Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌‌ಚೆಕ್: ಇದು ಅಫ್ಘಾನ್‌‌ ನಾಗರಿಕನ ವಿಡಿಯೊವಲ್ಲ; ಎಡಿಟೆಡ್‌!

ಫ್ಯಾಕ್ಟ್‌‌ಚೆಕ್: ಇದು ಅಫ್ಘಾನ್‌‌ ನಾಗರಿಕನ ವಿಡಿಯೊವಲ್ಲ; ಎಡಿಟೆಡ್‌!

- Advertisement -
- Advertisement -

ವಿಮಾನದ ಟರ್ಬೈನ್ ಮಧ್ಯದಲ್ಲಿ ವ್ಯಕ್ತಿಯೊಬ್ಬ ಮಲಗಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಈ ವಿಡಿಯೊವನ್ನು ಅಫ್ಘಾನ್‌ ನಾಗರಿಕರು ತಾಲಿಬಾನ್‌ನಿಂದ ತಪ್ಪಿಸಿಕೊಳ್ಳಲು ವಿಮಾನದ ರೆಕ್ಕೆಗಳ ಮೇಲೆಯು ಸವಾರಿ ಮಾಡುತ್ತಿದ್ದಾರೆ ಎಂದು ಪ್ರತಿಪಾದಿಸಿ ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಡಲಾಗುತ್ತಿದೆ.

ತಾಲಿಬಾನ್ ಅಫ್ಘಾನ್‌ ಅನ್ನು ಸ್ವಾಧೀನಪಡಿಸಿಕೊಂಡ ನಂತರ, ಹಲವಾರು ಜನರು ದೇಶವನ್ನು ತೊರೆಯಲು ವಿಮಾನ ನಿಲ್ದಾಣಗಳಲ್ಲಿ ಜಮಾಯಿಸಿದ್ದರಿಂದ, ವಿಮಾನ ನಿಲ್ದಾಣದಲ್ಲಿ ಭಾರಿ ಜನಜಂಗುಳಿ ಉಂಟಾಗಿತ್ತು. ಒಂದಷ್ಟು ಜನರು ವಿಮಾನ ಟೇಕ್‌ಆಫ್‌ ಆಗುವ ಹೊತ್ತಿಗೆ ವಿಮಾನ ಟೈರುಗಳ ಅಡಿಯಲ್ಲಿ ಕೂತಿದ್ದು, ಹಾರಾಡುವ ಸಮಯದಲ್ಲಿ ಇಬ್ಬರು ಕೆಳಗಡೆ ಬಿದ್ದಿರುವ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿತ್ತು.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್ | ‘ಪಿಎಂ ಕನ್ಯಾ ಯೋಜನೆ’ ಅಡಿಯಲ್ಲಿ ಹೆಣ್ಣುಮಕ್ಕಳಿಗೆ ಪ್ರತಿ ತಿಂಗಳು ₹2000 ಸಿಗುವುದು ನಿಜವೆ?

ಆದರೆ ಈ ವಿಡಿಯೊಗಳ ಜೊತೆಗೆ ವಿಮಾನದ ಟರ್ಬೈನ್‌ ಮೇಲೆ ಮಲಗಿರುವ ವ್ಯಕ್ತಿಯೊಬ್ಬರ ವಿಡಿಯೊ ಕೂಡಾ ವೈರಲ್‌ ಆಗಿದೆ. ಇದನ್ನು ಹಂಚಿಕೊಂಡಿರುವ ಹಲವು ನೆಟ್ಟಿಗರು, “ಅಫ್ಘಾನ್‌ ನಾಗರಿಕರು ಸಾವನ್ನು ಅಪ್ಪಿಕೊಂಡು ವಿಮಾನದ ರೆಕ್ಕೆಗಳ ಮೇಲೆ ಸವಾರಿ ಮಾಡುತ್ತಿದ್ದಾರೆ” ಎಂದು ಬರೆದಿದ್ದಾರೆ. ಈ ಪೋಸ್ಟ್‌ನ ಆರ್ಕೈವ್ ಮಾಡಿದ ಆವೃತ್ತಿಯನ್ನು ಇಲ್ಲಿ ನೋಡಬಹುದು.

ಈ ವಿಡಿಯೊವನ್ನು ಹಲವಾರು ಜನರು ವೀಕ್ಷಿಸಿದ್ದು, ನೂರಾರು ಜನರು ಹಂಚಿಕೊಂಡಿದ್ದಾರೆ. ಫೇಸ್‌ಬುಕ್ ಮಾತ್ರವಲ್ಲದೆ, ಟ್ವಿಟರ್‌‌ನಲ್ಲಿ ಕೂಡಾ ಇದೇ ರೀತಿಯ ಪ್ರತಿಪಾದನೆಯನ್ನು ಮಾಡಲಾಗಿದೆ. ಅದನ್ನು ಇಲ್ಲಿ, ಇಲ್ಲಿ ಮತ್ತು ಇಲ್ಲಿ ನೋಡಬಹುದು.

ಫ್ಯಾಕ್ಟ್‌ಚೆಕ್‌‌

ಈ ವಿಡಿಯೋವನ್ನು ವಿಯೆಟ್ನಾಂನ ಗ್ರಾಫಿಕ್ ಡಿಸೈನರ್ ‘ಹ್ಯೂ ಕ್ಸುನ್ ಮಾಯ್’ ಡಿಜಿಟಲ್ ಆಗಿ ರಚಿಸಿದ್ದಾಗಿದೆ. ಅವರು 2020 ರ ಕೊರೊನಾದ ಆರಂಭದಲ್ಲಿ ಇದೇ ರೀತಿಯ ವೀಡಿಯೊಗಳನ್ನು ಪೋಸ್ಟ್ ಮಾಡಲು ಪ್ರಾರಂಭಿಸಿದರು. ಆದ್ದರಿಂದ ವೀಡಿಯೊ ಅಫ್ಘಾನಿಸ್ತಾನ ಬಿಕ್ಕಟ್ಟಿಗೆ ಸಂಬಂಧಿಸಿದ್ದಲ್ಲ.

ಚಿತ್ರವನ್ನು ದಿಕ್ವಿಂಟ್ ಫ್ಯಾಕ್ಟ್‌ಚೆಕ್‌ ಮಾಡಿದೆ. ಗೂಗಲ್‌‌ನ ತಂತ್ರಾಂಶಗಳನ್ನು ಬಳಸಿಕೊಂಡು ವಿಡಿಯೊವನ್ನು ರಿವರ್ಸ್ ಸರ್ಚ್ ಮೂಲಕ ಕ್ವಿಂಟ್‌ ಹುಡುಕಾಡಿದೆ. ಈ ಹುಡುಕಾಟದಲ್ಲಿ, 2020 ರ ಆಗಸ್ಟ್ 19 ರಂದು ಇನ್‌ಸ್ಟಾಗ್ರಾಮ್‌‌ ಪೋಸ್ಟ್‌ ಒಂದರಲ್ಲಿ ಈ ವಿಡಿಯೊ ಕಂಡು ಬಂದಿದೆ. ವಿಡಿಯೊ ಕ್ಲಿಪ್‌ನ ಕೊನೆಯಲ್ಲಿ, ಟಿಕ್‌ಟಾಕ್ ಲೋಗೋದೊಂದಿಗೆ ‘ಹ್ಯೂ ಕ್ಸುನ್ ಮೈ’ ಎಂಬ ಬಳಕೆದಾರ ಹೆಸರು ಅದರಲ್ಲಿ ಕಾಣಿಕೊಂಡಿದೆ.

 

ಟಿಕ್‌ಟಾಕ್‌ ಬಳಕೆದಾರರ ಹೆಸರಿನ ಸುಳಿವನ್ನು ಬಳಸಿಕೊಂಡು Google ನಲ್ಲಿ ಮತ್ತೊಂದು ಸುತ್ತಿನ ರಿವರ್ಸ್ ಇಮೇಜ್ ಹುಡುಕಾಟ ಮಾಡಿದಾಗ, ಫಿಲಿಪಿನೋ ಜೀವನಶೈಲಿ ವೆಬ್‌ಸೈಟ್ ಸ್ಪಾಟ್‌ನ ಲೇಖನವನ್ನು ದಿಕ್ವಿಂಟ್ ಕಂಡುಕೊಂಡಿದೆ.

ಇದನ್ನೂ ಓದಿ: ಆಸ್ಪತ್ರೆಯಲ್ಲಿ ಕಾಲಿಗೆ ಸರಪಳಿ ತೊಡಿಸಿರುವ ಚಿತ್ರ ಸ್ಟಾನ್ ಸ್ವಾಮಿಯವರದ್ದಲ್ಲ

ಈ ಲೇಖನವು ವೈರಲ್ ಆಗಿರುವ ಕ್ಲಿಪ್‌ನ ಫೇಸ್‌ಬುಕ್ ವೀಡಿಯೊವನ್ನು ಹೊಂದಿದೆ. ಅಲ್ಲದೆ ಲೇಖನವು ‘ಹ್ಯೂ ಕ್ಸುನ್ ಮಾಯ್’ ಅನ್ನು ಗ್ರಾಫಿಕ್ ಡಿಸೈನರ್ ಎಂದು ಗುರುತಿಸಿದೆ. ಇಲ್ಲಿಂದ ‘ಹ್ಯೂ ಕ್ಸುನ್ ಮಾಯ್’ ಅವರ ಅಧೀಕೃತ ಫೇಸ್‌ಬುಕ್‌ ಮೂಲಕ ತೆರಳಿ, ಅವರು 17 ಆಗಸ್ಟ್, 2020 ರಂದು ಅಪ್‌ಲೋಡ್ ಮಾಡಿದ್ದ ವೈರಲ್‌ ವಿಡಿಯೊದ ಒರಿಜಿನಲ್‌ ವಿಡಿಯೊವನ್ನು ಕಂಡುಕೊಳ್ಳಲಾಗಿದೆ.

ಇಷ್ಟೇ ಅಲ್ಲದೆ, ವಿಯೆಟ್ನಾಮೀ ವೆಬ್‌ಸೈಟ್ ಜಿಂಗ್ ನ್ಯೂಸ್‌ ಕೂಡಾ ಹ್ಯೂ ಕ್ಸುನ್ ಮಾಯ್ ಬಗ್ಗೆ ಲೇಖನವನ್ನು ಬರೆದಿದೆ. ಹ್ಯೂ ಕ್ಸುನ್ ಮಾಯ್ ಆರಂಭದಲ್ಲಿ ಸ್ವಯಂ ಆಗಿ ವಿಡಿಯೊ ಡಿಸೈನ್‌ ಅನ್ನು ಕಲಿತಿದ್ದು, ತನ್ನ ಇಪ್ಪತ್ತನೆ ವಯಸ್ಸಿನಲ್ಲಿ ಫೋಟೊಶಾಪ್‌ ಬಳಸಲು ಕಲಿಯಲು ಪ್ರಾರಂಭಿಸಿದರು ಎಂದು ಲೇಖನವು ಹೇಳಿದೆ.

ಹ್ಯೂ ಕ್ಸುನ್ ಮಾಯ್ ಅವರು ಕೇವಲ ವಿಮಾನದ ರೆಕ್ಕೆಯ ಮೇಲೆ ಮಲಗಿರುವ ವಿಡಿಯೊ ಮಾತ್ರವಲ್ಲದೆ, ಅಡುಗೆ ಮಾಡುತ್ತಿರುವ ಮತ್ತು ವಿಶ್ರಾಂತಿ ಪಡೆಯುತ್ತಿರುವ ವಿಡಿಯೊವನ್ನು ಕೂಡಾ ಎಡಿಟ್‌ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟಿದ್ದಾರೆ.

ಒಟ್ಟಿನಲ್ಲಿ ಸ್ಪಷ್ಟವಾಗಿ ಹೇಳಬಹುದಾದರೆ, ‘ಅಫ್ಘಾನಿಸ್ತಾನದಲ್ಲಿ ತಾಲಿಬಾನಿಗಳಿಗೆ ಹೆದರಿ ಓಡುತ್ತಿರುವ ಜನರ ಹೃದಯ ವಿದ್ರಾವಕ ವಿಡಿಯೊ’ ಎಂದು ವೈರಲ್ ಆಗಿರುವ ಈ ವಿಡಿಯೊ ನಿಜವಲ್ಲ, ಎಡಿಟೆಡ್ ವಿಡಿಯೊವಾಗಿದೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ಸೋನಿಯಾ ಗಾಂಧಿಯ ಎಡಿಟೆಡ್‌‌ ಚಿತ್ರವನ್ನು ಹಂಚುತ್ತಿರುವ ಬಿಜೆಪಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...