Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌‌ಚೆಕ್‌: ತಾಲಿಬಾನ್‌ಗೆ ಥ್ಯಾಂಕ್ಸ್‌ ಹೇಳಿದ ಈ ಟ್ವಿಟರ್‌ ಅಕೌಂಟ್‌ ದಿಟ್ಟ ವಿದ್ಯಾರ್ಥಿನಿ ಮುಸ್ಕಾನ್‌ ಅವರದ್ದಲ್ಲ, ಅದು...

ಫ್ಯಾಕ್ಟ್‌‌ಚೆಕ್‌: ತಾಲಿಬಾನ್‌ಗೆ ಥ್ಯಾಂಕ್ಸ್‌ ಹೇಳಿದ ಈ ಟ್ವಿಟರ್‌ ಅಕೌಂಟ್‌ ದಿಟ್ಟ ವಿದ್ಯಾರ್ಥಿನಿ ಮುಸ್ಕಾನ್‌ ಅವರದ್ದಲ್ಲ, ಅದು ನಕಲಿ

- Advertisement -
- Advertisement -

ಮಂಡ್ಯದ ಪಿಇಎಸ್‌‌ ಕಾಲೇಜಿನಲ್ಲಿ ಕೇಸರಿ ಶಾಲು ಧರಿಸಿದ್ದ ಬಿಜೆಪಿ ಬೆಂಬಲಿತ ಯುವಕರು, ಜೈಶ್ರೀರಾಂ ಎಂದು ರಾಜಕೀಯ ಘೋಷಣೆ ಕೂಗುತ್ತಾ ವಿದ್ಯಾರ್ಥಿನಿ ಬೀಬಿ ಮುಸ್ಕಾನ್‌ ಖಾನ್‌‌ ಅವರನ್ನು ಬೆನ್ನಟ್ಟಿದ್ದರು. ಈ ವೇಳೆ ಮುಸ್ಕಾನ್ ಅವರು ದುಷ್ಕರ್ಮಿಗಳ ರಾಜಕೀಯ ಘೋಷಣೆಗೆ ವಿರುದ್ದವಾಗಿ, “ಅಲ್ಲಾಹು ಅಕ್ಬರ್‌” ಎಂದು ಕೂಗಿ ಪ್ರತಿರೋಧ ಒಡ್ಡಿದ್ದರು.

ಈ ಘಟನೆಯ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದ್ದು, ಬೀಬಿ ಮುಸ್ಕಾನ್ ಅವರಿಗೆ ವಿಶ್ವದಾದ್ಯಂತ ಅಭಿನಂದನೆಗಳ ಮಹಾಪೂರವೇ ಹರಿದು ಬಂದಿತ್ತು. ಈ ವೇಳೆ ಹಲವಾರು ಗಣ್ಯರು, ಹೋರಾಟಗಾರರು ಮುಸ್ಕಾನ್ ಅವರಿಗೆ ಬೆಂಬಲ ವ್ಯಕ್ತಪಡಿಸಿ, ಹಿಜಾಬ್ ಧರಿಸುವ ಅವರ ಧಾರ್ಮಿಕ ಹಕ್ಕಿನ ಪರವಾಗಿ ನಿಂತಿದ್ದರು. ಇದೇ ರೀತಿ, ಬಿಜೆಪಿಯ ಮೋದಿ ನೇತೃತ್ವದ ಸರ್ಕಾರ 200 ಕೋಟಿ ರೂ ನೆರವು ನೀಡುವುದಾಗಿ ಘೋಷಿಸಿರುವ ಅಫ್ಘಾನ್‌ನ ತಾಲಿಬಾನ್‌ ಆಡಳಿತ ಕೂಡಾ ಮುಸ್ಕಾನ್‌‌ಗೆ ಬೆಂಬಲ ವ್ಯಕ್ತಪಡಿಸಿತ್ತು.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ರಾಹುಲ್‌ ಗಾಂಧಿ ಜೊತೆಯಲ್ಲಿ ದಿಟ್ಟ ಹುಡುಗಿ ಮುಸ್ಕಾನ್‌ ಫೋಟೋ ತೆಗೆದುಕೊಂಡಿದ್ದರೆ?

ಆದರೆ ಇದೀಗ ಮುಸ್ಕಾನ್ ಅವರು ತಾಲಿಬಾನ್‌ ನೀಡಿದ ಬೆಂಬಲಕ್ಕೆ ಟ್ವಿಟರ್‌ನಲ್ಲಿ ‘ಧನ್ಯವಾದ’ ಹೇಳಿದ್ದಾರೆ ಎಂದು ಪ್ರತಿಪಾದಿಸಿ ಟ್ವಿಟರ್‌ ಸ್ಕ್ರೀನ್‌ಶಾರ್ಟ್‌ ಒಂದು ಹರಿದಾಡುತ್ತಿದೆ. ಇದನ್ನು ಬಿಜೆಪಿ ಬೆಂಬಲಿಗರು ಮತ್ತು ಬಲಪಂಥೀಯರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳುತ್ತಿದ್ದಾರೆ. ಇದನ್ನು ನೀವು ಇಲ್ಲಿ ಮತ್ತು ಇಲ್ಲಿ ನೋಡಬಹುದು.

ಫೇಕ್‌ಪ್ಯಾಕ್ಟರಿ ಎಂದೇ ಕುಖ್ಯಾತಿ ಹೊಂದಿರುವ ಪೋಸ್ಟ್‌ಕಾರ್ಡ್‌‌ನ ಯೂಟ್ಯೂಬ್ ಚಾನೆಲ್‌ ವಿಕ್ರಮ ಟಿವಿಯ ನಿರೂಪಕ, ಬಿಜೆಪಿಯ ಬೆಂಬಲಿಗ ಕಿರಿಕ್ ಕೀರ್ತಿ ಅವರು ಈ ಸ್ಕ್ರೀನ್‌ಶಾರ್ಟ್‌ ಹಂಚಿದ್ದಾರೆ. “ಇದೇ ಬೇಡ ಅನ್ನೋದು… ನಿನ್ನ ಧೈರ್ಯ ಕೊಂಡಾಡಿ ನೂರಾರು ಜನ‌ ನಿನ್ನನ್ನು ಹೀರೋಯಿನ್ ಮಾಡ್ತಿದ್ದಾರೆ… ಸಂತೋಷ… ಆದ್ರೆ ತಾಲಿಬಾನಿಯರಿಗೂ ಧನ್ಯವಾದ ಹೇಳೋ ನಿನ್ನ ಈ ಗುಣ ಸರಿಯಲ್ಲ‌… ನಮ್ಮ ಮುಸಲ್ಮಾನ ಬಂಧುಗಳು ಭಾರತದ ಜೊತೆಗಿರುವಾಗ ನೀನು ತಾಲಿಬಾನಿಯರನ್ನು ಅಹುದಹುದೆನ್ನೋದು ಸರಿಯಲ್ಲ…. ಅಂತಹ ಓವೈಸಿಯೇ ಪಾಕಿಸ್ತಾನಕ್ಕೆ ಛೀಮಾರಿ ಹಾಕಿದ್ದಾರೆ… ನೀನ್ಯಾಕೆ ಹೀಗಾದೆ…? ಭಾರತದ ಸರ್ವಧರ್ಮ ಸಮನ್ವಯಕ್ಕೆ ಶಾಪದಂತಿರೋ ತಾಲಿಬಾನಿಗಳು ನಿನ್ನ ಪರವಾಗಿದ್ದರೆ ಅದು ಒಳ್ಳೆಯ ಬೆಳವಣಿಗೆ ಅಲ್ಲ.. ಇದೆಲ್ಲಾ ನಾಲ್ಕು ದಿನದ ಆಟ… Be cool… ‘ಜೈ ಶ್ರೀರಾಮ್… ಅಲ್ಲಾ ಹೋ ಅಕ್ಬರ್…” ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ಸಿಂಧೂರ ಧರಿಸುವುದು ನನ್ನ ಆಯ್ಕೆ, ಹಿಜಾಬ್ ಧರಿಸುವುದು ಮುಸ್ಕಾನ್ ಆಯ್ಕೆ: ‘ಹಮ್ ಸಬ್ ಹಿಂದೂಸ್ತಾನಿ’ ಎಂದ ತೆಲಂಗಾಣ ಸಿಎಂ ಮಗಳು

ಫ್ಯಾಕ್ಟ್‌ಚೆಕ್‌

ಸ್ಕ್ರೀನ್‌ಶಾರ್ಟ್‌ ವೈರಲ್‌ ಆಗುತ್ತಿದ್ದಂತೆ ಅದನ್ನು ಫ್ಯಾಕ್ಟ್‌‌ಚೆಕ್ ಮಾಡುವಂತೆ ನಾನುಗೌರಿ.ಕಾಂಗೆ ಕೋರಿಕೆಗಳು ಬಂದಿವೆ. ಈ ಬಗ್ಗೆ ನಾನುಗೌರಿ.ಕಾಂ ಹುಡುಕಾಡಿದಾಗ, ಈ ಟ್ವೀಟ್‌ ಅನ್ನು ಮಾಡಿರುವ  ಟ್ವಿಟರ್‌‌ ಹ್ಯಾಂಡಲ್ ನಮಗೆ ಲಭ್ಯವಾಗಿದೆ.

@muskanind3467 ಎಂಬ ಹ್ಯಾಂಡಲ್ ಮೂಲಕ ಈ ಟ್ವೀಟ್ ಮಾಡಲಾಗಿದ್ದು, ಇದನ್ನು 2022ರ ಜನವರಿಯಲ್ಲಿ ಪ್ರಾರಂಭಿಸಲಾಗಿದೆ. ಈಗಾಗಲೇ ಈ ಖಾತೆಗೆ ಆರು ಸಾವಿರಕ್ಕಿಂತಲೂ ಹೆಚ್ಚಿನ ಜನರು ಫಾಲೋವರ್‌ಗಳಾಗಿದ್ದಾರೆ.

ಈ ಖಾತೆಯು ಜನವರಿಯಲ್ಲಿ ಪ್ರಾರಂಭಿಸಲಾಗಿದೆ ಎಂದು ಟ್ವಿಟರ್‌ ಮಾಹಿತಿ ನೀಡುತ್ತಿದೆ ಆದರೆ, ಈ ಖಾತೆಯಲ್ಲಿ ಮೊದಲ ಬಾರಿಗೆ ಫೆಬ್ರವರಿ 8 ರಂದು ಹಿಜಾಬ್ ವಿಚಾರವಾಗಿ ವಿಡಿಯೊವೊಂದನ್ನು ಅಪ್‌ಲೋಡ್ ಮಾಡಲಾಗಿದೆ. ಮಂಡ್ಯದಲ್ಲಿ ಮುಸ್ಕಾನ್ ಅವರನ್ನು ಬಿಜೆಪಿ ಬೆಂಬಲಿಗರು ಬೆನ್ನಟ್ಟಿದ್ದು ಕೂಡಾ ಅಂದೇ ಆಗಿತ್ತು. ಆದರೆ ಈ ಘಟನೆಯ ಬಗ್ಗೆ ಖಾತೆಯು ಫೆಬ್ರವರಿ 9ರ ನಂತರ ಉಲ್ಲೇಖಿಸಿದೆ.

ಇದನ್ನೂ ಓದಿ: ಬೀಬಿ ಮುಸ್ಕಾನ್‌ ಘೋಷಣೆ: ಒಂದೆಡೆ RSS ಮುಸ್ಲಿಂ ಘಟಕದ ಬೆಂಬಲ, ಇನ್ನೊಂದೆಡೆ RSS ಮುಖಂಡರ ಖಂಡನೆ 

@musk_a_n ಹ್ಯಾಂಡಲ್‌ನಲ್ಲಿ ಮತ್ತೊಂದು ಖಾತೆಯನ್ನು ಅವರ ಹೆಸರಿನಲ್ಲಿ ತೆರೆಯಲಾಗಿದೆ. ಅದು ಸಹಾ ಜನವರಿಯಲ್ಲಿ ಪ್ರಾರಂಭಿಸಲಾಗಿದ್ದು, ಫೆಬ್ರವರಿ ಹತ್ತರಿಂದ ಖಾತೆಯಲ್ಲಿ ಚಟುವಟಿಗೆ ಶುರುಮಾಡಲಾಗಿದೆ.

ಇಷ್ಟೇ ಅಲ್ಲದೆ ಅವರ ಹೆಸರಿನಲ್ಲಿ ಹಲವಾರು ಟ್ವಿಟರ್‌ ಖಾತೆಯನ್ನು ತೆರೆಯಲಾಗಿದೆ.

ಈ ಖಾತೆಯ ಸತ್ಯಾಸತ್ಯತೆಯ ಬಗ್ಗೆ ತಿಳಿಯಲು ನಾನುಗೌರಿ.ಕಾಂ ಮುಸ್ಕಾನ್ ಅವರ ತಂದೆ ಹುಸೈನ್‌ ಖಾನ್ ಅವರನ್ನು ಸಂಪರ್ಕಿಸಿದೆ. ನಾನುಗೌರಿ.ಕಾಂ ಜೊತೆ ಮಾತನಾಡಿದ ಅವರು, “ನನ್ನ ಮಗಳ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಏನೆಲ್ಲಾ ಬರೆಯುತ್ತಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಅವರಿಗೆ ಯಾವುದೇ ಖಾತೆಗಳು ಇಲ್ಲ. ಅವೆಲ್ಲವೂ ನಕಲಿಯಾಗಿದೆ” ಎಂದು ಅವರು ಹೇಳಿದ್ದಾರೆ.

ಅಲ್ಲದೆ ಪ್ರಜಾವಾಣಿ ಪತ್ರಿಗೆಗೆ ಸ್ವತಃ ಮುಸ್ಕಾನ್ ಅವರೇ ಸಂದರ್ಶನ ನೀಡಿದ್ದು, ಅದರಲ್ಲಿ ಮಾತನಾಡಿರುವ ಅವರು, “ಘೋಷಣೆ ಕುರಿತಂತೆ ಪರ–ವಿರೋಧ ಚರ್ಚೆಗೆ ಬೇಸರವಿಲ್ಲ. ಆದರೆ, ಸಾಮಾಜಿಕ ಜಾಲತಾಣಗಳಲ್ಲಿ ನಡೆಯುತ್ತಿರುವ ಅಪಪ್ರಚಾರದಿಂದ ತುಂಬಾ ನೋವಾಗಿದೆ. ನಾನು ಫೇಸ್‌ಬುಕ್‌, ಟ್ವಿಟರ್‌ ಬಳಸುತ್ತಿಲ್ಲ. ಕೆಲವರು ನಕಲಿ ಖಾತೆ ತೆರೆದು ಸುಳ್ಳು ಹಬ್ಬಿಸುತ್ತಿದ್ದಾರೆ. ನನ್ನ ಭಾವಚಿತ್ರ ಎಡಿಟ್‌ ಮಾಡಿ ಕೆಟ್ಟದಾಗಿ ಬರೆಯುತ್ತಿದ್ದಾರೆ” ಎಂದು ಹೇಳಿದ್ದಾರೆ.

“ನನಗೆ ಕಾಲೇಜು, ಮನೆ ಬಿಟ್ಟರೆ ನನಗೆ ಬೇರೆ ಪ್ರಪಂಚವಿಲ್ಲ. ನಾನು ಚಳವಳಿಗಾರರ ಜೊತೆ ಸಂಪರ್ಕದಲ್ಲಿದ್ದೆ, ತರಬೇತಿ ಪಡೆದಿದ್ದೆ ಎಂದೆಲ್ಲಾ ಸುಳ್ಳು ಸುದ್ದಿ ಹರಡಿಸುತ್ತಿದ್ದಾರೆ. ಆತ್ಮಹತ್ಯೆ ಮಾಡಿಕೊಂಡಿದ್ದಾಳೆ, ನೇಣು ಹಾಕಿದ್ದಾರೆ ಎಂದೆಲ್ಲಾ ಬರೆದಿದ್ದಾರೆ. ಇದರ ವಿರುದ್ಧ ಪೊಲೀಸರಿಗೆ ದೂರು ನೀಡಲು ನಿರ್ಧರಿಸಿದ್ದೇನೆ” ಎಂದು ಅವರು ಪ್ರಜಾವಾಣಿ ಜೊತೆಗೆ ಮಾತನಾಡುತ್ತಾ ಹೇಳಿದ್ದಾರೆ.

ಖ್ಯಾತ ಫ್ಯಾಕ್ಟ್‌ಚೆಕ್ ವೆಬ್‌ಸೈಟ್‌‌ ಆಲ್ಟ್‌ ನ್ಯೂಸ್‌‌ ಸಂಸ್ಥಾಪಕ ಜುಬೈರ್‌ ಅವರು, “ನಕಲಿ ಐಡಿಯಿಂದ ಮಾಡಿದ ಈ ಟ್ವೀಟ್‌ನ ಸ್ಕ್ರೀನ್‌ಶಾಟ್ ಮುಸ್ಕಾನ್ ಅವರನ್ನು ಗುರಿಯಾಗಿಸಿಕೊಂಡು ಫೇಸ್‌ಬುಕ್ ಮತ್ತು ವಾಟ್ಸ್‌ಆಪ್‌ನಲ್ಲಿನಲ್ಲಿ ವೈರಲ್ ಆಗಿದೆ. ಮುಸ್ಕಾನ್‌ ಅವರು ಟ್ವಿಟರ್ ಖಾತೆ ಹೊಂದಿಲ್ಲ. @muskanind3467 ಖಾತೆಯನ್ನು ಪಾಕಿಸ್ತಾನದಿಂದ ಯಾರೋ ರಚಿಸಿದ್ದು, ಈ ಖಾತೆ ಹಿಂದೆ @AmanTweets60 ಆಗಿತ್ತು. ನಂತರ ಅದನ್ನು @muskanind3467 ಎಂದು ಬದಲಾಯಿಸಲಾಗಿದೆ” ಎಂದು ಬರೆದಿದಾರೆ.

ಒಟ್ಟಿನಲ್ಲಿ ಹೇಳಬಹುದಾದರೆ, ಸಾಮಾಜಿಕ ಜಾಲತಾಣದಲ್ಲಿ ಬಿಜೆಪಿ ಬೆಂಬಲಿಗರು ಶೇರ್‌ ಮಾಡುತ್ತಿರುವ ಟ್ವಿಟರ್‌ ಸ್ಕ್ರೀನ್‌ ಶಾರ್ಟ್‌ ಬೀಬಿ ಮುಸ್ಕಾನ್ ಅವರದ್ದಲ್ಲ. ಅವರಿಗೆ ಸಾಮಾಜಿಕ ಜಾಲತಾಣಗಳಾದ ಫೇಸ್‌ಬುಕ್‌ ಮತ್ತು ಟ್ವಿಟರ್‌ನಲ್ಲಿ ಯಾವುದೇ ಖಾತೆಗಳು ಇಲ್ಲ.

ಇದನ್ನೂ ಓದಿ: ಹಿಜಾಬ್‌‌‌‌‌‌ ವಿರೋಧಿ ಹಿಂಸಾಚಾರವು ರಾಜ್ಯದ ಸಮ್ಮಿಶ್ರ ವೈವಿಧ್ಯ ಸಂಸ್ಕೃತಿಯನ್ನು ನಾಶ ಮಾಡುತ್ತಿದೆ: ‘ಬಹುತ್ವ ಕರ್ನಾಟಕ’ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...