Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌‌ಚೆಕ್: ಇದು ಅಫ್ಘಾನ್‌‌ ನಾಗರಿಕನ ವಿಡಿಯೊವಲ್ಲ; ಎಡಿಟೆಡ್‌!

ಫ್ಯಾಕ್ಟ್‌‌ಚೆಕ್: ಇದು ಅಫ್ಘಾನ್‌‌ ನಾಗರಿಕನ ವಿಡಿಯೊವಲ್ಲ; ಎಡಿಟೆಡ್‌!

- Advertisement -
- Advertisement -

ವಿಮಾನದ ಟರ್ಬೈನ್ ಮಧ್ಯದಲ್ಲಿ ವ್ಯಕ್ತಿಯೊಬ್ಬ ಮಲಗಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಈ ವಿಡಿಯೊವನ್ನು ಅಫ್ಘಾನ್‌ ನಾಗರಿಕರು ತಾಲಿಬಾನ್‌ನಿಂದ ತಪ್ಪಿಸಿಕೊಳ್ಳಲು ವಿಮಾನದ ರೆಕ್ಕೆಗಳ ಮೇಲೆಯು ಸವಾರಿ ಮಾಡುತ್ತಿದ್ದಾರೆ ಎಂದು ಪ್ರತಿಪಾದಿಸಿ ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಡಲಾಗುತ್ತಿದೆ.

ತಾಲಿಬಾನ್ ಅಫ್ಘಾನ್‌ ಅನ್ನು ಸ್ವಾಧೀನಪಡಿಸಿಕೊಂಡ ನಂತರ, ಹಲವಾರು ಜನರು ದೇಶವನ್ನು ತೊರೆಯಲು ವಿಮಾನ ನಿಲ್ದಾಣಗಳಲ್ಲಿ ಜಮಾಯಿಸಿದ್ದರಿಂದ, ವಿಮಾನ ನಿಲ್ದಾಣದಲ್ಲಿ ಭಾರಿ ಜನಜಂಗುಳಿ ಉಂಟಾಗಿತ್ತು. ಒಂದಷ್ಟು ಜನರು ವಿಮಾನ ಟೇಕ್‌ಆಫ್‌ ಆಗುವ ಹೊತ್ತಿಗೆ ವಿಮಾನ ಟೈರುಗಳ ಅಡಿಯಲ್ಲಿ ಕೂತಿದ್ದು, ಹಾರಾಡುವ ಸಮಯದಲ್ಲಿ ಇಬ್ಬರು ಕೆಳಗಡೆ ಬಿದ್ದಿರುವ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿತ್ತು.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್ | ‘ಪಿಎಂ ಕನ್ಯಾ ಯೋಜನೆ’ ಅಡಿಯಲ್ಲಿ ಹೆಣ್ಣುಮಕ್ಕಳಿಗೆ ಪ್ರತಿ ತಿಂಗಳು ₹2000 ಸಿಗುವುದು ನಿಜವೆ?

ಆದರೆ ಈ ವಿಡಿಯೊಗಳ ಜೊತೆಗೆ ವಿಮಾನದ ಟರ್ಬೈನ್‌ ಮೇಲೆ ಮಲಗಿರುವ ವ್ಯಕ್ತಿಯೊಬ್ಬರ ವಿಡಿಯೊ ಕೂಡಾ ವೈರಲ್‌ ಆಗಿದೆ. ಇದನ್ನು ಹಂಚಿಕೊಂಡಿರುವ ಹಲವು ನೆಟ್ಟಿಗರು, “ಅಫ್ಘಾನ್‌ ನಾಗರಿಕರು ಸಾವನ್ನು ಅಪ್ಪಿಕೊಂಡು ವಿಮಾನದ ರೆಕ್ಕೆಗಳ ಮೇಲೆ ಸವಾರಿ ಮಾಡುತ್ತಿದ್ದಾರೆ” ಎಂದು ಬರೆದಿದ್ದಾರೆ. ಈ ಪೋಸ್ಟ್‌ನ ಆರ್ಕೈವ್ ಮಾಡಿದ ಆವೃತ್ತಿಯನ್ನು ಇಲ್ಲಿ ನೋಡಬಹುದು.

ಈ ವಿಡಿಯೊವನ್ನು ಹಲವಾರು ಜನರು ವೀಕ್ಷಿಸಿದ್ದು, ನೂರಾರು ಜನರು ಹಂಚಿಕೊಂಡಿದ್ದಾರೆ. ಫೇಸ್‌ಬುಕ್ ಮಾತ್ರವಲ್ಲದೆ, ಟ್ವಿಟರ್‌‌ನಲ್ಲಿ ಕೂಡಾ ಇದೇ ರೀತಿಯ ಪ್ರತಿಪಾದನೆಯನ್ನು ಮಾಡಲಾಗಿದೆ. ಅದನ್ನು ಇಲ್ಲಿ, ಇಲ್ಲಿ ಮತ್ತು ಇಲ್ಲಿ ನೋಡಬಹುದು.

ಫ್ಯಾಕ್ಟ್‌ಚೆಕ್‌‌

ಈ ವಿಡಿಯೋವನ್ನು ವಿಯೆಟ್ನಾಂನ ಗ್ರಾಫಿಕ್ ಡಿಸೈನರ್ ‘ಹ್ಯೂ ಕ್ಸುನ್ ಮಾಯ್’ ಡಿಜಿಟಲ್ ಆಗಿ ರಚಿಸಿದ್ದಾಗಿದೆ. ಅವರು 2020 ರ ಕೊರೊನಾದ ಆರಂಭದಲ್ಲಿ ಇದೇ ರೀತಿಯ ವೀಡಿಯೊಗಳನ್ನು ಪೋಸ್ಟ್ ಮಾಡಲು ಪ್ರಾರಂಭಿಸಿದರು. ಆದ್ದರಿಂದ ವೀಡಿಯೊ ಅಫ್ಘಾನಿಸ್ತಾನ ಬಿಕ್ಕಟ್ಟಿಗೆ ಸಂಬಂಧಿಸಿದ್ದಲ್ಲ.

ಚಿತ್ರವನ್ನು ದಿಕ್ವಿಂಟ್ ಫ್ಯಾಕ್ಟ್‌ಚೆಕ್‌ ಮಾಡಿದೆ. ಗೂಗಲ್‌‌ನ ತಂತ್ರಾಂಶಗಳನ್ನು ಬಳಸಿಕೊಂಡು ವಿಡಿಯೊವನ್ನು ರಿವರ್ಸ್ ಸರ್ಚ್ ಮೂಲಕ ಕ್ವಿಂಟ್‌ ಹುಡುಕಾಡಿದೆ. ಈ ಹುಡುಕಾಟದಲ್ಲಿ, 2020 ರ ಆಗಸ್ಟ್ 19 ರಂದು ಇನ್‌ಸ್ಟಾಗ್ರಾಮ್‌‌ ಪೋಸ್ಟ್‌ ಒಂದರಲ್ಲಿ ಈ ವಿಡಿಯೊ ಕಂಡು ಬಂದಿದೆ. ವಿಡಿಯೊ ಕ್ಲಿಪ್‌ನ ಕೊನೆಯಲ್ಲಿ, ಟಿಕ್‌ಟಾಕ್ ಲೋಗೋದೊಂದಿಗೆ ‘ಹ್ಯೂ ಕ್ಸುನ್ ಮೈ’ ಎಂಬ ಬಳಕೆದಾರ ಹೆಸರು ಅದರಲ್ಲಿ ಕಾಣಿಕೊಂಡಿದೆ.

 

ಟಿಕ್‌ಟಾಕ್‌ ಬಳಕೆದಾರರ ಹೆಸರಿನ ಸುಳಿವನ್ನು ಬಳಸಿಕೊಂಡು Google ನಲ್ಲಿ ಮತ್ತೊಂದು ಸುತ್ತಿನ ರಿವರ್ಸ್ ಇಮೇಜ್ ಹುಡುಕಾಟ ಮಾಡಿದಾಗ, ಫಿಲಿಪಿನೋ ಜೀವನಶೈಲಿ ವೆಬ್‌ಸೈಟ್ ಸ್ಪಾಟ್‌ನ ಲೇಖನವನ್ನು ದಿಕ್ವಿಂಟ್ ಕಂಡುಕೊಂಡಿದೆ.

ಇದನ್ನೂ ಓದಿ: ಆಸ್ಪತ್ರೆಯಲ್ಲಿ ಕಾಲಿಗೆ ಸರಪಳಿ ತೊಡಿಸಿರುವ ಚಿತ್ರ ಸ್ಟಾನ್ ಸ್ವಾಮಿಯವರದ್ದಲ್ಲ

ಈ ಲೇಖನವು ವೈರಲ್ ಆಗಿರುವ ಕ್ಲಿಪ್‌ನ ಫೇಸ್‌ಬುಕ್ ವೀಡಿಯೊವನ್ನು ಹೊಂದಿದೆ. ಅಲ್ಲದೆ ಲೇಖನವು ‘ಹ್ಯೂ ಕ್ಸುನ್ ಮಾಯ್’ ಅನ್ನು ಗ್ರಾಫಿಕ್ ಡಿಸೈನರ್ ಎಂದು ಗುರುತಿಸಿದೆ. ಇಲ್ಲಿಂದ ‘ಹ್ಯೂ ಕ್ಸುನ್ ಮಾಯ್’ ಅವರ ಅಧೀಕೃತ ಫೇಸ್‌ಬುಕ್‌ ಮೂಲಕ ತೆರಳಿ, ಅವರು 17 ಆಗಸ್ಟ್, 2020 ರಂದು ಅಪ್‌ಲೋಡ್ ಮಾಡಿದ್ದ ವೈರಲ್‌ ವಿಡಿಯೊದ ಒರಿಜಿನಲ್‌ ವಿಡಿಯೊವನ್ನು ಕಂಡುಕೊಳ್ಳಲಾಗಿದೆ.

ಇಷ್ಟೇ ಅಲ್ಲದೆ, ವಿಯೆಟ್ನಾಮೀ ವೆಬ್‌ಸೈಟ್ ಜಿಂಗ್ ನ್ಯೂಸ್‌ ಕೂಡಾ ಹ್ಯೂ ಕ್ಸುನ್ ಮಾಯ್ ಬಗ್ಗೆ ಲೇಖನವನ್ನು ಬರೆದಿದೆ. ಹ್ಯೂ ಕ್ಸುನ್ ಮಾಯ್ ಆರಂಭದಲ್ಲಿ ಸ್ವಯಂ ಆಗಿ ವಿಡಿಯೊ ಡಿಸೈನ್‌ ಅನ್ನು ಕಲಿತಿದ್ದು, ತನ್ನ ಇಪ್ಪತ್ತನೆ ವಯಸ್ಸಿನಲ್ಲಿ ಫೋಟೊಶಾಪ್‌ ಬಳಸಲು ಕಲಿಯಲು ಪ್ರಾರಂಭಿಸಿದರು ಎಂದು ಲೇಖನವು ಹೇಳಿದೆ.

ಹ್ಯೂ ಕ್ಸುನ್ ಮಾಯ್ ಅವರು ಕೇವಲ ವಿಮಾನದ ರೆಕ್ಕೆಯ ಮೇಲೆ ಮಲಗಿರುವ ವಿಡಿಯೊ ಮಾತ್ರವಲ್ಲದೆ, ಅಡುಗೆ ಮಾಡುತ್ತಿರುವ ಮತ್ತು ವಿಶ್ರಾಂತಿ ಪಡೆಯುತ್ತಿರುವ ವಿಡಿಯೊವನ್ನು ಕೂಡಾ ಎಡಿಟ್‌ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟಿದ್ದಾರೆ.

ಒಟ್ಟಿನಲ್ಲಿ ಸ್ಪಷ್ಟವಾಗಿ ಹೇಳಬಹುದಾದರೆ, ‘ಅಫ್ಘಾನಿಸ್ತಾನದಲ್ಲಿ ತಾಲಿಬಾನಿಗಳಿಗೆ ಹೆದರಿ ಓಡುತ್ತಿರುವ ಜನರ ಹೃದಯ ವಿದ್ರಾವಕ ವಿಡಿಯೊ’ ಎಂದು ವೈರಲ್ ಆಗಿರುವ ಈ ವಿಡಿಯೊ ನಿಜವಲ್ಲ, ಎಡಿಟೆಡ್ ವಿಡಿಯೊವಾಗಿದೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ಸೋನಿಯಾ ಗಾಂಧಿಯ ಎಡಿಟೆಡ್‌‌ ಚಿತ್ರವನ್ನು ಹಂಚುತ್ತಿರುವ ಬಿಜೆಪಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...