Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್‌: ಈ ಯೋಗಿ ಹಿಮಾಲಯದವರೂ ಅಲ್ಲ, ಅವರ ಮೈಮೇಲೆ ಇರುವುದು ಹಿಮವೂ ಅಲ್ಲ!

ಫ್ಯಾಕ್ಟ್‌ಚೆಕ್‌: ಈ ಯೋಗಿ ಹಿಮಾಲಯದವರೂ ಅಲ್ಲ, ಅವರ ಮೈಮೇಲೆ ಇರುವುದು ಹಿಮವೂ ಅಲ್ಲ!

ಪ್ರಧಾನಿ ಮೋದಿ ಮತ್ತು ಅಮಿತ್‌ ಶಾ ಫಾಲೋ ಮಾಡುತ್ತಿರುವ ಟ್ವಿಟರ್‌ ಖಾತೆಯು ಈ ಚಿತ್ರವನ್ನು ಹಂಚಿಕೊಂಡಿದೆ

- Advertisement -
- Advertisement -

ಶರೀರ ಪೂರ್ತಿ ಮಂಜುಗಡ್ಡೆಯಲ್ಲಿ ಆವೃತ್ತವಾಗಿರುವಂತೆ ಕಾಣುತ್ತಿರುವ ಪದ್ಮಾಸನ ಹಾಕಿಕೊಂಡು ಕೂತಿರುವ ವ್ಯಕ್ತಿಯೊಬ್ಬರ ಕಪ್ಪುಬಿಳುಪಿನ ಚಿತ್ರವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್‌ ಆಗಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ಈ ಚಿತ್ರದಲ್ಲಿ ಇರುವ ವ್ಯಕ್ತಿಯನ್ನು ‘ಹಿಮಾಲಯದಲ್ಲಿ ಇರುವ ಯೋಗಿ’ ಎಂದು ಪ್ರತಿಪಾದಿಸಲಾಗುತ್ತಿದೆ.

ಟ್ವಿಟರ್‌ನಲ್ಲಿ ಈ ಚಿತ್ರವನ್ನು ರಿನಿತಿ ಚಟರ್ಜಿ ಎನ್ನುವ ಖಾತೆಯೊಂದು, ‘ಮಂಜುಗಡ್ಡೆಯನ್ನು ಹೊದ್ದುಕೊಂಡಿರುವ ಹಿಮಾಲಯದ ಯೋಗಿ’ ಎಂದು ಹೇಳಿಕೊಂಡಿದೆ. ಈ ಖಾತೆಯು ಸುಮಾರು ಒಂದು ಲಕ್ಷಕ್ಕೂ ಹೆಚ್ಚು ಫಾಲೋವರ್‌ ಅನ್ನು ಹೊಂದಿದೆ. ಈ ಚಿತ್ರವನ್ನು ನಿಖಿಲ್ ಠಾಕರ್‌‌ ಎನ್ನುವ ಬಿಜೆಪಿ ಬೆಂಬಲಿಗ ವ್ಯಕ್ತಿಯೊಬ್ಬರು ಹಂಚಿಕೊಂಡಿದ್ದಾರೆ. ವಿಷೇಶವೇನೆಂದರೆ ನಿಖಿಲ್ ಅವರನ್ನು ಪ್ರಧಾನಿ ನರೇಂದ್ರ ಮೋದಿ ಮತ್ತು ಅಮಿತ್‌ ಶಾ ಅವರು ಫಾಲೊ ಮಾಡುತ್ತಿದ್ದಾರೆ.

ಇದನ್ನೂ ಓದಿ:ಫ್ಯಾಕ್ಟ್‌ಚೆಕ್: ತುಮಕೂರು ಜಿಲ್ಲೆಗೆ ಮನುಷ್ಯ ರೂಪದ ವಿಚಿತ್ರ ಪ್ರಾಣಿ ಬಂದಿದ್ದು ನಿಜವೇ?

ಚಿತ್ರವು ಕೇವಲ ಟ್ವಿಟರ್‌ ಮಾತ್ರವಲ್ಲದೆ ಪೇಸ್‌ಬುಕ್‌ನಲ್ಲೂ ಹರಿದಾಡುತ್ತಿದೆ. ಫೇಸ್‌ಬುಕ್‌ನಲ್ಲಿ, “ಇಂತಹ ತಪಸ್ಸು, ಹಠಮಾರಿತನ, ಸಾಧನೆ ಇರುವುದು ಸನಾತನದಲ್ಲಿ ಮಾತ್ರ, ಇಂದ್ರಿಯಗಳನ್ನು ಗೆದ್ದುಕೊಂಡ ಸಾವಿರಾರು ಉದಾಹರಣೆಗಳಿವೆ, ಇಂತಹ ಉದಾಹರಣೆ ಬೇರೆ ಯಾವ ಸಂಸ್ಕೃತಿಯಲ್ಲಾಗಲಿ, ಧರ್ಮದಲ್ಲಾಗಲಿ ಕಾಣುವುದಿಲ್ಲ” ಎಂದು ಚಿತ್ರದಲ್ಲಿರುವ ವ್ಯಕ್ತಿ ಅತಿಮಾನುಷವಾದುದನ್ನು ಮಾಡುತ್ತಿದ್ದಾರೆ ಎಂದು ಪ್ರತಿಪಾದಿಸಲಾಗಿದೆ.

ಇದೇ ಪ್ರತಿಪಾದನೆಯನ್ನು ಟ್ವಿಟರ್‌ನಲ್ಲೂ ಮಾಡಲಾಗಿದೆ. ಅದನ್ನುಇಲ್ಲಿ ಮತ್ತು ಇಲ್ಲಿ ನೋಡಬಹುದಾಗಿದೆ. ಈ ಚಿತ್ರವನ್ನು ವೈರಲ್ ಮಾಡಿರುವ ಸಾಮಾಜಿಕ ಜಾಲತಾಣದ ಎಲ್ಲಾ ಹ್ಯಾಂಡಲ್‌ಗಳು ಬಿಜೆಪಿ ಪರವಾಗಿ ಪ್ರೊಪಗಾಂಡ ಸೃಷ್ಟಿಸುವ ಪೇಜ್‌ಗಳಾಗಿವೆ.

ಇದನ್ನೂ ಓದಿ:ಫ್ಯಾಕ್ಟ್‌ಚೆಕ್‌: ತಿರುಪತಿ ದೇವಸ್ಥಾನದ ಪುರೋಹಿತರ ಮನೆಯಲ್ಲಿ 128Kg ಚಿನ್ನ ಸಿಕ್ಕಿದ್ದು ನಿಜವೇ?

ಫ್ಯಾಕ್ಟ್‌ಚೆಕ್

ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಈ ಚಿತ್ರವನ್ನು ನಾನುಗೌರಿ.ಕಾಂ ರಿವರ್ಸ್‌ ಸರ್ಚ್ ಮೂಲಕ ಹುಡುಕಾಡಿದಾಗ ಈ ಚಿತ್ರವು ‘ಬಾಬಾ ಸರ್‌ಬಂಗಿ I’ ಎನ್ನುವ ಫೇಸ್‌ಬುಕ್‌ ಪೇಜ್‌ನಲ್ಲಿ ಪತ್ತೆಯಾಗಿದೆ. ಈ ಚಿತ್ರವನ್ನು ಮೂರು ವರ್ಷಗಳ ಹಿಂದೆ ಅಪ್‌ಲೋಡ್ ಮಾಡಲಾಗಿದೆ. ಪೇಜ್‌ನಲ್ಲಿ ಇರುವ ಈ ಚಿತ್ರವನ್ನು ಬಳಸಿಕೊಂಡು ಚಿತ್ರವನ್ನು ಕಪ್ಪುಬಿಳುಪಾಗಿ ಎಡಿಟ್‌ ಮಾಡಿ ಅದನ್ನು ವೈರಲ್ ಮಾಡಲಾಗಿದೆ.

ಫೇಸ್‌ಬುಕ್ ಪೇಜ್‌ನಲ್ಲಿ ಈ ವ್ಯಕ್ತಿಯನ್ನು ‘ಬಾಬಾ ಭಲೇ ಗಿರಿ ಜಿ ಮಹಾರಾಜ್’ ಎಂದು ಹೇಳಿಕೊಂಡಿದೆ. ಪೇಜ್‌ನಲ್ಲಿ ಇರುವ ಫೇಸ್‌ಬುಕ್‌‌ ಚಿತ್ರದಲ್ಲಿ ಕಂದು ಬಣ್ಣದ ‘ಬೂದಿ’ ಅವರ ಮೈಮೇಲೆ ಇರುವಂತೆ ಸ್ಪಷ್ಟವಾಗಿ ಕಾಣುತ್ತದೆ. ಜೊತೆಗೆ ಹಿನ್ನಲೆಯಲ್ಲಿ ‘ಬೆರಣಿ’ ಜೋಡಿಸಿರುವುದು ಕೂಡಾ ಕಾಣುತ್ತದೆ.

ಈ ಮಾಹಿತಿಯ ಎಳೆಯನ್ನು ಹುಡುಕಿಕೊಂಡು ನಾವು ಮತ್ತಷ್ಟು ಹುಡುಕಿದ್ದೇವೆ. ಈ ವ್ಯಕ್ತಿಯನ್ನು ಜನರು ‘‘ಶ್ರೀಶ್ರೀ 1008 ಮಹಂತ್‌ ಬಾಬಾ ಭಲೇ ಗಿರಿ ಜಿ ಮಹಾರಾಜ್‌” ಎಂದು ಕರೆಯುತ್ತಾರೆ. ಇದು ಹರಿಯಾಣ ರಾಜ್ಯದ ರಿಂಧಾನದಲ್ಲಿರುವ ‘ಪರಾಶರ್‌ ತೀರ್ಥ’ದಲ್ಲಿ ಮಾಡಲಾಗಿರುವ ಧಾರ್ಮಿಕ ಆಚರಣೆಯೊಂದರ ಚಿತ್ರವಾಗಿದೆ.

ಇದನ್ನೂ ಓದಿ:ಫ್ಯಾಕ್ಟ್‌ಚೆಕ್: ರಾಯಚೂರಿನಲ್ಲಿ ಏಕ್ ಮಿನಾರ್ ಮಸೀದಿ ಕೆಡವಿದಾ‌ಗ ಶಿವನ ದೇವಾಲಯ ಪತ್ತೆಯಾಯಿತೆ?

ಈ ಆಚರಣೆಯಲ್ಲಿ ಬೆರಣಿಯನ್ನು ಹಲವು ದೊಡ್ಡ ದೊಡ್ಡ ಗುಂಪಾಗಿ ಜೋಡಿಸಿ ಅದರ ನಡುವೆ ಅವರು ಕುಳಿತುಕೊಳ್ಳುತ್ತಾರೆ. ಈ ವೇಳೆ ಅವರ ಮೈಮೇಲೆ ಬೆರಣಿಯ ಬೂದಿ ಅಂಟಿಕೊಂಡಿದ್ದಾಗಿರಬಹುದಾಗಿದೆ.

ಪ್ರಸ್ತುತ ವೈರಲ್ ಆಗಿರುವ ಚಿತ್ರವು ಮೂರು ವರ್ಷಗಳಷ್ಟು ಹಳೆಯದಾದರೂ, ‘ಬಾಬಾ ಸರ್‌ಬಂಗಿ I‘ ಫೇಸ್‌ಬುಕ್ ಪೇಜ್‌ನಲ್ಲಿ ಈ ಆಚರಣೆಯ ಹಳೆಯ ಚಿತ್ರಗಳು ಮತ್ತು ಇತ್ತೀಚೆಗೆ ಕ್ಲಿಕ್ ಮಾಡಿರುವ ಚಿತ್ರಗಳು ಎಂಬಂತೆ ತೋರುವ ಹಲವಾರು ಚಿತ್ರಗಳು ಇವೆ.

ಒಟ್ಟಿನಲ್ಲಿ ಹೇಳಬಹುದಾದರೆ, ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ಈ ಚಿತ್ರವು ಯಾವುದೆ ಹಿಮಾಲಯದ ಯೋಗಿಯದ್ದಲ್ಲ ಮತ್ತು ಅವರ ಮೈಮೇಲೆ ಇರುವುದು ಹಿಮವೂ ಅಲ್ಲ. ಅವರು ಹರಿಯಾಣ ರಾಜ್ಯದವರಾಗಿದ್ದು, ಅವರ ಮೈಮೇಲೆ ಇರುವುದು ಬೂದಿಯಾಗಿದೆ.

ಇದನ್ನೂ ಓದಿ:ಫ್ಯಾಕ್ಟ್‌ಚೆಕ್‌: ಯೋಗಿ ಆದಿತ್ಯನಾಥರ ಬೆಂಗಾವಲಿನ ಮೇಲೆ ದಾಳಿ ಮಾಡಿದ ಯುವಕರ ವಿಡಿಯೊ ಈಗಿನದ್ದಲ್ಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...

ಮುಂಬೈ| ಬುರ್ಖಾ ಧರಿಸಿ ಲೋಕಲ್‌ ಟ್ರೈನ್‌ನ ಮಹಿಳಾ ಬೋಗಿಯಲ್ಲಿ ಪ್ರಯಾಣಿಸಿದ ವ್ಯಕ್ತಿ ಬಂಧನ

ಮುಂಬೈನ ಉಪನಗರ ರೈಲಿನ ಮಹಿಳಾ ಬೋಗಿಯಲ್ಲಿ ಬುರ್ಖಾ ಧರಿಸಿ ಪ್ರಯಾಣಿಸುತ್ತಿದ್ದ ಆರೋಪದ ಮೇಲೆ ನಾಸಿಕ್‌ನ 57 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ. ಈ ಘಟನೆ ಫೆಬ್ರವರಿ 6 ರಂದು ಘಾಟ್ಕೋಪರ್...

ಎಪ್‌ಸ್ಟೀನ್‌ ಫೈಲ್ಸ್ ಜನಾಕ್ರೋಶ : ಎಐ ಶೃಂಗಸಭೆಯಿಂದ ದೂರ ಉಳಿದ ಬಿಲ್‌ ಗೇಟ್ಸ್‌

ಎಪ್‌ಸ್ಟೀನ್‌ ಫೈಲ್ಸ್‌ ಮುಂದಿಟ್ಟುಕೊಂಡು ಜನರು ತೀವ್ರ ವಿರೋಧ ವ್ಯಕ್ತಪಡಿಸಿದ ಬೆನ್ನಲ್ಲೇ, 'ಇಂಡಿಯಾ ಎಐ ಇಂಪ್ಯಾಕ್ಟ್ ಶೃಂಗಸಭೆ'ಯಿಂದ ಮೈಕ್ರೋಸಾಫ್ಟ್‌ ಸಹ-ಸಂಸ್ಥಾಪಕ ಬಿಲ್ ಗೇಟ್ಸ್ ದೂರ ಉಳಿದಿದ್ದಾರೆ. ಈ ಕುರಿತು ಗೇಟ್ಸ್ ಫೌಂಡೇಶನ್ ಇಂಡಿಯಾ ಗುರುವಾರ...

ಬೆಂಗಳೂರಿನಲ್ಲಿ ರಂಜಾನ್ ಆಹಾರ ಮೇಳ ನಡೆಸದಂತೆ ಹೋಟೆಲ್‌ಗಳಿಗೆ ಎಚ್ಚರಿಕೆ

ಬೆಂಗಳೂರು: ಫ್ರೇಸರ್ ಟೌನ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿನ ಎಂಎಂ ರಸ್ತೆಯಲ್ಲಿ ರಂಜಾನ್ ಆಹಾರ ಮೇಳ ನಡೆಸದಂತೆ ಹೋಟೆಲ್ ಮಾಲೀಕರಿಗೆ ಸ್ಥಳೀಯ ನಿವಾಸಿಗಳು ಎಚ್ಚರಿಕೆ ನೀಡಿದ್ದಾರೆ. ರಂಜಾನ್ ಆಹಾರ ಮೇಳದಿಂದ ಸಂಚಾರ ದಟ್ಟಣೆ. ಅವ್ಯವಸ್ಥೆಯ ಜೊತೆಗೆ...