Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌‌ಚೆಕ್‌: ಯುವತಿಯನ್ನು ಅಮಾನುಷವಾಗಿ ಕೊಲ್ಲುತ್ತಿರುವ ಈ ವಿಡಿಯೋ ಭಾರತದ್ದಲ್ಲ

ಫ್ಯಾಕ್ಟ್‌‌ಚೆಕ್‌: ಯುವತಿಯನ್ನು ಅಮಾನುಷವಾಗಿ ಕೊಲ್ಲುತ್ತಿರುವ ಈ ವಿಡಿಯೋ ಭಾರತದ್ದಲ್ಲ

ಅತ್ಯಂತ ಕ್ರೂರವಾಗಿ ಯುವತಿಯನ್ನು ಕೊಲ್ಲಲಾಗಿದ್ದು ಕೊಲೆಗಾರನಿಗೂ ಅಂತಹದ್ದೇ ಶಿಕ್ಷೆ ನೀಡಬೇಕು ಎಂದು ಹಲವರು ಯುಪಿ ಪೋಲಿಸರೊಂದಿಗೆ ಆಗ್ರಹಿಸಿದ್ದರು.

- Advertisement -
- Advertisement -

ಯುವತಿಯೊಬ್ಬಳನ್ನು ಕೊಡಲಿಯಿಂದ ಅಮಾನುಷವಾಗಿ ಹತ್ಯೆಗೈದ ವಿಡಿಯೋ  ಸಾಮಾಜಿಕ ಜಾಲತಾಣಲ್ಲಿ ಹರಿದಾಡುತ್ತಿದ್ದು, ಇದು ಭಾರತದಲ್ಲಿ ನಡೆದ ಘಟನೆಯಾಗಿದೆ ಎಂದು ವೈರಲ್‌ ಆಗಿದೆ. ವೀಡಿಯೊದಲ್ಲಿ ಯುವತಿಯೊಬ್ಬಳನ್ನು ಕಟ್ಟಿ, ಸಾಯುವವರೆಗೂ ಕೊಡಲಿಯಿಂದ ತಲೆಗೆ ಕ್ರೂರವಾಗಿ ಹೊಡೆಯುವುದು ದಾಖಲಾಗಿದೆ.

ವಿಡಿಯೋ ಅತೀ ಹಿಂಸಾತ್ಮಕ ಆಗಿರುವುದರಿಂದ ಅದನ್ನು ನಾನುಗೌರಿ.ಕಾಮ್‌ ಪ್ರಸಾರ ಮಾಡುತ್ತಿಲ್ಲ.

ಹಲವಾರು ಟ್ವಿಟ್ಟರ್ ಬಳಕೆದಾರರು ಈ ವೀಡಿಯೊವನ್ನು ಭಾರತದ್ದು ಎಂದು ಪ್ರತಿಪಾದಿಸಿ ಹಂಚಿಕೊಂಡಿದ್ದಾರೆ. ತಮ್ಮ ಪೋಸ್ಟ್‌‌ಗಳಲ್ಲಿ “ಮಾನವೀಯತೆ ಸತ್ತಿದೆ. ಇದು ಅನಾಗರಿಕ, ಆಘಾತಕಾರಿ. ಅವನನ್ನು ಕೂಡಾ ಅದೇ ರೀತಿಯಲ್ಲಿ ಶಿಕ್ಷಿಸುವಂತೆ ನಾನು ದೇಶದ ಎಲ್ಲ ಪೊಲೀಸರನ್ನು ವಿನಂತಿಸುತ್ತೇನೆ” ಎಂದು ಬರೆದಿದ್ದಾರೆ. ಟ್ವೀಟ್‌ ಅನ್ನು ಯುಪಿ ಪೊಲೀಸರಿಗೆ ಟ್ಯಾಗ್ ಮಾಡಿದ್ದಾರೆ.

ಇದನ್ನೂ ಓದಿ: ಕೇರಳದ ಹಿಂದೂ ಯುವತಿಯ ಮೇಲೆ ಲೈಂಗಿಕ ದೌರ್ಜನ್ಯ? ಇಲ್ಲಿದೆ ಫ್ಯಾಕ್ಟ್‌ಚೆಕ್‌ ವಿವರ

ಆರ್ಕೈವ್ ಇಲ್ಲಿದೆ

ಅಷ್ಟೇ ಅಲ್ಲದೆ ಈ ವಿಡಿಯೋವನ್ನು ಫೇಸ್‌ಬುಕ್‌ನಲ್ಲಿ ಕೂಡಾ ಹಂಚಿಕೊಳ್ಳಲಾಗಿದ್ದು, ಇದು ಭಾರತ ವಿಡಿಯೋ ಆಗಿರಬಹುದು ಎಂದು ಪ್ರತಿಪಾದಿಸುತ್ತದೆ.

ಪೇಸ್‌ಬುಕ್ ಸ್ಕ್ರೀನ್‌ಶಾರ್ಟ್

ಫ್ಯಾಕ್ಟ್‌‌ಚೆಕ್‌

ವಿಡಿಯೋಗಳನ್ನು ಹಲವಾರು ಕೀಫ್ರೇಮ್‌ಗಳಾಗಿ ವಿಭಜಿಸಿ ಅವುಗಳನ್ನು ರಿವರ್ಸ್ ಸರ್ಚ್ ಮಾಡಿದಾಗ ಇದರ ಬಗೆಗಿನ ವರದಿ ರೆಡ್ಡಿಟ್‌ನಲ್ಲಿ ಕಂಡುಕೊಳ್ಳಲಾಗಿದೆ. ಬ್ರೆಜಿಲ್‌ನಲ್ಲಿ ಮಹಿಳೆಯನ್ನು ಕೊಲ್ಲಲಾಗಿದೆ ಎಂದು ತೋರಿಸಿಸುವ ಮಾಹಿತಿಯೊಂದಿಗೆ ವೀಡಿಯೊವನ್ನು ಅಲ್ಲಿ ಹಂಚಿಕೊಳ್ಳಲಾಗಿದೆ.

ಇಷ್ಟೇ ಅಲ್ಲದೆ ಕೀವರ್ಡ್‌ಗಳನ್ನು ಬಳಸಿ ಜಾಲತಾಣದಲ್ಲಿ ಮತ್ತಷ್ಟು ಹುಡುಕಾಟ ನಡೆಸಿದಾಗ ಫೇಸ್‌ಬುಕ್‌ನಲ್ಲಿ, “ಫೆಮಿನಿಕೇಡಿಯೊ – ಪ್ಯಾರೆಮ್ ಡೆ ನಾಸ್ ಮಾತಾರ್” ಎಂಬ ಪೇಜ್‌ನಲ್ಲಿ ಇದರ ಬಗ್ಗೆ ಮಾಹಿತಿ ಸಿಕ್ಕಿದೆ. ಅಲ್ಲಿ ಸೆಪ್ಟೆಂಬರ್ 1 ರ ಪೋಸ್ಟ್, ಥಾಲಿಯಾ ಟೊರೆಸ್ ಡಿ ಸೋಜಾ ಎಂಬ 23 ವರ್ಷದ ಯುವತಿಯನ್ನು ಕೊಲೆ ಮಾಡಲಾಗಿದೆ ಎಂದು ಹೇಳಿದೆ.

ಈ ಪೋಸ್ಟ್ ಪ್ರಕಾರ, ಈ ಘಟನೆ ಬ್ರೆಜಿಲ್‌ನ ಫೋರ್ಟಲೆಜಾದ ಗ್ರ್ಯಾಂಜಾ ಪೋರ್ಚುಗಲ್‌ನಲ್ಲಿ ನಡೆದಿದೆ. ಮೃತ ದೇಹವು ಅತ್ಯಂತ ಹಿಂಸಾತ್ಮಕ ಸಾವಿನ ಚಿಹ್ನೆಗಳನ್ನು ಹೊಂದಿದ್ದು, ಬಹುಶಃ ತಲೆಗೆ ಕೊಡಲಿಯಿಂದ ಹಲ್ಲೆ ನಡೆಸಲಾಗಿದೆ ಎಂದು ಬರೆಯಲಾಗಿದೆ.

ಇದನ್ನೂ ಓದಿ: ಮುಸ್ಲಿಂ ಮದುವೆಯಲ್ಲಿ ಪಾಲ್ಗೊಂಡಿದ್ದಕ್ಕೆ ಕೇರಳದ RSS ಕಾರ್ಯಕರ್ತನ ಮೇಲೆ ಹಲ್ಲೆ ಮಾಡಲಾಯಿತೇ?

ಇದಲ್ಲದೆ, ಯುವತಿಯ ಹೆಸರನ್ನು ಬಳಸಿಕೊಂಡು ಫೇಸ್‌ಬುಕ್‌ನಲ್ಲಿ ಕೀವರ್ಡ್ ಮೂಲಕ ಹುಡುಕಾಟ ನಡೆಸಿದಾಗ ಅರಾಕಟಿ ಪೋಲೇಶಿಯಾ 24 ಹೆಚ್ಎಸ್ ಎಂಬ ಪೇಜ್‌ನಲ್ಲೂ ಈ ಬಗ್ಗೆ ಬರೆಯಲಾಗಿದ್ದು, ಈ ಪೋಸ್ಟ್‌ನಲ್ಲಿ ವೈರಲ್ ವೀಡಿಯೊದಲ್ಲಿರುವ ಮಹಿಳೆಯಂತೆಯೇ ಅದೇ ಬಟ್ಟೆಗಳನ್ನು ಧರಿಸಿರುವುದನ್ನು ಕಾಣಬಹುದಾಗಿದೆ.

ಇಷ್ಟೇ ಅಲ್ಲದೆ ಗೂಗಲ್‌ನಲ್ಲಿ ಯುವತಿಯ ಹೆಸರಿನೊಂದಿಗೆ ಹುಡುಕಾಟ ನಡೆಸಿದಾಗ ಕೂಡಾ ಘಟನೆಯ ಕುರಿತು ಸಿಎನ್‌ನ್ಯೂಸ್ ವರದಿ ಮಾಡಿರುವ ಸುದ್ದಿಯನ್ನು ಓದಬಹುದಾಗಿದೆ.

ಆದ್ದರಿಂದ, ಕ್ರೂರವಾಗಿ ಕೊಲ್ಲಲ್ಪಟ್ಟ ಈ ಮಹಿಳೆಯ ವೀಡಿಯೊ ಬ್ರೆಜಿಲ್‌ನದ್ದಾಗಿದ್ದು, ಭಾರತದಲ್ಲಿ ಸಂಭವಿಸಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವುದು ಸುಳ್ಳಾಗಿದೆ ಎಂದು ಈ ಮೂಲಕ ತಿಳಿದುಕೊಳ್ಳಬಹುದು.


ಇದನ್ನೂ ಓದಿ:  ಪ್ರಣಬ್ ಮುಖರ್ಜಿ ನಿಧನಕ್ಕೆ ಪತ್ರಕರ್ತೆ ರಾಣಾ ಅಯೂಬ್ ಸಂತಸಪಟ್ಟಿದ್ದು ಸುಳ್ಳುಸುದ್ದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...