Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌‌ಚೆಕ್‌: ಯುವತಿಯನ್ನು ಅಮಾನುಷವಾಗಿ ಕೊಲ್ಲುತ್ತಿರುವ ಈ ವಿಡಿಯೋ ಭಾರತದ್ದಲ್ಲ

ಫ್ಯಾಕ್ಟ್‌‌ಚೆಕ್‌: ಯುವತಿಯನ್ನು ಅಮಾನುಷವಾಗಿ ಕೊಲ್ಲುತ್ತಿರುವ ಈ ವಿಡಿಯೋ ಭಾರತದ್ದಲ್ಲ

ಅತ್ಯಂತ ಕ್ರೂರವಾಗಿ ಯುವತಿಯನ್ನು ಕೊಲ್ಲಲಾಗಿದ್ದು ಕೊಲೆಗಾರನಿಗೂ ಅಂತಹದ್ದೇ ಶಿಕ್ಷೆ ನೀಡಬೇಕು ಎಂದು ಹಲವರು ಯುಪಿ ಪೋಲಿಸರೊಂದಿಗೆ ಆಗ್ರಹಿಸಿದ್ದರು.

- Advertisement -
- Advertisement -

ಯುವತಿಯೊಬ್ಬಳನ್ನು ಕೊಡಲಿಯಿಂದ ಅಮಾನುಷವಾಗಿ ಹತ್ಯೆಗೈದ ವಿಡಿಯೋ  ಸಾಮಾಜಿಕ ಜಾಲತಾಣಲ್ಲಿ ಹರಿದಾಡುತ್ತಿದ್ದು, ಇದು ಭಾರತದಲ್ಲಿ ನಡೆದ ಘಟನೆಯಾಗಿದೆ ಎಂದು ವೈರಲ್‌ ಆಗಿದೆ. ವೀಡಿಯೊದಲ್ಲಿ ಯುವತಿಯೊಬ್ಬಳನ್ನು ಕಟ್ಟಿ, ಸಾಯುವವರೆಗೂ ಕೊಡಲಿಯಿಂದ ತಲೆಗೆ ಕ್ರೂರವಾಗಿ ಹೊಡೆಯುವುದು ದಾಖಲಾಗಿದೆ.

ವಿಡಿಯೋ ಅತೀ ಹಿಂಸಾತ್ಮಕ ಆಗಿರುವುದರಿಂದ ಅದನ್ನು ನಾನುಗೌರಿ.ಕಾಮ್‌ ಪ್ರಸಾರ ಮಾಡುತ್ತಿಲ್ಲ.

ಹಲವಾರು ಟ್ವಿಟ್ಟರ್ ಬಳಕೆದಾರರು ಈ ವೀಡಿಯೊವನ್ನು ಭಾರತದ್ದು ಎಂದು ಪ್ರತಿಪಾದಿಸಿ ಹಂಚಿಕೊಂಡಿದ್ದಾರೆ. ತಮ್ಮ ಪೋಸ್ಟ್‌‌ಗಳಲ್ಲಿ “ಮಾನವೀಯತೆ ಸತ್ತಿದೆ. ಇದು ಅನಾಗರಿಕ, ಆಘಾತಕಾರಿ. ಅವನನ್ನು ಕೂಡಾ ಅದೇ ರೀತಿಯಲ್ಲಿ ಶಿಕ್ಷಿಸುವಂತೆ ನಾನು ದೇಶದ ಎಲ್ಲ ಪೊಲೀಸರನ್ನು ವಿನಂತಿಸುತ್ತೇನೆ” ಎಂದು ಬರೆದಿದ್ದಾರೆ. ಟ್ವೀಟ್‌ ಅನ್ನು ಯುಪಿ ಪೊಲೀಸರಿಗೆ ಟ್ಯಾಗ್ ಮಾಡಿದ್ದಾರೆ.

ಇದನ್ನೂ ಓದಿ: ಕೇರಳದ ಹಿಂದೂ ಯುವತಿಯ ಮೇಲೆ ಲೈಂಗಿಕ ದೌರ್ಜನ್ಯ? ಇಲ್ಲಿದೆ ಫ್ಯಾಕ್ಟ್‌ಚೆಕ್‌ ವಿವರ

ಆರ್ಕೈವ್ ಇಲ್ಲಿದೆ

ಅಷ್ಟೇ ಅಲ್ಲದೆ ಈ ವಿಡಿಯೋವನ್ನು ಫೇಸ್‌ಬುಕ್‌ನಲ್ಲಿ ಕೂಡಾ ಹಂಚಿಕೊಳ್ಳಲಾಗಿದ್ದು, ಇದು ಭಾರತ ವಿಡಿಯೋ ಆಗಿರಬಹುದು ಎಂದು ಪ್ರತಿಪಾದಿಸುತ್ತದೆ.

ಪೇಸ್‌ಬುಕ್ ಸ್ಕ್ರೀನ್‌ಶಾರ್ಟ್

ಫ್ಯಾಕ್ಟ್‌‌ಚೆಕ್‌

ವಿಡಿಯೋಗಳನ್ನು ಹಲವಾರು ಕೀಫ್ರೇಮ್‌ಗಳಾಗಿ ವಿಭಜಿಸಿ ಅವುಗಳನ್ನು ರಿವರ್ಸ್ ಸರ್ಚ್ ಮಾಡಿದಾಗ ಇದರ ಬಗೆಗಿನ ವರದಿ ರೆಡ್ಡಿಟ್‌ನಲ್ಲಿ ಕಂಡುಕೊಳ್ಳಲಾಗಿದೆ. ಬ್ರೆಜಿಲ್‌ನಲ್ಲಿ ಮಹಿಳೆಯನ್ನು ಕೊಲ್ಲಲಾಗಿದೆ ಎಂದು ತೋರಿಸಿಸುವ ಮಾಹಿತಿಯೊಂದಿಗೆ ವೀಡಿಯೊವನ್ನು ಅಲ್ಲಿ ಹಂಚಿಕೊಳ್ಳಲಾಗಿದೆ.

ಇಷ್ಟೇ ಅಲ್ಲದೆ ಕೀವರ್ಡ್‌ಗಳನ್ನು ಬಳಸಿ ಜಾಲತಾಣದಲ್ಲಿ ಮತ್ತಷ್ಟು ಹುಡುಕಾಟ ನಡೆಸಿದಾಗ ಫೇಸ್‌ಬುಕ್‌ನಲ್ಲಿ, “ಫೆಮಿನಿಕೇಡಿಯೊ – ಪ್ಯಾರೆಮ್ ಡೆ ನಾಸ್ ಮಾತಾರ್” ಎಂಬ ಪೇಜ್‌ನಲ್ಲಿ ಇದರ ಬಗ್ಗೆ ಮಾಹಿತಿ ಸಿಕ್ಕಿದೆ. ಅಲ್ಲಿ ಸೆಪ್ಟೆಂಬರ್ 1 ರ ಪೋಸ್ಟ್, ಥಾಲಿಯಾ ಟೊರೆಸ್ ಡಿ ಸೋಜಾ ಎಂಬ 23 ವರ್ಷದ ಯುವತಿಯನ್ನು ಕೊಲೆ ಮಾಡಲಾಗಿದೆ ಎಂದು ಹೇಳಿದೆ.

ಈ ಪೋಸ್ಟ್ ಪ್ರಕಾರ, ಈ ಘಟನೆ ಬ್ರೆಜಿಲ್‌ನ ಫೋರ್ಟಲೆಜಾದ ಗ್ರ್ಯಾಂಜಾ ಪೋರ್ಚುಗಲ್‌ನಲ್ಲಿ ನಡೆದಿದೆ. ಮೃತ ದೇಹವು ಅತ್ಯಂತ ಹಿಂಸಾತ್ಮಕ ಸಾವಿನ ಚಿಹ್ನೆಗಳನ್ನು ಹೊಂದಿದ್ದು, ಬಹುಶಃ ತಲೆಗೆ ಕೊಡಲಿಯಿಂದ ಹಲ್ಲೆ ನಡೆಸಲಾಗಿದೆ ಎಂದು ಬರೆಯಲಾಗಿದೆ.

ಇದನ್ನೂ ಓದಿ: ಮುಸ್ಲಿಂ ಮದುವೆಯಲ್ಲಿ ಪಾಲ್ಗೊಂಡಿದ್ದಕ್ಕೆ ಕೇರಳದ RSS ಕಾರ್ಯಕರ್ತನ ಮೇಲೆ ಹಲ್ಲೆ ಮಾಡಲಾಯಿತೇ?

ಇದಲ್ಲದೆ, ಯುವತಿಯ ಹೆಸರನ್ನು ಬಳಸಿಕೊಂಡು ಫೇಸ್‌ಬುಕ್‌ನಲ್ಲಿ ಕೀವರ್ಡ್ ಮೂಲಕ ಹುಡುಕಾಟ ನಡೆಸಿದಾಗ ಅರಾಕಟಿ ಪೋಲೇಶಿಯಾ 24 ಹೆಚ್ಎಸ್ ಎಂಬ ಪೇಜ್‌ನಲ್ಲೂ ಈ ಬಗ್ಗೆ ಬರೆಯಲಾಗಿದ್ದು, ಈ ಪೋಸ್ಟ್‌ನಲ್ಲಿ ವೈರಲ್ ವೀಡಿಯೊದಲ್ಲಿರುವ ಮಹಿಳೆಯಂತೆಯೇ ಅದೇ ಬಟ್ಟೆಗಳನ್ನು ಧರಿಸಿರುವುದನ್ನು ಕಾಣಬಹುದಾಗಿದೆ.

ಇಷ್ಟೇ ಅಲ್ಲದೆ ಗೂಗಲ್‌ನಲ್ಲಿ ಯುವತಿಯ ಹೆಸರಿನೊಂದಿಗೆ ಹುಡುಕಾಟ ನಡೆಸಿದಾಗ ಕೂಡಾ ಘಟನೆಯ ಕುರಿತು ಸಿಎನ್‌ನ್ಯೂಸ್ ವರದಿ ಮಾಡಿರುವ ಸುದ್ದಿಯನ್ನು ಓದಬಹುದಾಗಿದೆ.

ಆದ್ದರಿಂದ, ಕ್ರೂರವಾಗಿ ಕೊಲ್ಲಲ್ಪಟ್ಟ ಈ ಮಹಿಳೆಯ ವೀಡಿಯೊ ಬ್ರೆಜಿಲ್‌ನದ್ದಾಗಿದ್ದು, ಭಾರತದಲ್ಲಿ ಸಂಭವಿಸಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವುದು ಸುಳ್ಳಾಗಿದೆ ಎಂದು ಈ ಮೂಲಕ ತಿಳಿದುಕೊಳ್ಳಬಹುದು.


ಇದನ್ನೂ ಓದಿ:  ಪ್ರಣಬ್ ಮುಖರ್ಜಿ ನಿಧನಕ್ಕೆ ಪತ್ರಕರ್ತೆ ರಾಣಾ ಅಯೂಬ್ ಸಂತಸಪಟ್ಟಿದ್ದು ಸುಳ್ಳುಸುದ್ದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....

ವಿಜಯ್ ಹೇಳಿದ ಭ್ರಷ್ಟಾಚಾರ ನಿರ್ಮೂಲನೆ ಮತ್ತು ಟಿವಿಕೆ ಶಾಸಕರ ಕ್ರಿಮಿನಲ್ ಹಿನ್ನೆಲೆ

ಎರಡು ವರ್ಷಗಳ ಹಿಂದೆ ಅಸ್ತಿತ್ವಕ್ಕೆ ಬಂದ ಟಿವಿಕೆ ಎಂಬ ಪಕ್ಷ, 75 ವರ್ಷಗಳ ಅನುಭವಿ ಪಕ್ಷವಾದ ಡಿಎಂಕೆಯನ್ನು ಸೋಲಿಸಿರುವುದು, ಕಳೆದ ಅರವತ್ತು ವರ್ಷಗಳಲ್ಲಿ ಮೊಟ್ಟ ಮೊದಲ ಬಾರಿಗೆ ದ್ರಾವಿಡ ಚಳುವಳಿ ಹಿನ್ನೆಲೆಯ ಪಕ್ಷವನ್ನು...