Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌‌ಚೆಕ್: ಆರೆಸ್ಸೆಸ್ಸಿನ ಸ್ವಯಂ ಸೇವಕಿ ಪಾಕಿಸ್ತಾನದ ಕುಸ್ತಿಪಟುವಿಗೆ ಹೊಡೆದ್ದಾರೆಂದು ವೈರಲ್‌ ಆದ ಈ ವಿಡಿಯೊ ಸುಳ್ಳು!

ಫ್ಯಾಕ್ಟ್‌‌ಚೆಕ್: ಆರೆಸ್ಸೆಸ್ಸಿನ ಸ್ವಯಂ ಸೇವಕಿ ಪಾಕಿಸ್ತಾನದ ಕುಸ್ತಿಪಟುವಿಗೆ ಹೊಡೆದ್ದಾರೆಂದು ವೈರಲ್‌ ಆದ ಈ ವಿಡಿಯೊ ಸುಳ್ಳು!

- Advertisement -
- Advertisement -

ಮುಕ್ತ ಶೈಲಿಯ ಕುಸ್ತಿ ಸ್ಪರ್ಧೆಯಲ್ಲಿ ಇಬ್ಬರು ಮಹಿಳೆಯರು ಕುಸ್ತಿಯಾಡುತ್ತಿರುವ ವಿಡಿಯೊವನ್ನು, ‘‘ಪಾಕಿಸ್ತಾನದ ಕುಸ್ತಿ ಪಟು ಭಾರತವನ್ನು ನಿಂದಿಸಿದಾಗ ಆರೆಸ್ಸೆಸ್‌‌ನ ಅಂಗ ಸಂಸ್ಥೆ ದುರ್ಗಾ ವಾಹಿನಿಯ ಸ್ವಯಂ ಸೇವಕಿ ಸಂಧ್ಯಾ ಪಡಕೆ ಬಂದು ಅವರನ್ನು ಹೊಡೆದರು” ಎಂಬ ಹೇಳಿಕೆಯೊಂದಿಗೆ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗುತ್ತಿದೆ.

ಕೆಲವು ಪೋಸ್ಟ್‌ನಲ್ಲಿ“ ಪಾಕಿಸ್ತಾನಿ ಕುಸ್ತಿ ಪಟು ತನ್ನ ವಿರುದ್ದ ಹೋರಾಡಲು ಸವಾಲು ಹಾಕಿದರು, ಅವರನ್ನು ಆರೆಸ್ಸೆಸ್ಸಿನ ಸ್ವಯಂ ಸೇವಕಿ ಸಂಧ್ಯಾ ಪಡಕೆ ಹೊಡೆದರು” ಎಂದು ಕೂಡಾ ವೈರಲ್ ಆಗಿದೆ.

ಪೋಸ್ಟ್‌ನ ಆರ್ಕೈವ್ ಮಾಡಿದ ಆವೃತ್ತಿಯನ್ನು ಇಲ್ಲಿ ಮತ್ತು ಇಲ್ಲಿ ನೋಡಬಹುದು.

ಇದನ್ನೂ ಓದಿ: Fact check: ಪೊಲೀಸ್ ವಿರುದ್ಧ ತಿರುಗಿಬಿದ್ದ ಪೂಜಾರಿ: ಹಿಗ್ಗಾಮುಗ್ಗಾ ಹೊಡೆದಿದ್ದು ನಿಜವಲ್ಲ!

ವಾಸ್ತವದಲ್ಲಿ, ಹರಿಯಾಣದ ಮಾಜಿ ಪೋಲಿಸ್ ಅಧಿಕಾರಿ ಕವಿತಾ ಮತ್ತು ಪವರ್ ಲಿಫ್ಟಿಂಗ್ ಹಾಗೂ ಎಂಎಂಎ ಚಾಂಪಿಯನ್ ಬುಲ್ ಬುಲ್ ಅವರ ನಡುವೆ ನಡೆದ ಕುಸ್ತಿಯಾಗಿದೆ ಈ ವಿಡಿಯೊ. ಭಾರತದ ಮೊದಲ ವೃತ್ತಿಪರ ಮಹಿಳಾ ಕುಸ್ತಿಪಟು ಬುಲ್‌ಬುಲ್‌‌, ತನ್ನ ವಿರುದ್ಧ ಸೆಣಸಲು ಪ್ರೇಕ್ಷಕರಿಗೆ ಸವಾಲು ಹಾಕಿದಂತೆ ವೀಡಿಯೊದಲ್ಲಿ ತೋರಿಸಲಾಗುತ್ತದೆ.

ವೈರಲ್‌ ವಿಡಿಯೋ ಬಗ್ಗೆ ಸಂಬಂಧಿತ ಕೀವರ್ಡ್‌ಗಳೊಂದಿಗೆ ಇಂಟರ್‌ನೆಟ್‌ನಲ್ಲಿ ಹುಡುಕಿದಾಗ, ಅದೇ ವೀಡಿಯೊವನ್ನು ಮಾಜಿ WWE ಕುಸ್ತಿಪಟು ಖಲಿ (ದಲೀಪ್ ಸಿಂಗ್) ತನ್ನ ಅಧಿಕೃತ ಫೇಸ್‌ಬುಕ್ ಖಾತೆಯಲ್ಲಿ 2016 ರಲ್ಲಿ ಹಂಚಿಕೊಂಡಿದ್ದರು.

ಈ ಪೋಸ್ಟ್‌ನಲ್ಲಿ ಸವಾಲೆಸೆಯುವ ಮಹಿಳೆಯನ್ನು (ಕಪ್ಪು ಬಣ್ಣದ ಬಟ್ಟೆ ಧರಿಸಿರುವ) ಬುಲ್ ಬುಲ್ ಗುರುತಿಸಲಾಗಿದೆ. ಮತ್ತೊಬ್ಬ ಮಹಿಳೆ (ಕೇಸರಿ ಸಲ್ವಾರ್-ಕಮೀಜ್‌ ಧರಿಸಿರುವ)ಯನ್ನು ಹರಿಯಾಣದ ಮಾಜಿ ಪೊಲೀಸ್ ಅಧಿಕಾರಿ ಮತ್ತು ಪವರ್-ಲಿಫ್ಟಿಂಗ್, ಎಂಎಂಎ (ಮಿಶ್ರ ಮಾರ್ಷಲ್ ಆರ್ಟ್ಸ್) ಚಾಂಪಿಯನ್ ಕವಿತಾ ಎಂದು ಗುರುತಿಸಲಾಗಿದೆ. ವೈರಲ್‌ ಪೋಸ್ಟ್‌ನಲ್ಲಿ ಹೇಳಿರುವಂತೆ ಅವರ ಹೆಸರು ಸಂಧ್ಯಾ ಪಡಕೆ ಅಲ್ಲ.

ಅದೇ ವೀಡಿಯೊ ಬಗ್ಗೆ ವರದಿ ಮಾಡಿದ 2016 ರ ಸುದ್ದಿ ಲೇಖನದಲ್ಲಿ ಮಹಿಳೆಯರಿಬ್ಬರನ್ನು ಭಾರತದ ಮೊದಲ ವೃತ್ತಿಪರ ಮಹಿಳಾ ಕುಸ್ತಿಪಟು ಬುಲ್ ಬುಲ್ ಮತ್ತು ಹರ್ಯಾಣದ ಮಾಜಿ ಪೊಲೀಸ್ ಅಧಿಕಾರಿ ಕವಿತಾ ಮತ್ತು ಪವರ್-ಲಿಫ್ಟಿಂಗ್, ಎಂಎಂಎ (ಮಿಶ್ರ ಮಾರ್ಷಲ್ ಆರ್ಟ್ಸ್) ಚಾಂಪಿಯನ್ ಎಂದು ಗುರುತಿಸಿದೆ.

ಇದನ್ನೂ ಓದಿ: ಫ್ಯಾಕ್ಟ್‌ ಚೆಕ್: ಕೊವೀಡ್ ಲಸಿಕೆ ಪಡೆದ ಮೇಲೆ ಮ್ಯಾಗ್ನೆಟಿಕ್ (ಅಯಸ್ಕಾಂತೀಯ) ಶಕ್ತಿ ದೊರೆಯುತ್ತದೆಯೇ?

ಈ ವೀಡಿಯೊ ಬಗ್ಗೆಯೆ ವರದಿ ಮಾಡಿದ ಇನ್ನೊಂದು ಸದ್ದಿಯಲ್ಲಿ ಮಹಿಳೆಯರ ಗುರುತಿನ ಬಗ್ಗೆಯೂ ಅದೇ ಮಾತನ್ನು ಪುನರುಚ್ಚರಿಸಿದೆ. ಆದಾಗ್ಯೂ, ಈ ಯಾವುದೇ ಸುದ್ದಿ ಲೇಖನಗಳು ಈ ಯಾವುದೇ ಮಹಿಳೆಯರನ್ನು ಪಾಕಿಸ್ತಾನ ಅಥವಾ ಆರ್‌ಎಸ್‌ಎಸ್‌ಗೆ ಸಂಬಧದ ಬಗ್ಗೆ ಉಲ್ಲೇಖಿಸಿಲ್ಲ.

ಮತ್ತೊಂದು ವೀಡಿಯೊದಲ್ಲಿ, ಬುಲ್ ಬುಲ್ (ಕಪ್ಪು ಬಣ್ಣದ ಬಟ್ಟೆ ಧರಿಸಿರುವವರು) ಕವಿತಾ ದೇವಿಯ ಮೇಲೆ ಸೇಡು ತೀರಿಸಿಕೊಳ್ಳುವುದನ್ನು ಕಾಣಬಹುದು. ಆದುದರಿಂದ, ಈ ಎಲ್ಲ ಸಾಕ್ಷ್ಯಗಳು ಸೂಚಿಸುತ್ತಿರುವುದು ಏನೆಂದರೆ ಈ ಇಬ್ಬರೂ ಮಹಿಳೆಯರು ಪಾಕಿಸ್ತಾನದೊಂದಿಗೆಯೋ, ಆರೆಸ್ಸೆಸ್‌‌ನೊಂದಿಗೆಯೋ ಸಂಬಂಧ ಹೊಂದಿಲ್ಲ.

ಸಂಕ್ಷಿಪ್ತವಾಗಿ ಹೇಳುವುದಾದರೆ, ಭಾರತೀಯ ಮಹಿಳಾ ಕುಸ್ತಿ ಪಂದ್ಯದ ಹಳೆಯ ವಿಡಿಯೋವನ್ನು ಪಾಕಿಸ್ತಾನದ ಕುಸ್ತಿಪಟುವನ್ನು ಆರೆಸ್ಸೆಸ್ ಸದಸ್ಯೆ ಹೊಡೆದರು ಎಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ಸೋನಿಯಾ ಗಾಂಧಿಯ ಎಡಿಟೆಡ್‌‌ ಚಿತ್ರವನ್ನು ಹಂಚುತ್ತಿರುವ ಬಿಜೆಪಿ

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಇದು ರಾಹುಲ್ ಗಾಂಧಿಯ ವಯನಾಡ್ ಕ್ಷೇತ್ರವಲ್ಲ – ಬಿಹಾರದ ಹಳೆಯ ರಸ್ತೆಯ ಚಿತ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಹುಚ್ಚ ಸೂಳೆ ಮಕ್ಕಳ ಮೆದುಳಲ್ಲಿ ಸೆಗಣಿಯೇ ತುಂಬಿರುವಾಗ ಇಂತಹ fake news ಹಬ್ಬಿಸಿ ಮತೀಯ ದ್ವೇಷ, ಭಾರತ ಪಾಕಿಸ್ತಾನ ಮಧ್ಯೆ ಜನರಲ್ಲಿ ತಪ್ಪು ಕಲ್ಪನೆ ಮೂಡಿಸುವುದರಲ್ಲಿ ಈ ನಾಯಿಗಳು ನಿಸ್ಸೀಮರು.

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...