Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌‌ಚೆಕ್: ಆರೆಸ್ಸೆಸ್ಸಿನ ಸ್ವಯಂ ಸೇವಕಿ ಪಾಕಿಸ್ತಾನದ ಕುಸ್ತಿಪಟುವಿಗೆ ಹೊಡೆದ್ದಾರೆಂದು ವೈರಲ್‌ ಆದ ಈ ವಿಡಿಯೊ ಸುಳ್ಳು!

ಫ್ಯಾಕ್ಟ್‌‌ಚೆಕ್: ಆರೆಸ್ಸೆಸ್ಸಿನ ಸ್ವಯಂ ಸೇವಕಿ ಪಾಕಿಸ್ತಾನದ ಕುಸ್ತಿಪಟುವಿಗೆ ಹೊಡೆದ್ದಾರೆಂದು ವೈರಲ್‌ ಆದ ಈ ವಿಡಿಯೊ ಸುಳ್ಳು!

- Advertisement -
- Advertisement -

ಮುಕ್ತ ಶೈಲಿಯ ಕುಸ್ತಿ ಸ್ಪರ್ಧೆಯಲ್ಲಿ ಇಬ್ಬರು ಮಹಿಳೆಯರು ಕುಸ್ತಿಯಾಡುತ್ತಿರುವ ವಿಡಿಯೊವನ್ನು, ‘‘ಪಾಕಿಸ್ತಾನದ ಕುಸ್ತಿ ಪಟು ಭಾರತವನ್ನು ನಿಂದಿಸಿದಾಗ ಆರೆಸ್ಸೆಸ್‌‌ನ ಅಂಗ ಸಂಸ್ಥೆ ದುರ್ಗಾ ವಾಹಿನಿಯ ಸ್ವಯಂ ಸೇವಕಿ ಸಂಧ್ಯಾ ಪಡಕೆ ಬಂದು ಅವರನ್ನು ಹೊಡೆದರು” ಎಂಬ ಹೇಳಿಕೆಯೊಂದಿಗೆ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗುತ್ತಿದೆ.

ಕೆಲವು ಪೋಸ್ಟ್‌ನಲ್ಲಿ“ ಪಾಕಿಸ್ತಾನಿ ಕುಸ್ತಿ ಪಟು ತನ್ನ ವಿರುದ್ದ ಹೋರಾಡಲು ಸವಾಲು ಹಾಕಿದರು, ಅವರನ್ನು ಆರೆಸ್ಸೆಸ್ಸಿನ ಸ್ವಯಂ ಸೇವಕಿ ಸಂಧ್ಯಾ ಪಡಕೆ ಹೊಡೆದರು” ಎಂದು ಕೂಡಾ ವೈರಲ್ ಆಗಿದೆ.

ಪೋಸ್ಟ್‌ನ ಆರ್ಕೈವ್ ಮಾಡಿದ ಆವೃತ್ತಿಯನ್ನು ಇಲ್ಲಿ ಮತ್ತು ಇಲ್ಲಿ ನೋಡಬಹುದು.

ಇದನ್ನೂ ಓದಿ: Fact check: ಪೊಲೀಸ್ ವಿರುದ್ಧ ತಿರುಗಿಬಿದ್ದ ಪೂಜಾರಿ: ಹಿಗ್ಗಾಮುಗ್ಗಾ ಹೊಡೆದಿದ್ದು ನಿಜವಲ್ಲ!

ವಾಸ್ತವದಲ್ಲಿ, ಹರಿಯಾಣದ ಮಾಜಿ ಪೋಲಿಸ್ ಅಧಿಕಾರಿ ಕವಿತಾ ಮತ್ತು ಪವರ್ ಲಿಫ್ಟಿಂಗ್ ಹಾಗೂ ಎಂಎಂಎ ಚಾಂಪಿಯನ್ ಬುಲ್ ಬುಲ್ ಅವರ ನಡುವೆ ನಡೆದ ಕುಸ್ತಿಯಾಗಿದೆ ಈ ವಿಡಿಯೊ. ಭಾರತದ ಮೊದಲ ವೃತ್ತಿಪರ ಮಹಿಳಾ ಕುಸ್ತಿಪಟು ಬುಲ್‌ಬುಲ್‌‌, ತನ್ನ ವಿರುದ್ಧ ಸೆಣಸಲು ಪ್ರೇಕ್ಷಕರಿಗೆ ಸವಾಲು ಹಾಕಿದಂತೆ ವೀಡಿಯೊದಲ್ಲಿ ತೋರಿಸಲಾಗುತ್ತದೆ.

ವೈರಲ್‌ ವಿಡಿಯೋ ಬಗ್ಗೆ ಸಂಬಂಧಿತ ಕೀವರ್ಡ್‌ಗಳೊಂದಿಗೆ ಇಂಟರ್‌ನೆಟ್‌ನಲ್ಲಿ ಹುಡುಕಿದಾಗ, ಅದೇ ವೀಡಿಯೊವನ್ನು ಮಾಜಿ WWE ಕುಸ್ತಿಪಟು ಖಲಿ (ದಲೀಪ್ ಸಿಂಗ್) ತನ್ನ ಅಧಿಕೃತ ಫೇಸ್‌ಬುಕ್ ಖಾತೆಯಲ್ಲಿ 2016 ರಲ್ಲಿ ಹಂಚಿಕೊಂಡಿದ್ದರು.

ಈ ಪೋಸ್ಟ್‌ನಲ್ಲಿ ಸವಾಲೆಸೆಯುವ ಮಹಿಳೆಯನ್ನು (ಕಪ್ಪು ಬಣ್ಣದ ಬಟ್ಟೆ ಧರಿಸಿರುವ) ಬುಲ್ ಬುಲ್ ಗುರುತಿಸಲಾಗಿದೆ. ಮತ್ತೊಬ್ಬ ಮಹಿಳೆ (ಕೇಸರಿ ಸಲ್ವಾರ್-ಕಮೀಜ್‌ ಧರಿಸಿರುವ)ಯನ್ನು ಹರಿಯಾಣದ ಮಾಜಿ ಪೊಲೀಸ್ ಅಧಿಕಾರಿ ಮತ್ತು ಪವರ್-ಲಿಫ್ಟಿಂಗ್, ಎಂಎಂಎ (ಮಿಶ್ರ ಮಾರ್ಷಲ್ ಆರ್ಟ್ಸ್) ಚಾಂಪಿಯನ್ ಕವಿತಾ ಎಂದು ಗುರುತಿಸಲಾಗಿದೆ. ವೈರಲ್‌ ಪೋಸ್ಟ್‌ನಲ್ಲಿ ಹೇಳಿರುವಂತೆ ಅವರ ಹೆಸರು ಸಂಧ್ಯಾ ಪಡಕೆ ಅಲ್ಲ.

ಅದೇ ವೀಡಿಯೊ ಬಗ್ಗೆ ವರದಿ ಮಾಡಿದ 2016 ರ ಸುದ್ದಿ ಲೇಖನದಲ್ಲಿ ಮಹಿಳೆಯರಿಬ್ಬರನ್ನು ಭಾರತದ ಮೊದಲ ವೃತ್ತಿಪರ ಮಹಿಳಾ ಕುಸ್ತಿಪಟು ಬುಲ್ ಬುಲ್ ಮತ್ತು ಹರ್ಯಾಣದ ಮಾಜಿ ಪೊಲೀಸ್ ಅಧಿಕಾರಿ ಕವಿತಾ ಮತ್ತು ಪವರ್-ಲಿಫ್ಟಿಂಗ್, ಎಂಎಂಎ (ಮಿಶ್ರ ಮಾರ್ಷಲ್ ಆರ್ಟ್ಸ್) ಚಾಂಪಿಯನ್ ಎಂದು ಗುರುತಿಸಿದೆ.

ಇದನ್ನೂ ಓದಿ: ಫ್ಯಾಕ್ಟ್‌ ಚೆಕ್: ಕೊವೀಡ್ ಲಸಿಕೆ ಪಡೆದ ಮೇಲೆ ಮ್ಯಾಗ್ನೆಟಿಕ್ (ಅಯಸ್ಕಾಂತೀಯ) ಶಕ್ತಿ ದೊರೆಯುತ್ತದೆಯೇ?

ಈ ವೀಡಿಯೊ ಬಗ್ಗೆಯೆ ವರದಿ ಮಾಡಿದ ಇನ್ನೊಂದು ಸದ್ದಿಯಲ್ಲಿ ಮಹಿಳೆಯರ ಗುರುತಿನ ಬಗ್ಗೆಯೂ ಅದೇ ಮಾತನ್ನು ಪುನರುಚ್ಚರಿಸಿದೆ. ಆದಾಗ್ಯೂ, ಈ ಯಾವುದೇ ಸುದ್ದಿ ಲೇಖನಗಳು ಈ ಯಾವುದೇ ಮಹಿಳೆಯರನ್ನು ಪಾಕಿಸ್ತಾನ ಅಥವಾ ಆರ್‌ಎಸ್‌ಎಸ್‌ಗೆ ಸಂಬಧದ ಬಗ್ಗೆ ಉಲ್ಲೇಖಿಸಿಲ್ಲ.

ಮತ್ತೊಂದು ವೀಡಿಯೊದಲ್ಲಿ, ಬುಲ್ ಬುಲ್ (ಕಪ್ಪು ಬಣ್ಣದ ಬಟ್ಟೆ ಧರಿಸಿರುವವರು) ಕವಿತಾ ದೇವಿಯ ಮೇಲೆ ಸೇಡು ತೀರಿಸಿಕೊಳ್ಳುವುದನ್ನು ಕಾಣಬಹುದು. ಆದುದರಿಂದ, ಈ ಎಲ್ಲ ಸಾಕ್ಷ್ಯಗಳು ಸೂಚಿಸುತ್ತಿರುವುದು ಏನೆಂದರೆ ಈ ಇಬ್ಬರೂ ಮಹಿಳೆಯರು ಪಾಕಿಸ್ತಾನದೊಂದಿಗೆಯೋ, ಆರೆಸ್ಸೆಸ್‌‌ನೊಂದಿಗೆಯೋ ಸಂಬಂಧ ಹೊಂದಿಲ್ಲ.

ಸಂಕ್ಷಿಪ್ತವಾಗಿ ಹೇಳುವುದಾದರೆ, ಭಾರತೀಯ ಮಹಿಳಾ ಕುಸ್ತಿ ಪಂದ್ಯದ ಹಳೆಯ ವಿಡಿಯೋವನ್ನು ಪಾಕಿಸ್ತಾನದ ಕುಸ್ತಿಪಟುವನ್ನು ಆರೆಸ್ಸೆಸ್ ಸದಸ್ಯೆ ಹೊಡೆದರು ಎಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ಸೋನಿಯಾ ಗಾಂಧಿಯ ಎಡಿಟೆಡ್‌‌ ಚಿತ್ರವನ್ನು ಹಂಚುತ್ತಿರುವ ಬಿಜೆಪಿ

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಇದು ರಾಹುಲ್ ಗಾಂಧಿಯ ವಯನಾಡ್ ಕ್ಷೇತ್ರವಲ್ಲ – ಬಿಹಾರದ ಹಳೆಯ ರಸ್ತೆಯ ಚಿತ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಹುಚ್ಚ ಸೂಳೆ ಮಕ್ಕಳ ಮೆದುಳಲ್ಲಿ ಸೆಗಣಿಯೇ ತುಂಬಿರುವಾಗ ಇಂತಹ fake news ಹಬ್ಬಿಸಿ ಮತೀಯ ದ್ವೇಷ, ಭಾರತ ಪಾಕಿಸ್ತಾನ ಮಧ್ಯೆ ಜನರಲ್ಲಿ ತಪ್ಪು ಕಲ್ಪನೆ ಮೂಡಿಸುವುದರಲ್ಲಿ ಈ ನಾಯಿಗಳು ನಿಸ್ಸೀಮರು.

LEAVE A REPLY

Please enter your comment!
Please enter your name here

- Advertisment -

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....