Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್‌: ಈ ಯೋಗಿ ಹಿಮಾಲಯದವರೂ ಅಲ್ಲ, ಅವರ ಮೈಮೇಲೆ ಇರುವುದು ಹಿಮವೂ ಅಲ್ಲ!

ಫ್ಯಾಕ್ಟ್‌ಚೆಕ್‌: ಈ ಯೋಗಿ ಹಿಮಾಲಯದವರೂ ಅಲ್ಲ, ಅವರ ಮೈಮೇಲೆ ಇರುವುದು ಹಿಮವೂ ಅಲ್ಲ!

ಪ್ರಧಾನಿ ಮೋದಿ ಮತ್ತು ಅಮಿತ್‌ ಶಾ ಫಾಲೋ ಮಾಡುತ್ತಿರುವ ಟ್ವಿಟರ್‌ ಖಾತೆಯು ಈ ಚಿತ್ರವನ್ನು ಹಂಚಿಕೊಂಡಿದೆ

- Advertisement -
- Advertisement -

ಶರೀರ ಪೂರ್ತಿ ಮಂಜುಗಡ್ಡೆಯಲ್ಲಿ ಆವೃತ್ತವಾಗಿರುವಂತೆ ಕಾಣುತ್ತಿರುವ ಪದ್ಮಾಸನ ಹಾಕಿಕೊಂಡು ಕೂತಿರುವ ವ್ಯಕ್ತಿಯೊಬ್ಬರ ಕಪ್ಪುಬಿಳುಪಿನ ಚಿತ್ರವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್‌ ಆಗಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ಈ ಚಿತ್ರದಲ್ಲಿ ಇರುವ ವ್ಯಕ್ತಿಯನ್ನು ‘ಹಿಮಾಲಯದಲ್ಲಿ ಇರುವ ಯೋಗಿ’ ಎಂದು ಪ್ರತಿಪಾದಿಸಲಾಗುತ್ತಿದೆ.

ಟ್ವಿಟರ್‌ನಲ್ಲಿ ಈ ಚಿತ್ರವನ್ನು ರಿನಿತಿ ಚಟರ್ಜಿ ಎನ್ನುವ ಖಾತೆಯೊಂದು, ‘ಮಂಜುಗಡ್ಡೆಯನ್ನು ಹೊದ್ದುಕೊಂಡಿರುವ ಹಿಮಾಲಯದ ಯೋಗಿ’ ಎಂದು ಹೇಳಿಕೊಂಡಿದೆ. ಈ ಖಾತೆಯು ಸುಮಾರು ಒಂದು ಲಕ್ಷಕ್ಕೂ ಹೆಚ್ಚು ಫಾಲೋವರ್‌ ಅನ್ನು ಹೊಂದಿದೆ. ಈ ಚಿತ್ರವನ್ನು ನಿಖಿಲ್ ಠಾಕರ್‌‌ ಎನ್ನುವ ಬಿಜೆಪಿ ಬೆಂಬಲಿಗ ವ್ಯಕ್ತಿಯೊಬ್ಬರು ಹಂಚಿಕೊಂಡಿದ್ದಾರೆ. ವಿಷೇಶವೇನೆಂದರೆ ನಿಖಿಲ್ ಅವರನ್ನು ಪ್ರಧಾನಿ ನರೇಂದ್ರ ಮೋದಿ ಮತ್ತು ಅಮಿತ್‌ ಶಾ ಅವರು ಫಾಲೊ ಮಾಡುತ್ತಿದ್ದಾರೆ.

ಇದನ್ನೂ ಓದಿ:ಫ್ಯಾಕ್ಟ್‌ಚೆಕ್: ತುಮಕೂರು ಜಿಲ್ಲೆಗೆ ಮನುಷ್ಯ ರೂಪದ ವಿಚಿತ್ರ ಪ್ರಾಣಿ ಬಂದಿದ್ದು ನಿಜವೇ?

ಚಿತ್ರವು ಕೇವಲ ಟ್ವಿಟರ್‌ ಮಾತ್ರವಲ್ಲದೆ ಪೇಸ್‌ಬುಕ್‌ನಲ್ಲೂ ಹರಿದಾಡುತ್ತಿದೆ. ಫೇಸ್‌ಬುಕ್‌ನಲ್ಲಿ, “ಇಂತಹ ತಪಸ್ಸು, ಹಠಮಾರಿತನ, ಸಾಧನೆ ಇರುವುದು ಸನಾತನದಲ್ಲಿ ಮಾತ್ರ, ಇಂದ್ರಿಯಗಳನ್ನು ಗೆದ್ದುಕೊಂಡ ಸಾವಿರಾರು ಉದಾಹರಣೆಗಳಿವೆ, ಇಂತಹ ಉದಾಹರಣೆ ಬೇರೆ ಯಾವ ಸಂಸ್ಕೃತಿಯಲ್ಲಾಗಲಿ, ಧರ್ಮದಲ್ಲಾಗಲಿ ಕಾಣುವುದಿಲ್ಲ” ಎಂದು ಚಿತ್ರದಲ್ಲಿರುವ ವ್ಯಕ್ತಿ ಅತಿಮಾನುಷವಾದುದನ್ನು ಮಾಡುತ್ತಿದ್ದಾರೆ ಎಂದು ಪ್ರತಿಪಾದಿಸಲಾಗಿದೆ.

ಇದೇ ಪ್ರತಿಪಾದನೆಯನ್ನು ಟ್ವಿಟರ್‌ನಲ್ಲೂ ಮಾಡಲಾಗಿದೆ. ಅದನ್ನುಇಲ್ಲಿ ಮತ್ತು ಇಲ್ಲಿ ನೋಡಬಹುದಾಗಿದೆ. ಈ ಚಿತ್ರವನ್ನು ವೈರಲ್ ಮಾಡಿರುವ ಸಾಮಾಜಿಕ ಜಾಲತಾಣದ ಎಲ್ಲಾ ಹ್ಯಾಂಡಲ್‌ಗಳು ಬಿಜೆಪಿ ಪರವಾಗಿ ಪ್ರೊಪಗಾಂಡ ಸೃಷ್ಟಿಸುವ ಪೇಜ್‌ಗಳಾಗಿವೆ.

ಇದನ್ನೂ ಓದಿ:ಫ್ಯಾಕ್ಟ್‌ಚೆಕ್‌: ತಿರುಪತಿ ದೇವಸ್ಥಾನದ ಪುರೋಹಿತರ ಮನೆಯಲ್ಲಿ 128Kg ಚಿನ್ನ ಸಿಕ್ಕಿದ್ದು ನಿಜವೇ?

ಫ್ಯಾಕ್ಟ್‌ಚೆಕ್

ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಈ ಚಿತ್ರವನ್ನು ನಾನುಗೌರಿ.ಕಾಂ ರಿವರ್ಸ್‌ ಸರ್ಚ್ ಮೂಲಕ ಹುಡುಕಾಡಿದಾಗ ಈ ಚಿತ್ರವು ‘ಬಾಬಾ ಸರ್‌ಬಂಗಿ I’ ಎನ್ನುವ ಫೇಸ್‌ಬುಕ್‌ ಪೇಜ್‌ನಲ್ಲಿ ಪತ್ತೆಯಾಗಿದೆ. ಈ ಚಿತ್ರವನ್ನು ಮೂರು ವರ್ಷಗಳ ಹಿಂದೆ ಅಪ್‌ಲೋಡ್ ಮಾಡಲಾಗಿದೆ. ಪೇಜ್‌ನಲ್ಲಿ ಇರುವ ಈ ಚಿತ್ರವನ್ನು ಬಳಸಿಕೊಂಡು ಚಿತ್ರವನ್ನು ಕಪ್ಪುಬಿಳುಪಾಗಿ ಎಡಿಟ್‌ ಮಾಡಿ ಅದನ್ನು ವೈರಲ್ ಮಾಡಲಾಗಿದೆ.

ಫೇಸ್‌ಬುಕ್ ಪೇಜ್‌ನಲ್ಲಿ ಈ ವ್ಯಕ್ತಿಯನ್ನು ‘ಬಾಬಾ ಭಲೇ ಗಿರಿ ಜಿ ಮಹಾರಾಜ್’ ಎಂದು ಹೇಳಿಕೊಂಡಿದೆ. ಪೇಜ್‌ನಲ್ಲಿ ಇರುವ ಫೇಸ್‌ಬುಕ್‌‌ ಚಿತ್ರದಲ್ಲಿ ಕಂದು ಬಣ್ಣದ ‘ಬೂದಿ’ ಅವರ ಮೈಮೇಲೆ ಇರುವಂತೆ ಸ್ಪಷ್ಟವಾಗಿ ಕಾಣುತ್ತದೆ. ಜೊತೆಗೆ ಹಿನ್ನಲೆಯಲ್ಲಿ ‘ಬೆರಣಿ’ ಜೋಡಿಸಿರುವುದು ಕೂಡಾ ಕಾಣುತ್ತದೆ.

ಈ ಮಾಹಿತಿಯ ಎಳೆಯನ್ನು ಹುಡುಕಿಕೊಂಡು ನಾವು ಮತ್ತಷ್ಟು ಹುಡುಕಿದ್ದೇವೆ. ಈ ವ್ಯಕ್ತಿಯನ್ನು ಜನರು ‘‘ಶ್ರೀಶ್ರೀ 1008 ಮಹಂತ್‌ ಬಾಬಾ ಭಲೇ ಗಿರಿ ಜಿ ಮಹಾರಾಜ್‌” ಎಂದು ಕರೆಯುತ್ತಾರೆ. ಇದು ಹರಿಯಾಣ ರಾಜ್ಯದ ರಿಂಧಾನದಲ್ಲಿರುವ ‘ಪರಾಶರ್‌ ತೀರ್ಥ’ದಲ್ಲಿ ಮಾಡಲಾಗಿರುವ ಧಾರ್ಮಿಕ ಆಚರಣೆಯೊಂದರ ಚಿತ್ರವಾಗಿದೆ.

ಇದನ್ನೂ ಓದಿ:ಫ್ಯಾಕ್ಟ್‌ಚೆಕ್: ರಾಯಚೂರಿನಲ್ಲಿ ಏಕ್ ಮಿನಾರ್ ಮಸೀದಿ ಕೆಡವಿದಾ‌ಗ ಶಿವನ ದೇವಾಲಯ ಪತ್ತೆಯಾಯಿತೆ?

ಈ ಆಚರಣೆಯಲ್ಲಿ ಬೆರಣಿಯನ್ನು ಹಲವು ದೊಡ್ಡ ದೊಡ್ಡ ಗುಂಪಾಗಿ ಜೋಡಿಸಿ ಅದರ ನಡುವೆ ಅವರು ಕುಳಿತುಕೊಳ್ಳುತ್ತಾರೆ. ಈ ವೇಳೆ ಅವರ ಮೈಮೇಲೆ ಬೆರಣಿಯ ಬೂದಿ ಅಂಟಿಕೊಂಡಿದ್ದಾಗಿರಬಹುದಾಗಿದೆ.

ಪ್ರಸ್ತುತ ವೈರಲ್ ಆಗಿರುವ ಚಿತ್ರವು ಮೂರು ವರ್ಷಗಳಷ್ಟು ಹಳೆಯದಾದರೂ, ‘ಬಾಬಾ ಸರ್‌ಬಂಗಿ I‘ ಫೇಸ್‌ಬುಕ್ ಪೇಜ್‌ನಲ್ಲಿ ಈ ಆಚರಣೆಯ ಹಳೆಯ ಚಿತ್ರಗಳು ಮತ್ತು ಇತ್ತೀಚೆಗೆ ಕ್ಲಿಕ್ ಮಾಡಿರುವ ಚಿತ್ರಗಳು ಎಂಬಂತೆ ತೋರುವ ಹಲವಾರು ಚಿತ್ರಗಳು ಇವೆ.

ಒಟ್ಟಿನಲ್ಲಿ ಹೇಳಬಹುದಾದರೆ, ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ಈ ಚಿತ್ರವು ಯಾವುದೆ ಹಿಮಾಲಯದ ಯೋಗಿಯದ್ದಲ್ಲ ಮತ್ತು ಅವರ ಮೈಮೇಲೆ ಇರುವುದು ಹಿಮವೂ ಅಲ್ಲ. ಅವರು ಹರಿಯಾಣ ರಾಜ್ಯದವರಾಗಿದ್ದು, ಅವರ ಮೈಮೇಲೆ ಇರುವುದು ಬೂದಿಯಾಗಿದೆ.

ಇದನ್ನೂ ಓದಿ:ಫ್ಯಾಕ್ಟ್‌ಚೆಕ್‌: ಯೋಗಿ ಆದಿತ್ಯನಾಥರ ಬೆಂಗಾವಲಿನ ಮೇಲೆ ದಾಳಿ ಮಾಡಿದ ಯುವಕರ ವಿಡಿಯೊ ಈಗಿನದ್ದಲ್ಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....