Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌‌ಚೆಕ್‌: ಯುವತಿಯನ್ನು ಅಮಾನುಷವಾಗಿ ಕೊಲ್ಲುತ್ತಿರುವ ಈ ವಿಡಿಯೋ ಭಾರತದ್ದಲ್ಲ

ಫ್ಯಾಕ್ಟ್‌‌ಚೆಕ್‌: ಯುವತಿಯನ್ನು ಅಮಾನುಷವಾಗಿ ಕೊಲ್ಲುತ್ತಿರುವ ಈ ವಿಡಿಯೋ ಭಾರತದ್ದಲ್ಲ

ಅತ್ಯಂತ ಕ್ರೂರವಾಗಿ ಯುವತಿಯನ್ನು ಕೊಲ್ಲಲಾಗಿದ್ದು ಕೊಲೆಗಾರನಿಗೂ ಅಂತಹದ್ದೇ ಶಿಕ್ಷೆ ನೀಡಬೇಕು ಎಂದು ಹಲವರು ಯುಪಿ ಪೋಲಿಸರೊಂದಿಗೆ ಆಗ್ರಹಿಸಿದ್ದರು.

- Advertisement -
- Advertisement -

ಯುವತಿಯೊಬ್ಬಳನ್ನು ಕೊಡಲಿಯಿಂದ ಅಮಾನುಷವಾಗಿ ಹತ್ಯೆಗೈದ ವಿಡಿಯೋ  ಸಾಮಾಜಿಕ ಜಾಲತಾಣಲ್ಲಿ ಹರಿದಾಡುತ್ತಿದ್ದು, ಇದು ಭಾರತದಲ್ಲಿ ನಡೆದ ಘಟನೆಯಾಗಿದೆ ಎಂದು ವೈರಲ್‌ ಆಗಿದೆ. ವೀಡಿಯೊದಲ್ಲಿ ಯುವತಿಯೊಬ್ಬಳನ್ನು ಕಟ್ಟಿ, ಸಾಯುವವರೆಗೂ ಕೊಡಲಿಯಿಂದ ತಲೆಗೆ ಕ್ರೂರವಾಗಿ ಹೊಡೆಯುವುದು ದಾಖಲಾಗಿದೆ.

ವಿಡಿಯೋ ಅತೀ ಹಿಂಸಾತ್ಮಕ ಆಗಿರುವುದರಿಂದ ಅದನ್ನು ನಾನುಗೌರಿ.ಕಾಮ್‌ ಪ್ರಸಾರ ಮಾಡುತ್ತಿಲ್ಲ.

ಹಲವಾರು ಟ್ವಿಟ್ಟರ್ ಬಳಕೆದಾರರು ಈ ವೀಡಿಯೊವನ್ನು ಭಾರತದ್ದು ಎಂದು ಪ್ರತಿಪಾದಿಸಿ ಹಂಚಿಕೊಂಡಿದ್ದಾರೆ. ತಮ್ಮ ಪೋಸ್ಟ್‌‌ಗಳಲ್ಲಿ “ಮಾನವೀಯತೆ ಸತ್ತಿದೆ. ಇದು ಅನಾಗರಿಕ, ಆಘಾತಕಾರಿ. ಅವನನ್ನು ಕೂಡಾ ಅದೇ ರೀತಿಯಲ್ಲಿ ಶಿಕ್ಷಿಸುವಂತೆ ನಾನು ದೇಶದ ಎಲ್ಲ ಪೊಲೀಸರನ್ನು ವಿನಂತಿಸುತ್ತೇನೆ” ಎಂದು ಬರೆದಿದ್ದಾರೆ. ಟ್ವೀಟ್‌ ಅನ್ನು ಯುಪಿ ಪೊಲೀಸರಿಗೆ ಟ್ಯಾಗ್ ಮಾಡಿದ್ದಾರೆ.

ಇದನ್ನೂ ಓದಿ: ಕೇರಳದ ಹಿಂದೂ ಯುವತಿಯ ಮೇಲೆ ಲೈಂಗಿಕ ದೌರ್ಜನ್ಯ? ಇಲ್ಲಿದೆ ಫ್ಯಾಕ್ಟ್‌ಚೆಕ್‌ ವಿವರ

ಆರ್ಕೈವ್ ಇಲ್ಲಿದೆ

ಅಷ್ಟೇ ಅಲ್ಲದೆ ಈ ವಿಡಿಯೋವನ್ನು ಫೇಸ್‌ಬುಕ್‌ನಲ್ಲಿ ಕೂಡಾ ಹಂಚಿಕೊಳ್ಳಲಾಗಿದ್ದು, ಇದು ಭಾರತ ವಿಡಿಯೋ ಆಗಿರಬಹುದು ಎಂದು ಪ್ರತಿಪಾದಿಸುತ್ತದೆ.

ಪೇಸ್‌ಬುಕ್ ಸ್ಕ್ರೀನ್‌ಶಾರ್ಟ್

ಫ್ಯಾಕ್ಟ್‌‌ಚೆಕ್‌

ವಿಡಿಯೋಗಳನ್ನು ಹಲವಾರು ಕೀಫ್ರೇಮ್‌ಗಳಾಗಿ ವಿಭಜಿಸಿ ಅವುಗಳನ್ನು ರಿವರ್ಸ್ ಸರ್ಚ್ ಮಾಡಿದಾಗ ಇದರ ಬಗೆಗಿನ ವರದಿ ರೆಡ್ಡಿಟ್‌ನಲ್ಲಿ ಕಂಡುಕೊಳ್ಳಲಾಗಿದೆ. ಬ್ರೆಜಿಲ್‌ನಲ್ಲಿ ಮಹಿಳೆಯನ್ನು ಕೊಲ್ಲಲಾಗಿದೆ ಎಂದು ತೋರಿಸಿಸುವ ಮಾಹಿತಿಯೊಂದಿಗೆ ವೀಡಿಯೊವನ್ನು ಅಲ್ಲಿ ಹಂಚಿಕೊಳ್ಳಲಾಗಿದೆ.

ಇಷ್ಟೇ ಅಲ್ಲದೆ ಕೀವರ್ಡ್‌ಗಳನ್ನು ಬಳಸಿ ಜಾಲತಾಣದಲ್ಲಿ ಮತ್ತಷ್ಟು ಹುಡುಕಾಟ ನಡೆಸಿದಾಗ ಫೇಸ್‌ಬುಕ್‌ನಲ್ಲಿ, “ಫೆಮಿನಿಕೇಡಿಯೊ – ಪ್ಯಾರೆಮ್ ಡೆ ನಾಸ್ ಮಾತಾರ್” ಎಂಬ ಪೇಜ್‌ನಲ್ಲಿ ಇದರ ಬಗ್ಗೆ ಮಾಹಿತಿ ಸಿಕ್ಕಿದೆ. ಅಲ್ಲಿ ಸೆಪ್ಟೆಂಬರ್ 1 ರ ಪೋಸ್ಟ್, ಥಾಲಿಯಾ ಟೊರೆಸ್ ಡಿ ಸೋಜಾ ಎಂಬ 23 ವರ್ಷದ ಯುವತಿಯನ್ನು ಕೊಲೆ ಮಾಡಲಾಗಿದೆ ಎಂದು ಹೇಳಿದೆ.

ಈ ಪೋಸ್ಟ್ ಪ್ರಕಾರ, ಈ ಘಟನೆ ಬ್ರೆಜಿಲ್‌ನ ಫೋರ್ಟಲೆಜಾದ ಗ್ರ್ಯಾಂಜಾ ಪೋರ್ಚುಗಲ್‌ನಲ್ಲಿ ನಡೆದಿದೆ. ಮೃತ ದೇಹವು ಅತ್ಯಂತ ಹಿಂಸಾತ್ಮಕ ಸಾವಿನ ಚಿಹ್ನೆಗಳನ್ನು ಹೊಂದಿದ್ದು, ಬಹುಶಃ ತಲೆಗೆ ಕೊಡಲಿಯಿಂದ ಹಲ್ಲೆ ನಡೆಸಲಾಗಿದೆ ಎಂದು ಬರೆಯಲಾಗಿದೆ.

ಇದನ್ನೂ ಓದಿ: ಮುಸ್ಲಿಂ ಮದುವೆಯಲ್ಲಿ ಪಾಲ್ಗೊಂಡಿದ್ದಕ್ಕೆ ಕೇರಳದ RSS ಕಾರ್ಯಕರ್ತನ ಮೇಲೆ ಹಲ್ಲೆ ಮಾಡಲಾಯಿತೇ?

ಇದಲ್ಲದೆ, ಯುವತಿಯ ಹೆಸರನ್ನು ಬಳಸಿಕೊಂಡು ಫೇಸ್‌ಬುಕ್‌ನಲ್ಲಿ ಕೀವರ್ಡ್ ಮೂಲಕ ಹುಡುಕಾಟ ನಡೆಸಿದಾಗ ಅರಾಕಟಿ ಪೋಲೇಶಿಯಾ 24 ಹೆಚ್ಎಸ್ ಎಂಬ ಪೇಜ್‌ನಲ್ಲೂ ಈ ಬಗ್ಗೆ ಬರೆಯಲಾಗಿದ್ದು, ಈ ಪೋಸ್ಟ್‌ನಲ್ಲಿ ವೈರಲ್ ವೀಡಿಯೊದಲ್ಲಿರುವ ಮಹಿಳೆಯಂತೆಯೇ ಅದೇ ಬಟ್ಟೆಗಳನ್ನು ಧರಿಸಿರುವುದನ್ನು ಕಾಣಬಹುದಾಗಿದೆ.

ಇಷ್ಟೇ ಅಲ್ಲದೆ ಗೂಗಲ್‌ನಲ್ಲಿ ಯುವತಿಯ ಹೆಸರಿನೊಂದಿಗೆ ಹುಡುಕಾಟ ನಡೆಸಿದಾಗ ಕೂಡಾ ಘಟನೆಯ ಕುರಿತು ಸಿಎನ್‌ನ್ಯೂಸ್ ವರದಿ ಮಾಡಿರುವ ಸುದ್ದಿಯನ್ನು ಓದಬಹುದಾಗಿದೆ.

ಆದ್ದರಿಂದ, ಕ್ರೂರವಾಗಿ ಕೊಲ್ಲಲ್ಪಟ್ಟ ಈ ಮಹಿಳೆಯ ವೀಡಿಯೊ ಬ್ರೆಜಿಲ್‌ನದ್ದಾಗಿದ್ದು, ಭಾರತದಲ್ಲಿ ಸಂಭವಿಸಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವುದು ಸುಳ್ಳಾಗಿದೆ ಎಂದು ಈ ಮೂಲಕ ತಿಳಿದುಕೊಳ್ಳಬಹುದು.


ಇದನ್ನೂ ಓದಿ:  ಪ್ರಣಬ್ ಮುಖರ್ಜಿ ನಿಧನಕ್ಕೆ ಪತ್ರಕರ್ತೆ ರಾಣಾ ಅಯೂಬ್ ಸಂತಸಪಟ್ಟಿದ್ದು ಸುಳ್ಳುಸುದ್ದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...