Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌‌ಚೆಕ್: ಇದು ಅಫ್ಘಾನ್‌‌ ನಾಗರಿಕನ ವಿಡಿಯೊವಲ್ಲ; ಎಡಿಟೆಡ್‌!

ಫ್ಯಾಕ್ಟ್‌‌ಚೆಕ್: ಇದು ಅಫ್ಘಾನ್‌‌ ನಾಗರಿಕನ ವಿಡಿಯೊವಲ್ಲ; ಎಡಿಟೆಡ್‌!

- Advertisement -
- Advertisement -

ವಿಮಾನದ ಟರ್ಬೈನ್ ಮಧ್ಯದಲ್ಲಿ ವ್ಯಕ್ತಿಯೊಬ್ಬ ಮಲಗಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಈ ವಿಡಿಯೊವನ್ನು ಅಫ್ಘಾನ್‌ ನಾಗರಿಕರು ತಾಲಿಬಾನ್‌ನಿಂದ ತಪ್ಪಿಸಿಕೊಳ್ಳಲು ವಿಮಾನದ ರೆಕ್ಕೆಗಳ ಮೇಲೆಯು ಸವಾರಿ ಮಾಡುತ್ತಿದ್ದಾರೆ ಎಂದು ಪ್ರತಿಪಾದಿಸಿ ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಡಲಾಗುತ್ತಿದೆ.

ತಾಲಿಬಾನ್ ಅಫ್ಘಾನ್‌ ಅನ್ನು ಸ್ವಾಧೀನಪಡಿಸಿಕೊಂಡ ನಂತರ, ಹಲವಾರು ಜನರು ದೇಶವನ್ನು ತೊರೆಯಲು ವಿಮಾನ ನಿಲ್ದಾಣಗಳಲ್ಲಿ ಜಮಾಯಿಸಿದ್ದರಿಂದ, ವಿಮಾನ ನಿಲ್ದಾಣದಲ್ಲಿ ಭಾರಿ ಜನಜಂಗುಳಿ ಉಂಟಾಗಿತ್ತು. ಒಂದಷ್ಟು ಜನರು ವಿಮಾನ ಟೇಕ್‌ಆಫ್‌ ಆಗುವ ಹೊತ್ತಿಗೆ ವಿಮಾನ ಟೈರುಗಳ ಅಡಿಯಲ್ಲಿ ಕೂತಿದ್ದು, ಹಾರಾಡುವ ಸಮಯದಲ್ಲಿ ಇಬ್ಬರು ಕೆಳಗಡೆ ಬಿದ್ದಿರುವ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿತ್ತು.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್ | ‘ಪಿಎಂ ಕನ್ಯಾ ಯೋಜನೆ’ ಅಡಿಯಲ್ಲಿ ಹೆಣ್ಣುಮಕ್ಕಳಿಗೆ ಪ್ರತಿ ತಿಂಗಳು ₹2000 ಸಿಗುವುದು ನಿಜವೆ?

ಆದರೆ ಈ ವಿಡಿಯೊಗಳ ಜೊತೆಗೆ ವಿಮಾನದ ಟರ್ಬೈನ್‌ ಮೇಲೆ ಮಲಗಿರುವ ವ್ಯಕ್ತಿಯೊಬ್ಬರ ವಿಡಿಯೊ ಕೂಡಾ ವೈರಲ್‌ ಆಗಿದೆ. ಇದನ್ನು ಹಂಚಿಕೊಂಡಿರುವ ಹಲವು ನೆಟ್ಟಿಗರು, “ಅಫ್ಘಾನ್‌ ನಾಗರಿಕರು ಸಾವನ್ನು ಅಪ್ಪಿಕೊಂಡು ವಿಮಾನದ ರೆಕ್ಕೆಗಳ ಮೇಲೆ ಸವಾರಿ ಮಾಡುತ್ತಿದ್ದಾರೆ” ಎಂದು ಬರೆದಿದ್ದಾರೆ. ಈ ಪೋಸ್ಟ್‌ನ ಆರ್ಕೈವ್ ಮಾಡಿದ ಆವೃತ್ತಿಯನ್ನು ಇಲ್ಲಿ ನೋಡಬಹುದು.

ಈ ವಿಡಿಯೊವನ್ನು ಹಲವಾರು ಜನರು ವೀಕ್ಷಿಸಿದ್ದು, ನೂರಾರು ಜನರು ಹಂಚಿಕೊಂಡಿದ್ದಾರೆ. ಫೇಸ್‌ಬುಕ್ ಮಾತ್ರವಲ್ಲದೆ, ಟ್ವಿಟರ್‌‌ನಲ್ಲಿ ಕೂಡಾ ಇದೇ ರೀತಿಯ ಪ್ರತಿಪಾದನೆಯನ್ನು ಮಾಡಲಾಗಿದೆ. ಅದನ್ನು ಇಲ್ಲಿ, ಇಲ್ಲಿ ಮತ್ತು ಇಲ್ಲಿ ನೋಡಬಹುದು.

ಫ್ಯಾಕ್ಟ್‌ಚೆಕ್‌‌

ಈ ವಿಡಿಯೋವನ್ನು ವಿಯೆಟ್ನಾಂನ ಗ್ರಾಫಿಕ್ ಡಿಸೈನರ್ ‘ಹ್ಯೂ ಕ್ಸುನ್ ಮಾಯ್’ ಡಿಜಿಟಲ್ ಆಗಿ ರಚಿಸಿದ್ದಾಗಿದೆ. ಅವರು 2020 ರ ಕೊರೊನಾದ ಆರಂಭದಲ್ಲಿ ಇದೇ ರೀತಿಯ ವೀಡಿಯೊಗಳನ್ನು ಪೋಸ್ಟ್ ಮಾಡಲು ಪ್ರಾರಂಭಿಸಿದರು. ಆದ್ದರಿಂದ ವೀಡಿಯೊ ಅಫ್ಘಾನಿಸ್ತಾನ ಬಿಕ್ಕಟ್ಟಿಗೆ ಸಂಬಂಧಿಸಿದ್ದಲ್ಲ.

ಚಿತ್ರವನ್ನು ದಿಕ್ವಿಂಟ್ ಫ್ಯಾಕ್ಟ್‌ಚೆಕ್‌ ಮಾಡಿದೆ. ಗೂಗಲ್‌‌ನ ತಂತ್ರಾಂಶಗಳನ್ನು ಬಳಸಿಕೊಂಡು ವಿಡಿಯೊವನ್ನು ರಿವರ್ಸ್ ಸರ್ಚ್ ಮೂಲಕ ಕ್ವಿಂಟ್‌ ಹುಡುಕಾಡಿದೆ. ಈ ಹುಡುಕಾಟದಲ್ಲಿ, 2020 ರ ಆಗಸ್ಟ್ 19 ರಂದು ಇನ್‌ಸ್ಟಾಗ್ರಾಮ್‌‌ ಪೋಸ್ಟ್‌ ಒಂದರಲ್ಲಿ ಈ ವಿಡಿಯೊ ಕಂಡು ಬಂದಿದೆ. ವಿಡಿಯೊ ಕ್ಲಿಪ್‌ನ ಕೊನೆಯಲ್ಲಿ, ಟಿಕ್‌ಟಾಕ್ ಲೋಗೋದೊಂದಿಗೆ ‘ಹ್ಯೂ ಕ್ಸುನ್ ಮೈ’ ಎಂಬ ಬಳಕೆದಾರ ಹೆಸರು ಅದರಲ್ಲಿ ಕಾಣಿಕೊಂಡಿದೆ.

 

ಟಿಕ್‌ಟಾಕ್‌ ಬಳಕೆದಾರರ ಹೆಸರಿನ ಸುಳಿವನ್ನು ಬಳಸಿಕೊಂಡು Google ನಲ್ಲಿ ಮತ್ತೊಂದು ಸುತ್ತಿನ ರಿವರ್ಸ್ ಇಮೇಜ್ ಹುಡುಕಾಟ ಮಾಡಿದಾಗ, ಫಿಲಿಪಿನೋ ಜೀವನಶೈಲಿ ವೆಬ್‌ಸೈಟ್ ಸ್ಪಾಟ್‌ನ ಲೇಖನವನ್ನು ದಿಕ್ವಿಂಟ್ ಕಂಡುಕೊಂಡಿದೆ.

ಇದನ್ನೂ ಓದಿ: ಆಸ್ಪತ್ರೆಯಲ್ಲಿ ಕಾಲಿಗೆ ಸರಪಳಿ ತೊಡಿಸಿರುವ ಚಿತ್ರ ಸ್ಟಾನ್ ಸ್ವಾಮಿಯವರದ್ದಲ್ಲ

ಈ ಲೇಖನವು ವೈರಲ್ ಆಗಿರುವ ಕ್ಲಿಪ್‌ನ ಫೇಸ್‌ಬುಕ್ ವೀಡಿಯೊವನ್ನು ಹೊಂದಿದೆ. ಅಲ್ಲದೆ ಲೇಖನವು ‘ಹ್ಯೂ ಕ್ಸುನ್ ಮಾಯ್’ ಅನ್ನು ಗ್ರಾಫಿಕ್ ಡಿಸೈನರ್ ಎಂದು ಗುರುತಿಸಿದೆ. ಇಲ್ಲಿಂದ ‘ಹ್ಯೂ ಕ್ಸುನ್ ಮಾಯ್’ ಅವರ ಅಧೀಕೃತ ಫೇಸ್‌ಬುಕ್‌ ಮೂಲಕ ತೆರಳಿ, ಅವರು 17 ಆಗಸ್ಟ್, 2020 ರಂದು ಅಪ್‌ಲೋಡ್ ಮಾಡಿದ್ದ ವೈರಲ್‌ ವಿಡಿಯೊದ ಒರಿಜಿನಲ್‌ ವಿಡಿಯೊವನ್ನು ಕಂಡುಕೊಳ್ಳಲಾಗಿದೆ.

ಇಷ್ಟೇ ಅಲ್ಲದೆ, ವಿಯೆಟ್ನಾಮೀ ವೆಬ್‌ಸೈಟ್ ಜಿಂಗ್ ನ್ಯೂಸ್‌ ಕೂಡಾ ಹ್ಯೂ ಕ್ಸುನ್ ಮಾಯ್ ಬಗ್ಗೆ ಲೇಖನವನ್ನು ಬರೆದಿದೆ. ಹ್ಯೂ ಕ್ಸುನ್ ಮಾಯ್ ಆರಂಭದಲ್ಲಿ ಸ್ವಯಂ ಆಗಿ ವಿಡಿಯೊ ಡಿಸೈನ್‌ ಅನ್ನು ಕಲಿತಿದ್ದು, ತನ್ನ ಇಪ್ಪತ್ತನೆ ವಯಸ್ಸಿನಲ್ಲಿ ಫೋಟೊಶಾಪ್‌ ಬಳಸಲು ಕಲಿಯಲು ಪ್ರಾರಂಭಿಸಿದರು ಎಂದು ಲೇಖನವು ಹೇಳಿದೆ.

ಹ್ಯೂ ಕ್ಸುನ್ ಮಾಯ್ ಅವರು ಕೇವಲ ವಿಮಾನದ ರೆಕ್ಕೆಯ ಮೇಲೆ ಮಲಗಿರುವ ವಿಡಿಯೊ ಮಾತ್ರವಲ್ಲದೆ, ಅಡುಗೆ ಮಾಡುತ್ತಿರುವ ಮತ್ತು ವಿಶ್ರಾಂತಿ ಪಡೆಯುತ್ತಿರುವ ವಿಡಿಯೊವನ್ನು ಕೂಡಾ ಎಡಿಟ್‌ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟಿದ್ದಾರೆ.

ಒಟ್ಟಿನಲ್ಲಿ ಸ್ಪಷ್ಟವಾಗಿ ಹೇಳಬಹುದಾದರೆ, ‘ಅಫ್ಘಾನಿಸ್ತಾನದಲ್ಲಿ ತಾಲಿಬಾನಿಗಳಿಗೆ ಹೆದರಿ ಓಡುತ್ತಿರುವ ಜನರ ಹೃದಯ ವಿದ್ರಾವಕ ವಿಡಿಯೊ’ ಎಂದು ವೈರಲ್ ಆಗಿರುವ ಈ ವಿಡಿಯೊ ನಿಜವಲ್ಲ, ಎಡಿಟೆಡ್ ವಿಡಿಯೊವಾಗಿದೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ಸೋನಿಯಾ ಗಾಂಧಿಯ ಎಡಿಟೆಡ್‌‌ ಚಿತ್ರವನ್ನು ಹಂಚುತ್ತಿರುವ ಬಿಜೆಪಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...