Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್‌: ಈ ಯೋಗಿ ಹಿಮಾಲಯದವರೂ ಅಲ್ಲ, ಅವರ ಮೈಮೇಲೆ ಇರುವುದು ಹಿಮವೂ ಅಲ್ಲ!

ಫ್ಯಾಕ್ಟ್‌ಚೆಕ್‌: ಈ ಯೋಗಿ ಹಿಮಾಲಯದವರೂ ಅಲ್ಲ, ಅವರ ಮೈಮೇಲೆ ಇರುವುದು ಹಿಮವೂ ಅಲ್ಲ!

ಪ್ರಧಾನಿ ಮೋದಿ ಮತ್ತು ಅಮಿತ್‌ ಶಾ ಫಾಲೋ ಮಾಡುತ್ತಿರುವ ಟ್ವಿಟರ್‌ ಖಾತೆಯು ಈ ಚಿತ್ರವನ್ನು ಹಂಚಿಕೊಂಡಿದೆ

- Advertisement -
- Advertisement -

ಶರೀರ ಪೂರ್ತಿ ಮಂಜುಗಡ್ಡೆಯಲ್ಲಿ ಆವೃತ್ತವಾಗಿರುವಂತೆ ಕಾಣುತ್ತಿರುವ ಪದ್ಮಾಸನ ಹಾಕಿಕೊಂಡು ಕೂತಿರುವ ವ್ಯಕ್ತಿಯೊಬ್ಬರ ಕಪ್ಪುಬಿಳುಪಿನ ಚಿತ್ರವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್‌ ಆಗಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ಈ ಚಿತ್ರದಲ್ಲಿ ಇರುವ ವ್ಯಕ್ತಿಯನ್ನು ‘ಹಿಮಾಲಯದಲ್ಲಿ ಇರುವ ಯೋಗಿ’ ಎಂದು ಪ್ರತಿಪಾದಿಸಲಾಗುತ್ತಿದೆ.

ಟ್ವಿಟರ್‌ನಲ್ಲಿ ಈ ಚಿತ್ರವನ್ನು ರಿನಿತಿ ಚಟರ್ಜಿ ಎನ್ನುವ ಖಾತೆಯೊಂದು, ‘ಮಂಜುಗಡ್ಡೆಯನ್ನು ಹೊದ್ದುಕೊಂಡಿರುವ ಹಿಮಾಲಯದ ಯೋಗಿ’ ಎಂದು ಹೇಳಿಕೊಂಡಿದೆ. ಈ ಖಾತೆಯು ಸುಮಾರು ಒಂದು ಲಕ್ಷಕ್ಕೂ ಹೆಚ್ಚು ಫಾಲೋವರ್‌ ಅನ್ನು ಹೊಂದಿದೆ. ಈ ಚಿತ್ರವನ್ನು ನಿಖಿಲ್ ಠಾಕರ್‌‌ ಎನ್ನುವ ಬಿಜೆಪಿ ಬೆಂಬಲಿಗ ವ್ಯಕ್ತಿಯೊಬ್ಬರು ಹಂಚಿಕೊಂಡಿದ್ದಾರೆ. ವಿಷೇಶವೇನೆಂದರೆ ನಿಖಿಲ್ ಅವರನ್ನು ಪ್ರಧಾನಿ ನರೇಂದ್ರ ಮೋದಿ ಮತ್ತು ಅಮಿತ್‌ ಶಾ ಅವರು ಫಾಲೊ ಮಾಡುತ್ತಿದ್ದಾರೆ.

ಇದನ್ನೂ ಓದಿ:ಫ್ಯಾಕ್ಟ್‌ಚೆಕ್: ತುಮಕೂರು ಜಿಲ್ಲೆಗೆ ಮನುಷ್ಯ ರೂಪದ ವಿಚಿತ್ರ ಪ್ರಾಣಿ ಬಂದಿದ್ದು ನಿಜವೇ?

ಚಿತ್ರವು ಕೇವಲ ಟ್ವಿಟರ್‌ ಮಾತ್ರವಲ್ಲದೆ ಪೇಸ್‌ಬುಕ್‌ನಲ್ಲೂ ಹರಿದಾಡುತ್ತಿದೆ. ಫೇಸ್‌ಬುಕ್‌ನಲ್ಲಿ, “ಇಂತಹ ತಪಸ್ಸು, ಹಠಮಾರಿತನ, ಸಾಧನೆ ಇರುವುದು ಸನಾತನದಲ್ಲಿ ಮಾತ್ರ, ಇಂದ್ರಿಯಗಳನ್ನು ಗೆದ್ದುಕೊಂಡ ಸಾವಿರಾರು ಉದಾಹರಣೆಗಳಿವೆ, ಇಂತಹ ಉದಾಹರಣೆ ಬೇರೆ ಯಾವ ಸಂಸ್ಕೃತಿಯಲ್ಲಾಗಲಿ, ಧರ್ಮದಲ್ಲಾಗಲಿ ಕಾಣುವುದಿಲ್ಲ” ಎಂದು ಚಿತ್ರದಲ್ಲಿರುವ ವ್ಯಕ್ತಿ ಅತಿಮಾನುಷವಾದುದನ್ನು ಮಾಡುತ್ತಿದ್ದಾರೆ ಎಂದು ಪ್ರತಿಪಾದಿಸಲಾಗಿದೆ.

ಇದೇ ಪ್ರತಿಪಾದನೆಯನ್ನು ಟ್ವಿಟರ್‌ನಲ್ಲೂ ಮಾಡಲಾಗಿದೆ. ಅದನ್ನುಇಲ್ಲಿ ಮತ್ತು ಇಲ್ಲಿ ನೋಡಬಹುದಾಗಿದೆ. ಈ ಚಿತ್ರವನ್ನು ವೈರಲ್ ಮಾಡಿರುವ ಸಾಮಾಜಿಕ ಜಾಲತಾಣದ ಎಲ್ಲಾ ಹ್ಯಾಂಡಲ್‌ಗಳು ಬಿಜೆಪಿ ಪರವಾಗಿ ಪ್ರೊಪಗಾಂಡ ಸೃಷ್ಟಿಸುವ ಪೇಜ್‌ಗಳಾಗಿವೆ.

ಇದನ್ನೂ ಓದಿ:ಫ್ಯಾಕ್ಟ್‌ಚೆಕ್‌: ತಿರುಪತಿ ದೇವಸ್ಥಾನದ ಪುರೋಹಿತರ ಮನೆಯಲ್ಲಿ 128Kg ಚಿನ್ನ ಸಿಕ್ಕಿದ್ದು ನಿಜವೇ?

ಫ್ಯಾಕ್ಟ್‌ಚೆಕ್

ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಈ ಚಿತ್ರವನ್ನು ನಾನುಗೌರಿ.ಕಾಂ ರಿವರ್ಸ್‌ ಸರ್ಚ್ ಮೂಲಕ ಹುಡುಕಾಡಿದಾಗ ಈ ಚಿತ್ರವು ‘ಬಾಬಾ ಸರ್‌ಬಂಗಿ I’ ಎನ್ನುವ ಫೇಸ್‌ಬುಕ್‌ ಪೇಜ್‌ನಲ್ಲಿ ಪತ್ತೆಯಾಗಿದೆ. ಈ ಚಿತ್ರವನ್ನು ಮೂರು ವರ್ಷಗಳ ಹಿಂದೆ ಅಪ್‌ಲೋಡ್ ಮಾಡಲಾಗಿದೆ. ಪೇಜ್‌ನಲ್ಲಿ ಇರುವ ಈ ಚಿತ್ರವನ್ನು ಬಳಸಿಕೊಂಡು ಚಿತ್ರವನ್ನು ಕಪ್ಪುಬಿಳುಪಾಗಿ ಎಡಿಟ್‌ ಮಾಡಿ ಅದನ್ನು ವೈರಲ್ ಮಾಡಲಾಗಿದೆ.

ಫೇಸ್‌ಬುಕ್ ಪೇಜ್‌ನಲ್ಲಿ ಈ ವ್ಯಕ್ತಿಯನ್ನು ‘ಬಾಬಾ ಭಲೇ ಗಿರಿ ಜಿ ಮಹಾರಾಜ್’ ಎಂದು ಹೇಳಿಕೊಂಡಿದೆ. ಪೇಜ್‌ನಲ್ಲಿ ಇರುವ ಫೇಸ್‌ಬುಕ್‌‌ ಚಿತ್ರದಲ್ಲಿ ಕಂದು ಬಣ್ಣದ ‘ಬೂದಿ’ ಅವರ ಮೈಮೇಲೆ ಇರುವಂತೆ ಸ್ಪಷ್ಟವಾಗಿ ಕಾಣುತ್ತದೆ. ಜೊತೆಗೆ ಹಿನ್ನಲೆಯಲ್ಲಿ ‘ಬೆರಣಿ’ ಜೋಡಿಸಿರುವುದು ಕೂಡಾ ಕಾಣುತ್ತದೆ.

ಈ ಮಾಹಿತಿಯ ಎಳೆಯನ್ನು ಹುಡುಕಿಕೊಂಡು ನಾವು ಮತ್ತಷ್ಟು ಹುಡುಕಿದ್ದೇವೆ. ಈ ವ್ಯಕ್ತಿಯನ್ನು ಜನರು ‘‘ಶ್ರೀಶ್ರೀ 1008 ಮಹಂತ್‌ ಬಾಬಾ ಭಲೇ ಗಿರಿ ಜಿ ಮಹಾರಾಜ್‌” ಎಂದು ಕರೆಯುತ್ತಾರೆ. ಇದು ಹರಿಯಾಣ ರಾಜ್ಯದ ರಿಂಧಾನದಲ್ಲಿರುವ ‘ಪರಾಶರ್‌ ತೀರ್ಥ’ದಲ್ಲಿ ಮಾಡಲಾಗಿರುವ ಧಾರ್ಮಿಕ ಆಚರಣೆಯೊಂದರ ಚಿತ್ರವಾಗಿದೆ.

ಇದನ್ನೂ ಓದಿ:ಫ್ಯಾಕ್ಟ್‌ಚೆಕ್: ರಾಯಚೂರಿನಲ್ಲಿ ಏಕ್ ಮಿನಾರ್ ಮಸೀದಿ ಕೆಡವಿದಾ‌ಗ ಶಿವನ ದೇವಾಲಯ ಪತ್ತೆಯಾಯಿತೆ?

ಈ ಆಚರಣೆಯಲ್ಲಿ ಬೆರಣಿಯನ್ನು ಹಲವು ದೊಡ್ಡ ದೊಡ್ಡ ಗುಂಪಾಗಿ ಜೋಡಿಸಿ ಅದರ ನಡುವೆ ಅವರು ಕುಳಿತುಕೊಳ್ಳುತ್ತಾರೆ. ಈ ವೇಳೆ ಅವರ ಮೈಮೇಲೆ ಬೆರಣಿಯ ಬೂದಿ ಅಂಟಿಕೊಂಡಿದ್ದಾಗಿರಬಹುದಾಗಿದೆ.

ಪ್ರಸ್ತುತ ವೈರಲ್ ಆಗಿರುವ ಚಿತ್ರವು ಮೂರು ವರ್ಷಗಳಷ್ಟು ಹಳೆಯದಾದರೂ, ‘ಬಾಬಾ ಸರ್‌ಬಂಗಿ I‘ ಫೇಸ್‌ಬುಕ್ ಪೇಜ್‌ನಲ್ಲಿ ಈ ಆಚರಣೆಯ ಹಳೆಯ ಚಿತ್ರಗಳು ಮತ್ತು ಇತ್ತೀಚೆಗೆ ಕ್ಲಿಕ್ ಮಾಡಿರುವ ಚಿತ್ರಗಳು ಎಂಬಂತೆ ತೋರುವ ಹಲವಾರು ಚಿತ್ರಗಳು ಇವೆ.

ಒಟ್ಟಿನಲ್ಲಿ ಹೇಳಬಹುದಾದರೆ, ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ಈ ಚಿತ್ರವು ಯಾವುದೆ ಹಿಮಾಲಯದ ಯೋಗಿಯದ್ದಲ್ಲ ಮತ್ತು ಅವರ ಮೈಮೇಲೆ ಇರುವುದು ಹಿಮವೂ ಅಲ್ಲ. ಅವರು ಹರಿಯಾಣ ರಾಜ್ಯದವರಾಗಿದ್ದು, ಅವರ ಮೈಮೇಲೆ ಇರುವುದು ಬೂದಿಯಾಗಿದೆ.

ಇದನ್ನೂ ಓದಿ:ಫ್ಯಾಕ್ಟ್‌ಚೆಕ್‌: ಯೋಗಿ ಆದಿತ್ಯನಾಥರ ಬೆಂಗಾವಲಿನ ಮೇಲೆ ದಾಳಿ ಮಾಡಿದ ಯುವಕರ ವಿಡಿಯೊ ಈಗಿನದ್ದಲ್ಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...