫ್ಯಾಕ್ಟ್‌‌ಚೆಕ್‌

ಈ ವೀಡಿಯೊವು ಸೆಪ್ಟೆಂಬರ್ 2017 ರದ್ದಾಗಿದ್ದು ಬಾಂಗ್ಲಾದೇಶದ್ದಾಗಿದೆ. ಅಲ್ಲಿನ ಇಸ್ಲಾಮಿಕ್ ಸಂಘಟನೆಯು ಮ್ಯಾನ್ಮಾರ್ ರಾಯಭಾರ ಕಚೇರಿಯತ್ತ ಪ್ರತಿಭಟನಾ ಮೆರವಣಿಗೆ ನಡೆಸಿದ ವಿಡಿಯೋವಾಗಿದೆ.

ಇದನ್ನೂ ಓದಿ: ಮಹಾರಾಷ್ಟ್ರದಲ್ಲಿ ಬಕ್ರೀದ್‌ಗೆ ತಂದ ಆಡುಗಳನ್ನು ಲೂಟಿ ಮಾಡಿದ್ದು ನಿಜವೆ?

ವೀಡಿಯೊದ ಪ್ರಮುಖ ಫ್ರೇಮ್‌ಗಳ ರಿವರ್ಸ್ ಇಮೇಜ್ ಮೂಲಕ ಹುಡುಕಾಡಿದಾಗ, ‘ಸ್ಪೈಸಿ ಇನ್ಫೋಟ್ಯೂಬ್’ ಎಂಬ ಯೂಟ್ಯೂಬ್ ಚಾನೆಲ್ 13 ಸೆಪ್ಟೆಂಬರ್ 2017 ರಂದು ವೀಡಿಯೊವನ್ನು ಅಪ್‌ಲೋಡ್ ಮಾಡಿದ್ದು, “ಇಸ್ಲಾಮಿ ಆಂದೋಲನ್ ಬಾಂಗ್ಲಾದೇಶವು ಮ್ಯಾನ್ಮಾರ್ ರಾಯಭಾರ ಕಚೇರಿಯನ್ನು ಸುತ್ತುವರೆದಿದೆ” ಎಂದು ಬರೆದಿದೆ.

ಇದರ ನಂತರ ಕೆಲವು ಕೀವರ್ಡ್ ಮೂಲಕ ಇನ್ನಷ್ಟು ಹುಡುಕಾಡಿದಾಗ 13 ಸೆಪ್ಟೆಂಬರ್ 2017 ರ ದಿನಾಂಕದ “ರೋಹಿಂಗ್ಯಾಗಳ ಮೇಲಿನ ಕಿರುಕುಳವನ್ನು ವಿರೋಧಿಸಿ ಇಸ್ಲಾಮಿಕ್ ಚಳವಳಿಯ ರ್‍ಯಾಲಿ” ಎಂಬ ಸುದ್ದಿಯನ್ನು ಆನ್‌ಲೈನ್ ಸುದ್ದಿ ಸಂಸ್ಥೆಯಾದ ಬಾಂಗ್ಲೇನ್ಯೂಸ್ 24 ರ ವರದಿ ಮಾಡಿತ್ತು.

ರೋಹಿಂಗ್ಯಾ ಮುಸ್ಲಿಮರ ಚಿತ್ರಹಿಂಸೆ ಮತ್ತು ಹತ್ಯೆಯನ್ನು ಪ್ರತಿಭಟಿಸಲು ಇಸ್ಲಾಮಿಕ್ ರಾಜಕೀಯ ಸಂಘಟನೆಯಾದ ಇಸ್ಲಾಮಿ ಆಂದೋಲನ್ ಬಾಂಗ್ಲಾದೇಶ (ಐಎಬಿ) ಮ್ಯಾನ್ಮಾರ್ ರಾಯಭಾರ ಕಚೇರಿಗೆ ರ್‍ಯಾಲಿಯನ್ನು ನಡೆಸಿತು ಎಂದು ಅದು ಹೇಳಿದೆ.

ಅಷ್ಟೇ ಅಲ್ಲದೆ ಐಎಬಿಯ ವಿದ್ಯಾರ್ಥಿ ಘಟಕವಾದ ಐಎಸ್ಸಿಎಯ ಯೂಟ್ಯೂಬ್ ಚಾನೆಲ್‌ನಲ್ಲಿ ಈ ಮೆರವಣಿಗೆಯ ವೀಡಿಯೊವನ್ನು ಕಾಣಬಹುದಾಗಿದೆ.

ಐಎಬಿ ತಮ್ಮ ಫೇಸ್‌ಬುಕ್ ಪುಟದಲ್ಲಿ ರ್‍ಯಾಲಿಯನ್ನು ಘೋಷಿಸಿ, “ಸೆಪ್ಟೆಂಬರ್ 13 ರಂದು ಢಾಕಾದಲ್ಲಿರುವ ಮ್ಯಾನ್ಮಾರ್ ರಾಯಭಾರ ಕಚೇರಿಯನ್ನು ಸುತ್ತುವರಿಯುವಂತೆ” ಜನರಿಗೆ ಕರೆ ನೀಡಿತ್ತು.

ಇದಲ್ಲದೆ, ವೀಡಿಯೊದ ದೃಶ್ಯದಲ್ಲಿರುವ ಇತರ ಸುಳಿವುಗಳು ಇದು ಬಾಂಗ್ಲಾದೇಶದ್ದೇ ಹೊರತು ಭಾರತದ್ದಲ್ಲ ಎಂಬುದನ್ನು ಸಾಬೀತುಪಡಿಸುತ್ತದೆ. ವಿಡಿಯೋದಲ್ಲಿ ಹಸಿರು ಹಿನ್ನೆಲೆಯ ಮಧ್ಯದಲ್ಲಿ ಕೆಂಪು ಚುಕ್ಕೆ ಹೊಂದಿರುವ ಬಾಂಗ್ಲಾದೇಶದ ಧ್ವಜವನ್ನು ವೀಡಿಯೊದ ಸ್ಟಿಲ್ ಶಾಟ್‌ನಲ್ಲಿ ಕಾಣಬಹುದು.

ಅಷ್ಟೇ ಅಲ್ಲದೆ ಪೊಲೀಸ್ ಅಧಿಕಾರಿಗಳು ಬಾಂಗ್ಲಾದೇಶದ ಪೊಲೀಸ್ ಸಮವಸ್ತ್ರಕ್ಕೆ ಹೋಲುವ ಸಮವಸ್ತ್ರವನ್ನು ಧರಿಸಿರುವುದನ್ನು ಸಹ ಕಾಣಬಹುದು.

ಈ ಮೂಲಕ ಸ್ಪಷ್ಟವಾಗಿ, ಬಾಂಗ್ಲಾದೇಶದ ಪ್ರತಿಭಟನೆಯನ್ನು ಪಶ್ಚಿಮ ಬಂಗಾಳದ ಕೋಲ್ಕತ್ತಾದಲ್ಲಿ ನಡೆದ ರ್‍ಯಾಲಿಯಾಗಿ ತಪ್ಪಾಗಿ ಹಂಚಿಕೊಳ್ಳಲಾಗಿದೆ.


ಓದಿ: ಕೊರೊನಾ ನೆಪದಲ್ಲಿ ಈ ವೈದ್ಯ ಕಿಡ್ನಿ ಕದಿಯುತ್ತಿದ್ದರೆ? ಏನಿದು ಪ್ರಕರಣ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಾಗಲಕೋಟೆಯ ವಿವಿಧ ಪ್ರದೇಶಗಳಲ್ಲಿ ಎಸ್‌ಐಆರ್‌ ವಿರುದ್ಧ ಜನಜಾಗೃತಿ ಜಾಥಾ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬಾಗಲಕೋಟೆ ನಗರದ ವಿವಿಧ ಭಾಗಗಳಲ್ಲಿ ಭಾನುವಾರ (ಜೂ.14) ಜಾಗೃತಿ ಜಾಥಾ ನಡೆಯಿತು. ನವನಗರದ ವಿದ್ಯಾಗಿರಿ ಬಸವೇಶ್ವರ ಇಂಜಿನಿಯರಿಂಗ್ ಕಾಲೇಜು ಸರ್ಕಲ್‌ನಿಂದ ಪ್ರಾರಂಭವಾದ ಜಾಥಾ...

SIR ವಿರೋಧಿ ಜನಜಾಗೃತಿ ಜಾಥಾ: ಕಾಫಿ ನಾಡು ಚಿಕ್ಕಮಗಳೂರಲ್ಲಿ ಅದ್ದೂರಿ ಸ್ವಾಗತ

ಚಿಕ್ಕಮಗಳೂರು: ರಾಜ್ಯಾದ್ಯಂತ ಐದು ವಿಭಾಗಗಳಲ್ಲಿ ಸಂಚರಿಸುತ್ತಿರುವ 'SIR ವಿರೋಧಿ ಜನಜಾಗೃತಿ ಜಾಥಾ'ದ 3ನೇ ಮಾರ್ಗದ ತಂಡಕ್ಕೆ ಕಾಫಿ ನಾಡು ಚಿಕ್ಕಮಗಳೂರಿನಲ್ಲಿ ಅದ್ದೂರಿ ಸ್ವಾಗತ ದೊರೆಯಿತು. ಭಾನುವಾರ ಬೆಳಗ್ಗೆ ಜಿಲ್ಲೆಯ ಕೊಪ್ಪ ತಾಲ್ಲೂಕಿಗೆ ಆಗಮಿಸಿದ ಜಾಥಾ...

ಚಿಕ್ಕಮಗಳೂರಿನಲ್ಲಿ ಎಸ್‌ಐಆರ್ (SIR) ವಿರೋಧಿ ಜಾಥಾ: ಮತದಾರರ ಹಕ್ಕು ಕಸಿಯುವ ಹುನ್ನಾರದ ವಿರುದ್ಧ ಆಕ್ರೋಶ

ಭಾರತ ಚುನಾವಣಾ ಆಯೋಗವು ಜಾರಿಗೆ ತಂದಿರುವ ವಿಶೇಷ ತೀವ್ರ ಪರಿಷ್ಕರಣೆ (SIR - Special Intensive Revision) ಪ್ರಕ್ರಿಯೆಯಲ್ಲಿ ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಜಾಗ್ರತೆ ವಹಿಸಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ....

ಮಂಗಳೂರು: ಚುನಾವಣಾ ಆಯೋಗ ಕೇಂದ್ರ ಸರ್ಕಾರದ ಮುಖವಾಣಿಯಾಗಿ ಕಾರ್ಯನಿರ್ವಹಿಸುತ್ತಿದೆ: ವಿ.ಎಸ್. ಶ್ರೀಧರ್ 

ರಾಜ್ಯದ ಆರು ಜಿಲ್ಲೆಗಳಲ್ಲಿ ಪ್ರಗತಿಪರ ಸಂಘಟನೆಗಳು, ಎದ್ದೇಳು ಕರ್ನಾಟಕ ಹಾಗೂ ಜಾತ್ಯತೀತ ಪಕ್ಷಗಳ ಒಕ್ಕೂಟವಾದ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿರುವ ಎಸ್‌ಐಆರ್ ಜನಜಾಗೃತಿ ಜಾಥಾದ ಭಾಗವಾಗಿ ಇಂದು (ಜೂನ್-14) ಮಂಗಳೂರಿನಲ್ಲಿ ಸಭೆ...

ಬಿಸಿಲ ನಾಡು ಕಲಬುರಗಿಯಲ್ಲಿ ಮೊಳಗಿದ SIR ವಿರೋಧಿ ಘೋಷಣೆ.

ಕೇಂದ್ರ ಚುನಾವಣಾ ಆಯೋಗ ಜಾರಿಗೆ ತಂದಿರುವ ವಿಶೇಷ ತೀವ್ರ ಮತ ಪರಿಷ್ಕರಣೆ SIR ಅನ್ನು ಕರ್ನಾಟಕದಲ್ಲಿ ಜಾರಿ ಮಾಡಬಾರದು ಎಂದು ಆಗ್ರಹಿಸಿ ಕರ್ನಾಟಕದಾದ್ಯಂತ ಎದ್ದೇಳು ಕರ್ನಾಟಕ ಹಾಗಾ SIR ವಿರೋಧಿ ಕರ್ನಾಟಕ ವೇದಿಕೆಯು...

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...