Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌‌ಚೆಕ್‌: ತಾಲಿಬಾನ್‌ಗೆ ಥ್ಯಾಂಕ್ಸ್‌ ಹೇಳಿದ ಈ ಟ್ವಿಟರ್‌ ಅಕೌಂಟ್‌ ದಿಟ್ಟ ವಿದ್ಯಾರ್ಥಿನಿ ಮುಸ್ಕಾನ್‌ ಅವರದ್ದಲ್ಲ, ಅದು...

ಫ್ಯಾಕ್ಟ್‌‌ಚೆಕ್‌: ತಾಲಿಬಾನ್‌ಗೆ ಥ್ಯಾಂಕ್ಸ್‌ ಹೇಳಿದ ಈ ಟ್ವಿಟರ್‌ ಅಕೌಂಟ್‌ ದಿಟ್ಟ ವಿದ್ಯಾರ್ಥಿನಿ ಮುಸ್ಕಾನ್‌ ಅವರದ್ದಲ್ಲ, ಅದು ನಕಲಿ

- Advertisement -
- Advertisement -

ಮಂಡ್ಯದ ಪಿಇಎಸ್‌‌ ಕಾಲೇಜಿನಲ್ಲಿ ಕೇಸರಿ ಶಾಲು ಧರಿಸಿದ್ದ ಬಿಜೆಪಿ ಬೆಂಬಲಿತ ಯುವಕರು, ಜೈಶ್ರೀರಾಂ ಎಂದು ರಾಜಕೀಯ ಘೋಷಣೆ ಕೂಗುತ್ತಾ ವಿದ್ಯಾರ್ಥಿನಿ ಬೀಬಿ ಮುಸ್ಕಾನ್‌ ಖಾನ್‌‌ ಅವರನ್ನು ಬೆನ್ನಟ್ಟಿದ್ದರು. ಈ ವೇಳೆ ಮುಸ್ಕಾನ್ ಅವರು ದುಷ್ಕರ್ಮಿಗಳ ರಾಜಕೀಯ ಘೋಷಣೆಗೆ ವಿರುದ್ದವಾಗಿ, “ಅಲ್ಲಾಹು ಅಕ್ಬರ್‌” ಎಂದು ಕೂಗಿ ಪ್ರತಿರೋಧ ಒಡ್ಡಿದ್ದರು.

ಈ ಘಟನೆಯ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದ್ದು, ಬೀಬಿ ಮುಸ್ಕಾನ್ ಅವರಿಗೆ ವಿಶ್ವದಾದ್ಯಂತ ಅಭಿನಂದನೆಗಳ ಮಹಾಪೂರವೇ ಹರಿದು ಬಂದಿತ್ತು. ಈ ವೇಳೆ ಹಲವಾರು ಗಣ್ಯರು, ಹೋರಾಟಗಾರರು ಮುಸ್ಕಾನ್ ಅವರಿಗೆ ಬೆಂಬಲ ವ್ಯಕ್ತಪಡಿಸಿ, ಹಿಜಾಬ್ ಧರಿಸುವ ಅವರ ಧಾರ್ಮಿಕ ಹಕ್ಕಿನ ಪರವಾಗಿ ನಿಂತಿದ್ದರು. ಇದೇ ರೀತಿ, ಬಿಜೆಪಿಯ ಮೋದಿ ನೇತೃತ್ವದ ಸರ್ಕಾರ 200 ಕೋಟಿ ರೂ ನೆರವು ನೀಡುವುದಾಗಿ ಘೋಷಿಸಿರುವ ಅಫ್ಘಾನ್‌ನ ತಾಲಿಬಾನ್‌ ಆಡಳಿತ ಕೂಡಾ ಮುಸ್ಕಾನ್‌‌ಗೆ ಬೆಂಬಲ ವ್ಯಕ್ತಪಡಿಸಿತ್ತು.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ರಾಹುಲ್‌ ಗಾಂಧಿ ಜೊತೆಯಲ್ಲಿ ದಿಟ್ಟ ಹುಡುಗಿ ಮುಸ್ಕಾನ್‌ ಫೋಟೋ ತೆಗೆದುಕೊಂಡಿದ್ದರೆ?

ಆದರೆ ಇದೀಗ ಮುಸ್ಕಾನ್ ಅವರು ತಾಲಿಬಾನ್‌ ನೀಡಿದ ಬೆಂಬಲಕ್ಕೆ ಟ್ವಿಟರ್‌ನಲ್ಲಿ ‘ಧನ್ಯವಾದ’ ಹೇಳಿದ್ದಾರೆ ಎಂದು ಪ್ರತಿಪಾದಿಸಿ ಟ್ವಿಟರ್‌ ಸ್ಕ್ರೀನ್‌ಶಾರ್ಟ್‌ ಒಂದು ಹರಿದಾಡುತ್ತಿದೆ. ಇದನ್ನು ಬಿಜೆಪಿ ಬೆಂಬಲಿಗರು ಮತ್ತು ಬಲಪಂಥೀಯರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳುತ್ತಿದ್ದಾರೆ. ಇದನ್ನು ನೀವು ಇಲ್ಲಿ ಮತ್ತು ಇಲ್ಲಿ ನೋಡಬಹುದು.

ಫೇಕ್‌ಪ್ಯಾಕ್ಟರಿ ಎಂದೇ ಕುಖ್ಯಾತಿ ಹೊಂದಿರುವ ಪೋಸ್ಟ್‌ಕಾರ್ಡ್‌‌ನ ಯೂಟ್ಯೂಬ್ ಚಾನೆಲ್‌ ವಿಕ್ರಮ ಟಿವಿಯ ನಿರೂಪಕ, ಬಿಜೆಪಿಯ ಬೆಂಬಲಿಗ ಕಿರಿಕ್ ಕೀರ್ತಿ ಅವರು ಈ ಸ್ಕ್ರೀನ್‌ಶಾರ್ಟ್‌ ಹಂಚಿದ್ದಾರೆ. “ಇದೇ ಬೇಡ ಅನ್ನೋದು… ನಿನ್ನ ಧೈರ್ಯ ಕೊಂಡಾಡಿ ನೂರಾರು ಜನ‌ ನಿನ್ನನ್ನು ಹೀರೋಯಿನ್ ಮಾಡ್ತಿದ್ದಾರೆ… ಸಂತೋಷ… ಆದ್ರೆ ತಾಲಿಬಾನಿಯರಿಗೂ ಧನ್ಯವಾದ ಹೇಳೋ ನಿನ್ನ ಈ ಗುಣ ಸರಿಯಲ್ಲ‌… ನಮ್ಮ ಮುಸಲ್ಮಾನ ಬಂಧುಗಳು ಭಾರತದ ಜೊತೆಗಿರುವಾಗ ನೀನು ತಾಲಿಬಾನಿಯರನ್ನು ಅಹುದಹುದೆನ್ನೋದು ಸರಿಯಲ್ಲ…. ಅಂತಹ ಓವೈಸಿಯೇ ಪಾಕಿಸ್ತಾನಕ್ಕೆ ಛೀಮಾರಿ ಹಾಕಿದ್ದಾರೆ… ನೀನ್ಯಾಕೆ ಹೀಗಾದೆ…? ಭಾರತದ ಸರ್ವಧರ್ಮ ಸಮನ್ವಯಕ್ಕೆ ಶಾಪದಂತಿರೋ ತಾಲಿಬಾನಿಗಳು ನಿನ್ನ ಪರವಾಗಿದ್ದರೆ ಅದು ಒಳ್ಳೆಯ ಬೆಳವಣಿಗೆ ಅಲ್ಲ.. ಇದೆಲ್ಲಾ ನಾಲ್ಕು ದಿನದ ಆಟ… Be cool… ‘ಜೈ ಶ್ರೀರಾಮ್… ಅಲ್ಲಾ ಹೋ ಅಕ್ಬರ್…” ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ಸಿಂಧೂರ ಧರಿಸುವುದು ನನ್ನ ಆಯ್ಕೆ, ಹಿಜಾಬ್ ಧರಿಸುವುದು ಮುಸ್ಕಾನ್ ಆಯ್ಕೆ: ‘ಹಮ್ ಸಬ್ ಹಿಂದೂಸ್ತಾನಿ’ ಎಂದ ತೆಲಂಗಾಣ ಸಿಎಂ ಮಗಳು

ಫ್ಯಾಕ್ಟ್‌ಚೆಕ್‌

ಸ್ಕ್ರೀನ್‌ಶಾರ್ಟ್‌ ವೈರಲ್‌ ಆಗುತ್ತಿದ್ದಂತೆ ಅದನ್ನು ಫ್ಯಾಕ್ಟ್‌‌ಚೆಕ್ ಮಾಡುವಂತೆ ನಾನುಗೌರಿ.ಕಾಂಗೆ ಕೋರಿಕೆಗಳು ಬಂದಿವೆ. ಈ ಬಗ್ಗೆ ನಾನುಗೌರಿ.ಕಾಂ ಹುಡುಕಾಡಿದಾಗ, ಈ ಟ್ವೀಟ್‌ ಅನ್ನು ಮಾಡಿರುವ  ಟ್ವಿಟರ್‌‌ ಹ್ಯಾಂಡಲ್ ನಮಗೆ ಲಭ್ಯವಾಗಿದೆ.

@muskanind3467 ಎಂಬ ಹ್ಯಾಂಡಲ್ ಮೂಲಕ ಈ ಟ್ವೀಟ್ ಮಾಡಲಾಗಿದ್ದು, ಇದನ್ನು 2022ರ ಜನವರಿಯಲ್ಲಿ ಪ್ರಾರಂಭಿಸಲಾಗಿದೆ. ಈಗಾಗಲೇ ಈ ಖಾತೆಗೆ ಆರು ಸಾವಿರಕ್ಕಿಂತಲೂ ಹೆಚ್ಚಿನ ಜನರು ಫಾಲೋವರ್‌ಗಳಾಗಿದ್ದಾರೆ.

ಈ ಖಾತೆಯು ಜನವರಿಯಲ್ಲಿ ಪ್ರಾರಂಭಿಸಲಾಗಿದೆ ಎಂದು ಟ್ವಿಟರ್‌ ಮಾಹಿತಿ ನೀಡುತ್ತಿದೆ ಆದರೆ, ಈ ಖಾತೆಯಲ್ಲಿ ಮೊದಲ ಬಾರಿಗೆ ಫೆಬ್ರವರಿ 8 ರಂದು ಹಿಜಾಬ್ ವಿಚಾರವಾಗಿ ವಿಡಿಯೊವೊಂದನ್ನು ಅಪ್‌ಲೋಡ್ ಮಾಡಲಾಗಿದೆ. ಮಂಡ್ಯದಲ್ಲಿ ಮುಸ್ಕಾನ್ ಅವರನ್ನು ಬಿಜೆಪಿ ಬೆಂಬಲಿಗರು ಬೆನ್ನಟ್ಟಿದ್ದು ಕೂಡಾ ಅಂದೇ ಆಗಿತ್ತು. ಆದರೆ ಈ ಘಟನೆಯ ಬಗ್ಗೆ ಖಾತೆಯು ಫೆಬ್ರವರಿ 9ರ ನಂತರ ಉಲ್ಲೇಖಿಸಿದೆ.

ಇದನ್ನೂ ಓದಿ: ಬೀಬಿ ಮುಸ್ಕಾನ್‌ ಘೋಷಣೆ: ಒಂದೆಡೆ RSS ಮುಸ್ಲಿಂ ಘಟಕದ ಬೆಂಬಲ, ಇನ್ನೊಂದೆಡೆ RSS ಮುಖಂಡರ ಖಂಡನೆ 

@musk_a_n ಹ್ಯಾಂಡಲ್‌ನಲ್ಲಿ ಮತ್ತೊಂದು ಖಾತೆಯನ್ನು ಅವರ ಹೆಸರಿನಲ್ಲಿ ತೆರೆಯಲಾಗಿದೆ. ಅದು ಸಹಾ ಜನವರಿಯಲ್ಲಿ ಪ್ರಾರಂಭಿಸಲಾಗಿದ್ದು, ಫೆಬ್ರವರಿ ಹತ್ತರಿಂದ ಖಾತೆಯಲ್ಲಿ ಚಟುವಟಿಗೆ ಶುರುಮಾಡಲಾಗಿದೆ.

ಇಷ್ಟೇ ಅಲ್ಲದೆ ಅವರ ಹೆಸರಿನಲ್ಲಿ ಹಲವಾರು ಟ್ವಿಟರ್‌ ಖಾತೆಯನ್ನು ತೆರೆಯಲಾಗಿದೆ.

ಈ ಖಾತೆಯ ಸತ್ಯಾಸತ್ಯತೆಯ ಬಗ್ಗೆ ತಿಳಿಯಲು ನಾನುಗೌರಿ.ಕಾಂ ಮುಸ್ಕಾನ್ ಅವರ ತಂದೆ ಹುಸೈನ್‌ ಖಾನ್ ಅವರನ್ನು ಸಂಪರ್ಕಿಸಿದೆ. ನಾನುಗೌರಿ.ಕಾಂ ಜೊತೆ ಮಾತನಾಡಿದ ಅವರು, “ನನ್ನ ಮಗಳ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಏನೆಲ್ಲಾ ಬರೆಯುತ್ತಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಅವರಿಗೆ ಯಾವುದೇ ಖಾತೆಗಳು ಇಲ್ಲ. ಅವೆಲ್ಲವೂ ನಕಲಿಯಾಗಿದೆ” ಎಂದು ಅವರು ಹೇಳಿದ್ದಾರೆ.

ಅಲ್ಲದೆ ಪ್ರಜಾವಾಣಿ ಪತ್ರಿಗೆಗೆ ಸ್ವತಃ ಮುಸ್ಕಾನ್ ಅವರೇ ಸಂದರ್ಶನ ನೀಡಿದ್ದು, ಅದರಲ್ಲಿ ಮಾತನಾಡಿರುವ ಅವರು, “ಘೋಷಣೆ ಕುರಿತಂತೆ ಪರ–ವಿರೋಧ ಚರ್ಚೆಗೆ ಬೇಸರವಿಲ್ಲ. ಆದರೆ, ಸಾಮಾಜಿಕ ಜಾಲತಾಣಗಳಲ್ಲಿ ನಡೆಯುತ್ತಿರುವ ಅಪಪ್ರಚಾರದಿಂದ ತುಂಬಾ ನೋವಾಗಿದೆ. ನಾನು ಫೇಸ್‌ಬುಕ್‌, ಟ್ವಿಟರ್‌ ಬಳಸುತ್ತಿಲ್ಲ. ಕೆಲವರು ನಕಲಿ ಖಾತೆ ತೆರೆದು ಸುಳ್ಳು ಹಬ್ಬಿಸುತ್ತಿದ್ದಾರೆ. ನನ್ನ ಭಾವಚಿತ್ರ ಎಡಿಟ್‌ ಮಾಡಿ ಕೆಟ್ಟದಾಗಿ ಬರೆಯುತ್ತಿದ್ದಾರೆ” ಎಂದು ಹೇಳಿದ್ದಾರೆ.

“ನನಗೆ ಕಾಲೇಜು, ಮನೆ ಬಿಟ್ಟರೆ ನನಗೆ ಬೇರೆ ಪ್ರಪಂಚವಿಲ್ಲ. ನಾನು ಚಳವಳಿಗಾರರ ಜೊತೆ ಸಂಪರ್ಕದಲ್ಲಿದ್ದೆ, ತರಬೇತಿ ಪಡೆದಿದ್ದೆ ಎಂದೆಲ್ಲಾ ಸುಳ್ಳು ಸುದ್ದಿ ಹರಡಿಸುತ್ತಿದ್ದಾರೆ. ಆತ್ಮಹತ್ಯೆ ಮಾಡಿಕೊಂಡಿದ್ದಾಳೆ, ನೇಣು ಹಾಕಿದ್ದಾರೆ ಎಂದೆಲ್ಲಾ ಬರೆದಿದ್ದಾರೆ. ಇದರ ವಿರುದ್ಧ ಪೊಲೀಸರಿಗೆ ದೂರು ನೀಡಲು ನಿರ್ಧರಿಸಿದ್ದೇನೆ” ಎಂದು ಅವರು ಪ್ರಜಾವಾಣಿ ಜೊತೆಗೆ ಮಾತನಾಡುತ್ತಾ ಹೇಳಿದ್ದಾರೆ.

ಖ್ಯಾತ ಫ್ಯಾಕ್ಟ್‌ಚೆಕ್ ವೆಬ್‌ಸೈಟ್‌‌ ಆಲ್ಟ್‌ ನ್ಯೂಸ್‌‌ ಸಂಸ್ಥಾಪಕ ಜುಬೈರ್‌ ಅವರು, “ನಕಲಿ ಐಡಿಯಿಂದ ಮಾಡಿದ ಈ ಟ್ವೀಟ್‌ನ ಸ್ಕ್ರೀನ್‌ಶಾಟ್ ಮುಸ್ಕಾನ್ ಅವರನ್ನು ಗುರಿಯಾಗಿಸಿಕೊಂಡು ಫೇಸ್‌ಬುಕ್ ಮತ್ತು ವಾಟ್ಸ್‌ಆಪ್‌ನಲ್ಲಿನಲ್ಲಿ ವೈರಲ್ ಆಗಿದೆ. ಮುಸ್ಕಾನ್‌ ಅವರು ಟ್ವಿಟರ್ ಖಾತೆ ಹೊಂದಿಲ್ಲ. @muskanind3467 ಖಾತೆಯನ್ನು ಪಾಕಿಸ್ತಾನದಿಂದ ಯಾರೋ ರಚಿಸಿದ್ದು, ಈ ಖಾತೆ ಹಿಂದೆ @AmanTweets60 ಆಗಿತ್ತು. ನಂತರ ಅದನ್ನು @muskanind3467 ಎಂದು ಬದಲಾಯಿಸಲಾಗಿದೆ” ಎಂದು ಬರೆದಿದಾರೆ.

ಒಟ್ಟಿನಲ್ಲಿ ಹೇಳಬಹುದಾದರೆ, ಸಾಮಾಜಿಕ ಜಾಲತಾಣದಲ್ಲಿ ಬಿಜೆಪಿ ಬೆಂಬಲಿಗರು ಶೇರ್‌ ಮಾಡುತ್ತಿರುವ ಟ್ವಿಟರ್‌ ಸ್ಕ್ರೀನ್‌ ಶಾರ್ಟ್‌ ಬೀಬಿ ಮುಸ್ಕಾನ್ ಅವರದ್ದಲ್ಲ. ಅವರಿಗೆ ಸಾಮಾಜಿಕ ಜಾಲತಾಣಗಳಾದ ಫೇಸ್‌ಬುಕ್‌ ಮತ್ತು ಟ್ವಿಟರ್‌ನಲ್ಲಿ ಯಾವುದೇ ಖಾತೆಗಳು ಇಲ್ಲ.

ಇದನ್ನೂ ಓದಿ: ಹಿಜಾಬ್‌‌‌‌‌‌ ವಿರೋಧಿ ಹಿಂಸಾಚಾರವು ರಾಜ್ಯದ ಸಮ್ಮಿಶ್ರ ವೈವಿಧ್ಯ ಸಂಸ್ಕೃತಿಯನ್ನು ನಾಶ ಮಾಡುತ್ತಿದೆ: ‘ಬಹುತ್ವ ಕರ್ನಾಟಕ’ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...