Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌‌ಚೆಕ್‌: ತಾಲಿಬಾನ್‌ಗೆ ಥ್ಯಾಂಕ್ಸ್‌ ಹೇಳಿದ ಈ ಟ್ವಿಟರ್‌ ಅಕೌಂಟ್‌ ದಿಟ್ಟ ವಿದ್ಯಾರ್ಥಿನಿ ಮುಸ್ಕಾನ್‌ ಅವರದ್ದಲ್ಲ, ಅದು...

ಫ್ಯಾಕ್ಟ್‌‌ಚೆಕ್‌: ತಾಲಿಬಾನ್‌ಗೆ ಥ್ಯಾಂಕ್ಸ್‌ ಹೇಳಿದ ಈ ಟ್ವಿಟರ್‌ ಅಕೌಂಟ್‌ ದಿಟ್ಟ ವಿದ್ಯಾರ್ಥಿನಿ ಮುಸ್ಕಾನ್‌ ಅವರದ್ದಲ್ಲ, ಅದು ನಕಲಿ

- Advertisement -
- Advertisement -

ಮಂಡ್ಯದ ಪಿಇಎಸ್‌‌ ಕಾಲೇಜಿನಲ್ಲಿ ಕೇಸರಿ ಶಾಲು ಧರಿಸಿದ್ದ ಬಿಜೆಪಿ ಬೆಂಬಲಿತ ಯುವಕರು, ಜೈಶ್ರೀರಾಂ ಎಂದು ರಾಜಕೀಯ ಘೋಷಣೆ ಕೂಗುತ್ತಾ ವಿದ್ಯಾರ್ಥಿನಿ ಬೀಬಿ ಮುಸ್ಕಾನ್‌ ಖಾನ್‌‌ ಅವರನ್ನು ಬೆನ್ನಟ್ಟಿದ್ದರು. ಈ ವೇಳೆ ಮುಸ್ಕಾನ್ ಅವರು ದುಷ್ಕರ್ಮಿಗಳ ರಾಜಕೀಯ ಘೋಷಣೆಗೆ ವಿರುದ್ದವಾಗಿ, “ಅಲ್ಲಾಹು ಅಕ್ಬರ್‌” ಎಂದು ಕೂಗಿ ಪ್ರತಿರೋಧ ಒಡ್ಡಿದ್ದರು.

ಈ ಘಟನೆಯ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದ್ದು, ಬೀಬಿ ಮುಸ್ಕಾನ್ ಅವರಿಗೆ ವಿಶ್ವದಾದ್ಯಂತ ಅಭಿನಂದನೆಗಳ ಮಹಾಪೂರವೇ ಹರಿದು ಬಂದಿತ್ತು. ಈ ವೇಳೆ ಹಲವಾರು ಗಣ್ಯರು, ಹೋರಾಟಗಾರರು ಮುಸ್ಕಾನ್ ಅವರಿಗೆ ಬೆಂಬಲ ವ್ಯಕ್ತಪಡಿಸಿ, ಹಿಜಾಬ್ ಧರಿಸುವ ಅವರ ಧಾರ್ಮಿಕ ಹಕ್ಕಿನ ಪರವಾಗಿ ನಿಂತಿದ್ದರು. ಇದೇ ರೀತಿ, ಬಿಜೆಪಿಯ ಮೋದಿ ನೇತೃತ್ವದ ಸರ್ಕಾರ 200 ಕೋಟಿ ರೂ ನೆರವು ನೀಡುವುದಾಗಿ ಘೋಷಿಸಿರುವ ಅಫ್ಘಾನ್‌ನ ತಾಲಿಬಾನ್‌ ಆಡಳಿತ ಕೂಡಾ ಮುಸ್ಕಾನ್‌‌ಗೆ ಬೆಂಬಲ ವ್ಯಕ್ತಪಡಿಸಿತ್ತು.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ರಾಹುಲ್‌ ಗಾಂಧಿ ಜೊತೆಯಲ್ಲಿ ದಿಟ್ಟ ಹುಡುಗಿ ಮುಸ್ಕಾನ್‌ ಫೋಟೋ ತೆಗೆದುಕೊಂಡಿದ್ದರೆ?

ಆದರೆ ಇದೀಗ ಮುಸ್ಕಾನ್ ಅವರು ತಾಲಿಬಾನ್‌ ನೀಡಿದ ಬೆಂಬಲಕ್ಕೆ ಟ್ವಿಟರ್‌ನಲ್ಲಿ ‘ಧನ್ಯವಾದ’ ಹೇಳಿದ್ದಾರೆ ಎಂದು ಪ್ರತಿಪಾದಿಸಿ ಟ್ವಿಟರ್‌ ಸ್ಕ್ರೀನ್‌ಶಾರ್ಟ್‌ ಒಂದು ಹರಿದಾಡುತ್ತಿದೆ. ಇದನ್ನು ಬಿಜೆಪಿ ಬೆಂಬಲಿಗರು ಮತ್ತು ಬಲಪಂಥೀಯರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳುತ್ತಿದ್ದಾರೆ. ಇದನ್ನು ನೀವು ಇಲ್ಲಿ ಮತ್ತು ಇಲ್ಲಿ ನೋಡಬಹುದು.

ಫೇಕ್‌ಪ್ಯಾಕ್ಟರಿ ಎಂದೇ ಕುಖ್ಯಾತಿ ಹೊಂದಿರುವ ಪೋಸ್ಟ್‌ಕಾರ್ಡ್‌‌ನ ಯೂಟ್ಯೂಬ್ ಚಾನೆಲ್‌ ವಿಕ್ರಮ ಟಿವಿಯ ನಿರೂಪಕ, ಬಿಜೆಪಿಯ ಬೆಂಬಲಿಗ ಕಿರಿಕ್ ಕೀರ್ತಿ ಅವರು ಈ ಸ್ಕ್ರೀನ್‌ಶಾರ್ಟ್‌ ಹಂಚಿದ್ದಾರೆ. “ಇದೇ ಬೇಡ ಅನ್ನೋದು… ನಿನ್ನ ಧೈರ್ಯ ಕೊಂಡಾಡಿ ನೂರಾರು ಜನ‌ ನಿನ್ನನ್ನು ಹೀರೋಯಿನ್ ಮಾಡ್ತಿದ್ದಾರೆ… ಸಂತೋಷ… ಆದ್ರೆ ತಾಲಿಬಾನಿಯರಿಗೂ ಧನ್ಯವಾದ ಹೇಳೋ ನಿನ್ನ ಈ ಗುಣ ಸರಿಯಲ್ಲ‌… ನಮ್ಮ ಮುಸಲ್ಮಾನ ಬಂಧುಗಳು ಭಾರತದ ಜೊತೆಗಿರುವಾಗ ನೀನು ತಾಲಿಬಾನಿಯರನ್ನು ಅಹುದಹುದೆನ್ನೋದು ಸರಿಯಲ್ಲ…. ಅಂತಹ ಓವೈಸಿಯೇ ಪಾಕಿಸ್ತಾನಕ್ಕೆ ಛೀಮಾರಿ ಹಾಕಿದ್ದಾರೆ… ನೀನ್ಯಾಕೆ ಹೀಗಾದೆ…? ಭಾರತದ ಸರ್ವಧರ್ಮ ಸಮನ್ವಯಕ್ಕೆ ಶಾಪದಂತಿರೋ ತಾಲಿಬಾನಿಗಳು ನಿನ್ನ ಪರವಾಗಿದ್ದರೆ ಅದು ಒಳ್ಳೆಯ ಬೆಳವಣಿಗೆ ಅಲ್ಲ.. ಇದೆಲ್ಲಾ ನಾಲ್ಕು ದಿನದ ಆಟ… Be cool… ‘ಜೈ ಶ್ರೀರಾಮ್… ಅಲ್ಲಾ ಹೋ ಅಕ್ಬರ್…” ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ಸಿಂಧೂರ ಧರಿಸುವುದು ನನ್ನ ಆಯ್ಕೆ, ಹಿಜಾಬ್ ಧರಿಸುವುದು ಮುಸ್ಕಾನ್ ಆಯ್ಕೆ: ‘ಹಮ್ ಸಬ್ ಹಿಂದೂಸ್ತಾನಿ’ ಎಂದ ತೆಲಂಗಾಣ ಸಿಎಂ ಮಗಳು

ಫ್ಯಾಕ್ಟ್‌ಚೆಕ್‌

ಸ್ಕ್ರೀನ್‌ಶಾರ್ಟ್‌ ವೈರಲ್‌ ಆಗುತ್ತಿದ್ದಂತೆ ಅದನ್ನು ಫ್ಯಾಕ್ಟ್‌‌ಚೆಕ್ ಮಾಡುವಂತೆ ನಾನುಗೌರಿ.ಕಾಂಗೆ ಕೋರಿಕೆಗಳು ಬಂದಿವೆ. ಈ ಬಗ್ಗೆ ನಾನುಗೌರಿ.ಕಾಂ ಹುಡುಕಾಡಿದಾಗ, ಈ ಟ್ವೀಟ್‌ ಅನ್ನು ಮಾಡಿರುವ  ಟ್ವಿಟರ್‌‌ ಹ್ಯಾಂಡಲ್ ನಮಗೆ ಲಭ್ಯವಾಗಿದೆ.

@muskanind3467 ಎಂಬ ಹ್ಯಾಂಡಲ್ ಮೂಲಕ ಈ ಟ್ವೀಟ್ ಮಾಡಲಾಗಿದ್ದು, ಇದನ್ನು 2022ರ ಜನವರಿಯಲ್ಲಿ ಪ್ರಾರಂಭಿಸಲಾಗಿದೆ. ಈಗಾಗಲೇ ಈ ಖಾತೆಗೆ ಆರು ಸಾವಿರಕ್ಕಿಂತಲೂ ಹೆಚ್ಚಿನ ಜನರು ಫಾಲೋವರ್‌ಗಳಾಗಿದ್ದಾರೆ.

ಈ ಖಾತೆಯು ಜನವರಿಯಲ್ಲಿ ಪ್ರಾರಂಭಿಸಲಾಗಿದೆ ಎಂದು ಟ್ವಿಟರ್‌ ಮಾಹಿತಿ ನೀಡುತ್ತಿದೆ ಆದರೆ, ಈ ಖಾತೆಯಲ್ಲಿ ಮೊದಲ ಬಾರಿಗೆ ಫೆಬ್ರವರಿ 8 ರಂದು ಹಿಜಾಬ್ ವಿಚಾರವಾಗಿ ವಿಡಿಯೊವೊಂದನ್ನು ಅಪ್‌ಲೋಡ್ ಮಾಡಲಾಗಿದೆ. ಮಂಡ್ಯದಲ್ಲಿ ಮುಸ್ಕಾನ್ ಅವರನ್ನು ಬಿಜೆಪಿ ಬೆಂಬಲಿಗರು ಬೆನ್ನಟ್ಟಿದ್ದು ಕೂಡಾ ಅಂದೇ ಆಗಿತ್ತು. ಆದರೆ ಈ ಘಟನೆಯ ಬಗ್ಗೆ ಖಾತೆಯು ಫೆಬ್ರವರಿ 9ರ ನಂತರ ಉಲ್ಲೇಖಿಸಿದೆ.

ಇದನ್ನೂ ಓದಿ: ಬೀಬಿ ಮುಸ್ಕಾನ್‌ ಘೋಷಣೆ: ಒಂದೆಡೆ RSS ಮುಸ್ಲಿಂ ಘಟಕದ ಬೆಂಬಲ, ಇನ್ನೊಂದೆಡೆ RSS ಮುಖಂಡರ ಖಂಡನೆ 

@musk_a_n ಹ್ಯಾಂಡಲ್‌ನಲ್ಲಿ ಮತ್ತೊಂದು ಖಾತೆಯನ್ನು ಅವರ ಹೆಸರಿನಲ್ಲಿ ತೆರೆಯಲಾಗಿದೆ. ಅದು ಸಹಾ ಜನವರಿಯಲ್ಲಿ ಪ್ರಾರಂಭಿಸಲಾಗಿದ್ದು, ಫೆಬ್ರವರಿ ಹತ್ತರಿಂದ ಖಾತೆಯಲ್ಲಿ ಚಟುವಟಿಗೆ ಶುರುಮಾಡಲಾಗಿದೆ.

ಇಷ್ಟೇ ಅಲ್ಲದೆ ಅವರ ಹೆಸರಿನಲ್ಲಿ ಹಲವಾರು ಟ್ವಿಟರ್‌ ಖಾತೆಯನ್ನು ತೆರೆಯಲಾಗಿದೆ.

ಈ ಖಾತೆಯ ಸತ್ಯಾಸತ್ಯತೆಯ ಬಗ್ಗೆ ತಿಳಿಯಲು ನಾನುಗೌರಿ.ಕಾಂ ಮುಸ್ಕಾನ್ ಅವರ ತಂದೆ ಹುಸೈನ್‌ ಖಾನ್ ಅವರನ್ನು ಸಂಪರ್ಕಿಸಿದೆ. ನಾನುಗೌರಿ.ಕಾಂ ಜೊತೆ ಮಾತನಾಡಿದ ಅವರು, “ನನ್ನ ಮಗಳ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಏನೆಲ್ಲಾ ಬರೆಯುತ್ತಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಅವರಿಗೆ ಯಾವುದೇ ಖಾತೆಗಳು ಇಲ್ಲ. ಅವೆಲ್ಲವೂ ನಕಲಿಯಾಗಿದೆ” ಎಂದು ಅವರು ಹೇಳಿದ್ದಾರೆ.

ಅಲ್ಲದೆ ಪ್ರಜಾವಾಣಿ ಪತ್ರಿಗೆಗೆ ಸ್ವತಃ ಮುಸ್ಕಾನ್ ಅವರೇ ಸಂದರ್ಶನ ನೀಡಿದ್ದು, ಅದರಲ್ಲಿ ಮಾತನಾಡಿರುವ ಅವರು, “ಘೋಷಣೆ ಕುರಿತಂತೆ ಪರ–ವಿರೋಧ ಚರ್ಚೆಗೆ ಬೇಸರವಿಲ್ಲ. ಆದರೆ, ಸಾಮಾಜಿಕ ಜಾಲತಾಣಗಳಲ್ಲಿ ನಡೆಯುತ್ತಿರುವ ಅಪಪ್ರಚಾರದಿಂದ ತುಂಬಾ ನೋವಾಗಿದೆ. ನಾನು ಫೇಸ್‌ಬುಕ್‌, ಟ್ವಿಟರ್‌ ಬಳಸುತ್ತಿಲ್ಲ. ಕೆಲವರು ನಕಲಿ ಖಾತೆ ತೆರೆದು ಸುಳ್ಳು ಹಬ್ಬಿಸುತ್ತಿದ್ದಾರೆ. ನನ್ನ ಭಾವಚಿತ್ರ ಎಡಿಟ್‌ ಮಾಡಿ ಕೆಟ್ಟದಾಗಿ ಬರೆಯುತ್ತಿದ್ದಾರೆ” ಎಂದು ಹೇಳಿದ್ದಾರೆ.

“ನನಗೆ ಕಾಲೇಜು, ಮನೆ ಬಿಟ್ಟರೆ ನನಗೆ ಬೇರೆ ಪ್ರಪಂಚವಿಲ್ಲ. ನಾನು ಚಳವಳಿಗಾರರ ಜೊತೆ ಸಂಪರ್ಕದಲ್ಲಿದ್ದೆ, ತರಬೇತಿ ಪಡೆದಿದ್ದೆ ಎಂದೆಲ್ಲಾ ಸುಳ್ಳು ಸುದ್ದಿ ಹರಡಿಸುತ್ತಿದ್ದಾರೆ. ಆತ್ಮಹತ್ಯೆ ಮಾಡಿಕೊಂಡಿದ್ದಾಳೆ, ನೇಣು ಹಾಕಿದ್ದಾರೆ ಎಂದೆಲ್ಲಾ ಬರೆದಿದ್ದಾರೆ. ಇದರ ವಿರುದ್ಧ ಪೊಲೀಸರಿಗೆ ದೂರು ನೀಡಲು ನಿರ್ಧರಿಸಿದ್ದೇನೆ” ಎಂದು ಅವರು ಪ್ರಜಾವಾಣಿ ಜೊತೆಗೆ ಮಾತನಾಡುತ್ತಾ ಹೇಳಿದ್ದಾರೆ.

ಖ್ಯಾತ ಫ್ಯಾಕ್ಟ್‌ಚೆಕ್ ವೆಬ್‌ಸೈಟ್‌‌ ಆಲ್ಟ್‌ ನ್ಯೂಸ್‌‌ ಸಂಸ್ಥಾಪಕ ಜುಬೈರ್‌ ಅವರು, “ನಕಲಿ ಐಡಿಯಿಂದ ಮಾಡಿದ ಈ ಟ್ವೀಟ್‌ನ ಸ್ಕ್ರೀನ್‌ಶಾಟ್ ಮುಸ್ಕಾನ್ ಅವರನ್ನು ಗುರಿಯಾಗಿಸಿಕೊಂಡು ಫೇಸ್‌ಬುಕ್ ಮತ್ತು ವಾಟ್ಸ್‌ಆಪ್‌ನಲ್ಲಿನಲ್ಲಿ ವೈರಲ್ ಆಗಿದೆ. ಮುಸ್ಕಾನ್‌ ಅವರು ಟ್ವಿಟರ್ ಖಾತೆ ಹೊಂದಿಲ್ಲ. @muskanind3467 ಖಾತೆಯನ್ನು ಪಾಕಿಸ್ತಾನದಿಂದ ಯಾರೋ ರಚಿಸಿದ್ದು, ಈ ಖಾತೆ ಹಿಂದೆ @AmanTweets60 ಆಗಿತ್ತು. ನಂತರ ಅದನ್ನು @muskanind3467 ಎಂದು ಬದಲಾಯಿಸಲಾಗಿದೆ” ಎಂದು ಬರೆದಿದಾರೆ.

ಒಟ್ಟಿನಲ್ಲಿ ಹೇಳಬಹುದಾದರೆ, ಸಾಮಾಜಿಕ ಜಾಲತಾಣದಲ್ಲಿ ಬಿಜೆಪಿ ಬೆಂಬಲಿಗರು ಶೇರ್‌ ಮಾಡುತ್ತಿರುವ ಟ್ವಿಟರ್‌ ಸ್ಕ್ರೀನ್‌ ಶಾರ್ಟ್‌ ಬೀಬಿ ಮುಸ್ಕಾನ್ ಅವರದ್ದಲ್ಲ. ಅವರಿಗೆ ಸಾಮಾಜಿಕ ಜಾಲತಾಣಗಳಾದ ಫೇಸ್‌ಬುಕ್‌ ಮತ್ತು ಟ್ವಿಟರ್‌ನಲ್ಲಿ ಯಾವುದೇ ಖಾತೆಗಳು ಇಲ್ಲ.

ಇದನ್ನೂ ಓದಿ: ಹಿಜಾಬ್‌‌‌‌‌‌ ವಿರೋಧಿ ಹಿಂಸಾಚಾರವು ರಾಜ್ಯದ ಸಮ್ಮಿಶ್ರ ವೈವಿಧ್ಯ ಸಂಸ್ಕೃತಿಯನ್ನು ನಾಶ ಮಾಡುತ್ತಿದೆ: ‘ಬಹುತ್ವ ಕರ್ನಾಟಕ’ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...