Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್‌: ಈ ಯೋಗಿ ಹಿಮಾಲಯದವರೂ ಅಲ್ಲ, ಅವರ ಮೈಮೇಲೆ ಇರುವುದು ಹಿಮವೂ ಅಲ್ಲ!

ಫ್ಯಾಕ್ಟ್‌ಚೆಕ್‌: ಈ ಯೋಗಿ ಹಿಮಾಲಯದವರೂ ಅಲ್ಲ, ಅವರ ಮೈಮೇಲೆ ಇರುವುದು ಹಿಮವೂ ಅಲ್ಲ!

ಪ್ರಧಾನಿ ಮೋದಿ ಮತ್ತು ಅಮಿತ್‌ ಶಾ ಫಾಲೋ ಮಾಡುತ್ತಿರುವ ಟ್ವಿಟರ್‌ ಖಾತೆಯು ಈ ಚಿತ್ರವನ್ನು ಹಂಚಿಕೊಂಡಿದೆ

- Advertisement -
- Advertisement -

ಶರೀರ ಪೂರ್ತಿ ಮಂಜುಗಡ್ಡೆಯಲ್ಲಿ ಆವೃತ್ತವಾಗಿರುವಂತೆ ಕಾಣುತ್ತಿರುವ ಪದ್ಮಾಸನ ಹಾಕಿಕೊಂಡು ಕೂತಿರುವ ವ್ಯಕ್ತಿಯೊಬ್ಬರ ಕಪ್ಪುಬಿಳುಪಿನ ಚಿತ್ರವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್‌ ಆಗಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ಈ ಚಿತ್ರದಲ್ಲಿ ಇರುವ ವ್ಯಕ್ತಿಯನ್ನು ‘ಹಿಮಾಲಯದಲ್ಲಿ ಇರುವ ಯೋಗಿ’ ಎಂದು ಪ್ರತಿಪಾದಿಸಲಾಗುತ್ತಿದೆ.

ಟ್ವಿಟರ್‌ನಲ್ಲಿ ಈ ಚಿತ್ರವನ್ನು ರಿನಿತಿ ಚಟರ್ಜಿ ಎನ್ನುವ ಖಾತೆಯೊಂದು, ‘ಮಂಜುಗಡ್ಡೆಯನ್ನು ಹೊದ್ದುಕೊಂಡಿರುವ ಹಿಮಾಲಯದ ಯೋಗಿ’ ಎಂದು ಹೇಳಿಕೊಂಡಿದೆ. ಈ ಖಾತೆಯು ಸುಮಾರು ಒಂದು ಲಕ್ಷಕ್ಕೂ ಹೆಚ್ಚು ಫಾಲೋವರ್‌ ಅನ್ನು ಹೊಂದಿದೆ. ಈ ಚಿತ್ರವನ್ನು ನಿಖಿಲ್ ಠಾಕರ್‌‌ ಎನ್ನುವ ಬಿಜೆಪಿ ಬೆಂಬಲಿಗ ವ್ಯಕ್ತಿಯೊಬ್ಬರು ಹಂಚಿಕೊಂಡಿದ್ದಾರೆ. ವಿಷೇಶವೇನೆಂದರೆ ನಿಖಿಲ್ ಅವರನ್ನು ಪ್ರಧಾನಿ ನರೇಂದ್ರ ಮೋದಿ ಮತ್ತು ಅಮಿತ್‌ ಶಾ ಅವರು ಫಾಲೊ ಮಾಡುತ್ತಿದ್ದಾರೆ.

ಇದನ್ನೂ ಓದಿ:ಫ್ಯಾಕ್ಟ್‌ಚೆಕ್: ತುಮಕೂರು ಜಿಲ್ಲೆಗೆ ಮನುಷ್ಯ ರೂಪದ ವಿಚಿತ್ರ ಪ್ರಾಣಿ ಬಂದಿದ್ದು ನಿಜವೇ?

ಚಿತ್ರವು ಕೇವಲ ಟ್ವಿಟರ್‌ ಮಾತ್ರವಲ್ಲದೆ ಪೇಸ್‌ಬುಕ್‌ನಲ್ಲೂ ಹರಿದಾಡುತ್ತಿದೆ. ಫೇಸ್‌ಬುಕ್‌ನಲ್ಲಿ, “ಇಂತಹ ತಪಸ್ಸು, ಹಠಮಾರಿತನ, ಸಾಧನೆ ಇರುವುದು ಸನಾತನದಲ್ಲಿ ಮಾತ್ರ, ಇಂದ್ರಿಯಗಳನ್ನು ಗೆದ್ದುಕೊಂಡ ಸಾವಿರಾರು ಉದಾಹರಣೆಗಳಿವೆ, ಇಂತಹ ಉದಾಹರಣೆ ಬೇರೆ ಯಾವ ಸಂಸ್ಕೃತಿಯಲ್ಲಾಗಲಿ, ಧರ್ಮದಲ್ಲಾಗಲಿ ಕಾಣುವುದಿಲ್ಲ” ಎಂದು ಚಿತ್ರದಲ್ಲಿರುವ ವ್ಯಕ್ತಿ ಅತಿಮಾನುಷವಾದುದನ್ನು ಮಾಡುತ್ತಿದ್ದಾರೆ ಎಂದು ಪ್ರತಿಪಾದಿಸಲಾಗಿದೆ.

ಇದೇ ಪ್ರತಿಪಾದನೆಯನ್ನು ಟ್ವಿಟರ್‌ನಲ್ಲೂ ಮಾಡಲಾಗಿದೆ. ಅದನ್ನುಇಲ್ಲಿ ಮತ್ತು ಇಲ್ಲಿ ನೋಡಬಹುದಾಗಿದೆ. ಈ ಚಿತ್ರವನ್ನು ವೈರಲ್ ಮಾಡಿರುವ ಸಾಮಾಜಿಕ ಜಾಲತಾಣದ ಎಲ್ಲಾ ಹ್ಯಾಂಡಲ್‌ಗಳು ಬಿಜೆಪಿ ಪರವಾಗಿ ಪ್ರೊಪಗಾಂಡ ಸೃಷ್ಟಿಸುವ ಪೇಜ್‌ಗಳಾಗಿವೆ.

ಇದನ್ನೂ ಓದಿ:ಫ್ಯಾಕ್ಟ್‌ಚೆಕ್‌: ತಿರುಪತಿ ದೇವಸ್ಥಾನದ ಪುರೋಹಿತರ ಮನೆಯಲ್ಲಿ 128Kg ಚಿನ್ನ ಸಿಕ್ಕಿದ್ದು ನಿಜವೇ?

ಫ್ಯಾಕ್ಟ್‌ಚೆಕ್

ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಈ ಚಿತ್ರವನ್ನು ನಾನುಗೌರಿ.ಕಾಂ ರಿವರ್ಸ್‌ ಸರ್ಚ್ ಮೂಲಕ ಹುಡುಕಾಡಿದಾಗ ಈ ಚಿತ್ರವು ‘ಬಾಬಾ ಸರ್‌ಬಂಗಿ I’ ಎನ್ನುವ ಫೇಸ್‌ಬುಕ್‌ ಪೇಜ್‌ನಲ್ಲಿ ಪತ್ತೆಯಾಗಿದೆ. ಈ ಚಿತ್ರವನ್ನು ಮೂರು ವರ್ಷಗಳ ಹಿಂದೆ ಅಪ್‌ಲೋಡ್ ಮಾಡಲಾಗಿದೆ. ಪೇಜ್‌ನಲ್ಲಿ ಇರುವ ಈ ಚಿತ್ರವನ್ನು ಬಳಸಿಕೊಂಡು ಚಿತ್ರವನ್ನು ಕಪ್ಪುಬಿಳುಪಾಗಿ ಎಡಿಟ್‌ ಮಾಡಿ ಅದನ್ನು ವೈರಲ್ ಮಾಡಲಾಗಿದೆ.

ಫೇಸ್‌ಬುಕ್ ಪೇಜ್‌ನಲ್ಲಿ ಈ ವ್ಯಕ್ತಿಯನ್ನು ‘ಬಾಬಾ ಭಲೇ ಗಿರಿ ಜಿ ಮಹಾರಾಜ್’ ಎಂದು ಹೇಳಿಕೊಂಡಿದೆ. ಪೇಜ್‌ನಲ್ಲಿ ಇರುವ ಫೇಸ್‌ಬುಕ್‌‌ ಚಿತ್ರದಲ್ಲಿ ಕಂದು ಬಣ್ಣದ ‘ಬೂದಿ’ ಅವರ ಮೈಮೇಲೆ ಇರುವಂತೆ ಸ್ಪಷ್ಟವಾಗಿ ಕಾಣುತ್ತದೆ. ಜೊತೆಗೆ ಹಿನ್ನಲೆಯಲ್ಲಿ ‘ಬೆರಣಿ’ ಜೋಡಿಸಿರುವುದು ಕೂಡಾ ಕಾಣುತ್ತದೆ.

ಈ ಮಾಹಿತಿಯ ಎಳೆಯನ್ನು ಹುಡುಕಿಕೊಂಡು ನಾವು ಮತ್ತಷ್ಟು ಹುಡುಕಿದ್ದೇವೆ. ಈ ವ್ಯಕ್ತಿಯನ್ನು ಜನರು ‘‘ಶ್ರೀಶ್ರೀ 1008 ಮಹಂತ್‌ ಬಾಬಾ ಭಲೇ ಗಿರಿ ಜಿ ಮಹಾರಾಜ್‌” ಎಂದು ಕರೆಯುತ್ತಾರೆ. ಇದು ಹರಿಯಾಣ ರಾಜ್ಯದ ರಿಂಧಾನದಲ್ಲಿರುವ ‘ಪರಾಶರ್‌ ತೀರ್ಥ’ದಲ್ಲಿ ಮಾಡಲಾಗಿರುವ ಧಾರ್ಮಿಕ ಆಚರಣೆಯೊಂದರ ಚಿತ್ರವಾಗಿದೆ.

ಇದನ್ನೂ ಓದಿ:ಫ್ಯಾಕ್ಟ್‌ಚೆಕ್: ರಾಯಚೂರಿನಲ್ಲಿ ಏಕ್ ಮಿನಾರ್ ಮಸೀದಿ ಕೆಡವಿದಾ‌ಗ ಶಿವನ ದೇವಾಲಯ ಪತ್ತೆಯಾಯಿತೆ?

ಈ ಆಚರಣೆಯಲ್ಲಿ ಬೆರಣಿಯನ್ನು ಹಲವು ದೊಡ್ಡ ದೊಡ್ಡ ಗುಂಪಾಗಿ ಜೋಡಿಸಿ ಅದರ ನಡುವೆ ಅವರು ಕುಳಿತುಕೊಳ್ಳುತ್ತಾರೆ. ಈ ವೇಳೆ ಅವರ ಮೈಮೇಲೆ ಬೆರಣಿಯ ಬೂದಿ ಅಂಟಿಕೊಂಡಿದ್ದಾಗಿರಬಹುದಾಗಿದೆ.

ಪ್ರಸ್ತುತ ವೈರಲ್ ಆಗಿರುವ ಚಿತ್ರವು ಮೂರು ವರ್ಷಗಳಷ್ಟು ಹಳೆಯದಾದರೂ, ‘ಬಾಬಾ ಸರ್‌ಬಂಗಿ I‘ ಫೇಸ್‌ಬುಕ್ ಪೇಜ್‌ನಲ್ಲಿ ಈ ಆಚರಣೆಯ ಹಳೆಯ ಚಿತ್ರಗಳು ಮತ್ತು ಇತ್ತೀಚೆಗೆ ಕ್ಲಿಕ್ ಮಾಡಿರುವ ಚಿತ್ರಗಳು ಎಂಬಂತೆ ತೋರುವ ಹಲವಾರು ಚಿತ್ರಗಳು ಇವೆ.

ಒಟ್ಟಿನಲ್ಲಿ ಹೇಳಬಹುದಾದರೆ, ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ಈ ಚಿತ್ರವು ಯಾವುದೆ ಹಿಮಾಲಯದ ಯೋಗಿಯದ್ದಲ್ಲ ಮತ್ತು ಅವರ ಮೈಮೇಲೆ ಇರುವುದು ಹಿಮವೂ ಅಲ್ಲ. ಅವರು ಹರಿಯಾಣ ರಾಜ್ಯದವರಾಗಿದ್ದು, ಅವರ ಮೈಮೇಲೆ ಇರುವುದು ಬೂದಿಯಾಗಿದೆ.

ಇದನ್ನೂ ಓದಿ:ಫ್ಯಾಕ್ಟ್‌ಚೆಕ್‌: ಯೋಗಿ ಆದಿತ್ಯನಾಥರ ಬೆಂಗಾವಲಿನ ಮೇಲೆ ದಾಳಿ ಮಾಡಿದ ಯುವಕರ ವಿಡಿಯೊ ಈಗಿನದ್ದಲ್ಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...