Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌‌ಚೆಕ್: ಆರೆಸ್ಸೆಸ್ಸಿನ ಸ್ವಯಂ ಸೇವಕಿ ಪಾಕಿಸ್ತಾನದ ಕುಸ್ತಿಪಟುವಿಗೆ ಹೊಡೆದ್ದಾರೆಂದು ವೈರಲ್‌ ಆದ ಈ ವಿಡಿಯೊ ಸುಳ್ಳು!

ಫ್ಯಾಕ್ಟ್‌‌ಚೆಕ್: ಆರೆಸ್ಸೆಸ್ಸಿನ ಸ್ವಯಂ ಸೇವಕಿ ಪಾಕಿಸ್ತಾನದ ಕುಸ್ತಿಪಟುವಿಗೆ ಹೊಡೆದ್ದಾರೆಂದು ವೈರಲ್‌ ಆದ ಈ ವಿಡಿಯೊ ಸುಳ್ಳು!

- Advertisement -
- Advertisement -

ಮುಕ್ತ ಶೈಲಿಯ ಕುಸ್ತಿ ಸ್ಪರ್ಧೆಯಲ್ಲಿ ಇಬ್ಬರು ಮಹಿಳೆಯರು ಕುಸ್ತಿಯಾಡುತ್ತಿರುವ ವಿಡಿಯೊವನ್ನು, ‘‘ಪಾಕಿಸ್ತಾನದ ಕುಸ್ತಿ ಪಟು ಭಾರತವನ್ನು ನಿಂದಿಸಿದಾಗ ಆರೆಸ್ಸೆಸ್‌‌ನ ಅಂಗ ಸಂಸ್ಥೆ ದುರ್ಗಾ ವಾಹಿನಿಯ ಸ್ವಯಂ ಸೇವಕಿ ಸಂಧ್ಯಾ ಪಡಕೆ ಬಂದು ಅವರನ್ನು ಹೊಡೆದರು” ಎಂಬ ಹೇಳಿಕೆಯೊಂದಿಗೆ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗುತ್ತಿದೆ.

ಕೆಲವು ಪೋಸ್ಟ್‌ನಲ್ಲಿ“ ಪಾಕಿಸ್ತಾನಿ ಕುಸ್ತಿ ಪಟು ತನ್ನ ವಿರುದ್ದ ಹೋರಾಡಲು ಸವಾಲು ಹಾಕಿದರು, ಅವರನ್ನು ಆರೆಸ್ಸೆಸ್ಸಿನ ಸ್ವಯಂ ಸೇವಕಿ ಸಂಧ್ಯಾ ಪಡಕೆ ಹೊಡೆದರು” ಎಂದು ಕೂಡಾ ವೈರಲ್ ಆಗಿದೆ.

ಪೋಸ್ಟ್‌ನ ಆರ್ಕೈವ್ ಮಾಡಿದ ಆವೃತ್ತಿಯನ್ನು ಇಲ್ಲಿ ಮತ್ತು ಇಲ್ಲಿ ನೋಡಬಹುದು.

ಇದನ್ನೂ ಓದಿ: Fact check: ಪೊಲೀಸ್ ವಿರುದ್ಧ ತಿರುಗಿಬಿದ್ದ ಪೂಜಾರಿ: ಹಿಗ್ಗಾಮುಗ್ಗಾ ಹೊಡೆದಿದ್ದು ನಿಜವಲ್ಲ!

ವಾಸ್ತವದಲ್ಲಿ, ಹರಿಯಾಣದ ಮಾಜಿ ಪೋಲಿಸ್ ಅಧಿಕಾರಿ ಕವಿತಾ ಮತ್ತು ಪವರ್ ಲಿಫ್ಟಿಂಗ್ ಹಾಗೂ ಎಂಎಂಎ ಚಾಂಪಿಯನ್ ಬುಲ್ ಬುಲ್ ಅವರ ನಡುವೆ ನಡೆದ ಕುಸ್ತಿಯಾಗಿದೆ ಈ ವಿಡಿಯೊ. ಭಾರತದ ಮೊದಲ ವೃತ್ತಿಪರ ಮಹಿಳಾ ಕುಸ್ತಿಪಟು ಬುಲ್‌ಬುಲ್‌‌, ತನ್ನ ವಿರುದ್ಧ ಸೆಣಸಲು ಪ್ರೇಕ್ಷಕರಿಗೆ ಸವಾಲು ಹಾಕಿದಂತೆ ವೀಡಿಯೊದಲ್ಲಿ ತೋರಿಸಲಾಗುತ್ತದೆ.

ವೈರಲ್‌ ವಿಡಿಯೋ ಬಗ್ಗೆ ಸಂಬಂಧಿತ ಕೀವರ್ಡ್‌ಗಳೊಂದಿಗೆ ಇಂಟರ್‌ನೆಟ್‌ನಲ್ಲಿ ಹುಡುಕಿದಾಗ, ಅದೇ ವೀಡಿಯೊವನ್ನು ಮಾಜಿ WWE ಕುಸ್ತಿಪಟು ಖಲಿ (ದಲೀಪ್ ಸಿಂಗ್) ತನ್ನ ಅಧಿಕೃತ ಫೇಸ್‌ಬುಕ್ ಖಾತೆಯಲ್ಲಿ 2016 ರಲ್ಲಿ ಹಂಚಿಕೊಂಡಿದ್ದರು.

ಈ ಪೋಸ್ಟ್‌ನಲ್ಲಿ ಸವಾಲೆಸೆಯುವ ಮಹಿಳೆಯನ್ನು (ಕಪ್ಪು ಬಣ್ಣದ ಬಟ್ಟೆ ಧರಿಸಿರುವ) ಬುಲ್ ಬುಲ್ ಗುರುತಿಸಲಾಗಿದೆ. ಮತ್ತೊಬ್ಬ ಮಹಿಳೆ (ಕೇಸರಿ ಸಲ್ವಾರ್-ಕಮೀಜ್‌ ಧರಿಸಿರುವ)ಯನ್ನು ಹರಿಯಾಣದ ಮಾಜಿ ಪೊಲೀಸ್ ಅಧಿಕಾರಿ ಮತ್ತು ಪವರ್-ಲಿಫ್ಟಿಂಗ್, ಎಂಎಂಎ (ಮಿಶ್ರ ಮಾರ್ಷಲ್ ಆರ್ಟ್ಸ್) ಚಾಂಪಿಯನ್ ಕವಿತಾ ಎಂದು ಗುರುತಿಸಲಾಗಿದೆ. ವೈರಲ್‌ ಪೋಸ್ಟ್‌ನಲ್ಲಿ ಹೇಳಿರುವಂತೆ ಅವರ ಹೆಸರು ಸಂಧ್ಯಾ ಪಡಕೆ ಅಲ್ಲ.

ಅದೇ ವೀಡಿಯೊ ಬಗ್ಗೆ ವರದಿ ಮಾಡಿದ 2016 ರ ಸುದ್ದಿ ಲೇಖನದಲ್ಲಿ ಮಹಿಳೆಯರಿಬ್ಬರನ್ನು ಭಾರತದ ಮೊದಲ ವೃತ್ತಿಪರ ಮಹಿಳಾ ಕುಸ್ತಿಪಟು ಬುಲ್ ಬುಲ್ ಮತ್ತು ಹರ್ಯಾಣದ ಮಾಜಿ ಪೊಲೀಸ್ ಅಧಿಕಾರಿ ಕವಿತಾ ಮತ್ತು ಪವರ್-ಲಿಫ್ಟಿಂಗ್, ಎಂಎಂಎ (ಮಿಶ್ರ ಮಾರ್ಷಲ್ ಆರ್ಟ್ಸ್) ಚಾಂಪಿಯನ್ ಎಂದು ಗುರುತಿಸಿದೆ.

ಇದನ್ನೂ ಓದಿ: ಫ್ಯಾಕ್ಟ್‌ ಚೆಕ್: ಕೊವೀಡ್ ಲಸಿಕೆ ಪಡೆದ ಮೇಲೆ ಮ್ಯಾಗ್ನೆಟಿಕ್ (ಅಯಸ್ಕಾಂತೀಯ) ಶಕ್ತಿ ದೊರೆಯುತ್ತದೆಯೇ?

ಈ ವೀಡಿಯೊ ಬಗ್ಗೆಯೆ ವರದಿ ಮಾಡಿದ ಇನ್ನೊಂದು ಸದ್ದಿಯಲ್ಲಿ ಮಹಿಳೆಯರ ಗುರುತಿನ ಬಗ್ಗೆಯೂ ಅದೇ ಮಾತನ್ನು ಪುನರುಚ್ಚರಿಸಿದೆ. ಆದಾಗ್ಯೂ, ಈ ಯಾವುದೇ ಸುದ್ದಿ ಲೇಖನಗಳು ಈ ಯಾವುದೇ ಮಹಿಳೆಯರನ್ನು ಪಾಕಿಸ್ತಾನ ಅಥವಾ ಆರ್‌ಎಸ್‌ಎಸ್‌ಗೆ ಸಂಬಧದ ಬಗ್ಗೆ ಉಲ್ಲೇಖಿಸಿಲ್ಲ.

ಮತ್ತೊಂದು ವೀಡಿಯೊದಲ್ಲಿ, ಬುಲ್ ಬುಲ್ (ಕಪ್ಪು ಬಣ್ಣದ ಬಟ್ಟೆ ಧರಿಸಿರುವವರು) ಕವಿತಾ ದೇವಿಯ ಮೇಲೆ ಸೇಡು ತೀರಿಸಿಕೊಳ್ಳುವುದನ್ನು ಕಾಣಬಹುದು. ಆದುದರಿಂದ, ಈ ಎಲ್ಲ ಸಾಕ್ಷ್ಯಗಳು ಸೂಚಿಸುತ್ತಿರುವುದು ಏನೆಂದರೆ ಈ ಇಬ್ಬರೂ ಮಹಿಳೆಯರು ಪಾಕಿಸ್ತಾನದೊಂದಿಗೆಯೋ, ಆರೆಸ್ಸೆಸ್‌‌ನೊಂದಿಗೆಯೋ ಸಂಬಂಧ ಹೊಂದಿಲ್ಲ.

ಸಂಕ್ಷಿಪ್ತವಾಗಿ ಹೇಳುವುದಾದರೆ, ಭಾರತೀಯ ಮಹಿಳಾ ಕುಸ್ತಿ ಪಂದ್ಯದ ಹಳೆಯ ವಿಡಿಯೋವನ್ನು ಪಾಕಿಸ್ತಾನದ ಕುಸ್ತಿಪಟುವನ್ನು ಆರೆಸ್ಸೆಸ್ ಸದಸ್ಯೆ ಹೊಡೆದರು ಎಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ಸೋನಿಯಾ ಗಾಂಧಿಯ ಎಡಿಟೆಡ್‌‌ ಚಿತ್ರವನ್ನು ಹಂಚುತ್ತಿರುವ ಬಿಜೆಪಿ

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಇದು ರಾಹುಲ್ ಗಾಂಧಿಯ ವಯನಾಡ್ ಕ್ಷೇತ್ರವಲ್ಲ – ಬಿಹಾರದ ಹಳೆಯ ರಸ್ತೆಯ ಚಿತ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಹುಚ್ಚ ಸೂಳೆ ಮಕ್ಕಳ ಮೆದುಳಲ್ಲಿ ಸೆಗಣಿಯೇ ತುಂಬಿರುವಾಗ ಇಂತಹ fake news ಹಬ್ಬಿಸಿ ಮತೀಯ ದ್ವೇಷ, ಭಾರತ ಪಾಕಿಸ್ತಾನ ಮಧ್ಯೆ ಜನರಲ್ಲಿ ತಪ್ಪು ಕಲ್ಪನೆ ಮೂಡಿಸುವುದರಲ್ಲಿ ಈ ನಾಯಿಗಳು ನಿಸ್ಸೀಮರು.

LEAVE A REPLY

Please enter your comment!
Please enter your name here

- Advertisment -

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...