Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌‌ಚೆಕ್‌: ತಾಲಿಬಾನ್‌ಗೆ ಥ್ಯಾಂಕ್ಸ್‌ ಹೇಳಿದ ಈ ಟ್ವಿಟರ್‌ ಅಕೌಂಟ್‌ ದಿಟ್ಟ ವಿದ್ಯಾರ್ಥಿನಿ ಮುಸ್ಕಾನ್‌ ಅವರದ್ದಲ್ಲ, ಅದು...

ಫ್ಯಾಕ್ಟ್‌‌ಚೆಕ್‌: ತಾಲಿಬಾನ್‌ಗೆ ಥ್ಯಾಂಕ್ಸ್‌ ಹೇಳಿದ ಈ ಟ್ವಿಟರ್‌ ಅಕೌಂಟ್‌ ದಿಟ್ಟ ವಿದ್ಯಾರ್ಥಿನಿ ಮುಸ್ಕಾನ್‌ ಅವರದ್ದಲ್ಲ, ಅದು ನಕಲಿ

- Advertisement -
- Advertisement -

ಮಂಡ್ಯದ ಪಿಇಎಸ್‌‌ ಕಾಲೇಜಿನಲ್ಲಿ ಕೇಸರಿ ಶಾಲು ಧರಿಸಿದ್ದ ಬಿಜೆಪಿ ಬೆಂಬಲಿತ ಯುವಕರು, ಜೈಶ್ರೀರಾಂ ಎಂದು ರಾಜಕೀಯ ಘೋಷಣೆ ಕೂಗುತ್ತಾ ವಿದ್ಯಾರ್ಥಿನಿ ಬೀಬಿ ಮುಸ್ಕಾನ್‌ ಖಾನ್‌‌ ಅವರನ್ನು ಬೆನ್ನಟ್ಟಿದ್ದರು. ಈ ವೇಳೆ ಮುಸ್ಕಾನ್ ಅವರು ದುಷ್ಕರ್ಮಿಗಳ ರಾಜಕೀಯ ಘೋಷಣೆಗೆ ವಿರುದ್ದವಾಗಿ, “ಅಲ್ಲಾಹು ಅಕ್ಬರ್‌” ಎಂದು ಕೂಗಿ ಪ್ರತಿರೋಧ ಒಡ್ಡಿದ್ದರು.

ಈ ಘಟನೆಯ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದ್ದು, ಬೀಬಿ ಮುಸ್ಕಾನ್ ಅವರಿಗೆ ವಿಶ್ವದಾದ್ಯಂತ ಅಭಿನಂದನೆಗಳ ಮಹಾಪೂರವೇ ಹರಿದು ಬಂದಿತ್ತು. ಈ ವೇಳೆ ಹಲವಾರು ಗಣ್ಯರು, ಹೋರಾಟಗಾರರು ಮುಸ್ಕಾನ್ ಅವರಿಗೆ ಬೆಂಬಲ ವ್ಯಕ್ತಪಡಿಸಿ, ಹಿಜಾಬ್ ಧರಿಸುವ ಅವರ ಧಾರ್ಮಿಕ ಹಕ್ಕಿನ ಪರವಾಗಿ ನಿಂತಿದ್ದರು. ಇದೇ ರೀತಿ, ಬಿಜೆಪಿಯ ಮೋದಿ ನೇತೃತ್ವದ ಸರ್ಕಾರ 200 ಕೋಟಿ ರೂ ನೆರವು ನೀಡುವುದಾಗಿ ಘೋಷಿಸಿರುವ ಅಫ್ಘಾನ್‌ನ ತಾಲಿಬಾನ್‌ ಆಡಳಿತ ಕೂಡಾ ಮುಸ್ಕಾನ್‌‌ಗೆ ಬೆಂಬಲ ವ್ಯಕ್ತಪಡಿಸಿತ್ತು.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ರಾಹುಲ್‌ ಗಾಂಧಿ ಜೊತೆಯಲ್ಲಿ ದಿಟ್ಟ ಹುಡುಗಿ ಮುಸ್ಕಾನ್‌ ಫೋಟೋ ತೆಗೆದುಕೊಂಡಿದ್ದರೆ?

ಆದರೆ ಇದೀಗ ಮುಸ್ಕಾನ್ ಅವರು ತಾಲಿಬಾನ್‌ ನೀಡಿದ ಬೆಂಬಲಕ್ಕೆ ಟ್ವಿಟರ್‌ನಲ್ಲಿ ‘ಧನ್ಯವಾದ’ ಹೇಳಿದ್ದಾರೆ ಎಂದು ಪ್ರತಿಪಾದಿಸಿ ಟ್ವಿಟರ್‌ ಸ್ಕ್ರೀನ್‌ಶಾರ್ಟ್‌ ಒಂದು ಹರಿದಾಡುತ್ತಿದೆ. ಇದನ್ನು ಬಿಜೆಪಿ ಬೆಂಬಲಿಗರು ಮತ್ತು ಬಲಪಂಥೀಯರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳುತ್ತಿದ್ದಾರೆ. ಇದನ್ನು ನೀವು ಇಲ್ಲಿ ಮತ್ತು ಇಲ್ಲಿ ನೋಡಬಹುದು.

ಫೇಕ್‌ಪ್ಯಾಕ್ಟರಿ ಎಂದೇ ಕುಖ್ಯಾತಿ ಹೊಂದಿರುವ ಪೋಸ್ಟ್‌ಕಾರ್ಡ್‌‌ನ ಯೂಟ್ಯೂಬ್ ಚಾನೆಲ್‌ ವಿಕ್ರಮ ಟಿವಿಯ ನಿರೂಪಕ, ಬಿಜೆಪಿಯ ಬೆಂಬಲಿಗ ಕಿರಿಕ್ ಕೀರ್ತಿ ಅವರು ಈ ಸ್ಕ್ರೀನ್‌ಶಾರ್ಟ್‌ ಹಂಚಿದ್ದಾರೆ. “ಇದೇ ಬೇಡ ಅನ್ನೋದು… ನಿನ್ನ ಧೈರ್ಯ ಕೊಂಡಾಡಿ ನೂರಾರು ಜನ‌ ನಿನ್ನನ್ನು ಹೀರೋಯಿನ್ ಮಾಡ್ತಿದ್ದಾರೆ… ಸಂತೋಷ… ಆದ್ರೆ ತಾಲಿಬಾನಿಯರಿಗೂ ಧನ್ಯವಾದ ಹೇಳೋ ನಿನ್ನ ಈ ಗುಣ ಸರಿಯಲ್ಲ‌… ನಮ್ಮ ಮುಸಲ್ಮಾನ ಬಂಧುಗಳು ಭಾರತದ ಜೊತೆಗಿರುವಾಗ ನೀನು ತಾಲಿಬಾನಿಯರನ್ನು ಅಹುದಹುದೆನ್ನೋದು ಸರಿಯಲ್ಲ…. ಅಂತಹ ಓವೈಸಿಯೇ ಪಾಕಿಸ್ತಾನಕ್ಕೆ ಛೀಮಾರಿ ಹಾಕಿದ್ದಾರೆ… ನೀನ್ಯಾಕೆ ಹೀಗಾದೆ…? ಭಾರತದ ಸರ್ವಧರ್ಮ ಸಮನ್ವಯಕ್ಕೆ ಶಾಪದಂತಿರೋ ತಾಲಿಬಾನಿಗಳು ನಿನ್ನ ಪರವಾಗಿದ್ದರೆ ಅದು ಒಳ್ಳೆಯ ಬೆಳವಣಿಗೆ ಅಲ್ಲ.. ಇದೆಲ್ಲಾ ನಾಲ್ಕು ದಿನದ ಆಟ… Be cool… ‘ಜೈ ಶ್ರೀರಾಮ್… ಅಲ್ಲಾ ಹೋ ಅಕ್ಬರ್…” ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ಸಿಂಧೂರ ಧರಿಸುವುದು ನನ್ನ ಆಯ್ಕೆ, ಹಿಜಾಬ್ ಧರಿಸುವುದು ಮುಸ್ಕಾನ್ ಆಯ್ಕೆ: ‘ಹಮ್ ಸಬ್ ಹಿಂದೂಸ್ತಾನಿ’ ಎಂದ ತೆಲಂಗಾಣ ಸಿಎಂ ಮಗಳು

ಫ್ಯಾಕ್ಟ್‌ಚೆಕ್‌

ಸ್ಕ್ರೀನ್‌ಶಾರ್ಟ್‌ ವೈರಲ್‌ ಆಗುತ್ತಿದ್ದಂತೆ ಅದನ್ನು ಫ್ಯಾಕ್ಟ್‌‌ಚೆಕ್ ಮಾಡುವಂತೆ ನಾನುಗೌರಿ.ಕಾಂಗೆ ಕೋರಿಕೆಗಳು ಬಂದಿವೆ. ಈ ಬಗ್ಗೆ ನಾನುಗೌರಿ.ಕಾಂ ಹುಡುಕಾಡಿದಾಗ, ಈ ಟ್ವೀಟ್‌ ಅನ್ನು ಮಾಡಿರುವ  ಟ್ವಿಟರ್‌‌ ಹ್ಯಾಂಡಲ್ ನಮಗೆ ಲಭ್ಯವಾಗಿದೆ.

@muskanind3467 ಎಂಬ ಹ್ಯಾಂಡಲ್ ಮೂಲಕ ಈ ಟ್ವೀಟ್ ಮಾಡಲಾಗಿದ್ದು, ಇದನ್ನು 2022ರ ಜನವರಿಯಲ್ಲಿ ಪ್ರಾರಂಭಿಸಲಾಗಿದೆ. ಈಗಾಗಲೇ ಈ ಖಾತೆಗೆ ಆರು ಸಾವಿರಕ್ಕಿಂತಲೂ ಹೆಚ್ಚಿನ ಜನರು ಫಾಲೋವರ್‌ಗಳಾಗಿದ್ದಾರೆ.

ಈ ಖಾತೆಯು ಜನವರಿಯಲ್ಲಿ ಪ್ರಾರಂಭಿಸಲಾಗಿದೆ ಎಂದು ಟ್ವಿಟರ್‌ ಮಾಹಿತಿ ನೀಡುತ್ತಿದೆ ಆದರೆ, ಈ ಖಾತೆಯಲ್ಲಿ ಮೊದಲ ಬಾರಿಗೆ ಫೆಬ್ರವರಿ 8 ರಂದು ಹಿಜಾಬ್ ವಿಚಾರವಾಗಿ ವಿಡಿಯೊವೊಂದನ್ನು ಅಪ್‌ಲೋಡ್ ಮಾಡಲಾಗಿದೆ. ಮಂಡ್ಯದಲ್ಲಿ ಮುಸ್ಕಾನ್ ಅವರನ್ನು ಬಿಜೆಪಿ ಬೆಂಬಲಿಗರು ಬೆನ್ನಟ್ಟಿದ್ದು ಕೂಡಾ ಅಂದೇ ಆಗಿತ್ತು. ಆದರೆ ಈ ಘಟನೆಯ ಬಗ್ಗೆ ಖಾತೆಯು ಫೆಬ್ರವರಿ 9ರ ನಂತರ ಉಲ್ಲೇಖಿಸಿದೆ.

ಇದನ್ನೂ ಓದಿ: ಬೀಬಿ ಮುಸ್ಕಾನ್‌ ಘೋಷಣೆ: ಒಂದೆಡೆ RSS ಮುಸ್ಲಿಂ ಘಟಕದ ಬೆಂಬಲ, ಇನ್ನೊಂದೆಡೆ RSS ಮುಖಂಡರ ಖಂಡನೆ 

@musk_a_n ಹ್ಯಾಂಡಲ್‌ನಲ್ಲಿ ಮತ್ತೊಂದು ಖಾತೆಯನ್ನು ಅವರ ಹೆಸರಿನಲ್ಲಿ ತೆರೆಯಲಾಗಿದೆ. ಅದು ಸಹಾ ಜನವರಿಯಲ್ಲಿ ಪ್ರಾರಂಭಿಸಲಾಗಿದ್ದು, ಫೆಬ್ರವರಿ ಹತ್ತರಿಂದ ಖಾತೆಯಲ್ಲಿ ಚಟುವಟಿಗೆ ಶುರುಮಾಡಲಾಗಿದೆ.

ಇಷ್ಟೇ ಅಲ್ಲದೆ ಅವರ ಹೆಸರಿನಲ್ಲಿ ಹಲವಾರು ಟ್ವಿಟರ್‌ ಖಾತೆಯನ್ನು ತೆರೆಯಲಾಗಿದೆ.

ಈ ಖಾತೆಯ ಸತ್ಯಾಸತ್ಯತೆಯ ಬಗ್ಗೆ ತಿಳಿಯಲು ನಾನುಗೌರಿ.ಕಾಂ ಮುಸ್ಕಾನ್ ಅವರ ತಂದೆ ಹುಸೈನ್‌ ಖಾನ್ ಅವರನ್ನು ಸಂಪರ್ಕಿಸಿದೆ. ನಾನುಗೌರಿ.ಕಾಂ ಜೊತೆ ಮಾತನಾಡಿದ ಅವರು, “ನನ್ನ ಮಗಳ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಏನೆಲ್ಲಾ ಬರೆಯುತ್ತಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಅವರಿಗೆ ಯಾವುದೇ ಖಾತೆಗಳು ಇಲ್ಲ. ಅವೆಲ್ಲವೂ ನಕಲಿಯಾಗಿದೆ” ಎಂದು ಅವರು ಹೇಳಿದ್ದಾರೆ.

ಅಲ್ಲದೆ ಪ್ರಜಾವಾಣಿ ಪತ್ರಿಗೆಗೆ ಸ್ವತಃ ಮುಸ್ಕಾನ್ ಅವರೇ ಸಂದರ್ಶನ ನೀಡಿದ್ದು, ಅದರಲ್ಲಿ ಮಾತನಾಡಿರುವ ಅವರು, “ಘೋಷಣೆ ಕುರಿತಂತೆ ಪರ–ವಿರೋಧ ಚರ್ಚೆಗೆ ಬೇಸರವಿಲ್ಲ. ಆದರೆ, ಸಾಮಾಜಿಕ ಜಾಲತಾಣಗಳಲ್ಲಿ ನಡೆಯುತ್ತಿರುವ ಅಪಪ್ರಚಾರದಿಂದ ತುಂಬಾ ನೋವಾಗಿದೆ. ನಾನು ಫೇಸ್‌ಬುಕ್‌, ಟ್ವಿಟರ್‌ ಬಳಸುತ್ತಿಲ್ಲ. ಕೆಲವರು ನಕಲಿ ಖಾತೆ ತೆರೆದು ಸುಳ್ಳು ಹಬ್ಬಿಸುತ್ತಿದ್ದಾರೆ. ನನ್ನ ಭಾವಚಿತ್ರ ಎಡಿಟ್‌ ಮಾಡಿ ಕೆಟ್ಟದಾಗಿ ಬರೆಯುತ್ತಿದ್ದಾರೆ” ಎಂದು ಹೇಳಿದ್ದಾರೆ.

“ನನಗೆ ಕಾಲೇಜು, ಮನೆ ಬಿಟ್ಟರೆ ನನಗೆ ಬೇರೆ ಪ್ರಪಂಚವಿಲ್ಲ. ನಾನು ಚಳವಳಿಗಾರರ ಜೊತೆ ಸಂಪರ್ಕದಲ್ಲಿದ್ದೆ, ತರಬೇತಿ ಪಡೆದಿದ್ದೆ ಎಂದೆಲ್ಲಾ ಸುಳ್ಳು ಸುದ್ದಿ ಹರಡಿಸುತ್ತಿದ್ದಾರೆ. ಆತ್ಮಹತ್ಯೆ ಮಾಡಿಕೊಂಡಿದ್ದಾಳೆ, ನೇಣು ಹಾಕಿದ್ದಾರೆ ಎಂದೆಲ್ಲಾ ಬರೆದಿದ್ದಾರೆ. ಇದರ ವಿರುದ್ಧ ಪೊಲೀಸರಿಗೆ ದೂರು ನೀಡಲು ನಿರ್ಧರಿಸಿದ್ದೇನೆ” ಎಂದು ಅವರು ಪ್ರಜಾವಾಣಿ ಜೊತೆಗೆ ಮಾತನಾಡುತ್ತಾ ಹೇಳಿದ್ದಾರೆ.

ಖ್ಯಾತ ಫ್ಯಾಕ್ಟ್‌ಚೆಕ್ ವೆಬ್‌ಸೈಟ್‌‌ ಆಲ್ಟ್‌ ನ್ಯೂಸ್‌‌ ಸಂಸ್ಥಾಪಕ ಜುಬೈರ್‌ ಅವರು, “ನಕಲಿ ಐಡಿಯಿಂದ ಮಾಡಿದ ಈ ಟ್ವೀಟ್‌ನ ಸ್ಕ್ರೀನ್‌ಶಾಟ್ ಮುಸ್ಕಾನ್ ಅವರನ್ನು ಗುರಿಯಾಗಿಸಿಕೊಂಡು ಫೇಸ್‌ಬುಕ್ ಮತ್ತು ವಾಟ್ಸ್‌ಆಪ್‌ನಲ್ಲಿನಲ್ಲಿ ವೈರಲ್ ಆಗಿದೆ. ಮುಸ್ಕಾನ್‌ ಅವರು ಟ್ವಿಟರ್ ಖಾತೆ ಹೊಂದಿಲ್ಲ. @muskanind3467 ಖಾತೆಯನ್ನು ಪಾಕಿಸ್ತಾನದಿಂದ ಯಾರೋ ರಚಿಸಿದ್ದು, ಈ ಖಾತೆ ಹಿಂದೆ @AmanTweets60 ಆಗಿತ್ತು. ನಂತರ ಅದನ್ನು @muskanind3467 ಎಂದು ಬದಲಾಯಿಸಲಾಗಿದೆ” ಎಂದು ಬರೆದಿದಾರೆ.

ಒಟ್ಟಿನಲ್ಲಿ ಹೇಳಬಹುದಾದರೆ, ಸಾಮಾಜಿಕ ಜಾಲತಾಣದಲ್ಲಿ ಬಿಜೆಪಿ ಬೆಂಬಲಿಗರು ಶೇರ್‌ ಮಾಡುತ್ತಿರುವ ಟ್ವಿಟರ್‌ ಸ್ಕ್ರೀನ್‌ ಶಾರ್ಟ್‌ ಬೀಬಿ ಮುಸ್ಕಾನ್ ಅವರದ್ದಲ್ಲ. ಅವರಿಗೆ ಸಾಮಾಜಿಕ ಜಾಲತಾಣಗಳಾದ ಫೇಸ್‌ಬುಕ್‌ ಮತ್ತು ಟ್ವಿಟರ್‌ನಲ್ಲಿ ಯಾವುದೇ ಖಾತೆಗಳು ಇಲ್ಲ.

ಇದನ್ನೂ ಓದಿ: ಹಿಜಾಬ್‌‌‌‌‌‌ ವಿರೋಧಿ ಹಿಂಸಾಚಾರವು ರಾಜ್ಯದ ಸಮ್ಮಿಶ್ರ ವೈವಿಧ್ಯ ಸಂಸ್ಕೃತಿಯನ್ನು ನಾಶ ಮಾಡುತ್ತಿದೆ: ‘ಬಹುತ್ವ ಕರ್ನಾಟಕ’ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...