Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌‌ಚೆಕ್‌: ತಾಲಿಬಾನ್‌ಗೆ ಥ್ಯಾಂಕ್ಸ್‌ ಹೇಳಿದ ಈ ಟ್ವಿಟರ್‌ ಅಕೌಂಟ್‌ ದಿಟ್ಟ ವಿದ್ಯಾರ್ಥಿನಿ ಮುಸ್ಕಾನ್‌ ಅವರದ್ದಲ್ಲ, ಅದು...

ಫ್ಯಾಕ್ಟ್‌‌ಚೆಕ್‌: ತಾಲಿಬಾನ್‌ಗೆ ಥ್ಯಾಂಕ್ಸ್‌ ಹೇಳಿದ ಈ ಟ್ವಿಟರ್‌ ಅಕೌಂಟ್‌ ದಿಟ್ಟ ವಿದ್ಯಾರ್ಥಿನಿ ಮುಸ್ಕಾನ್‌ ಅವರದ್ದಲ್ಲ, ಅದು ನಕಲಿ

- Advertisement -
- Advertisement -

ಮಂಡ್ಯದ ಪಿಇಎಸ್‌‌ ಕಾಲೇಜಿನಲ್ಲಿ ಕೇಸರಿ ಶಾಲು ಧರಿಸಿದ್ದ ಬಿಜೆಪಿ ಬೆಂಬಲಿತ ಯುವಕರು, ಜೈಶ್ರೀರಾಂ ಎಂದು ರಾಜಕೀಯ ಘೋಷಣೆ ಕೂಗುತ್ತಾ ವಿದ್ಯಾರ್ಥಿನಿ ಬೀಬಿ ಮುಸ್ಕಾನ್‌ ಖಾನ್‌‌ ಅವರನ್ನು ಬೆನ್ನಟ್ಟಿದ್ದರು. ಈ ವೇಳೆ ಮುಸ್ಕಾನ್ ಅವರು ದುಷ್ಕರ್ಮಿಗಳ ರಾಜಕೀಯ ಘೋಷಣೆಗೆ ವಿರುದ್ದವಾಗಿ, “ಅಲ್ಲಾಹು ಅಕ್ಬರ್‌” ಎಂದು ಕೂಗಿ ಪ್ರತಿರೋಧ ಒಡ್ಡಿದ್ದರು.

ಈ ಘಟನೆಯ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದ್ದು, ಬೀಬಿ ಮುಸ್ಕಾನ್ ಅವರಿಗೆ ವಿಶ್ವದಾದ್ಯಂತ ಅಭಿನಂದನೆಗಳ ಮಹಾಪೂರವೇ ಹರಿದು ಬಂದಿತ್ತು. ಈ ವೇಳೆ ಹಲವಾರು ಗಣ್ಯರು, ಹೋರಾಟಗಾರರು ಮುಸ್ಕಾನ್ ಅವರಿಗೆ ಬೆಂಬಲ ವ್ಯಕ್ತಪಡಿಸಿ, ಹಿಜಾಬ್ ಧರಿಸುವ ಅವರ ಧಾರ್ಮಿಕ ಹಕ್ಕಿನ ಪರವಾಗಿ ನಿಂತಿದ್ದರು. ಇದೇ ರೀತಿ, ಬಿಜೆಪಿಯ ಮೋದಿ ನೇತೃತ್ವದ ಸರ್ಕಾರ 200 ಕೋಟಿ ರೂ ನೆರವು ನೀಡುವುದಾಗಿ ಘೋಷಿಸಿರುವ ಅಫ್ಘಾನ್‌ನ ತಾಲಿಬಾನ್‌ ಆಡಳಿತ ಕೂಡಾ ಮುಸ್ಕಾನ್‌‌ಗೆ ಬೆಂಬಲ ವ್ಯಕ್ತಪಡಿಸಿತ್ತು.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ರಾಹುಲ್‌ ಗಾಂಧಿ ಜೊತೆಯಲ್ಲಿ ದಿಟ್ಟ ಹುಡುಗಿ ಮುಸ್ಕಾನ್‌ ಫೋಟೋ ತೆಗೆದುಕೊಂಡಿದ್ದರೆ?

ಆದರೆ ಇದೀಗ ಮುಸ್ಕಾನ್ ಅವರು ತಾಲಿಬಾನ್‌ ನೀಡಿದ ಬೆಂಬಲಕ್ಕೆ ಟ್ವಿಟರ್‌ನಲ್ಲಿ ‘ಧನ್ಯವಾದ’ ಹೇಳಿದ್ದಾರೆ ಎಂದು ಪ್ರತಿಪಾದಿಸಿ ಟ್ವಿಟರ್‌ ಸ್ಕ್ರೀನ್‌ಶಾರ್ಟ್‌ ಒಂದು ಹರಿದಾಡುತ್ತಿದೆ. ಇದನ್ನು ಬಿಜೆಪಿ ಬೆಂಬಲಿಗರು ಮತ್ತು ಬಲಪಂಥೀಯರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳುತ್ತಿದ್ದಾರೆ. ಇದನ್ನು ನೀವು ಇಲ್ಲಿ ಮತ್ತು ಇಲ್ಲಿ ನೋಡಬಹುದು.

ಫೇಕ್‌ಪ್ಯಾಕ್ಟರಿ ಎಂದೇ ಕುಖ್ಯಾತಿ ಹೊಂದಿರುವ ಪೋಸ್ಟ್‌ಕಾರ್ಡ್‌‌ನ ಯೂಟ್ಯೂಬ್ ಚಾನೆಲ್‌ ವಿಕ್ರಮ ಟಿವಿಯ ನಿರೂಪಕ, ಬಿಜೆಪಿಯ ಬೆಂಬಲಿಗ ಕಿರಿಕ್ ಕೀರ್ತಿ ಅವರು ಈ ಸ್ಕ್ರೀನ್‌ಶಾರ್ಟ್‌ ಹಂಚಿದ್ದಾರೆ. “ಇದೇ ಬೇಡ ಅನ್ನೋದು… ನಿನ್ನ ಧೈರ್ಯ ಕೊಂಡಾಡಿ ನೂರಾರು ಜನ‌ ನಿನ್ನನ್ನು ಹೀರೋಯಿನ್ ಮಾಡ್ತಿದ್ದಾರೆ… ಸಂತೋಷ… ಆದ್ರೆ ತಾಲಿಬಾನಿಯರಿಗೂ ಧನ್ಯವಾದ ಹೇಳೋ ನಿನ್ನ ಈ ಗುಣ ಸರಿಯಲ್ಲ‌… ನಮ್ಮ ಮುಸಲ್ಮಾನ ಬಂಧುಗಳು ಭಾರತದ ಜೊತೆಗಿರುವಾಗ ನೀನು ತಾಲಿಬಾನಿಯರನ್ನು ಅಹುದಹುದೆನ್ನೋದು ಸರಿಯಲ್ಲ…. ಅಂತಹ ಓವೈಸಿಯೇ ಪಾಕಿಸ್ತಾನಕ್ಕೆ ಛೀಮಾರಿ ಹಾಕಿದ್ದಾರೆ… ನೀನ್ಯಾಕೆ ಹೀಗಾದೆ…? ಭಾರತದ ಸರ್ವಧರ್ಮ ಸಮನ್ವಯಕ್ಕೆ ಶಾಪದಂತಿರೋ ತಾಲಿಬಾನಿಗಳು ನಿನ್ನ ಪರವಾಗಿದ್ದರೆ ಅದು ಒಳ್ಳೆಯ ಬೆಳವಣಿಗೆ ಅಲ್ಲ.. ಇದೆಲ್ಲಾ ನಾಲ್ಕು ದಿನದ ಆಟ… Be cool… ‘ಜೈ ಶ್ರೀರಾಮ್… ಅಲ್ಲಾ ಹೋ ಅಕ್ಬರ್…” ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ಸಿಂಧೂರ ಧರಿಸುವುದು ನನ್ನ ಆಯ್ಕೆ, ಹಿಜಾಬ್ ಧರಿಸುವುದು ಮುಸ್ಕಾನ್ ಆಯ್ಕೆ: ‘ಹಮ್ ಸಬ್ ಹಿಂದೂಸ್ತಾನಿ’ ಎಂದ ತೆಲಂಗಾಣ ಸಿಎಂ ಮಗಳು

ಫ್ಯಾಕ್ಟ್‌ಚೆಕ್‌

ಸ್ಕ್ರೀನ್‌ಶಾರ್ಟ್‌ ವೈರಲ್‌ ಆಗುತ್ತಿದ್ದಂತೆ ಅದನ್ನು ಫ್ಯಾಕ್ಟ್‌‌ಚೆಕ್ ಮಾಡುವಂತೆ ನಾನುಗೌರಿ.ಕಾಂಗೆ ಕೋರಿಕೆಗಳು ಬಂದಿವೆ. ಈ ಬಗ್ಗೆ ನಾನುಗೌರಿ.ಕಾಂ ಹುಡುಕಾಡಿದಾಗ, ಈ ಟ್ವೀಟ್‌ ಅನ್ನು ಮಾಡಿರುವ  ಟ್ವಿಟರ್‌‌ ಹ್ಯಾಂಡಲ್ ನಮಗೆ ಲಭ್ಯವಾಗಿದೆ.

@muskanind3467 ಎಂಬ ಹ್ಯಾಂಡಲ್ ಮೂಲಕ ಈ ಟ್ವೀಟ್ ಮಾಡಲಾಗಿದ್ದು, ಇದನ್ನು 2022ರ ಜನವರಿಯಲ್ಲಿ ಪ್ರಾರಂಭಿಸಲಾಗಿದೆ. ಈಗಾಗಲೇ ಈ ಖಾತೆಗೆ ಆರು ಸಾವಿರಕ್ಕಿಂತಲೂ ಹೆಚ್ಚಿನ ಜನರು ಫಾಲೋವರ್‌ಗಳಾಗಿದ್ದಾರೆ.

ಈ ಖಾತೆಯು ಜನವರಿಯಲ್ಲಿ ಪ್ರಾರಂಭಿಸಲಾಗಿದೆ ಎಂದು ಟ್ವಿಟರ್‌ ಮಾಹಿತಿ ನೀಡುತ್ತಿದೆ ಆದರೆ, ಈ ಖಾತೆಯಲ್ಲಿ ಮೊದಲ ಬಾರಿಗೆ ಫೆಬ್ರವರಿ 8 ರಂದು ಹಿಜಾಬ್ ವಿಚಾರವಾಗಿ ವಿಡಿಯೊವೊಂದನ್ನು ಅಪ್‌ಲೋಡ್ ಮಾಡಲಾಗಿದೆ. ಮಂಡ್ಯದಲ್ಲಿ ಮುಸ್ಕಾನ್ ಅವರನ್ನು ಬಿಜೆಪಿ ಬೆಂಬಲಿಗರು ಬೆನ್ನಟ್ಟಿದ್ದು ಕೂಡಾ ಅಂದೇ ಆಗಿತ್ತು. ಆದರೆ ಈ ಘಟನೆಯ ಬಗ್ಗೆ ಖಾತೆಯು ಫೆಬ್ರವರಿ 9ರ ನಂತರ ಉಲ್ಲೇಖಿಸಿದೆ.

ಇದನ್ನೂ ಓದಿ: ಬೀಬಿ ಮುಸ್ಕಾನ್‌ ಘೋಷಣೆ: ಒಂದೆಡೆ RSS ಮುಸ್ಲಿಂ ಘಟಕದ ಬೆಂಬಲ, ಇನ್ನೊಂದೆಡೆ RSS ಮುಖಂಡರ ಖಂಡನೆ 

@musk_a_n ಹ್ಯಾಂಡಲ್‌ನಲ್ಲಿ ಮತ್ತೊಂದು ಖಾತೆಯನ್ನು ಅವರ ಹೆಸರಿನಲ್ಲಿ ತೆರೆಯಲಾಗಿದೆ. ಅದು ಸಹಾ ಜನವರಿಯಲ್ಲಿ ಪ್ರಾರಂಭಿಸಲಾಗಿದ್ದು, ಫೆಬ್ರವರಿ ಹತ್ತರಿಂದ ಖಾತೆಯಲ್ಲಿ ಚಟುವಟಿಗೆ ಶುರುಮಾಡಲಾಗಿದೆ.

ಇಷ್ಟೇ ಅಲ್ಲದೆ ಅವರ ಹೆಸರಿನಲ್ಲಿ ಹಲವಾರು ಟ್ವಿಟರ್‌ ಖಾತೆಯನ್ನು ತೆರೆಯಲಾಗಿದೆ.

ಈ ಖಾತೆಯ ಸತ್ಯಾಸತ್ಯತೆಯ ಬಗ್ಗೆ ತಿಳಿಯಲು ನಾನುಗೌರಿ.ಕಾಂ ಮುಸ್ಕಾನ್ ಅವರ ತಂದೆ ಹುಸೈನ್‌ ಖಾನ್ ಅವರನ್ನು ಸಂಪರ್ಕಿಸಿದೆ. ನಾನುಗೌರಿ.ಕಾಂ ಜೊತೆ ಮಾತನಾಡಿದ ಅವರು, “ನನ್ನ ಮಗಳ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಏನೆಲ್ಲಾ ಬರೆಯುತ್ತಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಅವರಿಗೆ ಯಾವುದೇ ಖಾತೆಗಳು ಇಲ್ಲ. ಅವೆಲ್ಲವೂ ನಕಲಿಯಾಗಿದೆ” ಎಂದು ಅವರು ಹೇಳಿದ್ದಾರೆ.

ಅಲ್ಲದೆ ಪ್ರಜಾವಾಣಿ ಪತ್ರಿಗೆಗೆ ಸ್ವತಃ ಮುಸ್ಕಾನ್ ಅವರೇ ಸಂದರ್ಶನ ನೀಡಿದ್ದು, ಅದರಲ್ಲಿ ಮಾತನಾಡಿರುವ ಅವರು, “ಘೋಷಣೆ ಕುರಿತಂತೆ ಪರ–ವಿರೋಧ ಚರ್ಚೆಗೆ ಬೇಸರವಿಲ್ಲ. ಆದರೆ, ಸಾಮಾಜಿಕ ಜಾಲತಾಣಗಳಲ್ಲಿ ನಡೆಯುತ್ತಿರುವ ಅಪಪ್ರಚಾರದಿಂದ ತುಂಬಾ ನೋವಾಗಿದೆ. ನಾನು ಫೇಸ್‌ಬುಕ್‌, ಟ್ವಿಟರ್‌ ಬಳಸುತ್ತಿಲ್ಲ. ಕೆಲವರು ನಕಲಿ ಖಾತೆ ತೆರೆದು ಸುಳ್ಳು ಹಬ್ಬಿಸುತ್ತಿದ್ದಾರೆ. ನನ್ನ ಭಾವಚಿತ್ರ ಎಡಿಟ್‌ ಮಾಡಿ ಕೆಟ್ಟದಾಗಿ ಬರೆಯುತ್ತಿದ್ದಾರೆ” ಎಂದು ಹೇಳಿದ್ದಾರೆ.

“ನನಗೆ ಕಾಲೇಜು, ಮನೆ ಬಿಟ್ಟರೆ ನನಗೆ ಬೇರೆ ಪ್ರಪಂಚವಿಲ್ಲ. ನಾನು ಚಳವಳಿಗಾರರ ಜೊತೆ ಸಂಪರ್ಕದಲ್ಲಿದ್ದೆ, ತರಬೇತಿ ಪಡೆದಿದ್ದೆ ಎಂದೆಲ್ಲಾ ಸುಳ್ಳು ಸುದ್ದಿ ಹರಡಿಸುತ್ತಿದ್ದಾರೆ. ಆತ್ಮಹತ್ಯೆ ಮಾಡಿಕೊಂಡಿದ್ದಾಳೆ, ನೇಣು ಹಾಕಿದ್ದಾರೆ ಎಂದೆಲ್ಲಾ ಬರೆದಿದ್ದಾರೆ. ಇದರ ವಿರುದ್ಧ ಪೊಲೀಸರಿಗೆ ದೂರು ನೀಡಲು ನಿರ್ಧರಿಸಿದ್ದೇನೆ” ಎಂದು ಅವರು ಪ್ರಜಾವಾಣಿ ಜೊತೆಗೆ ಮಾತನಾಡುತ್ತಾ ಹೇಳಿದ್ದಾರೆ.

ಖ್ಯಾತ ಫ್ಯಾಕ್ಟ್‌ಚೆಕ್ ವೆಬ್‌ಸೈಟ್‌‌ ಆಲ್ಟ್‌ ನ್ಯೂಸ್‌‌ ಸಂಸ್ಥಾಪಕ ಜುಬೈರ್‌ ಅವರು, “ನಕಲಿ ಐಡಿಯಿಂದ ಮಾಡಿದ ಈ ಟ್ವೀಟ್‌ನ ಸ್ಕ್ರೀನ್‌ಶಾಟ್ ಮುಸ್ಕಾನ್ ಅವರನ್ನು ಗುರಿಯಾಗಿಸಿಕೊಂಡು ಫೇಸ್‌ಬುಕ್ ಮತ್ತು ವಾಟ್ಸ್‌ಆಪ್‌ನಲ್ಲಿನಲ್ಲಿ ವೈರಲ್ ಆಗಿದೆ. ಮುಸ್ಕಾನ್‌ ಅವರು ಟ್ವಿಟರ್ ಖಾತೆ ಹೊಂದಿಲ್ಲ. @muskanind3467 ಖಾತೆಯನ್ನು ಪಾಕಿಸ್ತಾನದಿಂದ ಯಾರೋ ರಚಿಸಿದ್ದು, ಈ ಖಾತೆ ಹಿಂದೆ @AmanTweets60 ಆಗಿತ್ತು. ನಂತರ ಅದನ್ನು @muskanind3467 ಎಂದು ಬದಲಾಯಿಸಲಾಗಿದೆ” ಎಂದು ಬರೆದಿದಾರೆ.

ಒಟ್ಟಿನಲ್ಲಿ ಹೇಳಬಹುದಾದರೆ, ಸಾಮಾಜಿಕ ಜಾಲತಾಣದಲ್ಲಿ ಬಿಜೆಪಿ ಬೆಂಬಲಿಗರು ಶೇರ್‌ ಮಾಡುತ್ತಿರುವ ಟ್ವಿಟರ್‌ ಸ್ಕ್ರೀನ್‌ ಶಾರ್ಟ್‌ ಬೀಬಿ ಮುಸ್ಕಾನ್ ಅವರದ್ದಲ್ಲ. ಅವರಿಗೆ ಸಾಮಾಜಿಕ ಜಾಲತಾಣಗಳಾದ ಫೇಸ್‌ಬುಕ್‌ ಮತ್ತು ಟ್ವಿಟರ್‌ನಲ್ಲಿ ಯಾವುದೇ ಖಾತೆಗಳು ಇಲ್ಲ.

ಇದನ್ನೂ ಓದಿ: ಹಿಜಾಬ್‌‌‌‌‌‌ ವಿರೋಧಿ ಹಿಂಸಾಚಾರವು ರಾಜ್ಯದ ಸಮ್ಮಿಶ್ರ ವೈವಿಧ್ಯ ಸಂಸ್ಕೃತಿಯನ್ನು ನಾಶ ಮಾಡುತ್ತಿದೆ: ‘ಬಹುತ್ವ ಕರ್ನಾಟಕ’ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...