Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌‌ಚೆಕ್‌: ಯುವತಿಯನ್ನು ಅಮಾನುಷವಾಗಿ ಕೊಲ್ಲುತ್ತಿರುವ ಈ ವಿಡಿಯೋ ಭಾರತದ್ದಲ್ಲ

ಫ್ಯಾಕ್ಟ್‌‌ಚೆಕ್‌: ಯುವತಿಯನ್ನು ಅಮಾನುಷವಾಗಿ ಕೊಲ್ಲುತ್ತಿರುವ ಈ ವಿಡಿಯೋ ಭಾರತದ್ದಲ್ಲ

ಅತ್ಯಂತ ಕ್ರೂರವಾಗಿ ಯುವತಿಯನ್ನು ಕೊಲ್ಲಲಾಗಿದ್ದು ಕೊಲೆಗಾರನಿಗೂ ಅಂತಹದ್ದೇ ಶಿಕ್ಷೆ ನೀಡಬೇಕು ಎಂದು ಹಲವರು ಯುಪಿ ಪೋಲಿಸರೊಂದಿಗೆ ಆಗ್ರಹಿಸಿದ್ದರು.

- Advertisement -
- Advertisement -

ಯುವತಿಯೊಬ್ಬಳನ್ನು ಕೊಡಲಿಯಿಂದ ಅಮಾನುಷವಾಗಿ ಹತ್ಯೆಗೈದ ವಿಡಿಯೋ  ಸಾಮಾಜಿಕ ಜಾಲತಾಣಲ್ಲಿ ಹರಿದಾಡುತ್ತಿದ್ದು, ಇದು ಭಾರತದಲ್ಲಿ ನಡೆದ ಘಟನೆಯಾಗಿದೆ ಎಂದು ವೈರಲ್‌ ಆಗಿದೆ. ವೀಡಿಯೊದಲ್ಲಿ ಯುವತಿಯೊಬ್ಬಳನ್ನು ಕಟ್ಟಿ, ಸಾಯುವವರೆಗೂ ಕೊಡಲಿಯಿಂದ ತಲೆಗೆ ಕ್ರೂರವಾಗಿ ಹೊಡೆಯುವುದು ದಾಖಲಾಗಿದೆ.

ವಿಡಿಯೋ ಅತೀ ಹಿಂಸಾತ್ಮಕ ಆಗಿರುವುದರಿಂದ ಅದನ್ನು ನಾನುಗೌರಿ.ಕಾಮ್‌ ಪ್ರಸಾರ ಮಾಡುತ್ತಿಲ್ಲ.

ಹಲವಾರು ಟ್ವಿಟ್ಟರ್ ಬಳಕೆದಾರರು ಈ ವೀಡಿಯೊವನ್ನು ಭಾರತದ್ದು ಎಂದು ಪ್ರತಿಪಾದಿಸಿ ಹಂಚಿಕೊಂಡಿದ್ದಾರೆ. ತಮ್ಮ ಪೋಸ್ಟ್‌‌ಗಳಲ್ಲಿ “ಮಾನವೀಯತೆ ಸತ್ತಿದೆ. ಇದು ಅನಾಗರಿಕ, ಆಘಾತಕಾರಿ. ಅವನನ್ನು ಕೂಡಾ ಅದೇ ರೀತಿಯಲ್ಲಿ ಶಿಕ್ಷಿಸುವಂತೆ ನಾನು ದೇಶದ ಎಲ್ಲ ಪೊಲೀಸರನ್ನು ವಿನಂತಿಸುತ್ತೇನೆ” ಎಂದು ಬರೆದಿದ್ದಾರೆ. ಟ್ವೀಟ್‌ ಅನ್ನು ಯುಪಿ ಪೊಲೀಸರಿಗೆ ಟ್ಯಾಗ್ ಮಾಡಿದ್ದಾರೆ.

ಇದನ್ನೂ ಓದಿ: ಕೇರಳದ ಹಿಂದೂ ಯುವತಿಯ ಮೇಲೆ ಲೈಂಗಿಕ ದೌರ್ಜನ್ಯ? ಇಲ್ಲಿದೆ ಫ್ಯಾಕ್ಟ್‌ಚೆಕ್‌ ವಿವರ

ಆರ್ಕೈವ್ ಇಲ್ಲಿದೆ

ಅಷ್ಟೇ ಅಲ್ಲದೆ ಈ ವಿಡಿಯೋವನ್ನು ಫೇಸ್‌ಬುಕ್‌ನಲ್ಲಿ ಕೂಡಾ ಹಂಚಿಕೊಳ್ಳಲಾಗಿದ್ದು, ಇದು ಭಾರತ ವಿಡಿಯೋ ಆಗಿರಬಹುದು ಎಂದು ಪ್ರತಿಪಾದಿಸುತ್ತದೆ.

ಪೇಸ್‌ಬುಕ್ ಸ್ಕ್ರೀನ್‌ಶಾರ್ಟ್

ಫ್ಯಾಕ್ಟ್‌‌ಚೆಕ್‌

ವಿಡಿಯೋಗಳನ್ನು ಹಲವಾರು ಕೀಫ್ರೇಮ್‌ಗಳಾಗಿ ವಿಭಜಿಸಿ ಅವುಗಳನ್ನು ರಿವರ್ಸ್ ಸರ್ಚ್ ಮಾಡಿದಾಗ ಇದರ ಬಗೆಗಿನ ವರದಿ ರೆಡ್ಡಿಟ್‌ನಲ್ಲಿ ಕಂಡುಕೊಳ್ಳಲಾಗಿದೆ. ಬ್ರೆಜಿಲ್‌ನಲ್ಲಿ ಮಹಿಳೆಯನ್ನು ಕೊಲ್ಲಲಾಗಿದೆ ಎಂದು ತೋರಿಸಿಸುವ ಮಾಹಿತಿಯೊಂದಿಗೆ ವೀಡಿಯೊವನ್ನು ಅಲ್ಲಿ ಹಂಚಿಕೊಳ್ಳಲಾಗಿದೆ.

ಇಷ್ಟೇ ಅಲ್ಲದೆ ಕೀವರ್ಡ್‌ಗಳನ್ನು ಬಳಸಿ ಜಾಲತಾಣದಲ್ಲಿ ಮತ್ತಷ್ಟು ಹುಡುಕಾಟ ನಡೆಸಿದಾಗ ಫೇಸ್‌ಬುಕ್‌ನಲ್ಲಿ, “ಫೆಮಿನಿಕೇಡಿಯೊ – ಪ್ಯಾರೆಮ್ ಡೆ ನಾಸ್ ಮಾತಾರ್” ಎಂಬ ಪೇಜ್‌ನಲ್ಲಿ ಇದರ ಬಗ್ಗೆ ಮಾಹಿತಿ ಸಿಕ್ಕಿದೆ. ಅಲ್ಲಿ ಸೆಪ್ಟೆಂಬರ್ 1 ರ ಪೋಸ್ಟ್, ಥಾಲಿಯಾ ಟೊರೆಸ್ ಡಿ ಸೋಜಾ ಎಂಬ 23 ವರ್ಷದ ಯುವತಿಯನ್ನು ಕೊಲೆ ಮಾಡಲಾಗಿದೆ ಎಂದು ಹೇಳಿದೆ.

ಈ ಪೋಸ್ಟ್ ಪ್ರಕಾರ, ಈ ಘಟನೆ ಬ್ರೆಜಿಲ್‌ನ ಫೋರ್ಟಲೆಜಾದ ಗ್ರ್ಯಾಂಜಾ ಪೋರ್ಚುಗಲ್‌ನಲ್ಲಿ ನಡೆದಿದೆ. ಮೃತ ದೇಹವು ಅತ್ಯಂತ ಹಿಂಸಾತ್ಮಕ ಸಾವಿನ ಚಿಹ್ನೆಗಳನ್ನು ಹೊಂದಿದ್ದು, ಬಹುಶಃ ತಲೆಗೆ ಕೊಡಲಿಯಿಂದ ಹಲ್ಲೆ ನಡೆಸಲಾಗಿದೆ ಎಂದು ಬರೆಯಲಾಗಿದೆ.

ಇದನ್ನೂ ಓದಿ: ಮುಸ್ಲಿಂ ಮದುವೆಯಲ್ಲಿ ಪಾಲ್ಗೊಂಡಿದ್ದಕ್ಕೆ ಕೇರಳದ RSS ಕಾರ್ಯಕರ್ತನ ಮೇಲೆ ಹಲ್ಲೆ ಮಾಡಲಾಯಿತೇ?

ಇದಲ್ಲದೆ, ಯುವತಿಯ ಹೆಸರನ್ನು ಬಳಸಿಕೊಂಡು ಫೇಸ್‌ಬುಕ್‌ನಲ್ಲಿ ಕೀವರ್ಡ್ ಮೂಲಕ ಹುಡುಕಾಟ ನಡೆಸಿದಾಗ ಅರಾಕಟಿ ಪೋಲೇಶಿಯಾ 24 ಹೆಚ್ಎಸ್ ಎಂಬ ಪೇಜ್‌ನಲ್ಲೂ ಈ ಬಗ್ಗೆ ಬರೆಯಲಾಗಿದ್ದು, ಈ ಪೋಸ್ಟ್‌ನಲ್ಲಿ ವೈರಲ್ ವೀಡಿಯೊದಲ್ಲಿರುವ ಮಹಿಳೆಯಂತೆಯೇ ಅದೇ ಬಟ್ಟೆಗಳನ್ನು ಧರಿಸಿರುವುದನ್ನು ಕಾಣಬಹುದಾಗಿದೆ.

ಇಷ್ಟೇ ಅಲ್ಲದೆ ಗೂಗಲ್‌ನಲ್ಲಿ ಯುವತಿಯ ಹೆಸರಿನೊಂದಿಗೆ ಹುಡುಕಾಟ ನಡೆಸಿದಾಗ ಕೂಡಾ ಘಟನೆಯ ಕುರಿತು ಸಿಎನ್‌ನ್ಯೂಸ್ ವರದಿ ಮಾಡಿರುವ ಸುದ್ದಿಯನ್ನು ಓದಬಹುದಾಗಿದೆ.

ಆದ್ದರಿಂದ, ಕ್ರೂರವಾಗಿ ಕೊಲ್ಲಲ್ಪಟ್ಟ ಈ ಮಹಿಳೆಯ ವೀಡಿಯೊ ಬ್ರೆಜಿಲ್‌ನದ್ದಾಗಿದ್ದು, ಭಾರತದಲ್ಲಿ ಸಂಭವಿಸಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವುದು ಸುಳ್ಳಾಗಿದೆ ಎಂದು ಈ ಮೂಲಕ ತಿಳಿದುಕೊಳ್ಳಬಹುದು.


ಇದನ್ನೂ ಓದಿ:  ಪ್ರಣಬ್ ಮುಖರ್ಜಿ ನಿಧನಕ್ಕೆ ಪತ್ರಕರ್ತೆ ರಾಣಾ ಅಯೂಬ್ ಸಂತಸಪಟ್ಟಿದ್ದು ಸುಳ್ಳುಸುದ್ದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...