Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌‌ಚೆಕ್‌: ಯುವತಿಯನ್ನು ಅಮಾನುಷವಾಗಿ ಕೊಲ್ಲುತ್ತಿರುವ ಈ ವಿಡಿಯೋ ಭಾರತದ್ದಲ್ಲ

ಫ್ಯಾಕ್ಟ್‌‌ಚೆಕ್‌: ಯುವತಿಯನ್ನು ಅಮಾನುಷವಾಗಿ ಕೊಲ್ಲುತ್ತಿರುವ ಈ ವಿಡಿಯೋ ಭಾರತದ್ದಲ್ಲ

ಅತ್ಯಂತ ಕ್ರೂರವಾಗಿ ಯುವತಿಯನ್ನು ಕೊಲ್ಲಲಾಗಿದ್ದು ಕೊಲೆಗಾರನಿಗೂ ಅಂತಹದ್ದೇ ಶಿಕ್ಷೆ ನೀಡಬೇಕು ಎಂದು ಹಲವರು ಯುಪಿ ಪೋಲಿಸರೊಂದಿಗೆ ಆಗ್ರಹಿಸಿದ್ದರು.

- Advertisement -
- Advertisement -

ಯುವತಿಯೊಬ್ಬಳನ್ನು ಕೊಡಲಿಯಿಂದ ಅಮಾನುಷವಾಗಿ ಹತ್ಯೆಗೈದ ವಿಡಿಯೋ  ಸಾಮಾಜಿಕ ಜಾಲತಾಣಲ್ಲಿ ಹರಿದಾಡುತ್ತಿದ್ದು, ಇದು ಭಾರತದಲ್ಲಿ ನಡೆದ ಘಟನೆಯಾಗಿದೆ ಎಂದು ವೈರಲ್‌ ಆಗಿದೆ. ವೀಡಿಯೊದಲ್ಲಿ ಯುವತಿಯೊಬ್ಬಳನ್ನು ಕಟ್ಟಿ, ಸಾಯುವವರೆಗೂ ಕೊಡಲಿಯಿಂದ ತಲೆಗೆ ಕ್ರೂರವಾಗಿ ಹೊಡೆಯುವುದು ದಾಖಲಾಗಿದೆ.

ವಿಡಿಯೋ ಅತೀ ಹಿಂಸಾತ್ಮಕ ಆಗಿರುವುದರಿಂದ ಅದನ್ನು ನಾನುಗೌರಿ.ಕಾಮ್‌ ಪ್ರಸಾರ ಮಾಡುತ್ತಿಲ್ಲ.

ಹಲವಾರು ಟ್ವಿಟ್ಟರ್ ಬಳಕೆದಾರರು ಈ ವೀಡಿಯೊವನ್ನು ಭಾರತದ್ದು ಎಂದು ಪ್ರತಿಪಾದಿಸಿ ಹಂಚಿಕೊಂಡಿದ್ದಾರೆ. ತಮ್ಮ ಪೋಸ್ಟ್‌‌ಗಳಲ್ಲಿ “ಮಾನವೀಯತೆ ಸತ್ತಿದೆ. ಇದು ಅನಾಗರಿಕ, ಆಘಾತಕಾರಿ. ಅವನನ್ನು ಕೂಡಾ ಅದೇ ರೀತಿಯಲ್ಲಿ ಶಿಕ್ಷಿಸುವಂತೆ ನಾನು ದೇಶದ ಎಲ್ಲ ಪೊಲೀಸರನ್ನು ವಿನಂತಿಸುತ್ತೇನೆ” ಎಂದು ಬರೆದಿದ್ದಾರೆ. ಟ್ವೀಟ್‌ ಅನ್ನು ಯುಪಿ ಪೊಲೀಸರಿಗೆ ಟ್ಯಾಗ್ ಮಾಡಿದ್ದಾರೆ.

ಇದನ್ನೂ ಓದಿ: ಕೇರಳದ ಹಿಂದೂ ಯುವತಿಯ ಮೇಲೆ ಲೈಂಗಿಕ ದೌರ್ಜನ್ಯ? ಇಲ್ಲಿದೆ ಫ್ಯಾಕ್ಟ್‌ಚೆಕ್‌ ವಿವರ

ಆರ್ಕೈವ್ ಇಲ್ಲಿದೆ

ಅಷ್ಟೇ ಅಲ್ಲದೆ ಈ ವಿಡಿಯೋವನ್ನು ಫೇಸ್‌ಬುಕ್‌ನಲ್ಲಿ ಕೂಡಾ ಹಂಚಿಕೊಳ್ಳಲಾಗಿದ್ದು, ಇದು ಭಾರತ ವಿಡಿಯೋ ಆಗಿರಬಹುದು ಎಂದು ಪ್ರತಿಪಾದಿಸುತ್ತದೆ.

ಪೇಸ್‌ಬುಕ್ ಸ್ಕ್ರೀನ್‌ಶಾರ್ಟ್

ಫ್ಯಾಕ್ಟ್‌‌ಚೆಕ್‌

ವಿಡಿಯೋಗಳನ್ನು ಹಲವಾರು ಕೀಫ್ರೇಮ್‌ಗಳಾಗಿ ವಿಭಜಿಸಿ ಅವುಗಳನ್ನು ರಿವರ್ಸ್ ಸರ್ಚ್ ಮಾಡಿದಾಗ ಇದರ ಬಗೆಗಿನ ವರದಿ ರೆಡ್ಡಿಟ್‌ನಲ್ಲಿ ಕಂಡುಕೊಳ್ಳಲಾಗಿದೆ. ಬ್ರೆಜಿಲ್‌ನಲ್ಲಿ ಮಹಿಳೆಯನ್ನು ಕೊಲ್ಲಲಾಗಿದೆ ಎಂದು ತೋರಿಸಿಸುವ ಮಾಹಿತಿಯೊಂದಿಗೆ ವೀಡಿಯೊವನ್ನು ಅಲ್ಲಿ ಹಂಚಿಕೊಳ್ಳಲಾಗಿದೆ.

ಇಷ್ಟೇ ಅಲ್ಲದೆ ಕೀವರ್ಡ್‌ಗಳನ್ನು ಬಳಸಿ ಜಾಲತಾಣದಲ್ಲಿ ಮತ್ತಷ್ಟು ಹುಡುಕಾಟ ನಡೆಸಿದಾಗ ಫೇಸ್‌ಬುಕ್‌ನಲ್ಲಿ, “ಫೆಮಿನಿಕೇಡಿಯೊ – ಪ್ಯಾರೆಮ್ ಡೆ ನಾಸ್ ಮಾತಾರ್” ಎಂಬ ಪೇಜ್‌ನಲ್ಲಿ ಇದರ ಬಗ್ಗೆ ಮಾಹಿತಿ ಸಿಕ್ಕಿದೆ. ಅಲ್ಲಿ ಸೆಪ್ಟೆಂಬರ್ 1 ರ ಪೋಸ್ಟ್, ಥಾಲಿಯಾ ಟೊರೆಸ್ ಡಿ ಸೋಜಾ ಎಂಬ 23 ವರ್ಷದ ಯುವತಿಯನ್ನು ಕೊಲೆ ಮಾಡಲಾಗಿದೆ ಎಂದು ಹೇಳಿದೆ.

ಈ ಪೋಸ್ಟ್ ಪ್ರಕಾರ, ಈ ಘಟನೆ ಬ್ರೆಜಿಲ್‌ನ ಫೋರ್ಟಲೆಜಾದ ಗ್ರ್ಯಾಂಜಾ ಪೋರ್ಚುಗಲ್‌ನಲ್ಲಿ ನಡೆದಿದೆ. ಮೃತ ದೇಹವು ಅತ್ಯಂತ ಹಿಂಸಾತ್ಮಕ ಸಾವಿನ ಚಿಹ್ನೆಗಳನ್ನು ಹೊಂದಿದ್ದು, ಬಹುಶಃ ತಲೆಗೆ ಕೊಡಲಿಯಿಂದ ಹಲ್ಲೆ ನಡೆಸಲಾಗಿದೆ ಎಂದು ಬರೆಯಲಾಗಿದೆ.

ಇದನ್ನೂ ಓದಿ: ಮುಸ್ಲಿಂ ಮದುವೆಯಲ್ಲಿ ಪಾಲ್ಗೊಂಡಿದ್ದಕ್ಕೆ ಕೇರಳದ RSS ಕಾರ್ಯಕರ್ತನ ಮೇಲೆ ಹಲ್ಲೆ ಮಾಡಲಾಯಿತೇ?

ಇದಲ್ಲದೆ, ಯುವತಿಯ ಹೆಸರನ್ನು ಬಳಸಿಕೊಂಡು ಫೇಸ್‌ಬುಕ್‌ನಲ್ಲಿ ಕೀವರ್ಡ್ ಮೂಲಕ ಹುಡುಕಾಟ ನಡೆಸಿದಾಗ ಅರಾಕಟಿ ಪೋಲೇಶಿಯಾ 24 ಹೆಚ್ಎಸ್ ಎಂಬ ಪೇಜ್‌ನಲ್ಲೂ ಈ ಬಗ್ಗೆ ಬರೆಯಲಾಗಿದ್ದು, ಈ ಪೋಸ್ಟ್‌ನಲ್ಲಿ ವೈರಲ್ ವೀಡಿಯೊದಲ್ಲಿರುವ ಮಹಿಳೆಯಂತೆಯೇ ಅದೇ ಬಟ್ಟೆಗಳನ್ನು ಧರಿಸಿರುವುದನ್ನು ಕಾಣಬಹುದಾಗಿದೆ.

ಇಷ್ಟೇ ಅಲ್ಲದೆ ಗೂಗಲ್‌ನಲ್ಲಿ ಯುವತಿಯ ಹೆಸರಿನೊಂದಿಗೆ ಹುಡುಕಾಟ ನಡೆಸಿದಾಗ ಕೂಡಾ ಘಟನೆಯ ಕುರಿತು ಸಿಎನ್‌ನ್ಯೂಸ್ ವರದಿ ಮಾಡಿರುವ ಸುದ್ದಿಯನ್ನು ಓದಬಹುದಾಗಿದೆ.

ಆದ್ದರಿಂದ, ಕ್ರೂರವಾಗಿ ಕೊಲ್ಲಲ್ಪಟ್ಟ ಈ ಮಹಿಳೆಯ ವೀಡಿಯೊ ಬ್ರೆಜಿಲ್‌ನದ್ದಾಗಿದ್ದು, ಭಾರತದಲ್ಲಿ ಸಂಭವಿಸಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವುದು ಸುಳ್ಳಾಗಿದೆ ಎಂದು ಈ ಮೂಲಕ ತಿಳಿದುಕೊಳ್ಳಬಹುದು.


ಇದನ್ನೂ ಓದಿ:  ಪ್ರಣಬ್ ಮುಖರ್ಜಿ ನಿಧನಕ್ಕೆ ಪತ್ರಕರ್ತೆ ರಾಣಾ ಅಯೂಬ್ ಸಂತಸಪಟ್ಟಿದ್ದು ಸುಳ್ಳುಸುದ್ದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...