Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌‌ಚೆಕ್: ಆರೆಸ್ಸೆಸ್ಸಿನ ಸ್ವಯಂ ಸೇವಕಿ ಪಾಕಿಸ್ತಾನದ ಕುಸ್ತಿಪಟುವಿಗೆ ಹೊಡೆದ್ದಾರೆಂದು ವೈರಲ್‌ ಆದ ಈ ವಿಡಿಯೊ ಸುಳ್ಳು!

ಫ್ಯಾಕ್ಟ್‌‌ಚೆಕ್: ಆರೆಸ್ಸೆಸ್ಸಿನ ಸ್ವಯಂ ಸೇವಕಿ ಪಾಕಿಸ್ತಾನದ ಕುಸ್ತಿಪಟುವಿಗೆ ಹೊಡೆದ್ದಾರೆಂದು ವೈರಲ್‌ ಆದ ಈ ವಿಡಿಯೊ ಸುಳ್ಳು!

- Advertisement -
- Advertisement -

ಮುಕ್ತ ಶೈಲಿಯ ಕುಸ್ತಿ ಸ್ಪರ್ಧೆಯಲ್ಲಿ ಇಬ್ಬರು ಮಹಿಳೆಯರು ಕುಸ್ತಿಯಾಡುತ್ತಿರುವ ವಿಡಿಯೊವನ್ನು, ‘‘ಪಾಕಿಸ್ತಾನದ ಕುಸ್ತಿ ಪಟು ಭಾರತವನ್ನು ನಿಂದಿಸಿದಾಗ ಆರೆಸ್ಸೆಸ್‌‌ನ ಅಂಗ ಸಂಸ್ಥೆ ದುರ್ಗಾ ವಾಹಿನಿಯ ಸ್ವಯಂ ಸೇವಕಿ ಸಂಧ್ಯಾ ಪಡಕೆ ಬಂದು ಅವರನ್ನು ಹೊಡೆದರು” ಎಂಬ ಹೇಳಿಕೆಯೊಂದಿಗೆ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗುತ್ತಿದೆ.

ಕೆಲವು ಪೋಸ್ಟ್‌ನಲ್ಲಿ“ ಪಾಕಿಸ್ತಾನಿ ಕುಸ್ತಿ ಪಟು ತನ್ನ ವಿರುದ್ದ ಹೋರಾಡಲು ಸವಾಲು ಹಾಕಿದರು, ಅವರನ್ನು ಆರೆಸ್ಸೆಸ್ಸಿನ ಸ್ವಯಂ ಸೇವಕಿ ಸಂಧ್ಯಾ ಪಡಕೆ ಹೊಡೆದರು” ಎಂದು ಕೂಡಾ ವೈರಲ್ ಆಗಿದೆ.

ಪೋಸ್ಟ್‌ನ ಆರ್ಕೈವ್ ಮಾಡಿದ ಆವೃತ್ತಿಯನ್ನು ಇಲ್ಲಿ ಮತ್ತು ಇಲ್ಲಿ ನೋಡಬಹುದು.

ಇದನ್ನೂ ಓದಿ: Fact check: ಪೊಲೀಸ್ ವಿರುದ್ಧ ತಿರುಗಿಬಿದ್ದ ಪೂಜಾರಿ: ಹಿಗ್ಗಾಮುಗ್ಗಾ ಹೊಡೆದಿದ್ದು ನಿಜವಲ್ಲ!

ವಾಸ್ತವದಲ್ಲಿ, ಹರಿಯಾಣದ ಮಾಜಿ ಪೋಲಿಸ್ ಅಧಿಕಾರಿ ಕವಿತಾ ಮತ್ತು ಪವರ್ ಲಿಫ್ಟಿಂಗ್ ಹಾಗೂ ಎಂಎಂಎ ಚಾಂಪಿಯನ್ ಬುಲ್ ಬುಲ್ ಅವರ ನಡುವೆ ನಡೆದ ಕುಸ್ತಿಯಾಗಿದೆ ಈ ವಿಡಿಯೊ. ಭಾರತದ ಮೊದಲ ವೃತ್ತಿಪರ ಮಹಿಳಾ ಕುಸ್ತಿಪಟು ಬುಲ್‌ಬುಲ್‌‌, ತನ್ನ ವಿರುದ್ಧ ಸೆಣಸಲು ಪ್ರೇಕ್ಷಕರಿಗೆ ಸವಾಲು ಹಾಕಿದಂತೆ ವೀಡಿಯೊದಲ್ಲಿ ತೋರಿಸಲಾಗುತ್ತದೆ.

ವೈರಲ್‌ ವಿಡಿಯೋ ಬಗ್ಗೆ ಸಂಬಂಧಿತ ಕೀವರ್ಡ್‌ಗಳೊಂದಿಗೆ ಇಂಟರ್‌ನೆಟ್‌ನಲ್ಲಿ ಹುಡುಕಿದಾಗ, ಅದೇ ವೀಡಿಯೊವನ್ನು ಮಾಜಿ WWE ಕುಸ್ತಿಪಟು ಖಲಿ (ದಲೀಪ್ ಸಿಂಗ್) ತನ್ನ ಅಧಿಕೃತ ಫೇಸ್‌ಬುಕ್ ಖಾತೆಯಲ್ಲಿ 2016 ರಲ್ಲಿ ಹಂಚಿಕೊಂಡಿದ್ದರು.

ಈ ಪೋಸ್ಟ್‌ನಲ್ಲಿ ಸವಾಲೆಸೆಯುವ ಮಹಿಳೆಯನ್ನು (ಕಪ್ಪು ಬಣ್ಣದ ಬಟ್ಟೆ ಧರಿಸಿರುವ) ಬುಲ್ ಬುಲ್ ಗುರುತಿಸಲಾಗಿದೆ. ಮತ್ತೊಬ್ಬ ಮಹಿಳೆ (ಕೇಸರಿ ಸಲ್ವಾರ್-ಕಮೀಜ್‌ ಧರಿಸಿರುವ)ಯನ್ನು ಹರಿಯಾಣದ ಮಾಜಿ ಪೊಲೀಸ್ ಅಧಿಕಾರಿ ಮತ್ತು ಪವರ್-ಲಿಫ್ಟಿಂಗ್, ಎಂಎಂಎ (ಮಿಶ್ರ ಮಾರ್ಷಲ್ ಆರ್ಟ್ಸ್) ಚಾಂಪಿಯನ್ ಕವಿತಾ ಎಂದು ಗುರುತಿಸಲಾಗಿದೆ. ವೈರಲ್‌ ಪೋಸ್ಟ್‌ನಲ್ಲಿ ಹೇಳಿರುವಂತೆ ಅವರ ಹೆಸರು ಸಂಧ್ಯಾ ಪಡಕೆ ಅಲ್ಲ.

ಅದೇ ವೀಡಿಯೊ ಬಗ್ಗೆ ವರದಿ ಮಾಡಿದ 2016 ರ ಸುದ್ದಿ ಲೇಖನದಲ್ಲಿ ಮಹಿಳೆಯರಿಬ್ಬರನ್ನು ಭಾರತದ ಮೊದಲ ವೃತ್ತಿಪರ ಮಹಿಳಾ ಕುಸ್ತಿಪಟು ಬುಲ್ ಬುಲ್ ಮತ್ತು ಹರ್ಯಾಣದ ಮಾಜಿ ಪೊಲೀಸ್ ಅಧಿಕಾರಿ ಕವಿತಾ ಮತ್ತು ಪವರ್-ಲಿಫ್ಟಿಂಗ್, ಎಂಎಂಎ (ಮಿಶ್ರ ಮಾರ್ಷಲ್ ಆರ್ಟ್ಸ್) ಚಾಂಪಿಯನ್ ಎಂದು ಗುರುತಿಸಿದೆ.

ಇದನ್ನೂ ಓದಿ: ಫ್ಯಾಕ್ಟ್‌ ಚೆಕ್: ಕೊವೀಡ್ ಲಸಿಕೆ ಪಡೆದ ಮೇಲೆ ಮ್ಯಾಗ್ನೆಟಿಕ್ (ಅಯಸ್ಕಾಂತೀಯ) ಶಕ್ತಿ ದೊರೆಯುತ್ತದೆಯೇ?

ಈ ವೀಡಿಯೊ ಬಗ್ಗೆಯೆ ವರದಿ ಮಾಡಿದ ಇನ್ನೊಂದು ಸದ್ದಿಯಲ್ಲಿ ಮಹಿಳೆಯರ ಗುರುತಿನ ಬಗ್ಗೆಯೂ ಅದೇ ಮಾತನ್ನು ಪುನರುಚ್ಚರಿಸಿದೆ. ಆದಾಗ್ಯೂ, ಈ ಯಾವುದೇ ಸುದ್ದಿ ಲೇಖನಗಳು ಈ ಯಾವುದೇ ಮಹಿಳೆಯರನ್ನು ಪಾಕಿಸ್ತಾನ ಅಥವಾ ಆರ್‌ಎಸ್‌ಎಸ್‌ಗೆ ಸಂಬಧದ ಬಗ್ಗೆ ಉಲ್ಲೇಖಿಸಿಲ್ಲ.

ಮತ್ತೊಂದು ವೀಡಿಯೊದಲ್ಲಿ, ಬುಲ್ ಬುಲ್ (ಕಪ್ಪು ಬಣ್ಣದ ಬಟ್ಟೆ ಧರಿಸಿರುವವರು) ಕವಿತಾ ದೇವಿಯ ಮೇಲೆ ಸೇಡು ತೀರಿಸಿಕೊಳ್ಳುವುದನ್ನು ಕಾಣಬಹುದು. ಆದುದರಿಂದ, ಈ ಎಲ್ಲ ಸಾಕ್ಷ್ಯಗಳು ಸೂಚಿಸುತ್ತಿರುವುದು ಏನೆಂದರೆ ಈ ಇಬ್ಬರೂ ಮಹಿಳೆಯರು ಪಾಕಿಸ್ತಾನದೊಂದಿಗೆಯೋ, ಆರೆಸ್ಸೆಸ್‌‌ನೊಂದಿಗೆಯೋ ಸಂಬಂಧ ಹೊಂದಿಲ್ಲ.

ಸಂಕ್ಷಿಪ್ತವಾಗಿ ಹೇಳುವುದಾದರೆ, ಭಾರತೀಯ ಮಹಿಳಾ ಕುಸ್ತಿ ಪಂದ್ಯದ ಹಳೆಯ ವಿಡಿಯೋವನ್ನು ಪಾಕಿಸ್ತಾನದ ಕುಸ್ತಿಪಟುವನ್ನು ಆರೆಸ್ಸೆಸ್ ಸದಸ್ಯೆ ಹೊಡೆದರು ಎಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ಸೋನಿಯಾ ಗಾಂಧಿಯ ಎಡಿಟೆಡ್‌‌ ಚಿತ್ರವನ್ನು ಹಂಚುತ್ತಿರುವ ಬಿಜೆಪಿ

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಇದು ರಾಹುಲ್ ಗಾಂಧಿಯ ವಯನಾಡ್ ಕ್ಷೇತ್ರವಲ್ಲ – ಬಿಹಾರದ ಹಳೆಯ ರಸ್ತೆಯ ಚಿತ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಹುಚ್ಚ ಸೂಳೆ ಮಕ್ಕಳ ಮೆದುಳಲ್ಲಿ ಸೆಗಣಿಯೇ ತುಂಬಿರುವಾಗ ಇಂತಹ fake news ಹಬ್ಬಿಸಿ ಮತೀಯ ದ್ವೇಷ, ಭಾರತ ಪಾಕಿಸ್ತಾನ ಮಧ್ಯೆ ಜನರಲ್ಲಿ ತಪ್ಪು ಕಲ್ಪನೆ ಮೂಡಿಸುವುದರಲ್ಲಿ ಈ ನಾಯಿಗಳು ನಿಸ್ಸೀಮರು.

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...