Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌‌ಚೆಕ್: ಇದು ಅಫ್ಘಾನ್‌‌ ನಾಗರಿಕನ ವಿಡಿಯೊವಲ್ಲ; ಎಡಿಟೆಡ್‌!

ಫ್ಯಾಕ್ಟ್‌‌ಚೆಕ್: ಇದು ಅಫ್ಘಾನ್‌‌ ನಾಗರಿಕನ ವಿಡಿಯೊವಲ್ಲ; ಎಡಿಟೆಡ್‌!

- Advertisement -
- Advertisement -

ವಿಮಾನದ ಟರ್ಬೈನ್ ಮಧ್ಯದಲ್ಲಿ ವ್ಯಕ್ತಿಯೊಬ್ಬ ಮಲಗಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಈ ವಿಡಿಯೊವನ್ನು ಅಫ್ಘಾನ್‌ ನಾಗರಿಕರು ತಾಲಿಬಾನ್‌ನಿಂದ ತಪ್ಪಿಸಿಕೊಳ್ಳಲು ವಿಮಾನದ ರೆಕ್ಕೆಗಳ ಮೇಲೆಯು ಸವಾರಿ ಮಾಡುತ್ತಿದ್ದಾರೆ ಎಂದು ಪ್ರತಿಪಾದಿಸಿ ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಡಲಾಗುತ್ತಿದೆ.

ತಾಲಿಬಾನ್ ಅಫ್ಘಾನ್‌ ಅನ್ನು ಸ್ವಾಧೀನಪಡಿಸಿಕೊಂಡ ನಂತರ, ಹಲವಾರು ಜನರು ದೇಶವನ್ನು ತೊರೆಯಲು ವಿಮಾನ ನಿಲ್ದಾಣಗಳಲ್ಲಿ ಜಮಾಯಿಸಿದ್ದರಿಂದ, ವಿಮಾನ ನಿಲ್ದಾಣದಲ್ಲಿ ಭಾರಿ ಜನಜಂಗುಳಿ ಉಂಟಾಗಿತ್ತು. ಒಂದಷ್ಟು ಜನರು ವಿಮಾನ ಟೇಕ್‌ಆಫ್‌ ಆಗುವ ಹೊತ್ತಿಗೆ ವಿಮಾನ ಟೈರುಗಳ ಅಡಿಯಲ್ಲಿ ಕೂತಿದ್ದು, ಹಾರಾಡುವ ಸಮಯದಲ್ಲಿ ಇಬ್ಬರು ಕೆಳಗಡೆ ಬಿದ್ದಿರುವ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿತ್ತು.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್ | ‘ಪಿಎಂ ಕನ್ಯಾ ಯೋಜನೆ’ ಅಡಿಯಲ್ಲಿ ಹೆಣ್ಣುಮಕ್ಕಳಿಗೆ ಪ್ರತಿ ತಿಂಗಳು ₹2000 ಸಿಗುವುದು ನಿಜವೆ?

ಆದರೆ ಈ ವಿಡಿಯೊಗಳ ಜೊತೆಗೆ ವಿಮಾನದ ಟರ್ಬೈನ್‌ ಮೇಲೆ ಮಲಗಿರುವ ವ್ಯಕ್ತಿಯೊಬ್ಬರ ವಿಡಿಯೊ ಕೂಡಾ ವೈರಲ್‌ ಆಗಿದೆ. ಇದನ್ನು ಹಂಚಿಕೊಂಡಿರುವ ಹಲವು ನೆಟ್ಟಿಗರು, “ಅಫ್ಘಾನ್‌ ನಾಗರಿಕರು ಸಾವನ್ನು ಅಪ್ಪಿಕೊಂಡು ವಿಮಾನದ ರೆಕ್ಕೆಗಳ ಮೇಲೆ ಸವಾರಿ ಮಾಡುತ್ತಿದ್ದಾರೆ” ಎಂದು ಬರೆದಿದ್ದಾರೆ. ಈ ಪೋಸ್ಟ್‌ನ ಆರ್ಕೈವ್ ಮಾಡಿದ ಆವೃತ್ತಿಯನ್ನು ಇಲ್ಲಿ ನೋಡಬಹುದು.

ಈ ವಿಡಿಯೊವನ್ನು ಹಲವಾರು ಜನರು ವೀಕ್ಷಿಸಿದ್ದು, ನೂರಾರು ಜನರು ಹಂಚಿಕೊಂಡಿದ್ದಾರೆ. ಫೇಸ್‌ಬುಕ್ ಮಾತ್ರವಲ್ಲದೆ, ಟ್ವಿಟರ್‌‌ನಲ್ಲಿ ಕೂಡಾ ಇದೇ ರೀತಿಯ ಪ್ರತಿಪಾದನೆಯನ್ನು ಮಾಡಲಾಗಿದೆ. ಅದನ್ನು ಇಲ್ಲಿ, ಇಲ್ಲಿ ಮತ್ತು ಇಲ್ಲಿ ನೋಡಬಹುದು.

ಫ್ಯಾಕ್ಟ್‌ಚೆಕ್‌‌

ಈ ವಿಡಿಯೋವನ್ನು ವಿಯೆಟ್ನಾಂನ ಗ್ರಾಫಿಕ್ ಡಿಸೈನರ್ ‘ಹ್ಯೂ ಕ್ಸುನ್ ಮಾಯ್’ ಡಿಜಿಟಲ್ ಆಗಿ ರಚಿಸಿದ್ದಾಗಿದೆ. ಅವರು 2020 ರ ಕೊರೊನಾದ ಆರಂಭದಲ್ಲಿ ಇದೇ ರೀತಿಯ ವೀಡಿಯೊಗಳನ್ನು ಪೋಸ್ಟ್ ಮಾಡಲು ಪ್ರಾರಂಭಿಸಿದರು. ಆದ್ದರಿಂದ ವೀಡಿಯೊ ಅಫ್ಘಾನಿಸ್ತಾನ ಬಿಕ್ಕಟ್ಟಿಗೆ ಸಂಬಂಧಿಸಿದ್ದಲ್ಲ.

ಚಿತ್ರವನ್ನು ದಿಕ್ವಿಂಟ್ ಫ್ಯಾಕ್ಟ್‌ಚೆಕ್‌ ಮಾಡಿದೆ. ಗೂಗಲ್‌‌ನ ತಂತ್ರಾಂಶಗಳನ್ನು ಬಳಸಿಕೊಂಡು ವಿಡಿಯೊವನ್ನು ರಿವರ್ಸ್ ಸರ್ಚ್ ಮೂಲಕ ಕ್ವಿಂಟ್‌ ಹುಡುಕಾಡಿದೆ. ಈ ಹುಡುಕಾಟದಲ್ಲಿ, 2020 ರ ಆಗಸ್ಟ್ 19 ರಂದು ಇನ್‌ಸ್ಟಾಗ್ರಾಮ್‌‌ ಪೋಸ್ಟ್‌ ಒಂದರಲ್ಲಿ ಈ ವಿಡಿಯೊ ಕಂಡು ಬಂದಿದೆ. ವಿಡಿಯೊ ಕ್ಲಿಪ್‌ನ ಕೊನೆಯಲ್ಲಿ, ಟಿಕ್‌ಟಾಕ್ ಲೋಗೋದೊಂದಿಗೆ ‘ಹ್ಯೂ ಕ್ಸುನ್ ಮೈ’ ಎಂಬ ಬಳಕೆದಾರ ಹೆಸರು ಅದರಲ್ಲಿ ಕಾಣಿಕೊಂಡಿದೆ.

 

ಟಿಕ್‌ಟಾಕ್‌ ಬಳಕೆದಾರರ ಹೆಸರಿನ ಸುಳಿವನ್ನು ಬಳಸಿಕೊಂಡು Google ನಲ್ಲಿ ಮತ್ತೊಂದು ಸುತ್ತಿನ ರಿವರ್ಸ್ ಇಮೇಜ್ ಹುಡುಕಾಟ ಮಾಡಿದಾಗ, ಫಿಲಿಪಿನೋ ಜೀವನಶೈಲಿ ವೆಬ್‌ಸೈಟ್ ಸ್ಪಾಟ್‌ನ ಲೇಖನವನ್ನು ದಿಕ್ವಿಂಟ್ ಕಂಡುಕೊಂಡಿದೆ.

ಇದನ್ನೂ ಓದಿ: ಆಸ್ಪತ್ರೆಯಲ್ಲಿ ಕಾಲಿಗೆ ಸರಪಳಿ ತೊಡಿಸಿರುವ ಚಿತ್ರ ಸ್ಟಾನ್ ಸ್ವಾಮಿಯವರದ್ದಲ್ಲ

ಈ ಲೇಖನವು ವೈರಲ್ ಆಗಿರುವ ಕ್ಲಿಪ್‌ನ ಫೇಸ್‌ಬುಕ್ ವೀಡಿಯೊವನ್ನು ಹೊಂದಿದೆ. ಅಲ್ಲದೆ ಲೇಖನವು ‘ಹ್ಯೂ ಕ್ಸುನ್ ಮಾಯ್’ ಅನ್ನು ಗ್ರಾಫಿಕ್ ಡಿಸೈನರ್ ಎಂದು ಗುರುತಿಸಿದೆ. ಇಲ್ಲಿಂದ ‘ಹ್ಯೂ ಕ್ಸುನ್ ಮಾಯ್’ ಅವರ ಅಧೀಕೃತ ಫೇಸ್‌ಬುಕ್‌ ಮೂಲಕ ತೆರಳಿ, ಅವರು 17 ಆಗಸ್ಟ್, 2020 ರಂದು ಅಪ್‌ಲೋಡ್ ಮಾಡಿದ್ದ ವೈರಲ್‌ ವಿಡಿಯೊದ ಒರಿಜಿನಲ್‌ ವಿಡಿಯೊವನ್ನು ಕಂಡುಕೊಳ್ಳಲಾಗಿದೆ.

ಇಷ್ಟೇ ಅಲ್ಲದೆ, ವಿಯೆಟ್ನಾಮೀ ವೆಬ್‌ಸೈಟ್ ಜಿಂಗ್ ನ್ಯೂಸ್‌ ಕೂಡಾ ಹ್ಯೂ ಕ್ಸುನ್ ಮಾಯ್ ಬಗ್ಗೆ ಲೇಖನವನ್ನು ಬರೆದಿದೆ. ಹ್ಯೂ ಕ್ಸುನ್ ಮಾಯ್ ಆರಂಭದಲ್ಲಿ ಸ್ವಯಂ ಆಗಿ ವಿಡಿಯೊ ಡಿಸೈನ್‌ ಅನ್ನು ಕಲಿತಿದ್ದು, ತನ್ನ ಇಪ್ಪತ್ತನೆ ವಯಸ್ಸಿನಲ್ಲಿ ಫೋಟೊಶಾಪ್‌ ಬಳಸಲು ಕಲಿಯಲು ಪ್ರಾರಂಭಿಸಿದರು ಎಂದು ಲೇಖನವು ಹೇಳಿದೆ.

ಹ್ಯೂ ಕ್ಸುನ್ ಮಾಯ್ ಅವರು ಕೇವಲ ವಿಮಾನದ ರೆಕ್ಕೆಯ ಮೇಲೆ ಮಲಗಿರುವ ವಿಡಿಯೊ ಮಾತ್ರವಲ್ಲದೆ, ಅಡುಗೆ ಮಾಡುತ್ತಿರುವ ಮತ್ತು ವಿಶ್ರಾಂತಿ ಪಡೆಯುತ್ತಿರುವ ವಿಡಿಯೊವನ್ನು ಕೂಡಾ ಎಡಿಟ್‌ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟಿದ್ದಾರೆ.

ಒಟ್ಟಿನಲ್ಲಿ ಸ್ಪಷ್ಟವಾಗಿ ಹೇಳಬಹುದಾದರೆ, ‘ಅಫ್ಘಾನಿಸ್ತಾನದಲ್ಲಿ ತಾಲಿಬಾನಿಗಳಿಗೆ ಹೆದರಿ ಓಡುತ್ತಿರುವ ಜನರ ಹೃದಯ ವಿದ್ರಾವಕ ವಿಡಿಯೊ’ ಎಂದು ವೈರಲ್ ಆಗಿರುವ ಈ ವಿಡಿಯೊ ನಿಜವಲ್ಲ, ಎಡಿಟೆಡ್ ವಿಡಿಯೊವಾಗಿದೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ಸೋನಿಯಾ ಗಾಂಧಿಯ ಎಡಿಟೆಡ್‌‌ ಚಿತ್ರವನ್ನು ಹಂಚುತ್ತಿರುವ ಬಿಜೆಪಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....