Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌‌ಚೆಕ್‌‌: ಪಂಜಾಬ್‌‌ನ ಈ ಮಹಿಳಾ ಅಧಿಕಾರಿ ಮೃತಪಟ್ಟಿದ್ದು ಅತ್ಯಾಚಾರದಿಂದಲ್ಲ, ರಸ್ತೆ ಅಫಘಾತದಿಂದ

ಫ್ಯಾಕ್ಟ್‌‌ಚೆಕ್‌‌: ಪಂಜಾಬ್‌‌ನ ಈ ಮಹಿಳಾ ಅಧಿಕಾರಿ ಮೃತಪಟ್ಟಿದ್ದು ಅತ್ಯಾಚಾರದಿಂದಲ್ಲ, ರಸ್ತೆ ಅಫಘಾತದಿಂದ

ಪಂಜಾಬ್‌ನ ಅಮೃತಸರದಲ್ಲಿ ಮಹಿಳಾ ಕಾನ್‌ಸ್ಟೇಬಲ್ ಸಾವಿನ ಬಗ್ಗೆ ಕಾಂಗ್ರೆಸ್‌ ಏಕೆ ಮಾತನಾಡುತ್ತಿಲ್ಲ’ ಎಂದು ಆರೋಪಿಸಿ ಹಲವಾರು ಪೋಸ್ಟ್‌ಗಳು ಹರಿದಾಡುತ್ತಿವೆ.

- Advertisement -
- Advertisement -

ಮಹಿಳಾ ಪೊಲೀಸ್ ಅಧಿಕಾರಿಯೊಬ್ಬರ ಮೃತ ದೇಹದ ಫೋಟೋವೊಂದು, ’ಪಂಜಾಬ್‌‌ನಲ್ಲಿ ಮಹಿಳಾ ಪೊಲೀಸ್‌ ಒಬ್ಬರನ್ನು ಅತ್ಯಾಚಾರ ಮಾಡಿ ಹತ್ಯೆ ಮಾಡಲಾಗಿದೆ’ ಎಂಬ ಬರಹದೊಂದಿಗೆ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ಬಿಜೆಪಿ ಆಡಳಿತ ಇರುವ ಉತ್ತರ ಪ್ರದೇಶದಲ್ಲಿ ಹತ್ರಾಸ್‌ ಅತ್ಯಾಚಾರ ಘಟನೆಯನ್ನು ಪ್ರಶ್ನಿಸುತ್ತಿರುವ ಕಾಂಗ್ರೆಸ್‌ಗೆ ಪ್ರತಿಕ್ರಿಯೆಯಾಗಿ ಸಾಮಾಜಿಕ ಜಾಲತಾಣದಲ್ಲಿ ಇದನ್ನು ಹರಿಯಬಿಡಲಾಗುತ್ತಿದೆ. ವೈರಲ್ ಪೋಟೋದಲ್ಲಿ, ಪಂಜಾಬ್‌ನ ಅಮೃತಸರದಲ್ಲಿ ಮಹಿಳಾ ಕಾನ್‌ಸ್ಟೇಬಲ್ ಸಾವಿನ ಬಗ್ಗೆ ಕಾಂಗ್ರೆಸ್‌ ಏಕೆ ಮಾತನಾಡುತ್ತಿಲ್ಲ’ ಎಂದು ಆರೋಪಿಸಿ ಹಲವಾರು ಪೋಸ್ಟ್‌ಗಳು ಹರಿದಾಡುತ್ತಿವೆ.

ಇದನ್ನೂ ಓದಿ: ಬಾಲಿವುಡ್ ನಟಿ ಶ್ರೀದೇವಿಯ ಸಾವು ಸಹಜವಲ್ಲವೇ?

ಆರ್ಕೈವ್ ಇಲ್ಲಿದೆ

ಅತ್ಯಾಚಾರಕ್ಕೊಳಗಾದ ನಂತರ ಕಾನ್‌ಸ್ಟೆಬಲ್ ನೋಮಿಯನ್ನು ಕೊಲೆ ಮಾಡಲಾಗಿದೆ ಎಂದು ಪ್ರತಿಪಾದಿಸುವ ಹಲವಾರು ಪೋಸ್ಟ್‌ಗಲು ಸಾಮಾಜಿಕ ಜಾಲತಾಣದಲ್ಲಿ ಬಳಕೆದಾರರು ಹಂಚಿಕೊಳ್ಳುತ್ತಿದ್ದಾರೆ. ಈ ಅತ್ಯಾಚಾರದ ಬಗ್ಗೆ ಕಾಂಗ್ರೆಸ್ ಮುಖಂಡರಾದ ರಾಹುಲ್ ಮತ್ತು ಪ್ರಿಯಾಂಕಾ ಗಾಂಧಿ ಮೌನವಾಗಿದ್ದಾರೆ ಎಂದು ಆರೋಪಿಸಲಾಗಿದೆ. ಅಂತಹ ಪೋಸ್ಟ್‌ಗಳ ಆರ್ಕೈವ್‌ಗಳನ್ನು ಇಲ್ಲಿ, ಇಲ್ಲಿ ಮತ್ತು ಇಲ್ಲಿ ವೀಕ್ಷಿಸಬಹುದು.

ಫ್ಯಾಕ್ಟ್‌‌ಚೆಕ್

ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ ಈ ಪೋಟೋದಲ್ಲಿರುವ ಮಹಿಳಾ ಕಾನ್‌ಸ್ಟೆಬಲ್‌ ವಾಸ್ತವದಲ್ಲಿ ರಸ್ತೆ ಅಫಘಾತದಿಂದಾಗಿ ಸಾವಿಗೀಡಾಗಿದ್ದಾರೆ, ಇದು ಅತ್ಯಾಚಾರ ಹಾಗೂ ಕೊಲೆ ಪ್ರಕರಣ ಅಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ರಿವರ್ಸ್ ಇಮೇಜ್ ಮೂಲಕ ಈ ವೈರಲ್ ಚಿತ್ರವನ್ನು ಹುಡುಕಾಡಿದರೆ ಹಿಂದಿ ದಿನಪತ್ರಿಕೆ ದೈನಿಕ್ ಸವೆರಾ ಟೈಮ್ಸ್‌‌ನ ವರದಿಯೊಂದನ್ನು ನೋಡಬಹುದಾಗಿದೆ. ಅದರ ವರದಿಯಲ್ಲಿ, ”ಅಮೃತಸರದಲ್ಲಿ ಮಹಿಳಾ ಕಾನ್‌ಸ್ಟೆಬಲ್‌ನ ಶವ ಪತ್ತೆಯಾಗಿದೆ ಎಂದು ತಿಳಿಸಲಾಗಿದೆ. ಈ ಕುರಿತು ಹಲವಾರು ವರದಿಗಳನ್ನು ನೋಡಬಹುದಾಗಿದೆ.

ಇದನ್ನೂ ಓದಿ: ಪ್ರಧಾನಿ ಉದ್ಘಾಟಿಸಿದ ಅಟಲ್ ಸುರಂಗ ಎಂದು ಅಮೇರಿಕಾ ಸುರಂಗದ ಚಿತ್ರ ಹಂಚಿಕೊಂಡ ಮಾಧ್ಯಮಗಳು!

ಟ್ರಿಬ್ಯೂನ್ ಇಂಡಿಯಾದ ಅಮೃತಸರದಿಂದ ಅಕ್ಟೋಬರ್‌ 1 ರಂದು ಮಾಡಿದ ವರದಿಯ ಪ್ರಕಾರ, “ನೋಮಿ ಎಂಬ ಮಹಿಳಾ ಪೊಲೀಸ್ ಕಾನ್‌ಸ್ಟೆಬಲ್‌‌ ಅವರ ಸ್ಕೂಟರ್‌‌ಗೆ ವೇಗದಿಂದ ಬಂದ ಕಾರೊಂದು ಸಂಗತ್ಪುರ ಗ್ರಾಮದ ಬಳಿ ಡಿಕ್ಕಿ ಹೊಡೆದ ಕಾರಣ ಅವರು ಮೃತಪಟ್ಟಿದ್ದಾರೆ” ಎಂದು ಹೇಳುತ್ತದೆ.

ಪೊಲೀಸ್ ಉಪ ಆಯುಕ್ತ ಮುಖ್ವಿಂದರ್ ಸಿಂಗ್ ಭುಲ್ಲರ್ ಅವರು ಮಹಿಳಾ ಕಾನ್‌ಸ್ಟೆಬಲ್ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ ಎಂದು ದೃಪಡಿಸಿದ್ದಾರೆಂದು ದಿ ಕ್ವಿಂಟ್ ವರದಿ ಮಾಡಿದೆ. ಅಪಘಾತದ ಕುರಿತು ಹೆಚ್ಚಿನ ತನಿಖೆ ನಡೆಸಲು ಗ್ರಾಮೀಣ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವಂತೆ ಮಹಿಳಾ ಅಧಿಕಾರಿಯ ಮೇಲೆ ಅತ್ಯಾಚಾರ ನಡೆದಿಲ್ಲ. ಅವರು ರಸ್ತೆ ಅಪಘಾತದಿಂದಾಗಿ ಮೃತಪಟ್ಟಿದ್ದಾರೆ ಎಂದು ಈ ಮೂಲಕ ಸ್ಪಷ್ಟವಾಗುತ್ತದೆ.

ಇದನ್ನೂ ಓದಿ: ನರೇಂದ್ರ ಮೋದಿ ಗುಜರಾತ್‌ನಲ್ಲಿ ಕ್ರೂಸ್ ಹಡಗು ಸೇವೆಯನ್ನು ಪ್ರಾರಂಭಿಸಿದ್ದಾರೆಯೇ? ಇಲ್ಲಿದೆ ವಿವರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...