Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್‌: ಈ ಯೋಗಿ ಹಿಮಾಲಯದವರೂ ಅಲ್ಲ, ಅವರ ಮೈಮೇಲೆ ಇರುವುದು ಹಿಮವೂ ಅಲ್ಲ!

ಫ್ಯಾಕ್ಟ್‌ಚೆಕ್‌: ಈ ಯೋಗಿ ಹಿಮಾಲಯದವರೂ ಅಲ್ಲ, ಅವರ ಮೈಮೇಲೆ ಇರುವುದು ಹಿಮವೂ ಅಲ್ಲ!

ಪ್ರಧಾನಿ ಮೋದಿ ಮತ್ತು ಅಮಿತ್‌ ಶಾ ಫಾಲೋ ಮಾಡುತ್ತಿರುವ ಟ್ವಿಟರ್‌ ಖಾತೆಯು ಈ ಚಿತ್ರವನ್ನು ಹಂಚಿಕೊಂಡಿದೆ

- Advertisement -
- Advertisement -

ಶರೀರ ಪೂರ್ತಿ ಮಂಜುಗಡ್ಡೆಯಲ್ಲಿ ಆವೃತ್ತವಾಗಿರುವಂತೆ ಕಾಣುತ್ತಿರುವ ಪದ್ಮಾಸನ ಹಾಕಿಕೊಂಡು ಕೂತಿರುವ ವ್ಯಕ್ತಿಯೊಬ್ಬರ ಕಪ್ಪುಬಿಳುಪಿನ ಚಿತ್ರವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್‌ ಆಗಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ಈ ಚಿತ್ರದಲ್ಲಿ ಇರುವ ವ್ಯಕ್ತಿಯನ್ನು ‘ಹಿಮಾಲಯದಲ್ಲಿ ಇರುವ ಯೋಗಿ’ ಎಂದು ಪ್ರತಿಪಾದಿಸಲಾಗುತ್ತಿದೆ.

ಟ್ವಿಟರ್‌ನಲ್ಲಿ ಈ ಚಿತ್ರವನ್ನು ರಿನಿತಿ ಚಟರ್ಜಿ ಎನ್ನುವ ಖಾತೆಯೊಂದು, ‘ಮಂಜುಗಡ್ಡೆಯನ್ನು ಹೊದ್ದುಕೊಂಡಿರುವ ಹಿಮಾಲಯದ ಯೋಗಿ’ ಎಂದು ಹೇಳಿಕೊಂಡಿದೆ. ಈ ಖಾತೆಯು ಸುಮಾರು ಒಂದು ಲಕ್ಷಕ್ಕೂ ಹೆಚ್ಚು ಫಾಲೋವರ್‌ ಅನ್ನು ಹೊಂದಿದೆ. ಈ ಚಿತ್ರವನ್ನು ನಿಖಿಲ್ ಠಾಕರ್‌‌ ಎನ್ನುವ ಬಿಜೆಪಿ ಬೆಂಬಲಿಗ ವ್ಯಕ್ತಿಯೊಬ್ಬರು ಹಂಚಿಕೊಂಡಿದ್ದಾರೆ. ವಿಷೇಶವೇನೆಂದರೆ ನಿಖಿಲ್ ಅವರನ್ನು ಪ್ರಧಾನಿ ನರೇಂದ್ರ ಮೋದಿ ಮತ್ತು ಅಮಿತ್‌ ಶಾ ಅವರು ಫಾಲೊ ಮಾಡುತ್ತಿದ್ದಾರೆ.

ಇದನ್ನೂ ಓದಿ:ಫ್ಯಾಕ್ಟ್‌ಚೆಕ್: ತುಮಕೂರು ಜಿಲ್ಲೆಗೆ ಮನುಷ್ಯ ರೂಪದ ವಿಚಿತ್ರ ಪ್ರಾಣಿ ಬಂದಿದ್ದು ನಿಜವೇ?

ಚಿತ್ರವು ಕೇವಲ ಟ್ವಿಟರ್‌ ಮಾತ್ರವಲ್ಲದೆ ಪೇಸ್‌ಬುಕ್‌ನಲ್ಲೂ ಹರಿದಾಡುತ್ತಿದೆ. ಫೇಸ್‌ಬುಕ್‌ನಲ್ಲಿ, “ಇಂತಹ ತಪಸ್ಸು, ಹಠಮಾರಿತನ, ಸಾಧನೆ ಇರುವುದು ಸನಾತನದಲ್ಲಿ ಮಾತ್ರ, ಇಂದ್ರಿಯಗಳನ್ನು ಗೆದ್ದುಕೊಂಡ ಸಾವಿರಾರು ಉದಾಹರಣೆಗಳಿವೆ, ಇಂತಹ ಉದಾಹರಣೆ ಬೇರೆ ಯಾವ ಸಂಸ್ಕೃತಿಯಲ್ಲಾಗಲಿ, ಧರ್ಮದಲ್ಲಾಗಲಿ ಕಾಣುವುದಿಲ್ಲ” ಎಂದು ಚಿತ್ರದಲ್ಲಿರುವ ವ್ಯಕ್ತಿ ಅತಿಮಾನುಷವಾದುದನ್ನು ಮಾಡುತ್ತಿದ್ದಾರೆ ಎಂದು ಪ್ರತಿಪಾದಿಸಲಾಗಿದೆ.

ಇದೇ ಪ್ರತಿಪಾದನೆಯನ್ನು ಟ್ವಿಟರ್‌ನಲ್ಲೂ ಮಾಡಲಾಗಿದೆ. ಅದನ್ನುಇಲ್ಲಿ ಮತ್ತು ಇಲ್ಲಿ ನೋಡಬಹುದಾಗಿದೆ. ಈ ಚಿತ್ರವನ್ನು ವೈರಲ್ ಮಾಡಿರುವ ಸಾಮಾಜಿಕ ಜಾಲತಾಣದ ಎಲ್ಲಾ ಹ್ಯಾಂಡಲ್‌ಗಳು ಬಿಜೆಪಿ ಪರವಾಗಿ ಪ್ರೊಪಗಾಂಡ ಸೃಷ್ಟಿಸುವ ಪೇಜ್‌ಗಳಾಗಿವೆ.

ಇದನ್ನೂ ಓದಿ:ಫ್ಯಾಕ್ಟ್‌ಚೆಕ್‌: ತಿರುಪತಿ ದೇವಸ್ಥಾನದ ಪುರೋಹಿತರ ಮನೆಯಲ್ಲಿ 128Kg ಚಿನ್ನ ಸಿಕ್ಕಿದ್ದು ನಿಜವೇ?

ಫ್ಯಾಕ್ಟ್‌ಚೆಕ್

ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಈ ಚಿತ್ರವನ್ನು ನಾನುಗೌರಿ.ಕಾಂ ರಿವರ್ಸ್‌ ಸರ್ಚ್ ಮೂಲಕ ಹುಡುಕಾಡಿದಾಗ ಈ ಚಿತ್ರವು ‘ಬಾಬಾ ಸರ್‌ಬಂಗಿ I’ ಎನ್ನುವ ಫೇಸ್‌ಬುಕ್‌ ಪೇಜ್‌ನಲ್ಲಿ ಪತ್ತೆಯಾಗಿದೆ. ಈ ಚಿತ್ರವನ್ನು ಮೂರು ವರ್ಷಗಳ ಹಿಂದೆ ಅಪ್‌ಲೋಡ್ ಮಾಡಲಾಗಿದೆ. ಪೇಜ್‌ನಲ್ಲಿ ಇರುವ ಈ ಚಿತ್ರವನ್ನು ಬಳಸಿಕೊಂಡು ಚಿತ್ರವನ್ನು ಕಪ್ಪುಬಿಳುಪಾಗಿ ಎಡಿಟ್‌ ಮಾಡಿ ಅದನ್ನು ವೈರಲ್ ಮಾಡಲಾಗಿದೆ.

ಫೇಸ್‌ಬುಕ್ ಪೇಜ್‌ನಲ್ಲಿ ಈ ವ್ಯಕ್ತಿಯನ್ನು ‘ಬಾಬಾ ಭಲೇ ಗಿರಿ ಜಿ ಮಹಾರಾಜ್’ ಎಂದು ಹೇಳಿಕೊಂಡಿದೆ. ಪೇಜ್‌ನಲ್ಲಿ ಇರುವ ಫೇಸ್‌ಬುಕ್‌‌ ಚಿತ್ರದಲ್ಲಿ ಕಂದು ಬಣ್ಣದ ‘ಬೂದಿ’ ಅವರ ಮೈಮೇಲೆ ಇರುವಂತೆ ಸ್ಪಷ್ಟವಾಗಿ ಕಾಣುತ್ತದೆ. ಜೊತೆಗೆ ಹಿನ್ನಲೆಯಲ್ಲಿ ‘ಬೆರಣಿ’ ಜೋಡಿಸಿರುವುದು ಕೂಡಾ ಕಾಣುತ್ತದೆ.

ಈ ಮಾಹಿತಿಯ ಎಳೆಯನ್ನು ಹುಡುಕಿಕೊಂಡು ನಾವು ಮತ್ತಷ್ಟು ಹುಡುಕಿದ್ದೇವೆ. ಈ ವ್ಯಕ್ತಿಯನ್ನು ಜನರು ‘‘ಶ್ರೀಶ್ರೀ 1008 ಮಹಂತ್‌ ಬಾಬಾ ಭಲೇ ಗಿರಿ ಜಿ ಮಹಾರಾಜ್‌” ಎಂದು ಕರೆಯುತ್ತಾರೆ. ಇದು ಹರಿಯಾಣ ರಾಜ್ಯದ ರಿಂಧಾನದಲ್ಲಿರುವ ‘ಪರಾಶರ್‌ ತೀರ್ಥ’ದಲ್ಲಿ ಮಾಡಲಾಗಿರುವ ಧಾರ್ಮಿಕ ಆಚರಣೆಯೊಂದರ ಚಿತ್ರವಾಗಿದೆ.

ಇದನ್ನೂ ಓದಿ:ಫ್ಯಾಕ್ಟ್‌ಚೆಕ್: ರಾಯಚೂರಿನಲ್ಲಿ ಏಕ್ ಮಿನಾರ್ ಮಸೀದಿ ಕೆಡವಿದಾ‌ಗ ಶಿವನ ದೇವಾಲಯ ಪತ್ತೆಯಾಯಿತೆ?

ಈ ಆಚರಣೆಯಲ್ಲಿ ಬೆರಣಿಯನ್ನು ಹಲವು ದೊಡ್ಡ ದೊಡ್ಡ ಗುಂಪಾಗಿ ಜೋಡಿಸಿ ಅದರ ನಡುವೆ ಅವರು ಕುಳಿತುಕೊಳ್ಳುತ್ತಾರೆ. ಈ ವೇಳೆ ಅವರ ಮೈಮೇಲೆ ಬೆರಣಿಯ ಬೂದಿ ಅಂಟಿಕೊಂಡಿದ್ದಾಗಿರಬಹುದಾಗಿದೆ.

ಪ್ರಸ್ತುತ ವೈರಲ್ ಆಗಿರುವ ಚಿತ್ರವು ಮೂರು ವರ್ಷಗಳಷ್ಟು ಹಳೆಯದಾದರೂ, ‘ಬಾಬಾ ಸರ್‌ಬಂಗಿ I‘ ಫೇಸ್‌ಬುಕ್ ಪೇಜ್‌ನಲ್ಲಿ ಈ ಆಚರಣೆಯ ಹಳೆಯ ಚಿತ್ರಗಳು ಮತ್ತು ಇತ್ತೀಚೆಗೆ ಕ್ಲಿಕ್ ಮಾಡಿರುವ ಚಿತ್ರಗಳು ಎಂಬಂತೆ ತೋರುವ ಹಲವಾರು ಚಿತ್ರಗಳು ಇವೆ.

ಒಟ್ಟಿನಲ್ಲಿ ಹೇಳಬಹುದಾದರೆ, ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ಈ ಚಿತ್ರವು ಯಾವುದೆ ಹಿಮಾಲಯದ ಯೋಗಿಯದ್ದಲ್ಲ ಮತ್ತು ಅವರ ಮೈಮೇಲೆ ಇರುವುದು ಹಿಮವೂ ಅಲ್ಲ. ಅವರು ಹರಿಯಾಣ ರಾಜ್ಯದವರಾಗಿದ್ದು, ಅವರ ಮೈಮೇಲೆ ಇರುವುದು ಬೂದಿಯಾಗಿದೆ.

ಇದನ್ನೂ ಓದಿ:ಫ್ಯಾಕ್ಟ್‌ಚೆಕ್‌: ಯೋಗಿ ಆದಿತ್ಯನಾಥರ ಬೆಂಗಾವಲಿನ ಮೇಲೆ ದಾಳಿ ಮಾಡಿದ ಯುವಕರ ವಿಡಿಯೊ ಈಗಿನದ್ದಲ್ಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ರೈತರ ವಿಚಾರದಲ್ಲಿ ಸರ್ಕಾರದ ನಿರ್ಧಾರ ಸ್ವಾಗತಾರ್ಹ ಆದರೆ.., ಸಂಯುಕ್ತ ಹೋರಾಟ ಸಮಿತಿಯ ಎಚ್ಚರಿಕೆಯ ಮಾತು

ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಬಲವಂತವಾಗಿ ಯಾವುದೇ ರೈತರ ಭೂಮಿ ಕಿತ್ತುಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳುತ್ತಿರುವುದು ಕೇವಲ ಮಾತಿನ ಜಾಣ್ಮೆಯಷ್ಟೇ. ಬಿಡದಿ ಭಾಗದ ಮೂರು ಗ್ರಾಮಗಳಿಗೆ ಹೊರಡಿಸಲಾಗಿರುವ ಭೂಸ್ವಾಧೀನದ ಅಂತಿಮ ಅಧಿಸೂಚನೆಯನ್ನು ಸಂಪೂರ್ಣವಾಗಿ...

“8.5 ಕೆಜಿ ತೂಕ ಇಳಿಸಿಕೊಂಡ ಸೋನಮ್ ವಾಂಗ್‌ಚುಕ್ ಜೀವಕ್ಕೆ ಅಪಾಯ: ಬಲವಂತ ಆಹಾರ ನೀಡುವಂತೆ ದೆಹಲಿ ಹೈಕೋರ್ಟ್‌ನಲ್ಲಿ ಪಿಐಎಲ್”

ದೇಶದ ಶೈಕ್ಷಣಿಕ ವ್ಯವಸ್ಥೆಯ ಭವಿಷ್ಯವನ್ನು ಗಾಳಿಗೆ ತೂರಿರುವ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಸಾಲು ಸಾಲು ಭ್ರಷ್ಟಾಚಾರದ ವಿರುದ್ಧ ಸಿಡಿದೆದ್ದು, ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪ್ರಖ್ಯಾತ ಹವಾಮಾನ ಮತ್ತು...

ಇನ್‌ಸ್ಟಾಮಾರ್ಟ್‌ನಲ್ಲಿ ಸಿಗಲಿದೆ ಎಲ್‌ಪಿಜಿ ಸಿಲಿಂಡರ್: ಬೆಂಗಳೂರಿನಲ್ಲಿ ಹೊಸ ಸೇವೆ ಆರಂಭ!

ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರಿನ ಗ್ರಾಹಕರು ಇನ್ನು ಮುಂದೆ ಪ್ರಮುಖ ಕ್ವಿಕ್ ಕಾಮರ್ಸ್ ಸಂಸ್ಥೆಯಾದ 'ಇನ್‌ಸ್ಟಾಮಾರ್ಟ್' (Instamart) ಆ್ಯಪ್ ಮೂಲಕವೇ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳನ್ನು ಬುಕ್ ಮಾಡಬಹುದು. ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್...

ಬಿಡದಿ ರೈತರ ಹೋರಾಟಕ್ಕೆ ಜಯ: ಬಲವಂತವಾಗಿ ಒಬ್ಬೇ ಒಬ್ಬ ರೈತರ ಜಮೀನನ್ನೂ ಪಡೆಯಲ್ಲ ಸಿಎಂ ಡಿ.ಕೆ.ಶಿವಕುಮಾರ್

"ಬಿಡದಿ ಸ್ಮಾರ್ಟ್ ಸಿಟಿ/ಟೌನ್ ಶಿಪ್ ಯೋಜನೆಯ ಹೆಸರಿನಲ್ಲಿ ಬಲವಂತವಾಗಿ ಒಬ್ಬೇ ಒಬ್ಬ ರೈತರ ಅಥವಾ ರೈತ ಮಹಿಳೆಯರ ಜಮೀನನ್ನು ನಮ್ಮ ಸರ್ಕಾರ ಭೂಸ್ವಾಧೀನ ಮಾಡಿಕೊಳ್ಳುವುದಿಲ್ಲ," ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಬಿಡದಿ ಟೌನ್‌ಶಿಪ್...

ಪಶ್ಚಿಮ ಬಂಗಾಳ: TMC ಬಂಡಾಯ ನಾಯಕ ರಿತಬ್ರತ ಬ್ಯಾನರ್ಜಿಗೆ ವಿಪಕ್ಷ ಸ್ಥಾನ ನೀಡಿದ್ದಕ್ಕೆ ನ್ಯಾಯಾಧೀಶರ ತೀವ್ರ ಆಕ್ಷೇಪ

ತೃಣಮೂಲ ಕಾಂಗ್ರೆಸ್‌ನ ಬಂಡಾಯ ಬಣದ ಮುಖ್ಯಸ್ಥ ರಿತಬ್ರತ ಬ್ಯಾನರ್ಜಿ ಅವರನ್ನು ಪಶ್ಚಿಮ ಬಂಗಾಳದ ವಿಧಾನಸಭೆಯ ವಿರೋಧ ಪಕ್ಷದ ನಾಯಕರನ್ನಾಗಿ ನೇಮಕ ಮಾಡುವಲ್ಲಿ ಸ್ಪೀಕರ್ ರತೀಂದ್ರ ಬೋಸ್ ತೋರಿರುವ "ತರಾತುರಿ"ಯನ್ನು ಕಲ್ಕತ್ತಾ ಹೈಕೋರ್ಟ್‌ನ ನ್ಯಾಯಮೂರ್ತಿ...

ಎರಡು ವರ್ಷಗಳಲ್ಲಿ 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ; ಇವರಲ್ಲಿ 193 ಮಂದಿ ವಿದೇಶಿಯರೆಂದು ಘೋಷಿತರು: ಅಸ್ಸಾಂ ಸರ್ಕಾರ

ಗುವಾಹಟಿ: ಕಳೆದ ಎರಡು ವರ್ಷಗಳ ಅವಧಿಯಲ್ಲಿ ಗಡೀಪಾರು, ಗಡಿಯಿಂದ ಆಚೆಗೆ ತಳ್ಳುವಿಕೆ (ಪುಶ್‌ಬ್ಯಾಕ್) ಅಥವಾ ಉಚ್ಚಾಟನೆ ಪ್ರಕ್ರಿಯೆಯ ಮೂಲಕ ಒಟ್ಟು 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ ಎಂದು ಅಸ್ಸಾಂ ಸರ್ಕಾರ ರಾಜ್ಯ ವಿಧಾನಸಭೆಗೆ...

17 ದಿನ, 9 ಕೆಜಿ ತೂಕ ಇಳಿಕೆ, ಸೋನಮ್ ವಾಂಗ್‌ಚುಕ್ ಆರೋಗ್ಯ ಸ್ಥಿತಿ ಗಂಭೀರ: ಉಪವಾಸ ಕೈಬಿಡುವಂತೆ ಅಖಿಲೇಶ್-ಕೇಜ್ರಿವಾಲ್ ಮನವಿ

ದೇಶದ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಸರಣಿ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಭ್ರಷ್ಟಾಚಾರವನ್ನು ವಿರೋಧಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಖ್ಯಾತ ಪರಿಸರ ಕಾರ್ಯಕರ್ತ ಸೋನಮ್...

ಎನ್‌ಸಿಪಿಯ ಎರಡೂ ಬಣಗಳಲ್ಲೂ ಬಿರುಸಿನ ಬೆಳವಣಿಗೆ : ಬಿಜೆಪಿ ತೆಕ್ಕೆಗೆ ಮತ್ತೊಂದು ಪಕ್ಷ?

ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿಯ (ಎನ್‌ಸಿಪಿ) ಎರಡೂ ಬಣಗಳ ಮುಖ್ಯ ನಾಯಕರು ಮಂಗಳವಾರ (ಜು.14) ರಾತ್ರಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಈ ಸಭೆಯು ಶರದ್ ಪವಾರ್ ಅವರ...

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...