Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್‌: ಈ ಯೋಗಿ ಹಿಮಾಲಯದವರೂ ಅಲ್ಲ, ಅವರ ಮೈಮೇಲೆ ಇರುವುದು ಹಿಮವೂ ಅಲ್ಲ!

ಫ್ಯಾಕ್ಟ್‌ಚೆಕ್‌: ಈ ಯೋಗಿ ಹಿಮಾಲಯದವರೂ ಅಲ್ಲ, ಅವರ ಮೈಮೇಲೆ ಇರುವುದು ಹಿಮವೂ ಅಲ್ಲ!

ಪ್ರಧಾನಿ ಮೋದಿ ಮತ್ತು ಅಮಿತ್‌ ಶಾ ಫಾಲೋ ಮಾಡುತ್ತಿರುವ ಟ್ವಿಟರ್‌ ಖಾತೆಯು ಈ ಚಿತ್ರವನ್ನು ಹಂಚಿಕೊಂಡಿದೆ

- Advertisement -
- Advertisement -

ಶರೀರ ಪೂರ್ತಿ ಮಂಜುಗಡ್ಡೆಯಲ್ಲಿ ಆವೃತ್ತವಾಗಿರುವಂತೆ ಕಾಣುತ್ತಿರುವ ಪದ್ಮಾಸನ ಹಾಕಿಕೊಂಡು ಕೂತಿರುವ ವ್ಯಕ್ತಿಯೊಬ್ಬರ ಕಪ್ಪುಬಿಳುಪಿನ ಚಿತ್ರವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್‌ ಆಗಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ಈ ಚಿತ್ರದಲ್ಲಿ ಇರುವ ವ್ಯಕ್ತಿಯನ್ನು ‘ಹಿಮಾಲಯದಲ್ಲಿ ಇರುವ ಯೋಗಿ’ ಎಂದು ಪ್ರತಿಪಾದಿಸಲಾಗುತ್ತಿದೆ.

ಟ್ವಿಟರ್‌ನಲ್ಲಿ ಈ ಚಿತ್ರವನ್ನು ರಿನಿತಿ ಚಟರ್ಜಿ ಎನ್ನುವ ಖಾತೆಯೊಂದು, ‘ಮಂಜುಗಡ್ಡೆಯನ್ನು ಹೊದ್ದುಕೊಂಡಿರುವ ಹಿಮಾಲಯದ ಯೋಗಿ’ ಎಂದು ಹೇಳಿಕೊಂಡಿದೆ. ಈ ಖಾತೆಯು ಸುಮಾರು ಒಂದು ಲಕ್ಷಕ್ಕೂ ಹೆಚ್ಚು ಫಾಲೋವರ್‌ ಅನ್ನು ಹೊಂದಿದೆ. ಈ ಚಿತ್ರವನ್ನು ನಿಖಿಲ್ ಠಾಕರ್‌‌ ಎನ್ನುವ ಬಿಜೆಪಿ ಬೆಂಬಲಿಗ ವ್ಯಕ್ತಿಯೊಬ್ಬರು ಹಂಚಿಕೊಂಡಿದ್ದಾರೆ. ವಿಷೇಶವೇನೆಂದರೆ ನಿಖಿಲ್ ಅವರನ್ನು ಪ್ರಧಾನಿ ನರೇಂದ್ರ ಮೋದಿ ಮತ್ತು ಅಮಿತ್‌ ಶಾ ಅವರು ಫಾಲೊ ಮಾಡುತ್ತಿದ್ದಾರೆ.

ಇದನ್ನೂ ಓದಿ:ಫ್ಯಾಕ್ಟ್‌ಚೆಕ್: ತುಮಕೂರು ಜಿಲ್ಲೆಗೆ ಮನುಷ್ಯ ರೂಪದ ವಿಚಿತ್ರ ಪ್ರಾಣಿ ಬಂದಿದ್ದು ನಿಜವೇ?

ಚಿತ್ರವು ಕೇವಲ ಟ್ವಿಟರ್‌ ಮಾತ್ರವಲ್ಲದೆ ಪೇಸ್‌ಬುಕ್‌ನಲ್ಲೂ ಹರಿದಾಡುತ್ತಿದೆ. ಫೇಸ್‌ಬುಕ್‌ನಲ್ಲಿ, “ಇಂತಹ ತಪಸ್ಸು, ಹಠಮಾರಿತನ, ಸಾಧನೆ ಇರುವುದು ಸನಾತನದಲ್ಲಿ ಮಾತ್ರ, ಇಂದ್ರಿಯಗಳನ್ನು ಗೆದ್ದುಕೊಂಡ ಸಾವಿರಾರು ಉದಾಹರಣೆಗಳಿವೆ, ಇಂತಹ ಉದಾಹರಣೆ ಬೇರೆ ಯಾವ ಸಂಸ್ಕೃತಿಯಲ್ಲಾಗಲಿ, ಧರ್ಮದಲ್ಲಾಗಲಿ ಕಾಣುವುದಿಲ್ಲ” ಎಂದು ಚಿತ್ರದಲ್ಲಿರುವ ವ್ಯಕ್ತಿ ಅತಿಮಾನುಷವಾದುದನ್ನು ಮಾಡುತ್ತಿದ್ದಾರೆ ಎಂದು ಪ್ರತಿಪಾದಿಸಲಾಗಿದೆ.

ಇದೇ ಪ್ರತಿಪಾದನೆಯನ್ನು ಟ್ವಿಟರ್‌ನಲ್ಲೂ ಮಾಡಲಾಗಿದೆ. ಅದನ್ನುಇಲ್ಲಿ ಮತ್ತು ಇಲ್ಲಿ ನೋಡಬಹುದಾಗಿದೆ. ಈ ಚಿತ್ರವನ್ನು ವೈರಲ್ ಮಾಡಿರುವ ಸಾಮಾಜಿಕ ಜಾಲತಾಣದ ಎಲ್ಲಾ ಹ್ಯಾಂಡಲ್‌ಗಳು ಬಿಜೆಪಿ ಪರವಾಗಿ ಪ್ರೊಪಗಾಂಡ ಸೃಷ್ಟಿಸುವ ಪೇಜ್‌ಗಳಾಗಿವೆ.

ಇದನ್ನೂ ಓದಿ:ಫ್ಯಾಕ್ಟ್‌ಚೆಕ್‌: ತಿರುಪತಿ ದೇವಸ್ಥಾನದ ಪುರೋಹಿತರ ಮನೆಯಲ್ಲಿ 128Kg ಚಿನ್ನ ಸಿಕ್ಕಿದ್ದು ನಿಜವೇ?

ಫ್ಯಾಕ್ಟ್‌ಚೆಕ್

ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಈ ಚಿತ್ರವನ್ನು ನಾನುಗೌರಿ.ಕಾಂ ರಿವರ್ಸ್‌ ಸರ್ಚ್ ಮೂಲಕ ಹುಡುಕಾಡಿದಾಗ ಈ ಚಿತ್ರವು ‘ಬಾಬಾ ಸರ್‌ಬಂಗಿ I’ ಎನ್ನುವ ಫೇಸ್‌ಬುಕ್‌ ಪೇಜ್‌ನಲ್ಲಿ ಪತ್ತೆಯಾಗಿದೆ. ಈ ಚಿತ್ರವನ್ನು ಮೂರು ವರ್ಷಗಳ ಹಿಂದೆ ಅಪ್‌ಲೋಡ್ ಮಾಡಲಾಗಿದೆ. ಪೇಜ್‌ನಲ್ಲಿ ಇರುವ ಈ ಚಿತ್ರವನ್ನು ಬಳಸಿಕೊಂಡು ಚಿತ್ರವನ್ನು ಕಪ್ಪುಬಿಳುಪಾಗಿ ಎಡಿಟ್‌ ಮಾಡಿ ಅದನ್ನು ವೈರಲ್ ಮಾಡಲಾಗಿದೆ.

ಫೇಸ್‌ಬುಕ್ ಪೇಜ್‌ನಲ್ಲಿ ಈ ವ್ಯಕ್ತಿಯನ್ನು ‘ಬಾಬಾ ಭಲೇ ಗಿರಿ ಜಿ ಮಹಾರಾಜ್’ ಎಂದು ಹೇಳಿಕೊಂಡಿದೆ. ಪೇಜ್‌ನಲ್ಲಿ ಇರುವ ಫೇಸ್‌ಬುಕ್‌‌ ಚಿತ್ರದಲ್ಲಿ ಕಂದು ಬಣ್ಣದ ‘ಬೂದಿ’ ಅವರ ಮೈಮೇಲೆ ಇರುವಂತೆ ಸ್ಪಷ್ಟವಾಗಿ ಕಾಣುತ್ತದೆ. ಜೊತೆಗೆ ಹಿನ್ನಲೆಯಲ್ಲಿ ‘ಬೆರಣಿ’ ಜೋಡಿಸಿರುವುದು ಕೂಡಾ ಕಾಣುತ್ತದೆ.

ಈ ಮಾಹಿತಿಯ ಎಳೆಯನ್ನು ಹುಡುಕಿಕೊಂಡು ನಾವು ಮತ್ತಷ್ಟು ಹುಡುಕಿದ್ದೇವೆ. ಈ ವ್ಯಕ್ತಿಯನ್ನು ಜನರು ‘‘ಶ್ರೀಶ್ರೀ 1008 ಮಹಂತ್‌ ಬಾಬಾ ಭಲೇ ಗಿರಿ ಜಿ ಮಹಾರಾಜ್‌” ಎಂದು ಕರೆಯುತ್ತಾರೆ. ಇದು ಹರಿಯಾಣ ರಾಜ್ಯದ ರಿಂಧಾನದಲ್ಲಿರುವ ‘ಪರಾಶರ್‌ ತೀರ್ಥ’ದಲ್ಲಿ ಮಾಡಲಾಗಿರುವ ಧಾರ್ಮಿಕ ಆಚರಣೆಯೊಂದರ ಚಿತ್ರವಾಗಿದೆ.

ಇದನ್ನೂ ಓದಿ:ಫ್ಯಾಕ್ಟ್‌ಚೆಕ್: ರಾಯಚೂರಿನಲ್ಲಿ ಏಕ್ ಮಿನಾರ್ ಮಸೀದಿ ಕೆಡವಿದಾ‌ಗ ಶಿವನ ದೇವಾಲಯ ಪತ್ತೆಯಾಯಿತೆ?

ಈ ಆಚರಣೆಯಲ್ಲಿ ಬೆರಣಿಯನ್ನು ಹಲವು ದೊಡ್ಡ ದೊಡ್ಡ ಗುಂಪಾಗಿ ಜೋಡಿಸಿ ಅದರ ನಡುವೆ ಅವರು ಕುಳಿತುಕೊಳ್ಳುತ್ತಾರೆ. ಈ ವೇಳೆ ಅವರ ಮೈಮೇಲೆ ಬೆರಣಿಯ ಬೂದಿ ಅಂಟಿಕೊಂಡಿದ್ದಾಗಿರಬಹುದಾಗಿದೆ.

ಪ್ರಸ್ತುತ ವೈರಲ್ ಆಗಿರುವ ಚಿತ್ರವು ಮೂರು ವರ್ಷಗಳಷ್ಟು ಹಳೆಯದಾದರೂ, ‘ಬಾಬಾ ಸರ್‌ಬಂಗಿ I‘ ಫೇಸ್‌ಬುಕ್ ಪೇಜ್‌ನಲ್ಲಿ ಈ ಆಚರಣೆಯ ಹಳೆಯ ಚಿತ್ರಗಳು ಮತ್ತು ಇತ್ತೀಚೆಗೆ ಕ್ಲಿಕ್ ಮಾಡಿರುವ ಚಿತ್ರಗಳು ಎಂಬಂತೆ ತೋರುವ ಹಲವಾರು ಚಿತ್ರಗಳು ಇವೆ.

ಒಟ್ಟಿನಲ್ಲಿ ಹೇಳಬಹುದಾದರೆ, ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ಈ ಚಿತ್ರವು ಯಾವುದೆ ಹಿಮಾಲಯದ ಯೋಗಿಯದ್ದಲ್ಲ ಮತ್ತು ಅವರ ಮೈಮೇಲೆ ಇರುವುದು ಹಿಮವೂ ಅಲ್ಲ. ಅವರು ಹರಿಯಾಣ ರಾಜ್ಯದವರಾಗಿದ್ದು, ಅವರ ಮೈಮೇಲೆ ಇರುವುದು ಬೂದಿಯಾಗಿದೆ.

ಇದನ್ನೂ ಓದಿ:ಫ್ಯಾಕ್ಟ್‌ಚೆಕ್‌: ಯೋಗಿ ಆದಿತ್ಯನಾಥರ ಬೆಂಗಾವಲಿನ ಮೇಲೆ ದಾಳಿ ಮಾಡಿದ ಯುವಕರ ವಿಡಿಯೊ ಈಗಿನದ್ದಲ್ಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...