Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್‌: ಈ ಯೋಗಿ ಹಿಮಾಲಯದವರೂ ಅಲ್ಲ, ಅವರ ಮೈಮೇಲೆ ಇರುವುದು ಹಿಮವೂ ಅಲ್ಲ!

ಫ್ಯಾಕ್ಟ್‌ಚೆಕ್‌: ಈ ಯೋಗಿ ಹಿಮಾಲಯದವರೂ ಅಲ್ಲ, ಅವರ ಮೈಮೇಲೆ ಇರುವುದು ಹಿಮವೂ ಅಲ್ಲ!

ಪ್ರಧಾನಿ ಮೋದಿ ಮತ್ತು ಅಮಿತ್‌ ಶಾ ಫಾಲೋ ಮಾಡುತ್ತಿರುವ ಟ್ವಿಟರ್‌ ಖಾತೆಯು ಈ ಚಿತ್ರವನ್ನು ಹಂಚಿಕೊಂಡಿದೆ

- Advertisement -
- Advertisement -

ಶರೀರ ಪೂರ್ತಿ ಮಂಜುಗಡ್ಡೆಯಲ್ಲಿ ಆವೃತ್ತವಾಗಿರುವಂತೆ ಕಾಣುತ್ತಿರುವ ಪದ್ಮಾಸನ ಹಾಕಿಕೊಂಡು ಕೂತಿರುವ ವ್ಯಕ್ತಿಯೊಬ್ಬರ ಕಪ್ಪುಬಿಳುಪಿನ ಚಿತ್ರವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್‌ ಆಗಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ಈ ಚಿತ್ರದಲ್ಲಿ ಇರುವ ವ್ಯಕ್ತಿಯನ್ನು ‘ಹಿಮಾಲಯದಲ್ಲಿ ಇರುವ ಯೋಗಿ’ ಎಂದು ಪ್ರತಿಪಾದಿಸಲಾಗುತ್ತಿದೆ.

ಟ್ವಿಟರ್‌ನಲ್ಲಿ ಈ ಚಿತ್ರವನ್ನು ರಿನಿತಿ ಚಟರ್ಜಿ ಎನ್ನುವ ಖಾತೆಯೊಂದು, ‘ಮಂಜುಗಡ್ಡೆಯನ್ನು ಹೊದ್ದುಕೊಂಡಿರುವ ಹಿಮಾಲಯದ ಯೋಗಿ’ ಎಂದು ಹೇಳಿಕೊಂಡಿದೆ. ಈ ಖಾತೆಯು ಸುಮಾರು ಒಂದು ಲಕ್ಷಕ್ಕೂ ಹೆಚ್ಚು ಫಾಲೋವರ್‌ ಅನ್ನು ಹೊಂದಿದೆ. ಈ ಚಿತ್ರವನ್ನು ನಿಖಿಲ್ ಠಾಕರ್‌‌ ಎನ್ನುವ ಬಿಜೆಪಿ ಬೆಂಬಲಿಗ ವ್ಯಕ್ತಿಯೊಬ್ಬರು ಹಂಚಿಕೊಂಡಿದ್ದಾರೆ. ವಿಷೇಶವೇನೆಂದರೆ ನಿಖಿಲ್ ಅವರನ್ನು ಪ್ರಧಾನಿ ನರೇಂದ್ರ ಮೋದಿ ಮತ್ತು ಅಮಿತ್‌ ಶಾ ಅವರು ಫಾಲೊ ಮಾಡುತ್ತಿದ್ದಾರೆ.

ಇದನ್ನೂ ಓದಿ:ಫ್ಯಾಕ್ಟ್‌ಚೆಕ್: ತುಮಕೂರು ಜಿಲ್ಲೆಗೆ ಮನುಷ್ಯ ರೂಪದ ವಿಚಿತ್ರ ಪ್ರಾಣಿ ಬಂದಿದ್ದು ನಿಜವೇ?

ಚಿತ್ರವು ಕೇವಲ ಟ್ವಿಟರ್‌ ಮಾತ್ರವಲ್ಲದೆ ಪೇಸ್‌ಬುಕ್‌ನಲ್ಲೂ ಹರಿದಾಡುತ್ತಿದೆ. ಫೇಸ್‌ಬುಕ್‌ನಲ್ಲಿ, “ಇಂತಹ ತಪಸ್ಸು, ಹಠಮಾರಿತನ, ಸಾಧನೆ ಇರುವುದು ಸನಾತನದಲ್ಲಿ ಮಾತ್ರ, ಇಂದ್ರಿಯಗಳನ್ನು ಗೆದ್ದುಕೊಂಡ ಸಾವಿರಾರು ಉದಾಹರಣೆಗಳಿವೆ, ಇಂತಹ ಉದಾಹರಣೆ ಬೇರೆ ಯಾವ ಸಂಸ್ಕೃತಿಯಲ್ಲಾಗಲಿ, ಧರ್ಮದಲ್ಲಾಗಲಿ ಕಾಣುವುದಿಲ್ಲ” ಎಂದು ಚಿತ್ರದಲ್ಲಿರುವ ವ್ಯಕ್ತಿ ಅತಿಮಾನುಷವಾದುದನ್ನು ಮಾಡುತ್ತಿದ್ದಾರೆ ಎಂದು ಪ್ರತಿಪಾದಿಸಲಾಗಿದೆ.

ಇದೇ ಪ್ರತಿಪಾದನೆಯನ್ನು ಟ್ವಿಟರ್‌ನಲ್ಲೂ ಮಾಡಲಾಗಿದೆ. ಅದನ್ನುಇಲ್ಲಿ ಮತ್ತು ಇಲ್ಲಿ ನೋಡಬಹುದಾಗಿದೆ. ಈ ಚಿತ್ರವನ್ನು ವೈರಲ್ ಮಾಡಿರುವ ಸಾಮಾಜಿಕ ಜಾಲತಾಣದ ಎಲ್ಲಾ ಹ್ಯಾಂಡಲ್‌ಗಳು ಬಿಜೆಪಿ ಪರವಾಗಿ ಪ್ರೊಪಗಾಂಡ ಸೃಷ್ಟಿಸುವ ಪೇಜ್‌ಗಳಾಗಿವೆ.

ಇದನ್ನೂ ಓದಿ:ಫ್ಯಾಕ್ಟ್‌ಚೆಕ್‌: ತಿರುಪತಿ ದೇವಸ್ಥಾನದ ಪುರೋಹಿತರ ಮನೆಯಲ್ಲಿ 128Kg ಚಿನ್ನ ಸಿಕ್ಕಿದ್ದು ನಿಜವೇ?

ಫ್ಯಾಕ್ಟ್‌ಚೆಕ್

ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಈ ಚಿತ್ರವನ್ನು ನಾನುಗೌರಿ.ಕಾಂ ರಿವರ್ಸ್‌ ಸರ್ಚ್ ಮೂಲಕ ಹುಡುಕಾಡಿದಾಗ ಈ ಚಿತ್ರವು ‘ಬಾಬಾ ಸರ್‌ಬಂಗಿ I’ ಎನ್ನುವ ಫೇಸ್‌ಬುಕ್‌ ಪೇಜ್‌ನಲ್ಲಿ ಪತ್ತೆಯಾಗಿದೆ. ಈ ಚಿತ್ರವನ್ನು ಮೂರು ವರ್ಷಗಳ ಹಿಂದೆ ಅಪ್‌ಲೋಡ್ ಮಾಡಲಾಗಿದೆ. ಪೇಜ್‌ನಲ್ಲಿ ಇರುವ ಈ ಚಿತ್ರವನ್ನು ಬಳಸಿಕೊಂಡು ಚಿತ್ರವನ್ನು ಕಪ್ಪುಬಿಳುಪಾಗಿ ಎಡಿಟ್‌ ಮಾಡಿ ಅದನ್ನು ವೈರಲ್ ಮಾಡಲಾಗಿದೆ.

ಫೇಸ್‌ಬುಕ್ ಪೇಜ್‌ನಲ್ಲಿ ಈ ವ್ಯಕ್ತಿಯನ್ನು ‘ಬಾಬಾ ಭಲೇ ಗಿರಿ ಜಿ ಮಹಾರಾಜ್’ ಎಂದು ಹೇಳಿಕೊಂಡಿದೆ. ಪೇಜ್‌ನಲ್ಲಿ ಇರುವ ಫೇಸ್‌ಬುಕ್‌‌ ಚಿತ್ರದಲ್ಲಿ ಕಂದು ಬಣ್ಣದ ‘ಬೂದಿ’ ಅವರ ಮೈಮೇಲೆ ಇರುವಂತೆ ಸ್ಪಷ್ಟವಾಗಿ ಕಾಣುತ್ತದೆ. ಜೊತೆಗೆ ಹಿನ್ನಲೆಯಲ್ಲಿ ‘ಬೆರಣಿ’ ಜೋಡಿಸಿರುವುದು ಕೂಡಾ ಕಾಣುತ್ತದೆ.

ಈ ಮಾಹಿತಿಯ ಎಳೆಯನ್ನು ಹುಡುಕಿಕೊಂಡು ನಾವು ಮತ್ತಷ್ಟು ಹುಡುಕಿದ್ದೇವೆ. ಈ ವ್ಯಕ್ತಿಯನ್ನು ಜನರು ‘‘ಶ್ರೀಶ್ರೀ 1008 ಮಹಂತ್‌ ಬಾಬಾ ಭಲೇ ಗಿರಿ ಜಿ ಮಹಾರಾಜ್‌” ಎಂದು ಕರೆಯುತ್ತಾರೆ. ಇದು ಹರಿಯಾಣ ರಾಜ್ಯದ ರಿಂಧಾನದಲ್ಲಿರುವ ‘ಪರಾಶರ್‌ ತೀರ್ಥ’ದಲ್ಲಿ ಮಾಡಲಾಗಿರುವ ಧಾರ್ಮಿಕ ಆಚರಣೆಯೊಂದರ ಚಿತ್ರವಾಗಿದೆ.

ಇದನ್ನೂ ಓದಿ:ಫ್ಯಾಕ್ಟ್‌ಚೆಕ್: ರಾಯಚೂರಿನಲ್ಲಿ ಏಕ್ ಮಿನಾರ್ ಮಸೀದಿ ಕೆಡವಿದಾ‌ಗ ಶಿವನ ದೇವಾಲಯ ಪತ್ತೆಯಾಯಿತೆ?

ಈ ಆಚರಣೆಯಲ್ಲಿ ಬೆರಣಿಯನ್ನು ಹಲವು ದೊಡ್ಡ ದೊಡ್ಡ ಗುಂಪಾಗಿ ಜೋಡಿಸಿ ಅದರ ನಡುವೆ ಅವರು ಕುಳಿತುಕೊಳ್ಳುತ್ತಾರೆ. ಈ ವೇಳೆ ಅವರ ಮೈಮೇಲೆ ಬೆರಣಿಯ ಬೂದಿ ಅಂಟಿಕೊಂಡಿದ್ದಾಗಿರಬಹುದಾಗಿದೆ.

ಪ್ರಸ್ತುತ ವೈರಲ್ ಆಗಿರುವ ಚಿತ್ರವು ಮೂರು ವರ್ಷಗಳಷ್ಟು ಹಳೆಯದಾದರೂ, ‘ಬಾಬಾ ಸರ್‌ಬಂಗಿ I‘ ಫೇಸ್‌ಬುಕ್ ಪೇಜ್‌ನಲ್ಲಿ ಈ ಆಚರಣೆಯ ಹಳೆಯ ಚಿತ್ರಗಳು ಮತ್ತು ಇತ್ತೀಚೆಗೆ ಕ್ಲಿಕ್ ಮಾಡಿರುವ ಚಿತ್ರಗಳು ಎಂಬಂತೆ ತೋರುವ ಹಲವಾರು ಚಿತ್ರಗಳು ಇವೆ.

ಒಟ್ಟಿನಲ್ಲಿ ಹೇಳಬಹುದಾದರೆ, ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ಈ ಚಿತ್ರವು ಯಾವುದೆ ಹಿಮಾಲಯದ ಯೋಗಿಯದ್ದಲ್ಲ ಮತ್ತು ಅವರ ಮೈಮೇಲೆ ಇರುವುದು ಹಿಮವೂ ಅಲ್ಲ. ಅವರು ಹರಿಯಾಣ ರಾಜ್ಯದವರಾಗಿದ್ದು, ಅವರ ಮೈಮೇಲೆ ಇರುವುದು ಬೂದಿಯಾಗಿದೆ.

ಇದನ್ನೂ ಓದಿ:ಫ್ಯಾಕ್ಟ್‌ಚೆಕ್‌: ಯೋಗಿ ಆದಿತ್ಯನಾಥರ ಬೆಂಗಾವಲಿನ ಮೇಲೆ ದಾಳಿ ಮಾಡಿದ ಯುವಕರ ವಿಡಿಯೊ ಈಗಿನದ್ದಲ್ಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ವಕ್ಷೇತ್ರ ತಿರುವನಂತಪುರದಲ್ಲಿ ಬಿಜೆಪಿ ಭರ್ಜರಿ ಗೆಲುವು : ‘ಪ್ರಜಾಪ್ರಭುತ್ವದ ಸೌಂದರ್ಯ’ ಎಂದ ಕಾಂಗ್ರೆಸ್ ಸಂಸದ ಶಶಿ ತರೂರ್

ಕೇರಳದ ಸ್ಥಳೀಯ ಸಂಸ್ಥೆ ಚುನಾವಣೆಯ ಫಲಿತಾಂಶ ಇಂದು (ಡಿ.13) ಪ್ರಕಟಗೊಂಡಿದ್ದು, ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ 45 ವರ್ಷಗಳ ಸಿಪಿಐ(ಎಂ) ನೇತೃತ್ವದ ಎಲ್‌ಡಿಎಫ್‌...

ಕೇರಳ ಸ್ಥಳೀಯ ಸಂಸ್ಥೆ ಚುನಾವಣೆ : ಯುಡಿಎಫ್‌ ಸ್ಪಷ್ಟ ಮೇಲುಗೈ

ಇಂದು (2025 ಡಿಸೆಂಬರ್ 13, ಶನಿವಾರ) ಪ್ರಕಟಗೊಂಡ ಕೇರಳದ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶದಲ್ಲಿ ವಿರೋಧ ಪಕ್ಷಗಳ ಒಕ್ಕೂಟವಾದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಸ್ಪಷ್ಟ ಮೇಲುಗೈ ಸಾಧಿಸಿದೆ. ಈ ಮೂಲಕ ರಾಜ್ಯ...

ಕೋಲ್ಕತ್ತಾ ಮೆಸ್ಸಿ ಕಾರ್ಯಕ್ರಮದಲ್ಲಿ ಗಲಾಟೆ | ಕ್ಷಮೆ ಯಾಚಿಸಿದ ಸಿಎಂ ಮಮತಾ ಬ್ಯಾನರ್ಜಿ, ತನಿಖೆಗೆ ಸಮಿತಿ ರಚನೆ; ಆಯೋಜಕನ ಬಂಧನ

ಫುಟ್ಬಾಲ್ ತಾರೆ ಲಿಯೋನೆಲ್ ಮೆಸ್ಸಿ ಭೇಟಿಯ ವೇಳೆ ಶನಿವಾರ (ಡಿಸೆಂಬರ್ 13) ಕೋಲ್ಕತ್ತಾದ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ಉಂಟಾದ ಗಲಾಟೆಗೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕ್ಷಮೆಯಾಚಿಸಿದ್ದು, ನಿವೃತ್ತ ನ್ಯಾಯಮೂರ್ತಿ...

ಮೆಸ್ಸಿ ನೋಡಲು 25 ಸಾವಿರ ರೂ. ಪಾವತಿಸಿದವರಿಗೆ ನಿರಾಶೆ; ಕೋಪಗೊಂಡ ಅಭಿಮಾನಿಗಳಿಂದ ಕ್ರೀಡಾಂಗಣದಲ್ಲಿ ದಾಂಧಲೆ

ಶನಿವಾರ ನಡೆದ ಲಿಯೋನೆಲ್ ಮೆಸ್ಸಿ ಅವರ ಬಹು ನಿರೀಕ್ಷಿತ "ಗೋಟ್ ಇಂಡಿಯಾ ಟೂರ್" ಕೋಲ್ಕತ್ತಾದಲ್ಲಿ ಅಸ್ತವ್ಯಸ್ತವಾಯಿತು. ಯುವ ಭಾರತಿ ಕ್ರಿರಂಗನ್‌ನಲ್ಲಿ ರೊಚ್ಚಿಗೆದ್ದ ಅಭಿಮಾನಿಗಳ ದಾಂಧಲೆಯಿಂದ ಕ್ರೀಡಾಂಗಣ ಅವ್ಯವಸ್ಥೆಗೆ ಒಳಗಾಯಿತು. ಸಾವಿರಾರು ಅಭಿಮಾನಿಗಳು ಅರ್ಜೆಂಟೀನಾದ...

ಡ್ರಗ್‌ ಪೆಡ್ಲರ್‌ಗಳ ಮನೆ ಒಡೆದು ಹಾಕುವ ಹೇಳಿಕೆ : ಪರಮೇಶ್ವರ್ ಮಾತಿಗೆ ಆತಂಕ ವ್ಯಕ್ತಪಡಿಸಿದ ಕಾಂಗ್ರೆಸ್ ಹಿರಿಯ ನಾಯಕ ಚಿದಂಬರಂ

"ಡ್ರಗ್‌ ಪೆಡ್ಲರ್‌ಗಳ ಬಾಡಿಗೆ ಮನೆಗಳನ್ನು ಒಡೆದು ಹಾಕುವ ಹಂತಕ್ಕೆ ಹೋಗಿದ್ದೇವೆ" ಎಂಬ ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆಗೆ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಆತಂಕ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ...

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ: ಶಶಿ ತರೂರ್ ಕ್ಷೇತ್ರ ತಿರುವನಂತಪುರಂನಲ್ಲಿ ಬಿಜೆಪಿ ಮುನ್ನಡೆ

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ, ವಿಶೇಷವಾಗಿ ತಿರುವನಂತಪುರಂನಲ್ಲಿ ಭಾರತೀಯ ಜನತಾ ಪಕ್ಷದ ಸಾಧನೆಯನ್ನು ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಶನಿವಾರ ಅಭಿನಂದಿಸಿದ್ದಾರೆ. ಜನರ ತೀರ್ಪನ್ನು ಗೌರವಿಸಬೇಕು ಎಂದು ಹೇಳಿದ್ದಾರೆ. ಎಕ್ಸ್‌ನಲ್ಲಿ ದೀರ್ಘ...

ಆಳಂದ ಮತಗಳ್ಳತನ | ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಸೇರಿ 7 ಮಂದಿ ವಿರುದ್ಧ ಎಸ್‌ಐಟಿ ಚಾರ್ಜ್‌ಶೀಟ್‌

ಕಲಬುರಗಿಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಮತಗಳ್ಳತನ (ಚುನಾವಣಾ ಆಕ್ರಮ) ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದು, ಆಳಂದದ ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್...

ಉತ್ತರ ಪ್ರದೇಶ| ಗಸ್ತು ವಾಹನ ಹಳ್ಳಕ್ಕೆ ಉರುಳಿಸಿದ ಪಾನಮತ್ತ ಪೊಲೀಸರು; ಕ್ರೇನ್ ಚಾಲಕನ ಮೇಲೆ ಹಲ್ಲೆ

ಶುಕ್ರವಾರ (ಡಿಸೆಂಬರ್ 12) ರಾತ್ರಿ ಪೊಲೀಸರೊಬ್ಬರು ಕಾರಿನ ನಿಯಂತ್ರಣ ಕಳೆದುಕೊಂಡ ಬಳಿಕ '112' ಪೊಲೀಸ್ ಪ್ರತಿಕ್ರಿಯೆ ವಾಹನ (ಪಿಆರ್‌ವಿ) ಹಳ್ಳಕ್ಕೆ ಉರುಳಿದೆ. ವರದಿಗಳ ಪ್ರಕಾರ, ಘಟನೆಯ ಸಮಯದಲ್ಲಿ ಪೊಲೀಸರು ಪಾನಮತ್ತರಾಗಿದ್ದರು. ಕಾರ್ ಕಂದಕಕ್ಕೆ...

ಲಿಯೋನೆಲ್ ಮೆಸ್ಸಿ ಇಂಡಿಯಾ ಪ್ರವಾಸ; ಅಭೂತಪೂರ್ವ ಸ್ವಾಗತ ಕೋರಿದ ಕೋಲ್ಕತ್ತಾ ಅಭಿಮಾನಿಗಳು

ಇಂಡಿಯಾ ಪ್ರವಾಸ ಪ್ರಾರಂಭಿಸಿರುವ ಅರ್ಜೆಂಟೀನಾದ ಪುಟ್‌ಬಾಲ್‌ ತಾರೆ ಲಿಯೋನೆಲ್ ಮೆಸ್ಸಿ ಕೋಲ್ಕತ್ತಾಗೆ ಬಂದಿಳಿದಿದ್ದಾರೆ. ಶನಿವಾರ ಬೆಳಗಿನ ಜಾವ ವಿಮಾನ ನಿಲ್ದಾಣದಲ್ಲಿ ನೆರೆದಿದ್ದ ಸಾವಿರಾರು ಅಭಿಮಾನಿಗಳಿಂದ ಅವರಿಗೆ ಅಭೂತಪೂರ್ವ ಸ್ವಾಗತ ಕೋರಿದರು. ಅರ್ಜೆಂಟೀನಾದ ಸೂಪರ್‌ಸ್ಟಾರ್ ದುಬೈ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ಆರು ಅಪರಾಧಿಗಳಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಮಲಯಾಳಂ ಮೂಲದ ಬಹುಭಾಷಾ ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದ (2017ರ ಪ್ರಕರಣ) ಆರು ಅಪರಾಧಿಗಳಿಗೆ ಇಪ್ಪತ್ತು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಶುಕ್ರವಾರ (ಡಿಸೆಂಬರ್ 12) ಕೇರಳ ನ್ಯಾಯಾಲಯ ಆದೇಶಿಸಿದೆ. ಡಿಸೆಂಬರ್...