Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌‌ಚೆಕ್‌: ಯುವತಿಯನ್ನು ಅಮಾನುಷವಾಗಿ ಕೊಲ್ಲುತ್ತಿರುವ ಈ ವಿಡಿಯೋ ಭಾರತದ್ದಲ್ಲ

ಫ್ಯಾಕ್ಟ್‌‌ಚೆಕ್‌: ಯುವತಿಯನ್ನು ಅಮಾನುಷವಾಗಿ ಕೊಲ್ಲುತ್ತಿರುವ ಈ ವಿಡಿಯೋ ಭಾರತದ್ದಲ್ಲ

ಅತ್ಯಂತ ಕ್ರೂರವಾಗಿ ಯುವತಿಯನ್ನು ಕೊಲ್ಲಲಾಗಿದ್ದು ಕೊಲೆಗಾರನಿಗೂ ಅಂತಹದ್ದೇ ಶಿಕ್ಷೆ ನೀಡಬೇಕು ಎಂದು ಹಲವರು ಯುಪಿ ಪೋಲಿಸರೊಂದಿಗೆ ಆಗ್ರಹಿಸಿದ್ದರು.

- Advertisement -
- Advertisement -

ಯುವತಿಯೊಬ್ಬಳನ್ನು ಕೊಡಲಿಯಿಂದ ಅಮಾನುಷವಾಗಿ ಹತ್ಯೆಗೈದ ವಿಡಿಯೋ  ಸಾಮಾಜಿಕ ಜಾಲತಾಣಲ್ಲಿ ಹರಿದಾಡುತ್ತಿದ್ದು, ಇದು ಭಾರತದಲ್ಲಿ ನಡೆದ ಘಟನೆಯಾಗಿದೆ ಎಂದು ವೈರಲ್‌ ಆಗಿದೆ. ವೀಡಿಯೊದಲ್ಲಿ ಯುವತಿಯೊಬ್ಬಳನ್ನು ಕಟ್ಟಿ, ಸಾಯುವವರೆಗೂ ಕೊಡಲಿಯಿಂದ ತಲೆಗೆ ಕ್ರೂರವಾಗಿ ಹೊಡೆಯುವುದು ದಾಖಲಾಗಿದೆ.

ವಿಡಿಯೋ ಅತೀ ಹಿಂಸಾತ್ಮಕ ಆಗಿರುವುದರಿಂದ ಅದನ್ನು ನಾನುಗೌರಿ.ಕಾಮ್‌ ಪ್ರಸಾರ ಮಾಡುತ್ತಿಲ್ಲ.

ಹಲವಾರು ಟ್ವಿಟ್ಟರ್ ಬಳಕೆದಾರರು ಈ ವೀಡಿಯೊವನ್ನು ಭಾರತದ್ದು ಎಂದು ಪ್ರತಿಪಾದಿಸಿ ಹಂಚಿಕೊಂಡಿದ್ದಾರೆ. ತಮ್ಮ ಪೋಸ್ಟ್‌‌ಗಳಲ್ಲಿ “ಮಾನವೀಯತೆ ಸತ್ತಿದೆ. ಇದು ಅನಾಗರಿಕ, ಆಘಾತಕಾರಿ. ಅವನನ್ನು ಕೂಡಾ ಅದೇ ರೀತಿಯಲ್ಲಿ ಶಿಕ್ಷಿಸುವಂತೆ ನಾನು ದೇಶದ ಎಲ್ಲ ಪೊಲೀಸರನ್ನು ವಿನಂತಿಸುತ್ತೇನೆ” ಎಂದು ಬರೆದಿದ್ದಾರೆ. ಟ್ವೀಟ್‌ ಅನ್ನು ಯುಪಿ ಪೊಲೀಸರಿಗೆ ಟ್ಯಾಗ್ ಮಾಡಿದ್ದಾರೆ.

ಇದನ್ನೂ ಓದಿ: ಕೇರಳದ ಹಿಂದೂ ಯುವತಿಯ ಮೇಲೆ ಲೈಂಗಿಕ ದೌರ್ಜನ್ಯ? ಇಲ್ಲಿದೆ ಫ್ಯಾಕ್ಟ್‌ಚೆಕ್‌ ವಿವರ

ಆರ್ಕೈವ್ ಇಲ್ಲಿದೆ

ಅಷ್ಟೇ ಅಲ್ಲದೆ ಈ ವಿಡಿಯೋವನ್ನು ಫೇಸ್‌ಬುಕ್‌ನಲ್ಲಿ ಕೂಡಾ ಹಂಚಿಕೊಳ್ಳಲಾಗಿದ್ದು, ಇದು ಭಾರತ ವಿಡಿಯೋ ಆಗಿರಬಹುದು ಎಂದು ಪ್ರತಿಪಾದಿಸುತ್ತದೆ.

ಪೇಸ್‌ಬುಕ್ ಸ್ಕ್ರೀನ್‌ಶಾರ್ಟ್

ಫ್ಯಾಕ್ಟ್‌‌ಚೆಕ್‌

ವಿಡಿಯೋಗಳನ್ನು ಹಲವಾರು ಕೀಫ್ರೇಮ್‌ಗಳಾಗಿ ವಿಭಜಿಸಿ ಅವುಗಳನ್ನು ರಿವರ್ಸ್ ಸರ್ಚ್ ಮಾಡಿದಾಗ ಇದರ ಬಗೆಗಿನ ವರದಿ ರೆಡ್ಡಿಟ್‌ನಲ್ಲಿ ಕಂಡುಕೊಳ್ಳಲಾಗಿದೆ. ಬ್ರೆಜಿಲ್‌ನಲ್ಲಿ ಮಹಿಳೆಯನ್ನು ಕೊಲ್ಲಲಾಗಿದೆ ಎಂದು ತೋರಿಸಿಸುವ ಮಾಹಿತಿಯೊಂದಿಗೆ ವೀಡಿಯೊವನ್ನು ಅಲ್ಲಿ ಹಂಚಿಕೊಳ್ಳಲಾಗಿದೆ.

ಇಷ್ಟೇ ಅಲ್ಲದೆ ಕೀವರ್ಡ್‌ಗಳನ್ನು ಬಳಸಿ ಜಾಲತಾಣದಲ್ಲಿ ಮತ್ತಷ್ಟು ಹುಡುಕಾಟ ನಡೆಸಿದಾಗ ಫೇಸ್‌ಬುಕ್‌ನಲ್ಲಿ, “ಫೆಮಿನಿಕೇಡಿಯೊ – ಪ್ಯಾರೆಮ್ ಡೆ ನಾಸ್ ಮಾತಾರ್” ಎಂಬ ಪೇಜ್‌ನಲ್ಲಿ ಇದರ ಬಗ್ಗೆ ಮಾಹಿತಿ ಸಿಕ್ಕಿದೆ. ಅಲ್ಲಿ ಸೆಪ್ಟೆಂಬರ್ 1 ರ ಪೋಸ್ಟ್, ಥಾಲಿಯಾ ಟೊರೆಸ್ ಡಿ ಸೋಜಾ ಎಂಬ 23 ವರ್ಷದ ಯುವತಿಯನ್ನು ಕೊಲೆ ಮಾಡಲಾಗಿದೆ ಎಂದು ಹೇಳಿದೆ.

ಈ ಪೋಸ್ಟ್ ಪ್ರಕಾರ, ಈ ಘಟನೆ ಬ್ರೆಜಿಲ್‌ನ ಫೋರ್ಟಲೆಜಾದ ಗ್ರ್ಯಾಂಜಾ ಪೋರ್ಚುಗಲ್‌ನಲ್ಲಿ ನಡೆದಿದೆ. ಮೃತ ದೇಹವು ಅತ್ಯಂತ ಹಿಂಸಾತ್ಮಕ ಸಾವಿನ ಚಿಹ್ನೆಗಳನ್ನು ಹೊಂದಿದ್ದು, ಬಹುಶಃ ತಲೆಗೆ ಕೊಡಲಿಯಿಂದ ಹಲ್ಲೆ ನಡೆಸಲಾಗಿದೆ ಎಂದು ಬರೆಯಲಾಗಿದೆ.

ಇದನ್ನೂ ಓದಿ: ಮುಸ್ಲಿಂ ಮದುವೆಯಲ್ಲಿ ಪಾಲ್ಗೊಂಡಿದ್ದಕ್ಕೆ ಕೇರಳದ RSS ಕಾರ್ಯಕರ್ತನ ಮೇಲೆ ಹಲ್ಲೆ ಮಾಡಲಾಯಿತೇ?

ಇದಲ್ಲದೆ, ಯುವತಿಯ ಹೆಸರನ್ನು ಬಳಸಿಕೊಂಡು ಫೇಸ್‌ಬುಕ್‌ನಲ್ಲಿ ಕೀವರ್ಡ್ ಮೂಲಕ ಹುಡುಕಾಟ ನಡೆಸಿದಾಗ ಅರಾಕಟಿ ಪೋಲೇಶಿಯಾ 24 ಹೆಚ್ಎಸ್ ಎಂಬ ಪೇಜ್‌ನಲ್ಲೂ ಈ ಬಗ್ಗೆ ಬರೆಯಲಾಗಿದ್ದು, ಈ ಪೋಸ್ಟ್‌ನಲ್ಲಿ ವೈರಲ್ ವೀಡಿಯೊದಲ್ಲಿರುವ ಮಹಿಳೆಯಂತೆಯೇ ಅದೇ ಬಟ್ಟೆಗಳನ್ನು ಧರಿಸಿರುವುದನ್ನು ಕಾಣಬಹುದಾಗಿದೆ.

ಇಷ್ಟೇ ಅಲ್ಲದೆ ಗೂಗಲ್‌ನಲ್ಲಿ ಯುವತಿಯ ಹೆಸರಿನೊಂದಿಗೆ ಹುಡುಕಾಟ ನಡೆಸಿದಾಗ ಕೂಡಾ ಘಟನೆಯ ಕುರಿತು ಸಿಎನ್‌ನ್ಯೂಸ್ ವರದಿ ಮಾಡಿರುವ ಸುದ್ದಿಯನ್ನು ಓದಬಹುದಾಗಿದೆ.

ಆದ್ದರಿಂದ, ಕ್ರೂರವಾಗಿ ಕೊಲ್ಲಲ್ಪಟ್ಟ ಈ ಮಹಿಳೆಯ ವೀಡಿಯೊ ಬ್ರೆಜಿಲ್‌ನದ್ದಾಗಿದ್ದು, ಭಾರತದಲ್ಲಿ ಸಂಭವಿಸಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವುದು ಸುಳ್ಳಾಗಿದೆ ಎಂದು ಈ ಮೂಲಕ ತಿಳಿದುಕೊಳ್ಳಬಹುದು.


ಇದನ್ನೂ ಓದಿ:  ಪ್ರಣಬ್ ಮುಖರ್ಜಿ ನಿಧನಕ್ಕೆ ಪತ್ರಕರ್ತೆ ರಾಣಾ ಅಯೂಬ್ ಸಂತಸಪಟ್ಟಿದ್ದು ಸುಳ್ಳುಸುದ್ದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...