Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌‌ಚೆಕ್: ಇದು ಅಫ್ಘಾನ್‌‌ ನಾಗರಿಕನ ವಿಡಿಯೊವಲ್ಲ; ಎಡಿಟೆಡ್‌!

ಫ್ಯಾಕ್ಟ್‌‌ಚೆಕ್: ಇದು ಅಫ್ಘಾನ್‌‌ ನಾಗರಿಕನ ವಿಡಿಯೊವಲ್ಲ; ಎಡಿಟೆಡ್‌!

- Advertisement -
- Advertisement -

ವಿಮಾನದ ಟರ್ಬೈನ್ ಮಧ್ಯದಲ್ಲಿ ವ್ಯಕ್ತಿಯೊಬ್ಬ ಮಲಗಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಈ ವಿಡಿಯೊವನ್ನು ಅಫ್ಘಾನ್‌ ನಾಗರಿಕರು ತಾಲಿಬಾನ್‌ನಿಂದ ತಪ್ಪಿಸಿಕೊಳ್ಳಲು ವಿಮಾನದ ರೆಕ್ಕೆಗಳ ಮೇಲೆಯು ಸವಾರಿ ಮಾಡುತ್ತಿದ್ದಾರೆ ಎಂದು ಪ್ರತಿಪಾದಿಸಿ ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಡಲಾಗುತ್ತಿದೆ.

ತಾಲಿಬಾನ್ ಅಫ್ಘಾನ್‌ ಅನ್ನು ಸ್ವಾಧೀನಪಡಿಸಿಕೊಂಡ ನಂತರ, ಹಲವಾರು ಜನರು ದೇಶವನ್ನು ತೊರೆಯಲು ವಿಮಾನ ನಿಲ್ದಾಣಗಳಲ್ಲಿ ಜಮಾಯಿಸಿದ್ದರಿಂದ, ವಿಮಾನ ನಿಲ್ದಾಣದಲ್ಲಿ ಭಾರಿ ಜನಜಂಗುಳಿ ಉಂಟಾಗಿತ್ತು. ಒಂದಷ್ಟು ಜನರು ವಿಮಾನ ಟೇಕ್‌ಆಫ್‌ ಆಗುವ ಹೊತ್ತಿಗೆ ವಿಮಾನ ಟೈರುಗಳ ಅಡಿಯಲ್ಲಿ ಕೂತಿದ್ದು, ಹಾರಾಡುವ ಸಮಯದಲ್ಲಿ ಇಬ್ಬರು ಕೆಳಗಡೆ ಬಿದ್ದಿರುವ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿತ್ತು.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್ | ‘ಪಿಎಂ ಕನ್ಯಾ ಯೋಜನೆ’ ಅಡಿಯಲ್ಲಿ ಹೆಣ್ಣುಮಕ್ಕಳಿಗೆ ಪ್ರತಿ ತಿಂಗಳು ₹2000 ಸಿಗುವುದು ನಿಜವೆ?

ಆದರೆ ಈ ವಿಡಿಯೊಗಳ ಜೊತೆಗೆ ವಿಮಾನದ ಟರ್ಬೈನ್‌ ಮೇಲೆ ಮಲಗಿರುವ ವ್ಯಕ್ತಿಯೊಬ್ಬರ ವಿಡಿಯೊ ಕೂಡಾ ವೈರಲ್‌ ಆಗಿದೆ. ಇದನ್ನು ಹಂಚಿಕೊಂಡಿರುವ ಹಲವು ನೆಟ್ಟಿಗರು, “ಅಫ್ಘಾನ್‌ ನಾಗರಿಕರು ಸಾವನ್ನು ಅಪ್ಪಿಕೊಂಡು ವಿಮಾನದ ರೆಕ್ಕೆಗಳ ಮೇಲೆ ಸವಾರಿ ಮಾಡುತ್ತಿದ್ದಾರೆ” ಎಂದು ಬರೆದಿದ್ದಾರೆ. ಈ ಪೋಸ್ಟ್‌ನ ಆರ್ಕೈವ್ ಮಾಡಿದ ಆವೃತ್ತಿಯನ್ನು ಇಲ್ಲಿ ನೋಡಬಹುದು.

ಈ ವಿಡಿಯೊವನ್ನು ಹಲವಾರು ಜನರು ವೀಕ್ಷಿಸಿದ್ದು, ನೂರಾರು ಜನರು ಹಂಚಿಕೊಂಡಿದ್ದಾರೆ. ಫೇಸ್‌ಬುಕ್ ಮಾತ್ರವಲ್ಲದೆ, ಟ್ವಿಟರ್‌‌ನಲ್ಲಿ ಕೂಡಾ ಇದೇ ರೀತಿಯ ಪ್ರತಿಪಾದನೆಯನ್ನು ಮಾಡಲಾಗಿದೆ. ಅದನ್ನು ಇಲ್ಲಿ, ಇಲ್ಲಿ ಮತ್ತು ಇಲ್ಲಿ ನೋಡಬಹುದು.

ಫ್ಯಾಕ್ಟ್‌ಚೆಕ್‌‌

ಈ ವಿಡಿಯೋವನ್ನು ವಿಯೆಟ್ನಾಂನ ಗ್ರಾಫಿಕ್ ಡಿಸೈನರ್ ‘ಹ್ಯೂ ಕ್ಸುನ್ ಮಾಯ್’ ಡಿಜಿಟಲ್ ಆಗಿ ರಚಿಸಿದ್ದಾಗಿದೆ. ಅವರು 2020 ರ ಕೊರೊನಾದ ಆರಂಭದಲ್ಲಿ ಇದೇ ರೀತಿಯ ವೀಡಿಯೊಗಳನ್ನು ಪೋಸ್ಟ್ ಮಾಡಲು ಪ್ರಾರಂಭಿಸಿದರು. ಆದ್ದರಿಂದ ವೀಡಿಯೊ ಅಫ್ಘಾನಿಸ್ತಾನ ಬಿಕ್ಕಟ್ಟಿಗೆ ಸಂಬಂಧಿಸಿದ್ದಲ್ಲ.

ಚಿತ್ರವನ್ನು ದಿಕ್ವಿಂಟ್ ಫ್ಯಾಕ್ಟ್‌ಚೆಕ್‌ ಮಾಡಿದೆ. ಗೂಗಲ್‌‌ನ ತಂತ್ರಾಂಶಗಳನ್ನು ಬಳಸಿಕೊಂಡು ವಿಡಿಯೊವನ್ನು ರಿವರ್ಸ್ ಸರ್ಚ್ ಮೂಲಕ ಕ್ವಿಂಟ್‌ ಹುಡುಕಾಡಿದೆ. ಈ ಹುಡುಕಾಟದಲ್ಲಿ, 2020 ರ ಆಗಸ್ಟ್ 19 ರಂದು ಇನ್‌ಸ್ಟಾಗ್ರಾಮ್‌‌ ಪೋಸ್ಟ್‌ ಒಂದರಲ್ಲಿ ಈ ವಿಡಿಯೊ ಕಂಡು ಬಂದಿದೆ. ವಿಡಿಯೊ ಕ್ಲಿಪ್‌ನ ಕೊನೆಯಲ್ಲಿ, ಟಿಕ್‌ಟಾಕ್ ಲೋಗೋದೊಂದಿಗೆ ‘ಹ್ಯೂ ಕ್ಸುನ್ ಮೈ’ ಎಂಬ ಬಳಕೆದಾರ ಹೆಸರು ಅದರಲ್ಲಿ ಕಾಣಿಕೊಂಡಿದೆ.

 

ಟಿಕ್‌ಟಾಕ್‌ ಬಳಕೆದಾರರ ಹೆಸರಿನ ಸುಳಿವನ್ನು ಬಳಸಿಕೊಂಡು Google ನಲ್ಲಿ ಮತ್ತೊಂದು ಸುತ್ತಿನ ರಿವರ್ಸ್ ಇಮೇಜ್ ಹುಡುಕಾಟ ಮಾಡಿದಾಗ, ಫಿಲಿಪಿನೋ ಜೀವನಶೈಲಿ ವೆಬ್‌ಸೈಟ್ ಸ್ಪಾಟ್‌ನ ಲೇಖನವನ್ನು ದಿಕ್ವಿಂಟ್ ಕಂಡುಕೊಂಡಿದೆ.

ಇದನ್ನೂ ಓದಿ: ಆಸ್ಪತ್ರೆಯಲ್ಲಿ ಕಾಲಿಗೆ ಸರಪಳಿ ತೊಡಿಸಿರುವ ಚಿತ್ರ ಸ್ಟಾನ್ ಸ್ವಾಮಿಯವರದ್ದಲ್ಲ

ಈ ಲೇಖನವು ವೈರಲ್ ಆಗಿರುವ ಕ್ಲಿಪ್‌ನ ಫೇಸ್‌ಬುಕ್ ವೀಡಿಯೊವನ್ನು ಹೊಂದಿದೆ. ಅಲ್ಲದೆ ಲೇಖನವು ‘ಹ್ಯೂ ಕ್ಸುನ್ ಮಾಯ್’ ಅನ್ನು ಗ್ರಾಫಿಕ್ ಡಿಸೈನರ್ ಎಂದು ಗುರುತಿಸಿದೆ. ಇಲ್ಲಿಂದ ‘ಹ್ಯೂ ಕ್ಸುನ್ ಮಾಯ್’ ಅವರ ಅಧೀಕೃತ ಫೇಸ್‌ಬುಕ್‌ ಮೂಲಕ ತೆರಳಿ, ಅವರು 17 ಆಗಸ್ಟ್, 2020 ರಂದು ಅಪ್‌ಲೋಡ್ ಮಾಡಿದ್ದ ವೈರಲ್‌ ವಿಡಿಯೊದ ಒರಿಜಿನಲ್‌ ವಿಡಿಯೊವನ್ನು ಕಂಡುಕೊಳ್ಳಲಾಗಿದೆ.

ಇಷ್ಟೇ ಅಲ್ಲದೆ, ವಿಯೆಟ್ನಾಮೀ ವೆಬ್‌ಸೈಟ್ ಜಿಂಗ್ ನ್ಯೂಸ್‌ ಕೂಡಾ ಹ್ಯೂ ಕ್ಸುನ್ ಮಾಯ್ ಬಗ್ಗೆ ಲೇಖನವನ್ನು ಬರೆದಿದೆ. ಹ್ಯೂ ಕ್ಸುನ್ ಮಾಯ್ ಆರಂಭದಲ್ಲಿ ಸ್ವಯಂ ಆಗಿ ವಿಡಿಯೊ ಡಿಸೈನ್‌ ಅನ್ನು ಕಲಿತಿದ್ದು, ತನ್ನ ಇಪ್ಪತ್ತನೆ ವಯಸ್ಸಿನಲ್ಲಿ ಫೋಟೊಶಾಪ್‌ ಬಳಸಲು ಕಲಿಯಲು ಪ್ರಾರಂಭಿಸಿದರು ಎಂದು ಲೇಖನವು ಹೇಳಿದೆ.

ಹ್ಯೂ ಕ್ಸುನ್ ಮಾಯ್ ಅವರು ಕೇವಲ ವಿಮಾನದ ರೆಕ್ಕೆಯ ಮೇಲೆ ಮಲಗಿರುವ ವಿಡಿಯೊ ಮಾತ್ರವಲ್ಲದೆ, ಅಡುಗೆ ಮಾಡುತ್ತಿರುವ ಮತ್ತು ವಿಶ್ರಾಂತಿ ಪಡೆಯುತ್ತಿರುವ ವಿಡಿಯೊವನ್ನು ಕೂಡಾ ಎಡಿಟ್‌ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟಿದ್ದಾರೆ.

ಒಟ್ಟಿನಲ್ಲಿ ಸ್ಪಷ್ಟವಾಗಿ ಹೇಳಬಹುದಾದರೆ, ‘ಅಫ್ಘಾನಿಸ್ತಾನದಲ್ಲಿ ತಾಲಿಬಾನಿಗಳಿಗೆ ಹೆದರಿ ಓಡುತ್ತಿರುವ ಜನರ ಹೃದಯ ವಿದ್ರಾವಕ ವಿಡಿಯೊ’ ಎಂದು ವೈರಲ್ ಆಗಿರುವ ಈ ವಿಡಿಯೊ ನಿಜವಲ್ಲ, ಎಡಿಟೆಡ್ ವಿಡಿಯೊವಾಗಿದೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ಸೋನಿಯಾ ಗಾಂಧಿಯ ಎಡಿಟೆಡ್‌‌ ಚಿತ್ರವನ್ನು ಹಂಚುತ್ತಿರುವ ಬಿಜೆಪಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....