Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌‌ಚೆಕ್: ಇದು ಅಫ್ಘಾನ್‌‌ ನಾಗರಿಕನ ವಿಡಿಯೊವಲ್ಲ; ಎಡಿಟೆಡ್‌!

ಫ್ಯಾಕ್ಟ್‌‌ಚೆಕ್: ಇದು ಅಫ್ಘಾನ್‌‌ ನಾಗರಿಕನ ವಿಡಿಯೊವಲ್ಲ; ಎಡಿಟೆಡ್‌!

- Advertisement -
- Advertisement -

ವಿಮಾನದ ಟರ್ಬೈನ್ ಮಧ್ಯದಲ್ಲಿ ವ್ಯಕ್ತಿಯೊಬ್ಬ ಮಲಗಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಈ ವಿಡಿಯೊವನ್ನು ಅಫ್ಘಾನ್‌ ನಾಗರಿಕರು ತಾಲಿಬಾನ್‌ನಿಂದ ತಪ್ಪಿಸಿಕೊಳ್ಳಲು ವಿಮಾನದ ರೆಕ್ಕೆಗಳ ಮೇಲೆಯು ಸವಾರಿ ಮಾಡುತ್ತಿದ್ದಾರೆ ಎಂದು ಪ್ರತಿಪಾದಿಸಿ ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಡಲಾಗುತ್ತಿದೆ.

ತಾಲಿಬಾನ್ ಅಫ್ಘಾನ್‌ ಅನ್ನು ಸ್ವಾಧೀನಪಡಿಸಿಕೊಂಡ ನಂತರ, ಹಲವಾರು ಜನರು ದೇಶವನ್ನು ತೊರೆಯಲು ವಿಮಾನ ನಿಲ್ದಾಣಗಳಲ್ಲಿ ಜಮಾಯಿಸಿದ್ದರಿಂದ, ವಿಮಾನ ನಿಲ್ದಾಣದಲ್ಲಿ ಭಾರಿ ಜನಜಂಗುಳಿ ಉಂಟಾಗಿತ್ತು. ಒಂದಷ್ಟು ಜನರು ವಿಮಾನ ಟೇಕ್‌ಆಫ್‌ ಆಗುವ ಹೊತ್ತಿಗೆ ವಿಮಾನ ಟೈರುಗಳ ಅಡಿಯಲ್ಲಿ ಕೂತಿದ್ದು, ಹಾರಾಡುವ ಸಮಯದಲ್ಲಿ ಇಬ್ಬರು ಕೆಳಗಡೆ ಬಿದ್ದಿರುವ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿತ್ತು.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್ | ‘ಪಿಎಂ ಕನ್ಯಾ ಯೋಜನೆ’ ಅಡಿಯಲ್ಲಿ ಹೆಣ್ಣುಮಕ್ಕಳಿಗೆ ಪ್ರತಿ ತಿಂಗಳು ₹2000 ಸಿಗುವುದು ನಿಜವೆ?

ಆದರೆ ಈ ವಿಡಿಯೊಗಳ ಜೊತೆಗೆ ವಿಮಾನದ ಟರ್ಬೈನ್‌ ಮೇಲೆ ಮಲಗಿರುವ ವ್ಯಕ್ತಿಯೊಬ್ಬರ ವಿಡಿಯೊ ಕೂಡಾ ವೈರಲ್‌ ಆಗಿದೆ. ಇದನ್ನು ಹಂಚಿಕೊಂಡಿರುವ ಹಲವು ನೆಟ್ಟಿಗರು, “ಅಫ್ಘಾನ್‌ ನಾಗರಿಕರು ಸಾವನ್ನು ಅಪ್ಪಿಕೊಂಡು ವಿಮಾನದ ರೆಕ್ಕೆಗಳ ಮೇಲೆ ಸವಾರಿ ಮಾಡುತ್ತಿದ್ದಾರೆ” ಎಂದು ಬರೆದಿದ್ದಾರೆ. ಈ ಪೋಸ್ಟ್‌ನ ಆರ್ಕೈವ್ ಮಾಡಿದ ಆವೃತ್ತಿಯನ್ನು ಇಲ್ಲಿ ನೋಡಬಹುದು.

ಈ ವಿಡಿಯೊವನ್ನು ಹಲವಾರು ಜನರು ವೀಕ್ಷಿಸಿದ್ದು, ನೂರಾರು ಜನರು ಹಂಚಿಕೊಂಡಿದ್ದಾರೆ. ಫೇಸ್‌ಬುಕ್ ಮಾತ್ರವಲ್ಲದೆ, ಟ್ವಿಟರ್‌‌ನಲ್ಲಿ ಕೂಡಾ ಇದೇ ರೀತಿಯ ಪ್ರತಿಪಾದನೆಯನ್ನು ಮಾಡಲಾಗಿದೆ. ಅದನ್ನು ಇಲ್ಲಿ, ಇಲ್ಲಿ ಮತ್ತು ಇಲ್ಲಿ ನೋಡಬಹುದು.

ಫ್ಯಾಕ್ಟ್‌ಚೆಕ್‌‌

ಈ ವಿಡಿಯೋವನ್ನು ವಿಯೆಟ್ನಾಂನ ಗ್ರಾಫಿಕ್ ಡಿಸೈನರ್ ‘ಹ್ಯೂ ಕ್ಸುನ್ ಮಾಯ್’ ಡಿಜಿಟಲ್ ಆಗಿ ರಚಿಸಿದ್ದಾಗಿದೆ. ಅವರು 2020 ರ ಕೊರೊನಾದ ಆರಂಭದಲ್ಲಿ ಇದೇ ರೀತಿಯ ವೀಡಿಯೊಗಳನ್ನು ಪೋಸ್ಟ್ ಮಾಡಲು ಪ್ರಾರಂಭಿಸಿದರು. ಆದ್ದರಿಂದ ವೀಡಿಯೊ ಅಫ್ಘಾನಿಸ್ತಾನ ಬಿಕ್ಕಟ್ಟಿಗೆ ಸಂಬಂಧಿಸಿದ್ದಲ್ಲ.

ಚಿತ್ರವನ್ನು ದಿಕ್ವಿಂಟ್ ಫ್ಯಾಕ್ಟ್‌ಚೆಕ್‌ ಮಾಡಿದೆ. ಗೂಗಲ್‌‌ನ ತಂತ್ರಾಂಶಗಳನ್ನು ಬಳಸಿಕೊಂಡು ವಿಡಿಯೊವನ್ನು ರಿವರ್ಸ್ ಸರ್ಚ್ ಮೂಲಕ ಕ್ವಿಂಟ್‌ ಹುಡುಕಾಡಿದೆ. ಈ ಹುಡುಕಾಟದಲ್ಲಿ, 2020 ರ ಆಗಸ್ಟ್ 19 ರಂದು ಇನ್‌ಸ್ಟಾಗ್ರಾಮ್‌‌ ಪೋಸ್ಟ್‌ ಒಂದರಲ್ಲಿ ಈ ವಿಡಿಯೊ ಕಂಡು ಬಂದಿದೆ. ವಿಡಿಯೊ ಕ್ಲಿಪ್‌ನ ಕೊನೆಯಲ್ಲಿ, ಟಿಕ್‌ಟಾಕ್ ಲೋಗೋದೊಂದಿಗೆ ‘ಹ್ಯೂ ಕ್ಸುನ್ ಮೈ’ ಎಂಬ ಬಳಕೆದಾರ ಹೆಸರು ಅದರಲ್ಲಿ ಕಾಣಿಕೊಂಡಿದೆ.

 

ಟಿಕ್‌ಟಾಕ್‌ ಬಳಕೆದಾರರ ಹೆಸರಿನ ಸುಳಿವನ್ನು ಬಳಸಿಕೊಂಡು Google ನಲ್ಲಿ ಮತ್ತೊಂದು ಸುತ್ತಿನ ರಿವರ್ಸ್ ಇಮೇಜ್ ಹುಡುಕಾಟ ಮಾಡಿದಾಗ, ಫಿಲಿಪಿನೋ ಜೀವನಶೈಲಿ ವೆಬ್‌ಸೈಟ್ ಸ್ಪಾಟ್‌ನ ಲೇಖನವನ್ನು ದಿಕ್ವಿಂಟ್ ಕಂಡುಕೊಂಡಿದೆ.

ಇದನ್ನೂ ಓದಿ: ಆಸ್ಪತ್ರೆಯಲ್ಲಿ ಕಾಲಿಗೆ ಸರಪಳಿ ತೊಡಿಸಿರುವ ಚಿತ್ರ ಸ್ಟಾನ್ ಸ್ವಾಮಿಯವರದ್ದಲ್ಲ

ಈ ಲೇಖನವು ವೈರಲ್ ಆಗಿರುವ ಕ್ಲಿಪ್‌ನ ಫೇಸ್‌ಬುಕ್ ವೀಡಿಯೊವನ್ನು ಹೊಂದಿದೆ. ಅಲ್ಲದೆ ಲೇಖನವು ‘ಹ್ಯೂ ಕ್ಸುನ್ ಮಾಯ್’ ಅನ್ನು ಗ್ರಾಫಿಕ್ ಡಿಸೈನರ್ ಎಂದು ಗುರುತಿಸಿದೆ. ಇಲ್ಲಿಂದ ‘ಹ್ಯೂ ಕ್ಸುನ್ ಮಾಯ್’ ಅವರ ಅಧೀಕೃತ ಫೇಸ್‌ಬುಕ್‌ ಮೂಲಕ ತೆರಳಿ, ಅವರು 17 ಆಗಸ್ಟ್, 2020 ರಂದು ಅಪ್‌ಲೋಡ್ ಮಾಡಿದ್ದ ವೈರಲ್‌ ವಿಡಿಯೊದ ಒರಿಜಿನಲ್‌ ವಿಡಿಯೊವನ್ನು ಕಂಡುಕೊಳ್ಳಲಾಗಿದೆ.

ಇಷ್ಟೇ ಅಲ್ಲದೆ, ವಿಯೆಟ್ನಾಮೀ ವೆಬ್‌ಸೈಟ್ ಜಿಂಗ್ ನ್ಯೂಸ್‌ ಕೂಡಾ ಹ್ಯೂ ಕ್ಸುನ್ ಮಾಯ್ ಬಗ್ಗೆ ಲೇಖನವನ್ನು ಬರೆದಿದೆ. ಹ್ಯೂ ಕ್ಸುನ್ ಮಾಯ್ ಆರಂಭದಲ್ಲಿ ಸ್ವಯಂ ಆಗಿ ವಿಡಿಯೊ ಡಿಸೈನ್‌ ಅನ್ನು ಕಲಿತಿದ್ದು, ತನ್ನ ಇಪ್ಪತ್ತನೆ ವಯಸ್ಸಿನಲ್ಲಿ ಫೋಟೊಶಾಪ್‌ ಬಳಸಲು ಕಲಿಯಲು ಪ್ರಾರಂಭಿಸಿದರು ಎಂದು ಲೇಖನವು ಹೇಳಿದೆ.

ಹ್ಯೂ ಕ್ಸುನ್ ಮಾಯ್ ಅವರು ಕೇವಲ ವಿಮಾನದ ರೆಕ್ಕೆಯ ಮೇಲೆ ಮಲಗಿರುವ ವಿಡಿಯೊ ಮಾತ್ರವಲ್ಲದೆ, ಅಡುಗೆ ಮಾಡುತ್ತಿರುವ ಮತ್ತು ವಿಶ್ರಾಂತಿ ಪಡೆಯುತ್ತಿರುವ ವಿಡಿಯೊವನ್ನು ಕೂಡಾ ಎಡಿಟ್‌ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟಿದ್ದಾರೆ.

ಒಟ್ಟಿನಲ್ಲಿ ಸ್ಪಷ್ಟವಾಗಿ ಹೇಳಬಹುದಾದರೆ, ‘ಅಫ್ಘಾನಿಸ್ತಾನದಲ್ಲಿ ತಾಲಿಬಾನಿಗಳಿಗೆ ಹೆದರಿ ಓಡುತ್ತಿರುವ ಜನರ ಹೃದಯ ವಿದ್ರಾವಕ ವಿಡಿಯೊ’ ಎಂದು ವೈರಲ್ ಆಗಿರುವ ಈ ವಿಡಿಯೊ ನಿಜವಲ್ಲ, ಎಡಿಟೆಡ್ ವಿಡಿಯೊವಾಗಿದೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ಸೋನಿಯಾ ಗಾಂಧಿಯ ಎಡಿಟೆಡ್‌‌ ಚಿತ್ರವನ್ನು ಹಂಚುತ್ತಿರುವ ಬಿಜೆಪಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...